Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣೆ ಮತ್ತು ದತ್ತಿ ನಿಧಿ ಪ್ರಶಸ್ತಿ ಪ್ರದಾನ
    Uncategorized

    ಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣೆ ಮತ್ತು ದತ್ತಿ ನಿಧಿ ಪ್ರಶಸ್ತಿ ಪ್ರದಾನ

    July 23, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ : ಅಜಪುರ ಯಕ್ಷಗಾನ ಸಂಘದ ವತಿಯಿಂದ ಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣೆ ಮತ್ತು ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 20-07-2024ರ ಶನಿವಾರದಂದು ಬ್ರಹ್ಮಾವರದ ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಳದ ಚಾವಡಿಯಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕರ್ಣಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಯಕ್ಷಗಾನ ಕಲೆ ಇಂದು ಬದಲಾವಣೆಯ ಕಾಲಘಟ್ಟದಲ್ಲಿದೆ. ಆಧುನಿಕತೆ ಹಾಗೂ ಹೊಸ ಪ್ರಸಂಗಗಳ ಪ್ರದರ್ಶನ ಯಕ್ಷಗಾನ ಕಲೆಯ ಪರಂಪರೆಗೆ ಧಕ್ಕೆ ತರಬಾರದು. ಆ ನಿಟ್ಟಿನಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಹೊಸ ಕಲಾವಿದರಿಗೆ ಮಾದರಿಯಾಗಬೇಕು. ಹಿಂದಿನ ಹಿರಿಯ ಯಕ್ಷಗಾನ ಕಲಾವಿದರಲ್ಲಿ ಅನೇಕರು ಅನಕ್ಷರಸ್ಥರಾಗಿದ್ದರೂ ತಮ್ಮ ಪಾಂಡಿತ್ಯ, ನಿರರ್ಗಳ ಮಾತುಗಳಿಂದ ಮಹಾನ್ ಕಲಾವಿದರುಗಳಾಗಿ ರಾಷ್ಟ್ರ ಪ್ರಶಸ್ತಿಗೂ ಭಾಜನರಾಗಿರುವುದನ್ನು ಕಂಡಿದ್ದೇವೆ. ಈಗಿನಂತೆ ಆಧುನಿಕತೆಯ ಸೋಂಕಿಲ್ಲದ ಆ ಕಾಲದಲ್ಲಿ ಯಕ್ಷಗಾನ ಕಲಾವಿದರು ಕಲೆಯ ಉಳಿವು ಬೆಳವಣಿಗೆಗೆ ಕಾರಣರಾದರು ಎಂಬುದನ್ನು ಇಂದಿನ ಯುವ ಕಲಾವಿದರು ಚಿಂತನೆ ನಡೆಸಬೇಕು. ಕಲೆಯ ಮೇಲಿನ ಪ್ರೀತಿ ಹಾಗೂ ಅದರ ಮೂಲಕವೇ ಬದುಕನ್ನು ಕಟ್ಟಿಕೊಂಡ ಹಿರಿಯ ಕಲಾವಿದರನೇಕರು ಯಕ್ಷಗಾನಕ್ಕಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಇಂದು ಯಕ್ಷಗಾನ ಕವಲುದಾರಿಯಲ್ಲಿದೆ. ಹಳೆಯ ಸಂಪ್ರದಾಯವನ್ನು ಬಿಡಲಾಗದೆ ಹೊಸತನದ ಆಕರ್ಷಣೆಯನ್ನು ಅಪ್ಪಿಕೊಳ್ಳಲಾಗದೆ ಕಲಾವಿದರು ತೊಳಲಾಟದಲ್ಲಿದ್ದಾರೆ. ಕಾಲಮಿತಿ ಯಕ್ಷಗಾನಗಳು ಜನಪ್ರಿಯತೆ ಪಡೆಯುತ್ತಿರುವ ಈ ಸಮಯದಲ್ಲಿ ಕಲಾವಿದರು ಕಲೆಯ ಚೌಕಟ್ಟಿಗೆ ಧಕ್ಕೆ ಬಾರದಂತೆ ಎಚ್ಚರವಹಿಸಬೇಕು. ಈ ನಿಟ್ಟಿನಲ್ಲಿ ಹಿರಿಯ ಕಲಾವಿದರು ಅವರಿಗೆ ಮಾದರಿಯಾಗಬೇಕು.” ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬಡಗುತಿಟ್ಟಿನ ಪರಂಪರೆಯ ಹಿರಿಯ ಯಕ್ಷಗಾನ ಕಲಾವಿದ ಬೆಲ್ತೂರು ರಮೇಶ್ ನಾಯ್ಕ್ ಅವರಿಗೆ ಸುಬ್ಬಣ್ಣ ಭಟ್ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

    ಅಜಪುರ ಯಕ್ಷಗಾನ ಸಂಘದ ಅಧ್ಯಕ್ಷರಾದ ಎಂ. ಪದ್ಮನಾಭ ಗಾಣಿಗ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಡೂರು ರಜತಾದ್ರಿ ಶ್ರೀವಾಣಿ ವಿದ್ಯಾಭಿವೃದ್ಧಿ ಸಂಘದ ಮಾರ್ಗದರ್ಶಕರಾದ ಪ್ರೊ. ಸಖಾರಾಮ ಸೋಮಯಾಜಿ ಸಂಸ್ಮರಣಾ ಭಾಷಣ ಮಾಡಿದರು. ಬ್ರಹ್ಮಾವರ ಪ್ರಣವ್ ಆಸ್ಪತೆಯ ಡಾ. ಪ್ರವೀಣ್ ಕುಮಾರ್, ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕ ಡಾ. ಉದಯಪ್ರಸನ್ನ ಭಟ್, ಸಂಘದ ಗೌರವಾಧ್ಯಕ್ಷ ಕೃಷ್ಣಸ್ವಾಮಿ ಜೋಷಿ ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ರಘುರಾಮ ಬೈಕಾಡಿ ಪ್ರಾರ್ಥಿಸಿ, ರತ್ನಾಕರ ಭಟ್ ಸ್ವಾಗತಿಸಿ, ಗಣೇಶ್ ಬ್ರಹ್ಮಾವರ್ ಪ್ರಾಸ್ಥಾವಿಕ ಮಾತುಗಳನ್ನಾಡಿ, ಜ್ಯೋತಿ ಕೃಷ್ಣ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪ್ರತೀಶ್ ಸನ್ಮಾನ ಪತ್ರವಾಚಿಸಿ, ರಮ್ಯಾ ಹೆಬ್ಬಾರ್ ಪರಿಚಯಿಸಿ, ಕೃಷ್ಣಮೂರ್ತಿ ವಂದಿಸಿರು.
    ಸಭಾ ಕಾರ್ಯಕ್ರಮದ ಬಳಿಕ ಪ್ರಸಿದ್ಧ ಕಲಾವಿದರಿಂದ ‘ಗುರುದಕ್ಷಿಣೆ’ ತಾಳಮದ್ದಳೆ ಸಂಪನ್ನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ವಿರಾಜ್ ಅಡೂರು ನೇಮಕ
    Next Article ನೃತ್ಯಾಮೃತ’ ಅಂಗವಾಗಿ ಸಂವಾದ ಹಾಗೂ ಪ್ರಾತ್ಯಕ್ಷಿಕೆ
    roovari

    Add Comment Cancel Reply


    Related Posts

    ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ‘ಸಾಹಿತ್ಯ ಮತ್ತು ಕಲಾ ಉತ್ಸವ – 2025’ | ಜೂನ್ 28

    June 27, 2025

    ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ

    June 26, 2025

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.