Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಲೋಕದ ದಿಗ್ಗಜ ಅಂಬಾತನಯ ಮುದ್ರಾಡಿಯವರಿಗೆ ಮಂಗಳೂರಿನಲ್ಲಿ ಸಾರ್ವಜನಿಕ ನುಡಿನಮನ
    News

    ಸಾಹಿತ್ಯ ಲೋಕದ ದಿಗ್ಗಜ ಅಂಬಾತನಯ ಮುದ್ರಾಡಿಯವರಿಗೆ ಮಂಗಳೂರಿನಲ್ಲಿ ಸಾರ್ವಜನಿಕ ನುಡಿನಮನ

    March 2, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    02 ಮಾರ್ಚ್ 2023, ಮಂಗಳೂರು : ನೆಯ್ಗೆಯ ನೂಲಿನಂತೆ ಮುದ್ರಾಡಿಯವರ ಜೀವನವೂ ಸಾಹಿತ್ಯ ಕೃತಿಗಳೂ ಸಾಧನೆಗಳೂ ಸ್ಪುಟವಾಗಿದ್ದವು. ಪ್ರಾಥಮಿಕ ಶಾಲಾ ಶಿಕ್ಷಕರಾದ ಮುದ್ರಾಡಿಯವರ ಕೃತಿ ವಿ.ವಿ.ಯ ಕನ್ನಡ ಐಚ್ಚಿಕ ವಿಷಯ ಪಠ್ಯವಾಗಿ ಆಯ್ಕೆಗೊಂಡಿದ್ದು, ಅವರ ಪ್ರತಿಭೆಗೆ ಸಾಕ್ಷಿ ಎಂದು ದ.ಕ. ಜಿಲ್ಲಾ ಕ.ಸಾ.ಪ.ನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹೇಳಿದ್ದರು.
    ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾನದ ಕಚೇರಿಯಲ್ಲಿ ದಿನಾಂಕ 28-02-2023ರಂದು ಆಯೋಜಿಸಲಾದ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿ ಮಾತನಾಡಿದರು. ಹಿರಿಯ ಕಲಾವಿದ, ಸಾಹಿತಿ, ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿಯವರು ಅಂಬಾತನಯರ ಬಹುಮುಖ ಪ್ರತಿಭೆಯನ್ನು ವಿವರಿಸುತ್ತಾ ‘ಪರಿತ್ಯಕ್ತ’ ಕೃತಿಯನ್ನು ಕನ್ನಡದ ಮೇರು ವಿದ್ವಾಂಸ ಸೇಡಿಯಾಪು ಕೃಷ್ಣ ಭಟ್ಟರು ಶ್ಲಾಘಿಸಿರುವುದು ಅವರಿಗೆ ಸಂದ ಪ್ರಶಸ್ತಿಯೇ ಆಗಿದೆ. ನಟ, ನಾಟಕಕಾರ, ಪ್ರಸಂಗಕರ್ತೃ, ಯಕ್ಷಗಾನ ಕಲಾವಿದ ಅರ್ಥಧಾರಿ ಪ್ರವಚನಕಾರ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಂಬಾತನಯರಿಗೆ ಪಾರ್ತಿ ಸುಬ್ಬ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮೊದಲಾದ ಹಲವಾರು ಪ್ರಶಸ್ತಿಗಳು ದೊರಕಿವೆ. 28 ಕೃತಿಗಳನ್ನು ರಚಿಸಿರುವ ಅವರ ನಿಧನ ಸಾಹಿತ್ಯ ಲೋಕಕ್ಕೆ ದೊಡ್ಡ ನಷ್ಟ ಎಂದರು.
    ವಿದ್ವಾಂಸ ಭಾಸ್ಕರ ರೈ ಕುಕ್ಕುವಳ್ಳಿ ಪ್ರಸ್ತಾವನೆಗೈದರು. ಗಮಕಿ ಸುರೇಶ ರಾವ್ ಅತ್ತೂರು ಗಾನ ನಮನ ಸಲ್ಲಿಸಿದರು. ಕ.ಸಾ.ಪ. ಮಾಜಿ ಅಧ್ಯಕ್ಷ ಡಾ| ಹರಿಕೃಷ್ಣ ಪುನರೂರು, ಹರಿಕಥಾ ಪರಿಷತ್ ನ ಅಧ್ಯಕ್ಷ ಹರಿದಾಸ ಕೂಡ್ಲು, ಮಹಾಬಲ ಶೆಟ್ಟಿ, ಜನಾರ್ದನ ಹಂದೆ, ಪ್ರಸಂಗ ಕರ್ತ ನಿತ್ಯಾನಂದ ಕಾರಂತ ಪೊಳಲಿ, ಮಧುಸೂದನ ಅಲೆವೂರಾಯ, ಚಂದ್ರಶೇಖರ ಮಯ್ಯ, ಯೋಗೀಶ್ ಆಚಾರ್ ಮಣ್ಣಗುಡ್ಡೆ, ಗೆಳೆಯರ ಬಳಗದ ತಾರಾನಾಥ ಹೊಳ್ಳ ಮೊದಲಾದವರು ಪುಷ್ಪಾಂಜಲಿ ಸಲ್ಲಿಸಿದರು. ಸೇರಾಜೆ ಜಿ.ಕೆ. ಭಟ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀಮತಿ ಐರಿನ್ ಪಿಂಟೋ ರವರಿಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ
    Next Article ಡಾ. ಎಂ. ಪ್ರಭಾಕರ ಜೋಶಿಗೆ “ಆನಂದ ಸಮಾಜ ಭೂಷಣ” ಪ್ರಶಸ್ತಿ
    roovari

    Add Comment Cancel Reply


    Related Posts

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.