Subscribe to Updates

    Get the latest creative news from FooBar about art, design and business.

    What's Hot

    ಕುವೆಂಪು ಸಭಾಂಗಣದಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ | ಆಗಸ್ಟ್ 22

    August 21, 2025

    ಭಾವಪೂರ್ಣ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ

    August 21, 2025

    ಕುಂದಾಪುರ ತ್ರಿವರ್ಣ ಆರ್ಟ್ ಗ್ಯಾಲರಿ ಆಶ್ರಯದಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಘೋಷಣೆ
    Awards

    ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಘೋಷಣೆ

    August 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. 2022ನೇ ಸಾಲಿನಲ್ಲಿ ಮರಿಯಮ್ಮ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ), ಹಂಝತುಲ್ಲಾ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಕಲೆ ಮತ್ತು ಸಂಸ್ಕೃತಿ) ಹಾಗೂ 2023ನೇ ಸಾಲಿನಲ್ಲಿ ಮುಹಮ್ಮದ್‌ ಶರೀಫ್‌ ನಿರ್ಮುಂಜೆ (ಬ್ಯಾರಿ ಸಾಹಿತ್ಯ), ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ) ಮತ್ತು ಅಶ್ರಫ್‌ ಅಪೋಲೋ ಕಲ್ಲಡ್ಕ (ಬ್ಯಾರಿ ಕಲೆ ಮತ್ತು ಸಂಸ್ಕೃತಿ) ಇವರುಗಳು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

    ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್‌ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್‌ ಕಾಟಿಪಳ್ಳ ಇವರನ್ನು ಒಳಗೊಂಡ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.

    ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 6 ಸೆಪ್ಟೆಂಬರ್ 2024ರಂದು ಸಂಜೆ 4-30 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷರಾದ ಉಮರ್‌ ಯು. ಹೆಚ್. ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡಬಿದ್ರೆಯ ಕನ್ನಡ ಭವನದಲ್ಲಿ ‘ಕುಲದೈವೋ ಬ್ರಹ್ಮ’ ತುಳು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 01
    Next Article ಬೆಳಗಾವಿಯಲ್ಲಿ ಹಾಸ್ಯ ಸಂಜೆ | ಸೆಪ್ಟೆಂಬರ್ 01
    roovari

    Comments are closed.

    Related Posts

    ಕುವೆಂಪು ಸಭಾಂಗಣದಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ | ಆಗಸ್ಟ್ 22

    August 21, 2025

    ಉಡುಪಿಯಲ್ಲಿ ‘ಸೇಡಿಯಾಪು ಪ್ರಶಸ್ತಿ’ ಹಾಗೂ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    August 21, 2025

    ಲೋಕಾರ್ಪಣೆಗೋಂಡ ‘ಟಚ್ ಮೀ ನಾಟ್’ ಕೃತಿ

    August 20, 2025

    ‘ಟೊಟೊ ಪುರಸ್ಕಾರ’ಕ್ಕೆ ಕೃತಿಗಳ ಆಹ್ವಾನ

    August 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.