Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಮಹಿಳಾ ಯಕ್ಷಗಾನ ಸಂಘದಿಂದ ತಾಳಮದ್ದಳೆ
    News

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಮಹಿಳಾ ಯಕ್ಷಗಾನ ಸಂಘದಿಂದ ತಾಳಮದ್ದಳೆ

    March 29, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    29 ಮಾರ್ಚ್ 2023, ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರು ಪಾಕ್ಷಿಕ ತಾಳಮದ್ದಳೆಯ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದಾರೆ. ಒಂದೇ ದಿನದಲ್ಲಿ ಎರಡೆರದು ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದ ಖ್ಯಾತಿ ಇವರದ್ದು.

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಸದಸ್ಯರಿಂದ ದಿನಾಂಕ 25.03.2023ರಂದು ಸಂಜೆ ಶ್ರೀ ಆಂಜನೇಯ ಮಂತ್ರಾಲಯದಲ್ಲಿ “ಜಾಂಬವತಿ ಕಲ್ಯಾಣ” ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ, ಚಂದ್ರಶೇಖರ್ ಹೆಗ್ಡೆ ನೆಲ್ಯಾಡಿ, ಪದ್ಯಾಣ ಶಂಕರನಾರಾಯಣ ಭಟ್, ಪ್ರೊ.ದಂಬೆ ಈಶ್ವರ ಶಾಸ್ತ್ರೀ ಸಹಕರಿಸಿದರು. ಮುಮ್ಮೇಳದಲ್ಲಿ  ದುಗ್ಗಪ್ಪ ಯನ್. (ಶ್ರೀಕೃಷ್ಣ), ಭಾಸ್ಕರ್ ಬಾರ್ಯ (ಬಲರಾಮ), ಕು೦ಬ್ಳೆ ಶ್ರೀಧರ್ ರಾವ್ (ನಾರದ), ಕಿಶೋರಿ ದುಗ್ಗಪ್ಪ ನಡುಗಲ್ಲು (ಜಾಂಬವ) ಸಹಕರಿಸಿದರು. ಟಿ.ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು.

    ಪುತ್ತೂರು ಸಮೀಪದ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಳದ ಪುನ: ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ದಿನಾಂಕ 27.03.2023ರಂದು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ವತಿಯಿಂದ “ಏಕಾದಶಿ ಮಹಾತ್ಮೆ” (ರುಕ್ಮಾಂಗದ ಚರಿತ್ರೆ) ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಶ್ರೀಮತಿ ಭವ್ಯಶ್ರೀ ಕುಲ್ಕುಂದ, ವಿಜಯಾದಿತ್ಯ ಕು೦ಬ್ಳೆ , ಪದ್ಯಾಣ ಜಯರಾಮ ಭಟ್, ಮುರಳೀಧರ ಕಲ್ಲೂರಾಯ, ಅಗಸ್ತ್ಯ ಕುಲ್ಕುಂದ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ರುಕ್ಮಾಂಗದ), ಜಯಂತಿ ಹೆಬ್ಬಾರ್ (ಧರ್ಮಾಂಗದ), ಕಿಶೋರಿ ದುಗ್ಗಪ್ಪ ನಡುಗಲ್ಲು (ಮೋಹಿನಿ), ಪ್ರೇಮಲತಾ ರಾವ್ (ವಿಷ್ಣು), ಮನೋರಮಾ ಜಿ.ಭಟ್ (ಸಂಧ್ಯಾವಳಿ) ಸಂಚಾಲಕರಾದ ಭಾಸ್ಕರ್ ಬಾರ್ಯ ಸ್ವಾಗತಿಸಿ ವಂದಿಸಿದರು. ಬ್ರಹ್ಮಶ್ರೀ ಕೆಮ್ಮಿಂಜ ಲಕ್ಷ್ಮೀಶ ತಂತ್ರಿಯವರು ಕಲಾವಿದರನ್ನು ಗೌರವಿಸಿದರು.

    ಅದೇ ದಿನ ಸಂಜೆ ಪುತ್ತೂರು ಸಮೀಪದ ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರ (ರಿ) ಇದರ ಪುನ: ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು, ಪುತ್ತೂರು ಇದರ ಸದಸ್ಯೆಯರಿಂದ ಮಂದಿರದ ವಠಾರದಲ್ಲಿ “ವಾಲಿಮೋಕ್ಷ” ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಭವ್ಯಶ್ರೀ ಕುಲ್ಕುಂದ, ಪಿ.ಟಿ.ಜಯಾರಾಮ್ ಭಟ್, ಮುರಳೀಧರ ಕಲ್ಲೂರಾಯ, ಅಗಸ್ತ್ಯ ಕುಲ್ಕುಂದ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ವಾಲಿ), ಕಿಶೋರಿ ದುಗ್ಗಪ್ಪ ನಡುಗಲ್ಲು‌ (ಶ್ರೀ ರಾಮ), ಹರಿಣಾಕ್ಷೀ ಜೆ. ಶೆಟ್ಟಿ (ಸುಗ್ರೀವ), ಮನೋರಮಾ ಜಿ. ಭಟ್ (ತಾರೆ) ಸಹಕರಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ ವಂದಿಸಿದರು. ಅರವಿಂದ ಗೌಡ ಕನ್ನಯ ದರ್ಬೆ ಪ್ರಾಯೋಜಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article“ಮನದನಿ” ಕಾರ್ಯಕ್ರಮದಲ್ಲಿ ಲೇಖಕಿ ಬಿ.ಎಂ.ರೋಹಿಣಿ ಯವರಿಗೆ ಸನ್ಮಾನ
    Next Article INTACH and Art Kanara Trust hold multilingual poetry session in Mangaluru
    roovari

    Add Comment Cancel Reply


    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.