Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನ ಕರಂದಕ್ಕಾಡಿನಲ್ಲಿ ‘ಸಂವಾದ ಕಾರ್ಯಕ್ರಮ’ | ಜನವರಿ 16

    January 13, 2026

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಂಬಿಗರ ಚೌಡಯ್ಯ: ವಚನ ಮೀಮಾಂಸೆ – ರಾಷ್ಟ್ರಮಟ್ಟದ ವಿಚಾರ ಸಂಕಿರಣ
    Literature

    ಅಂಬಿಗರ ಚೌಡಯ್ಯ: ವಚನ ಮೀಮಾಂಸೆ – ರಾಷ್ಟ್ರಮಟ್ಟದ ವಿಚಾರ ಸಂಕಿರಣ

    May 27, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನಗರದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಿನಾಂಕ 19-05-2023 ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಹಾಗೂ ವಿವಿ ಕಾಲೇಜಿನ ಕನ್ನಡ ವಿಭಾಗ ಮತ್ತು ಕನ್ನಡ ಸಂಘಗಳ ವತಿಯಿಂದ ಆಯೋಜಿಸಲಾಗಿದ್ದ ‘ಅಂಬಿಗರ ಚೌಡಯ್ಯ : ವಚನ ಮೀಮಾಂಸೆ’ ಎಂಬ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಪೊಲೀಸ್ ಆಯುಕ್ತರಾದ ಶ್ರೀ ಕುಲದೀಪ್ ಆರ್. ಜೈನ್ ಅವರು “ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ನಿಖರವಾದ ಗುರಿಯಿದ್ದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಗುರಿ ಸ್ಪಷ್ಟವಾಗಿದ್ದರೆ ಯಾರೂ ನಮ್ಮನ್ನು ಗೊಂದಲಕ್ಕೀಡುಮಾಡುವಂತಿಲ್ಲ. ಅರ್ಹರ ಜೊತೆ ಮಾತುಕತೆ, ವಿಶ್ಲೇಷಣೆ ನಮ್ಮ ಗುರಿಯನ್ನು ನಿಖರವಾಗಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲಾಗದಿದ್ದರೆ ನಮ್ಮ ಋಣಾತ್ಮಕ ಅಂಶಗಳೆಡೆಗೆ ಗಮನಹರಿಸಬೇಕು. ಯಾವುದೇ ನೆಪವೊಡ್ಡಿದ ನಮ್ಮ ಕೊರತೆಯನ್ನು ಒಪ್ಪಿಕೊಳ್ಳಬೇಕು” ಎಂದರು.

    ತಮ್ಮ ಆಶಯ ನುಡಿಗಳಲ್ಲಿ ಮದರಾಸು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್‌ನ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರು ಡಾ. ತಮಿಳ್ ಸೆಲ್ವಿ “12ನೇ ಶತಮಾನದ ಶರಣ ಕಾಂತಿಯಲ್ಲಿ ವಚನಕಾರರು ಡಂಭಾಚಾರವನ್ನು ತಿರಸ್ಕರಿಸಿ, ಅಂತರಂಗದ ಭಕ್ತಿಯನ್ನು ಎತ್ತಿಹಿಡಿದರು. ಇಂತಹ ಬಂಡಾಯ ಮನೋಧರ್ಮದ ವಚನಕಾರರಲ್ಲಿ ಅಂಬಿಗರ ಚೌಡಯ್ಯ ಪ್ರಮುಖರು” ಎಂದು ಹೇಳಿದರು.

    ಅಧ್ಯಕ್ಷೀಯ ಮಾತುಗಳನ್ನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, “ವಿದ್ಯಾರ್ಥಿಗಳು ತಮ್ಮ ಗೆಲುವಿನ ಹೊಣೆಯನ್ನು ಸ್ವೀಕರಿಸುವ ಹಾಗೆಯೇ ಸೋಲಿನ ಹೊಣೆಯನ್ನೂ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

    ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ ಅಂಬಿಗರ ಚೌಡಯ ಅಧ್ಯಯನ ಪೀಠದ ಸಂಯೋಜಕ ಪ್ರೊ.ಸೋಮಣ್ಣ, “ವಚನ ಸಾಹಿತ್ಯದ ಪ್ರಮುಖರಾದ ಬಸವಣ್ಣ, ಅಲ್ಲಮಪ್ರಭು ಹಾಗೂ ಅಂಬಿಗರ ಚೌಡಯ್ಯನಂತಹ ವಚನಕಾರರು ಸಾಮಾಜಿಕ ಸುಧಾರಣೆಯ ಕಾಯಕದ ಮಹತ್ವವನ್ನು ಎತ್ತಿಹಿಡಿದವರು” ಎಂದರು.

    ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ, ಕನ್ನಡ ಸಂಘದ ಸಂಯೋಜಕ ಡಾ.ಮಧು ಬಿರಾದಾರ್ ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಾಧವ ಎಂ.ಕೆ ಸ್ವಾಗತಿಸಿದರು. ಕನ್ನಡ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಧನ್ಯಶ್ರೀ ವಂದಿಸಿ, ವಿದ್ಯಾರ್ಥಿ ವಿಕಾಸ್‌ ರಾಜ್‌ ಕಾರ್ಯಕ್ರಮ ನಿರೂಪಿಸಿದರು.

    ಮೊದಲ ಗೋಷ್ಠಿಯಲ್ಲಿ ‘ಅಂಬಿಗರ ಚೌಡಯ್ಯನವರ ವಚನಗಳಲ್ಲಿ ಕಾಯಕದ ಪರಿಕಲ್ಪನೆ’ ಕುರಿತು ಉಜಿರೆ ಎಸ್‌.ಡಿ.ಎಂ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆ ಮಾತನಾಡಿದರು. ಎರಡನೇ ಗೋಷ್ಠಿಯಲ್ಲಿ “ಅಂಬಿಗರ ಚೌಡಯ್ಯನವರ ವಚನಗಳಲ್ಲಿ ಸಾಮಾಜಿಕ ಪರಿಕಲ್ಪನೆ’ ಕುರಿತು ಕಾಸರಗೋಡಿನ ಸರಕಾರಿ ಕಾಲೇಜಿನ ಸ್ನಾತಕೋತ್ತರ ಕನ್ನಡ ಅಧ್ಯನ ಕೇಂದ್ರದ ಸಹಪ್ರಾಧ್ಯಾಪಕರಾದ ಡಾ. ರತ್ನಾಕರ ಮಲ್ಲಮೂಲೆ ಮಾತನಾಡಿದರು.

    ‘ವಿಕಾಸ’ದ ಅಧ್ಯಕ್ಷೆ ಡಾ. ನಾಗವೇಣಿ ಮಂಜಿ, ಆಳ್ವಾಸ್‌ ಕಾಲೇಜಿನ ಪ್ರಾಧ್ಯಾಪಕ ಶ್ರೀ ಹರೀಶ್‌ ಟಿ.ಜಿ. ಸಮನ್ವಯಕಾರರಾಗಿದ್ದರು. ಎಸ್.ಡಿ.ಎಂ ಕಾನೂನು ಕಾಲೇಜಿನ ಕಾನೂನು ವಿದ್ಯಾರ್ಥಿನಿ ಕು. ಶ್ರೀಲಕ್ಷ್ಮೀ ಮಠದಮೂಲೆ, ವಿವಿ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಶ್ರೀ ಲತೇಶ್ ಸಾಂತ ವಿದ್ಯಾರ್ಥಿ ಪ್ರತಿಕ್ರಿಯೆ ನೀಡಿದರು. ಅಭಿಜಾತ ಕನ್ನಡ ಸಂಶೋಧನಾ ಪತ್ರಿಕೆಯ ಡಾ. ಕೊಟ್ರಸ್ವಾಮಿ ಎ.ಎಂ.ಎಂ. ಸಮಾರೋಪ ಭಾಷಣ ಮಾಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ಅಭಿನಯ ಭಾರತಿಯಿಂದ ‘ಚಾವುಂಡರಾಯ’ಪ್ರದರ್ಶನ | ಮೇ 28ಕ್ಕೆ
    Next Article ಬ್ರಹ್ಮಕಲಶೋತ್ಸವ – ನೃತ್ಯ ಸುಧಾ
    roovari

    Add Comment Cancel Reply


    Related Posts

    ಕಾಸರಗೋಡಿನ ಕರಂದಕ್ಕಾಡಿನಲ್ಲಿ ‘ಸಂವಾದ ಕಾರ್ಯಕ್ರಮ’ | ಜನವರಿ 16

    January 13, 2026

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಅಮೃತ ಸೋಮೇಶ್ವರರ ನಾಟಕಗಳ ಅನುವಾದ ಕೃತಿ ಬಿಡುಗಡೆ | ಜನವರಿ 14

    January 12, 2026

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.