Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಯಕ್ಷ ಪ್ರತಿಭೆಯ ಕಲಾವಲ್ಲರಿ – ಶ್ರುತಿ ಭಟ್ ಮಾರಣಕಟ್ಟೆ

    July 6, 2025

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » 2023-24ನೇ ಸಾಲಿನ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ ಪ್ರಕಟ
    Awards

    2023-24ನೇ ಸಾಲಿನ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ ಪ್ರಕಟ

    March 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ 2023-24ನೇ ಸಾಲಿನ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗಳನ್ನು ದಿನಾಂಕ 01-03-2024ರಂದು ಪ್ರಕಟಿಸಲಾಗಿದೆ. ಕಾಸರಗೋಡಿನ ಹಿರಿಯ ಸಾಹಿತಿ ಶ್ರೀ ರಾಧಾಕೃಷ್ಣ ಉಳಿಯತ್ತಡ್ಕ ಅವರು ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಹಿರೇಮಠ ಭಾಲ್ಕಿ ಇವರ ಹೆಸರಿನಲ್ಲಿ ಸ್ಥಾಪಿಸಿದ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಜತೆಗೆ ಕನ್ನಡದ ಏಕೀಕರಣದ ಹೋರಾಟದ ವೀರಾಗ್ರಣಿ ಡಾ. ಜಯದೇವಿತಾಯಿ ಲಿಗಾಡೆ ಇವರ ಹೆಸರಿನಲ್ಲಿ ಸ್ಥಾಪಿಸಿದ ಪ್ರಶಸ್ತಿಗೆ ಬೀದರ್‌ನ ಹಿರಿಯ ಕನ್ನಡ ಹೋರಾಟಗಾರ ಶ್ರೀ ಪಂಚಾಕ್ಷರಿ ಪುಣ್ಯಶೆಟ್ಟಿ ಹಾಗೂ ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಇವರ ಹೆಸರಿನಲ್ಲಿ ಸ್ಥಾಪಿಸಿದ ಪ್ರಶಸ್ತಿಗೆ ಬೆಳಗಾವಿಯ ಕನ್ನಡ ಚಿಂತಕರಾದ ಪ್ರೊ. ಬಿ.ಎಸ್. ಗವಿಮಠ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ತಿಳಿಸಿದ್ದಾರೆ.

    ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳಲ್ಲಿನ ಸಂಘ ಸಂಸ್ಥೆಗಳು/ಮಹನೀಯರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿಗಳನ್ನು ಆಯ್ಕೆ ಮಾಡಲು 2023-24ನೇ ಸಾಲಿನಲ್ಲಿ ಸರ್ಕಾರವು ರಚಿಸಿದ್ದ ಆಯ್ಕೆ ಸಮಿತಿಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯಲ್ಲಿ ಡಾ. ಸರಜೂ ಕಾಟಕರ ಹಿರಿಯ ಸಾಹಿತಿಗಳು ಬೆಳಗಾವಿ, ಡಾ. ಎಂ.ಎಸ್. ದುರ್ಗಾ ಪ್ರವೀಣ್ ಕನ್ನಡ ಪ್ರಾಧ್ಯಾಪಕರು ಆಂಧ್ರಪ್ರದೇಶ ಹಾಗೂ ಡಾ. ಆರ್. ನಾಗಪ್ಪ ಗೌಡ ಕನ್ನಡ ಪ್ರಾಧ್ಯಾಪಕರು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಪ್ರಕಾಶ್ ಮತ್ತೀಹಳ್ಳಿ ಕಾರ್ಯದರ್ಶಿ ಗಡಿ ಅಭಿವೃದ್ಧಿ ಪ್ರಾಧಿಕಾರ, ಇವರುಗಳನ್ನೊಳಗೊಂಡ ಆಯ್ಕೆ ಸಮಿತಿಯು ಪ್ರಸ್ತುತ ಸಾಲಿನಲ್ಲಿ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿದೆ. ಪ್ರಶಸ್ತಿ ತಲಾ ರೂ.1 ಲಕ್ಷ ಮತ್ತು ಪುರಸ್ಕಾರವನ್ನು ಒಳಗೊಂಡಿದೆ. ಪ್ರಶಸ್ತಿ ಆಯ್ಕೆ ಸಮಿತಿಯು ಈ ಮೊತ್ತವನ್ನು ರೂ.3 ಲಕ್ಷಕ್ಕೆ ಹೆಚ್ಚಿಸಲು ಪ್ರಾಧಿಕಾರಕ್ಕೆ ಸಲಹೆ ಮಾಡಿದೆ.

    ಶ್ರೀ ರಾಧಾಕೃಷ್ಣ ಉಳಿಯತ್ತಡ್ಕ

    ಶ್ರೀ ಪಂಚಾಕ್ಷರಿ ಪುಣ್ಯಶೆಟ್ಟಿ

    ಪ್ರೊ. ಬಿ.ಎಸ್. ಗವಿಮಠ

     

    Share. Facebook Twitter Pinterest LinkedIn Tumblr WhatsApp Email
    Previous Article‘ಸುಮನಸಾ ಕೊಡವೂರು’ ಸಂಸ್ಥೆಯ ರಂಗಹಬ್ಬದಲ್ಲಿ ‘ಸಮುದಾಯ ಬೆಂಗಳೂರು’ ಕಲಾವಿದರಿಂದ ನಾಟಕ ಪ್ರದರ್ಶನ
    Next Article ಮಕ್ಕಳ ಬೇಸಿಗೆ ಶಿಬಿರ ‘ರಜಾಮಜಾ – 2024’ | ಏಪ್ರಿಲ್ 11ರಿಂದ ಮೇ 5ರವರೆಗೆ
    roovari

    Add Comment Cancel Reply


    Related Posts

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.