Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಾಣಿಕ್ಯ ಪ್ರಕಾಶನದ 2024ರ ದತ್ತಿ ಪ್ರಶಸ್ತಿಗಳ ಪ್ರಕಟಣೆ
    Awards

    ಮಾಣಿಕ್ಯ ಪ್ರಕಾಶನದ 2024ರ ದತ್ತಿ ಪ್ರಶಸ್ತಿಗಳ ಪ್ರಕಟಣೆ

    September 26, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಾಸನ : ಹಾಸನದ ಮಾಣಿಕ್ಯ ಪ್ರಕಾಶನವು ಕಳೆದ ಒಂಭತ್ತು ವರ್ಷಗಳಿಂದ ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳ ಕೃತಿಗಳಿಗೆ ದತ್ತಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. 2024ರ ದತ್ತಿ ಪ್ರಶಸ್ತಿಗೆ 2023ರಲ್ಲಿ ಮೊದಲ ಮುದ್ರಣವಾದ ಸ್ವತಂತ್ರ ರಚನೆಯ ನಾಟಕ, ಕಾದಂಬರಿ, ಗಜಲ್ ಹಾಗೂ ಚುಟುಕು ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಲೇಖಕರು ನಿರೀಕ್ಷೆಗೂ ಮೀರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಿದ್ದರು. ಅವುಗಳಲ್ಲಿ ಸಾಹಿತಿಗಳಾದ ಕೊಟ್ರೇಶ್ ಎಸ್. ಉಪ್ಪಾರ್, ಡಾ. ಹಸೀನಾ ಎಚ್.ಕೆ., ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ, ಲತಾಮಣಿ ಎಂ.ಕೆ. ತುರುವೇಕೆರೆ ಇವರನ್ನೊಳಗೊಂಡ ಆಯ್ಕೆ ಸಮಿತಿಯು ನಾಟಕ ವಿಭಾಗದ “ಪ್ರಭಾವತಿ ಶೆಡ್ತಿ ದತ್ತಿ – ನಾಟಕ ಮಾಣಿಕ್ಯ ಪ್ರಶಸ್ತಿ”ಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾವಿತ್ರಿ ಮನೋಹರ್ ಇವರ “ನಮ್ಮ ಸಂಸಾರ ಆನ್ ಲೈನ್ ಅವಾಂತರ” ಕೃತಿ ಆಯ್ಕೆಯಾಗಿದ್ದು, ಪ್ರಶಸ್ತಿ ಜೊತೆಗೆ 2,500/- ನಗದು ಪುರಸ್ಕಾರ ಹೊಂದಿದೆ.

    ಕಾದಂಬರಿ ವಿಭಾಗದ ತುಮಕೂರಿನ ಮೋಹನ್ ಎಂ.ಕೆ. ತುರುವೇಕೆರೆ ಪ್ರಾಯೋಜಕತ್ವದ “ದಿ. ಮಹಾದೇವಮ್ಮ ಈ. ಕೃಷ್ಣಯ್ಯ ಸ್ಮಾರಕ ದತ್ತಿ – ಕಾದಂಬರಿ ಮಾಣಿಕ್ಯ ಪ್ರಶಸ್ತಿ”ಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವೀಣಾ ರಾವ್ ಇವರ “ಮಧುರ ಮುರುಳಿ” ಕೃತಿ ಆಯ್ಕೆಯಾಗಿದ್ದು, ಪ್ರಶಸ್ತಿ ಜೊತೆಗೆ 2,500/- ನಗದು ಪುರಸ್ಕಾರ ಹೊಂದಿದೆ.

    ಗಜಲ್ ವಿಭಾಗದ ಶಿವಮೊಗ್ಗದ ಪಾರಂಪರಿಕ ವೈದ್ಯರಾದ ಸೈಯದ್ ಮುಹುಬುಲ್ಲಾ ಖಾದ್ರಿ ಪ್ರಾಯೋಜಕತ್ವದ “ದಿ. ಫಾತಿಮಾಭಿ ಜನಾಬ್ ಸೈಯದ್ ಅಬ್ದುಲ್ ಘನೀ ಸಾಬ್ ಸ್ಮಾರಕ ದತ್ತಿ – ಗಜಲ್ ಮಾಣಿಕ್ಯ ಪ್ರಶಸ್ತಿ”ಗೆ ಬೆಳಗಾವಿ ಜಿಲ್ಲೆಯ ಈಶ್ವರ ಮಮದಾಪೂರ ಇವರ “ಕಣ್ಣೊಳಗಿನ ಕಣ್ಣು” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ 2,500/- ನಗದು ಪುರಸ್ಕಾರ ಹೊಂದಿದೆ.

    ಚುಟುಕು ಸಾಹಿತ್ಯ ವಿಭಾಗದ ರಾಯಚೂರಿನ ರೇಷ್ಮಾ ಕಂದಕೂರು ಪ್ರಾಯೋಜಕತ್ವದ “ಕೆ.ವೈ. ಕಂದಕೂರ ದತ್ತಿ – ಚುಟುಕು ಮಾಣಿಕ್ಯ ಪ್ರಶಸ್ತಿ”ಗೆ ಬಾಗಲಕೋಟ ಜಿಲ್ಲೆಯ ಮುರ್ತುಜಾಬೇಗಂ ಕೊಡಗಲಿಯವರ “ಗಿಲಿಗಿಂಚಿ” ಕೃತಿ ಆಯ್ಕೆಯಾಗಿದ್ದು, ಪ್ರಶಸ್ತಿ ಜೊತೆಗೆ 2,500/- ನಗದು ಪುರಸ್ಕಾರ ಹೊಂದಿದೆ.

    ಪ್ರಶಸ್ತಿ ಪುರಸ್ಕೃತರಿಗೆ 28 ಸೆಪ್ಟಂಬರ್ 2024 ಶನಿವಾರ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಎಂಟನೇ ಕವಿ-ಕಾವ್ಯ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleರಾಮನಗರದಲ್ಲಿ ‘ಮೇಘಮೈತ್ರಿ ಶಿಕ್ಷಕರ ಸಾಹಿತ್ಯ ಸಮ್ಮೇಳನ’ | ಸೆಪ್ಟೆಂಬರ್ 28
    Next Article ನಾಟಕ ವಿಮರ್ಶೆ | ತುಳು ರಂಗಭೂಮಿಯಲ್ಲಿ ಸಂಚಲನವನ್ನು ಮೂಡಿಸಿದ ‘ಮಾಯೊದ ಮಹಾಶಕ್ತಿಲು’ ತುಳು ಪೌರಾಣಿಕ ನಾಟಕ
    roovari

    Comments are closed.

    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.