Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರೊ. ಬಸವರಾಜ ಕಲ್ಗುಡಿಯವರಿಗೆ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರಶಸ್ತಿ ಪ್ರದಾನ
    Awards

    ಪ್ರೊ. ಬಸವರಾಜ ಕಲ್ಗುಡಿಯವರಿಗೆ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರಶಸ್ತಿ ಪ್ರದಾನ

    February 9, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಡಾ. ದ.ರಾ. ಬೇಂದ್ರೆ ಭವನದಲ್ಲಿ ದಿನಾಂಕ 31-01-2024ರಂದು ನಡೆದ ಡಾ. ದ.ರಾ. ಬೇಂದ್ರೆಯವರ 128ನೇ ಜನ್ಮದಿನಾಚರಣೆಯಲ್ಲಿ ಬೆಂಗಳೂರಿನ ಪ್ರೊ. ಬಸವರಾಜ ಕಲ್ಗುಡಿ ಅವರಿಗೆ 2024ನೇ ಸಾಲಿನ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಪ್ರೊ. ಬಸವರಾಜ ಕಲ್ಗುಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ಒಂದು ಲಕ್ಷ ನಗದು, ಪ್ರಶಸ್ತಿ ಫಲಕ ಮತ್ತು ಫಲಪುಷ್ಪ ಒಳಗೊಂಡಿದೆ.

    ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರೊ. ಬಸವರಾಜ ಕಲ್ಗುಡಿ ಅವರು, “ಕುವೆಂಪು, ಡಾ. ದ.ರಾ. ಬೇಂದ್ರೆ ಅವರಿಗಿದ್ದ ಭಾಷೆಯ ಹೊಳಹು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ಈ ಭಾಗದ ಕರ್ನಾಟಕ ಛಿದ್ರ ಛಿದ್ರವಾಗಿತ್ತು. ಎಲ್ಲೆಡೆ ಮರಾಠಿಮಯವಾಗಿದ್ದ ಅಂದಿನ ಕಾಲದಲ್ಲಿ ಕನ್ನಡದ ಅಸ್ಮಿತೆ ಎನ್ನುವುದು ತುಂಬಾ ವಿರಳ. ಒಂದು ಭಾಷೆಯನ್ನು ಸಾಮಾಜಿಕವಾಗಿ ಬಹುದಿನಗಳವರೆಗೆ ಬಳಕೆ ಮಾಡದೇ ಇದ್ದರೆ ಅದು ತನ್ನ ಅಸ್ಮಿತೆಯನ್ನೇ ಕಳೆದುಕೊಂಡು ಬಿಡುತ್ತದೆ. ಅಂತಹ ದಿನಗಳಲ್ಲಿ ಬೇಂದ್ರೆಯವರು ತಮ್ಮ ಸಾಹಿತ್ಯದ ಮೂಲಕ ಭಾಷೆಯ ಬೆಳವಣಿಗೆಗೆ ಚೈತನ್ಯ ತುಂಬುವ ಕೆಲಸ ಮಾಡಿದರು” ಎಂದರು.

    ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಡಾ. ಡಿ.ವಿ. ಪರಮಶಿವಮೂರ್ತಿ, “ಕನ್ನಡ ಸಾಹಿತ್ಯಕ್ಕೆ ಅದರಲ್ಲೂ ವಿಶೇಷವಾಗಿ ಡಾ. ದ.ರಾ. ಬೇಂದ್ರೆ ಅವರ ಕುರಿತಾದ ಸಾಹಿತ್ಯಕ್ಕೆ ಪ್ರೊ. ಬಸವರಾಜ ಕಲ್ಗುಡಿ ನೀಡಿದ ಕೊಡುಗೆ ಅನನ್ಯವಾಗಿದೆ. ಶರಣ ಸಾಹಿತ್ಯ ಹಾಗೂ ವಚನಕಾರರನ್ನು ಕುರಿತು ಅಧ್ಯಯನ ಮಾಡಿದ್ದು, ಕನ್ನಡ ಸಾಹಿತ್ಯದಲ್ಲಿ ದೊಡ್ಡ ಸ್ಥಾನ ಪಡೆದಿದೆ. ಬಸವರಾಜ ಕಲ್ಲುಡಿ ಅವರಲ್ಲಿ ಲಂಕೇಶ, ಪಿ.ಆರ್. ನಾಗರಾಜ ಹಾಗೂ ಜಿ.ಎಸ್. ಶಿವರುದ್ರಪ್ಪ ಅವರ ಗುಣಗಳನ್ನು ಕಾಣಬಹುದು. ಹೀಗಾಗಿ ಅವರ ಬರವಣಿಗೆ ಶ್ರೇಷ್ಠವಾಗಿದೆ ಎಂದರು.

    ಪ್ರೊ. ಬಸವರಾಜ ಡೋಣೂರ ಅಭಿನಂದನಾ ನುಡಿಗಳನ್ನಾಡುತ್ತಾ “ಕಲ್ಲುಡಿ ಅವರಲ್ಲಿಯ ಅಪಾರ ಓದು ಮತ್ತು ಸ್ಮರಣ ಶಕ್ತಿ ಮೆಚ್ಚುವಂತಹದ್ದು, ಕನ್ನಡ ಸಾಹಿತ್ಯ ಪರಂಪರೆಯ ಬಗೆಗೆ ಸ್ಪಷ್ಟವಾದ ತಿಳಿವಳಿಕೆ ಅವರಲ್ಲಿದೆ. ಅದರ ಬಗೆಗೆ ಅರಿವಿದ್ದಾಗ ಮಾತ್ರವೇ ಉತ್ತಮ ಸಾಹಿತ್ಯ ಸಿದ್ದಪಡಿಸಲು ಸಾಧ್ಯ” ಎಂದರು.

    ಈ ವೇಳೆ ಅರ್ಪಿತಾ ಜಹಗೀರದಾರ ಅವರು ಬೇಂದ್ರೆ ಅವರ ಗೀತ ಗಾಯನ ನಡೆಸಿದರು. ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ, ಪ್ರೊ. ಬಸವರಾಜ ಡೋಣೂರ, ಪ್ರೊ. ಕೃಷ್ಣ ನಾಯಕ, ಕಾರ್ಯದರ್ಶಿ ಪ್ರಕಾಶ್ ಬಾಳಿಕಾಯಿ, ಮಾಯಾ ರಾಮನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleರಾಜಾಂಗಣದಲ್ಲಿ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ರವರ ಅದ್ಬುತ ಮಾಯಾ ಲೋಕ
    Next Article ಅಲೆವೂರಾಯ ಪ್ರತಿಷ್ಠಾನದ ಯಕ್ಷ ತ್ರಿವೇಣಿಯಲ್ಲಿ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.