Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಾಣಿಕ್ಯ ಪ್ರಕಾಶನದ 2024ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ನಿಧಿ ಪ್ರಶಸ್ತಿಗಳ ಪ್ರಕಟ
    Awards

    ಮಾಣಿಕ್ಯ ಪ್ರಕಾಶನದ 2024ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ನಿಧಿ ಪ್ರಶಸ್ತಿಗಳ ಪ್ರಕಟ

    October 10, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಾಸನ : ಹಾಸನದ ಮಾಣಿಕ್ಯ ಪ್ರಕಾಶನ (ರಿ.) ಸಂಸ್ಥೆಯು 2015ರಿಂದಲೂ ವೈವಿಧ್ಯಮಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಲೇಖಕರ 80ಕ್ಕೂ ಹೆಚ್ಚು ಕೃತಿಗಳನ್ನು ಮುದ್ರಣ ಮಾಡಿ ಕನ್ನಡ ಸಾರಸ್ವತ ಲೋಕಕ್ಕೆ ನೀಡುವುದರ ಜೊತೆಗೆ ದಾನಿಗಳ ಸಹಕಾರದಲ್ಲಿ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸುತ್ತಿದೆ. ಈ ನಿಟ್ಟಿನಲ್ಲಿ 2024ರ ದತ್ತಿ ಪುರಸ್ಕಾರಗಳಿಗೆ 2023ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪ್ರಕಾರದ ಕೃತಿಗಳನ್ನು ಆಹ್ವಾನಿಸಲಾಗಿತ್ತು. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ನಿರೀಕ್ಷೆಗೂ ಮೀರಿ ಕೃತಿಗಳನ್ನು ಲೇಖಕರು ಕಳುಹಿಸಿದ್ದರು. ಹಿರಿಯ ಸಾಹಿತಿಗಳಾದ ತುರುವೇಕೆರೆ ಪ್ರಸಾದ್, ಕೊಟ್ರೇಶ್ ಎಸ್. ಉಪ್ಪಾರ್, ಎನ್. ಶೈಲಜಾ ಹಾಸನ, ಪದ್ಮಾವತಿ ವೆಂಕಟೇಶ್, ನೀಲಾವತಿ ಸಿ.ಎನ್., ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ, ಡಾ. ಹಸೀನಾ ಎಚ್.ಕೆ., ಲತಾಮಣಿ ಎಂ.ಕೆ. ತುರುವೇಕೆರೆ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಈ ಕೆಳಕಂಡಂತೆ ದತ್ತಿ ಪ್ರಶಸ್ತಿಗಳಿಗೆ ಅರ್ಹ ಕೃತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ.

    ದಿ. ಸಿ.ಪಿ. ನಾರಾಯಣಚಾರ್ಯ ಸ್ಮಾರಕ ದತ್ತಿ – ಕಾವ್ಯ ಮಾಣಿಕ್ಯ ಪ್ರಶಸ್ತಿ 2024 (ಕಾವ್ಯ)
    ಕವಯಿತ್ರಿ ಸಿ.ಎನ್. ನೀಲಾವತಿ ಕೊಡಮಾಡುವ ದಿ. ಸಿ.ಪಿ. ನಾರಾಯಣಚಾರ್ಯ ಸ್ಮಾರಕ ದತ್ತಿ – ಕಾವ್ಯ ಮಾಣಿಕ್ಯ ಪ್ರಶಸ್ತಿ 2024ಕ್ಕೆ ವಿಜಯಪುರ ಜಿಲ್ಲೆಯ ಸುಮಿತ್ ಮೇತ್ರಿ ಅವರ ‘ಈ ಕಣ್ಣುಗಳಿಗೆ ಸದಾ ನೀರಡಿಕೆ’ ಪ್ರಥಮ ರೂ.3,000/- ನಗದು ಮತ್ತು ಪ್ರಶಸ್ತಿ ಫಲಕ, ಹಾಸನ ಜಿಲ್ಲೆಯ ನಂದಿನಿ ಹೆದ್ದುರ್ಗ ಅವರ ‘ಒಂದು ಆದಿಮ ಪ್ರೇಮ’ ದ್ವಿತೀಯ ರೂ.2,000/- ನಗದು ಮತ್ತು ಪ್ರಶಸ್ತಿ ಪುರಸ್ಕಾರ, ಬೆಳಗಾವಿ ಜಿಲ್ಲೆಯ ಸಂತೋಷ ನಾಯಿಕ ಅವರ ‘ಹೊಸ ವಿಳಾಸದ ಹೆಜ್ಜೆಗಳು’ ತೃತೀಯ ರೂ.1,000/- ನಗದು ಮತ್ತು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನವಾಗಿವೆ.

    ಎನ್. ಶೈಲಜಾ ಹಾಸನ ದತ್ತಿ – ಪ್ರಬಂಧ ಮಾಣಿಕ್ಯ ಪ್ರಶಸ್ತಿ 2024 (ಲಲಿತ ಪ್ರಬಂಧ ವಿಭಾಗ)
    ಹಿರಿಯ ಸಾಹಿತಿ ಎನ್. ಶೈಲಜಾ ಹಾಸನ ಹೆಸರಲ್ಲಿ ಕೊಡಮಾಡುವ ಎನ್. ಶೈಲಜಾ ಹಾಸನ ದತ್ತಿ – ಪ್ರಬಂಧ ಮಾಣಿಕ್ಯ ಪ್ರಶಸ್ತಿ 2024 ಹಾಸನ ಜಿಲ್ಲೆಯ ಸುಮಾವೀಣಾ ಅವರ ‘ಮಧುರಾನುಭೂತಿಯ ಬುತ್ತಿ’ ಕೃತಿಯು ರೂ.3,000/- ನಗದು, ಪ್ರಶಸ್ತಿ ಪುರಸ್ಕಾರಕ್ಕೆ ಭಾಜನವಾಗಿದೆ.

    ಪದ್ಮಾವತಿ ವೆಂಕಟೇಶ್ ದತ್ತಿ – ಕಥಾ ಮಾಣಿಕ್ಯ ಪ್ರಶಸ್ತಿ 2024 (ಕಥಾ ವಿಭಾಗ)
    ಕವಯಿತ್ರಿ ಪದ್ಮಾವತಿ ವೆಂಕಟೇಶ್ ಹೆಸರಲ್ಲಿ ಕೊಡಮಾಡುವ ಪದ್ಮಾವತಿ ವೆಂಕಟೇಶ್ ದತ್ತಿ – ಕಥಾ ಮಾಣಿಕ್ಯ ಪ್ರಶಸ್ತಿ 2024ಕ್ಕೆ ಕೊಪ್ಪಳ ಜಿಲ್ಲೆಯ ಅನಸೂಯ ಜಹಗೀರದಾರ್ ಅವರ ‘ಪರಿವರ್ತನೆ’ ಕಥಾ ಸಂಕಲನವು ರೂ.2,000/- ನಗದು, ಪ್ರಶಸ್ತಿ ಪುರಸ್ಕಾರಕ್ಕೆ ಭಾಜನವಾಗಿದೆ.

    ದಿ. ಶಾಂತಮ್ಮ ನಾಗರಾಜ್ ಸ್ಮಾರಕ ದತ್ತಿ – ಹಾಸ್ಯ ಮಾಣಿಕ್ಯ ಪ್ರಶಸ್ತಿ 2024 (ಹಾಸ್ಯ ಪ್ರಬಂಧ ವಿಭಾಗ)
    ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ ಪ್ರಾಯೋಜಿತ ದಿ. ಶಾಂತಮ್ಮ ನಾಗರಾಜ್ ಸ್ಮಾರಕ ದತ್ತಿ – ಹಾಸ್ಯ ಮಾಣಿಕ್ಯ ಪ್ರಶಸ್ತಿ 2024ಕ್ಕೆ ಹಾಸನ ಜಿಲ್ಲೆಯ ಸುಮಾ ರಮೇಶ್ ಅವರ ‘ಹಚ್ಛೆ ದಿನ್’ ಕೃತಿಯು ರೂ.2,000/- ನಗದು, ಪ್ರಶಸ್ತಿ ಪುರಸ್ಕಾರಕ್ಕೆ ಭಾಜನವಾಗಿದೆ.

    ದಿ. ನಿಂಗಪ್ಪ ಮಲ್ಲಪ್ಪ ಮೇಟಿ ಸ್ಮಾರಕ ದತ್ತಿ – ಗದ್ಯ ಮಾಣಿಕ್ಯ ಪ್ರಶಸ್ತಿ 2024 (ಸಂಕೀರ್ಣ ವಿಭಾಗ)
    ಮುಂಬಯಿ ಸಾಹಿತಿ ವಿಶ್ವೇಶ್ವರ ಎನ್. ಮೇಟಿ ಅವರು ಕೊಡಮಾಡುವ ದಿ. ನಿಂಗಪ್ಪ ಮಲ್ಲಪ್ಪ ಮೇಟಿ ಸ್ಮಾರಕ ದತ್ತಿ – ಗದ್ಯ ಮಾಣಿಕ್ಯ ಪ್ರಶಸ್ತಿ 2024ಕ್ಕೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಶಿವಲೀಲಾ ಹುಣಸಗಿಯವರ ‘ಗೋರಿಯ ಸುತ್ತ ಸಪ್ತಪದಿ ತುಳಿದಾಗ’ ಕೃತಿಯು ರೂ.3,000/- ನಗದು, ಪ್ರಶಸ್ತಿ ಪುರಸ್ಕಾರಕ್ಕೆ ಭಾಜನವಾಗಿದೆ.

    ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಮಾಣಿಕ್ಯ ಪ್ರಕಾಶನ ದಿನಾಂಕ 10 ನವೆಂಬರ್ 2024ರ ಭಾನುವಾರ ಹಾಸನದ ಸಂಸ್ಕೃತ ಭವನದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಒಂಭತ್ತನೇ ಕವಿ-ಕಾವ್ಯ ಸಂಭ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಡಗರದಿಂದ ಸಮಾಪನಗೊಂಡ ‘ಮಾರ್ನೆಮಿಯ ಬಹುಬಾಷಾ ಕವಿಗೋಷ್ಠಿ’
    Next Article ಸುರತ್ಕಲ್ ಪುರಾತನ ಮಾರಿಯಮ್ಮ ದೇವಸ್ಥಾನದಲ್ಲಿ ‘ರಾಜ ದಂಡಕ’ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.