Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಪುರಸ್ಕಾರ’ ಪ್ರಕಟ
    Awards

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಪುರಸ್ಕಾರ’ ಪ್ರಕಟ

    March 15, 2025No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಕೊಂಕಣಿ ಸಾಹಿತ್ಯ ಕ್ಷೇತ್ರದಿಂದ ಎಂ. ಪ್ಯಾಟ್ರಿಕ್ ಕಾಮಿಲ್ ಮೊರಾಸ್ ಮಂಗಳೂರು, ಕೊಂಕಣಿ ಕಲೆ ವಿಭಾಗದಿಂದ ಜೊಯಲ್ ಪಿರೇರಾ ಮಂಗಳೂರು ಮತ್ತು ಕೊಂಕಣಿ ಜಾನಪದ ವಿಭಾಗದಿಂದ ಸೋಬಿನಾ ಮೊತೇಶ್ ಕಾಂಬ್ರೆಕರ್ ಹಳಿಯಾಳ ಇವರು ಆಯ್ಕೆಯಾಗಿದ್ದಾರೆ. 2024ನೇ ಸಾಲಿನ ‘ಪುಸ್ತಕ ಪುರಸ್ಕಾರ’ಕ್ಕೆ ಕೊಂಕಣಿ ಕವನ ಪುಸ್ತಕ ವಿಭಾಗದಲ್ಲಿ ಫೆಲ್ಲಿ ಲೋಬೊ ದೇರೆಬೈಲ್ ಇವರ ‘ಪಾಲ್ವಾ ಪೊಂತ್’ ಕೃತಿ ಹಾಗೂ ಕೊಂಕಣಿ ಲೇಖನ ಪುಸ್ತಕ ವಿಭಾಗದಲ್ಲಿ ವಲೇರಿಯನ್ ಸಿಕ್ವೇರಾ ಕಾರ್ಕಳ ಇವರ ‘ಶೆತಾಂ ಭಾಟಾಂ ತೊಟಾಂನಿ’ ಪುಸ್ತಕ ಆಯ್ಕೆಯಾಗಿದೆ.

    ಗೌರವ ಪ್ರಶಸ್ತಿಯು ರೂ.50,000/- ನಗದು, ಪ್ರಮಾಣ ಪತ್ರ ಹಾಗೂ ಪುಸ್ತಕ ಪುರಸ್ಕಾರವು ರೂ.25,000/- ನಗದು, ಪ್ರಮಾಣ ಪತ್ರವನ್ನು ಒಳಗೊಂಡಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ತಿಳಿಸಿರುತ್ತಾರೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಮೈಸೂರು ಸಹಯೋಗದಲ್ಲಿ ದಿನಾಂಕ 23 ಮಾರ್ಚ್ 2023ರಂದು ಮೈಸೂರಿನ ವಿಜಯನಗರ 2ನೇ ಸ್ಟೇಜ್‌ನಲ್ಲಿರುವ ಕೊಂಕಣ್ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

    ಕೊಂಕಣಿ ಸಾಹಿತ್ಯ ಗೌರವ ಪ್ರಶಸ್ತಿ : ಪ್ರಶಸ್ತಿ ಪುರಸ್ಕೃತರು : ಪ್ಯಾಟ್ರಿಕ್ ಕಾಮಿಲ್ ಮೊರಾಸ್ (ಎಮ್. ಪ್ಯಾಟ್ರಿಕ್)
    ಕೊಂಕಣಿ ಸಾಹಿತ್ಯ ಹಾಗೂ ಪತ್ರಿಕಾರಂಗದ ಓರ್ವ ಅರ್ಪಣಾ ಮನೋಭಾವದ ಸಾಹಿತಿ. ಕೊಂಕಣಿ ಸಾಹಿತ್ಯ ಭಂಡಾರಕ್ಕೆ 400ಕ್ಕೂ ಮಿಕ್ಕಿ ಕಥೆಗಳನ್ನು, ಪ್ರಸ್ತುತ ಪರಿಸ್ಥಿತಿ ವಿಷಯಗಳ ಮೇಲೆ ಲೇಖನಗಳನ್ನು, 8 ಕಾದಂಬರಿಗಳನ್ನು ಹಾಗೂ 2 ನಾಟಕಗಳನ್ನು ರಚಿಸಿದ್ದಾರೆ. ಮಳೆ ಬಿಸಿಲು ಲೆಕ್ಕಿಸದೆ, ಕೊಂಕಣಿ ಪುಸ್ತಕಗಳನ್ನು ತಲೆ ಮೇಲೆ ಹೊತ್ತುಕೊಂಡು ಮನೆಮನೆಗಳಲ್ಲಿ ಕೊಂಕಣಿ ಪುಸ್ತಕಗಳನ್ನು ಮುಟ್ಟಿಸಿದಂತಹ ಪ್ರಥಮ ವ್ಯಕ್ತಿ. ತಮ್ಮದೇ ಆದ ‘ನಿತ್ಯಾಧರ್ ಪ್ರಕಾಶನ್’ ಸ್ಥಾಪಿಸಿ ಪುಸ್ತಕಗಳನ್ನು ಪ್ರಕಟಿಸುತ್ತಾರೆ. ‘ತಿರಸ್ಕಾರ್’, ‘ಹಾಂವ್ ತುಕಾ ಭಾಗಿ ಕರ್ತಲೊಂ’, ‘ಮಸ್ತಿಲ್ಲೆಂ ಪುಲ್’, ‘ತುಂ ಮ್ಹಜೆಂಚ್ ಬಾ’, ‘ಒಲಿವಿಯಾ ವಜ್ರಾಂಚೊ ಕುರೊವ್’, ‘ಬೆಸಾಂವ್’, ‘ನರ್ಸ್ ಗ್ಲೋರಿಯಾ’ ಕಾದಂಬರಿಗಳು. ‘ಲಿಪ್ಲಲೊ ಸಾಳಿಯೊ’ ಪತ್ತೇದಾರಿ ಕಾದಂಬರಿ, ‘ಆವಯ್ಚೆಂ ಕಾಳಿಜ್ ಆನಿ ಇತರ್ ಕಾಣಿಯೊ’ ಪ್ರಕಟಗೊಂಡಿವೆ. ‘ವಾಗ್ ಮಾರ್ಲೊ’ ವಿನೋದಿತ ಕಿರುನಾಟಕ. ‘ತುಂವೆಂಚ್ ವಿಕ್ರೀತ್ ಕೆಲೆಂಯ್’ ಪತ್ತೇದಾರಿ ನಾಟಕ, ‘ಫಾರಿಕ್ಪಣ್’ ಮುಂತಾದ ನಾಟಕಗಳನ್ನು ರಚಿಸಿದ್ದಾರೆ.

    ಕೊಂಕಣಿ ಕಲಾ ಗೌರವ ಪ್ರಶಸ್ತಿ : ಪ್ರಶಸ್ತಿ ಪುರಸ್ಕೃತರು : ಶ್ರೀ ಅಲೆಕ್ಸಾಂಡರ್ ಜೋಯೆಲ್ ಪಿರೇರಾ
    ಸಂಗೀತ ಗುರು ಬಿರುದಾಂಕಿತ ಜೊಯೆಲ್ ಪಿರೇರಾರವರು ಮಂಗಳೂರಿನ ಬಿಜೈನಲ್ಲಿ ಜನಿಸಿದರು. ಇವರು ಬಾಲ್ಯದಿಂದಲೇ ಸಂಗೀತ ಆಸಕ್ತಿ ಹೊಂದಿದವರು. ಸಂಗೀತ ಕ್ಷೇತ್ರದಲ್ಲಿ ಪ್ರಾಬಲ್ಯವನ್ನು ಹೊಂದಿರುವ ಇವರು ಪಿಯಾನೊ, ಅಕಾರ್ಡಿಯನ್, ವಯೊಲಿನ್, ಮ್ಯಾಂಡೊಲಿನ್, ಟ್ಯೂಬ್ಯುಲರ್, ಯುಪೋನಿಯಮ್, ಕಾರ್ನೆಟ್, ಸರ್ಕಲ್ ಬಾಸ್, ಸಿತಾರಾ ಮುಂತಾದ ಹಿತ್ತಾಳೆ ವಾದ್ಯಗಳನ್ನು ನುಡಿಸುತ್ತಾರೆ. ಕೊಂಕಣಿ ಕ್ರಿಶ್ಚಿಯನ್ ಸಮುದಾಯದಲ್ಲಿ ಉಳಿದಿರುವ ಏಕೈಕ ಜಾನಪದ ಸಂಗೀತ ಸಾಧನವಾದ ‘ಗುಮಟ್’ ಅನ್ನು ಬಾರಿಸುತ್ತಾ ‘ಗುಮ್ಟಾಂ’ ಹಾಡುಗಳನ್ನು ಹಾಡುವುದು. ಕೊಂಕಣಿ, ಇಂಗ್ಲೀಷ್, ಮಲಯಾಳಂ, ಕನ್ನಡ, ತುಳು ಭಾಷೆಗಳಲ್ಲಿ ಸುಮಾರು 400ಕ್ಕೂ ಹೆಚ್ಚಿನ ಅಲ್ಬಮ್ ಗಳಿಗೆ ಸಂಗೀತ ಸಂಯೋಜನೆ/ವ್ಯವಸ್ಥೆ ಮಾಡಿರುವ ಇವರು 2007ರಲ್ಲಿ ಕಲಾಂಗಣ್ ನಲ್ಲಿ 40 ಗಂಟೆಗಳ ಕಲಾ ನಡೆದ ನಿರಂತರ ಗಾಯನ ‘ಕೊಂಕಣಿ ನಿರಂತರಿ’ ಸಂಗೀತ ಕಾರ್ಯಕ್ರಮ ನಿರ್ದೇಶಕರಾಗಿ, ಗಿನ್ನಿಸ್ ವಿಶ್ವದಾಖಲೆ ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ. ಕೊಂಕಣ ಬೈಬಲ್ ನಾಟಕಗಳು-6, ಸಾಮಾಜಿಕ ನಾಟಕಗಳು-4, ಮಾಟಮಂತ್ರ ಆಚರಣೆಗಳು/ಮಾನಸಿಕ/ ವೈಜ್ಞಾನಿಕ ವಿಶ್ಲೇಷಣೆಯ ಕುರಿತು ಸರ್ಣೆತಾಂ ಶೀರ್ಷಿಕೆಯ ಕೊಂಕಣಿ ಕಾದಂಬರಿ ಇವರು ರಚಿಸಿರುವ ಸಾಹಿತ್ಯ ಕೃತಿಗಳಾಗಿರುತ್ತವೆ. ಸಿನೇಮಾ ಕ್ಷೇತ್ರದಲ್ಲಿಯೂ ಇವರು ದುಡಿದಿದ್ದಾರೆ.

    ಕೊಂಕಣಿ ಜಾನಪದ ಗೌರವ ಪ್ರಶಸ್ತಿ : ಶ್ರೀಮತಿ ನೊಬೀನ ಮೊತೇಶ್ ಕಾಂಬ್ರೆಕರ್
    ಇವರು ಸಿದ್ದಿ ಬುಡಕಟ್ಟು ಸಮುದಾಯದ ಮಹಿಳೆ. ಇವರು ಸಿದ್ದಿ ಸಂಸ್ಕೃತಿ ಕಕಲಾತಂಡದ ಅಧ್ಯಕ್ಷರು. ಇವರು ಸುಮಾರು 20 ವರ್ಷ ಮೇಲ್ಪಟ್ಟು ತನ್ನ ಕಲೆಯನ್ನ ಬಿತ್ತರಿಸುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಜಿಲ್ಲೆಗಳಲ್ಲಿ, ಹೊರನಾಡುಗಳಲ್ಲಿ ಹೊರರಾಜ್ಯಗಳಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಕಲೆಯನ್ನು ಬಿತ್ತರಿಸಿದ್ದಾರೆ. ತಮ್ಮ ಕಲೆಯನ್ನು ಹಸ್ತಾಂತರಿಸುವಂತಹ ಗುರು-ಶಿಷ್ಯ ಪರಂಪರೆ ಅಡಿಯಲ್ಲಿ ತರಬೇತಿಗಳನ್ನು ನೀಡಿರುತ್ತಾರೆ. ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಸ್ಪೃಶ್ಯತಾ ನಿವಾರಣ ಕಾರ್ಯಕ್ರಮ, ಆರೋಗ್ಯದ ಕುರಿತಂತೆ ಜನ ಜಾಗ್ರತಿ ಕಾರ್ಯಕ್ರಮಗಳು ಹೀಗೆ ಹಲವಾರು ವಿಚಾರಗಳ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸುವಂತಹ ಕೆಲಸದಲ್ಲಿ ತಮ್ಮನ್ನೇ ತಾವು ತೊಡಗಿಸಿಕೊಂಡಿದ್ದಾರೆ. ಇವರು ದಮಾಮಿ ನೃತ್ಯ, ಪುಗಡಿ ನೃತ್ಯ ಹಾಗೂ ಸಿಗ್ಮೋ ನೃತ್ಯ ಹಾಗೂ ವಾದ್ಯಗಳನ್ನು ನುಡಿಸುವುದರಲ್ಲಿ ಪರಿಣಿತರಾಗಿದ್ದಾರೆ. ಇವರಿಗೆ ದಮಾಮಿ ನೃತ್ಯಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2015 ಲಭಿಸಿರುತ್ತದೆ. ಜಾನಪದ ಅಕಾಡೆಮಿ ಪ್ರಶಸ್ತಿ ಕೂಡ ಲಭಿಸಿದೆ.

    ಪುಸ್ತಕ ಪುರಸ್ಕೃತ ಕವನ ಪುಸ್ತಕ : ‘ಪಾಲ್ವಾ ಪೊಂತ್’ ಲೇಖಕರು : ಶ್ರೀಮತಿ ಫೆಲ್ಸಿಲೋಬೊ, ದೇರೆಬೈಲ್
    ಶಾಲಾ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸಲು ವಿವಿಧ ಕೊಂಕಣಿ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ. ಎಲ್ಲಾ ಕೊಂಕಣಿ ಪತ್ರಿಕೆಗಳಲ್ಲಿ ಲೇಖನ, ಕವಿತೆ, ವಿಡಂಬನೆ, ಲಲಿತಪ್ರಬಂಧ ಪ್ರಕಟಿಸುತ್ತಾ ಬಂದಿರುತ್ತಾರೆ. ಕೊಂಕಣಿ ಸಾಹಿತ್ಯ ಕೃಷಿಯಲ್ಲಿ ಕ್ರೀಯಾಶೀಲರಾಗಿರುವ ಇವರು ‘ಗರ್ಜೆ ತೆಕಿದ್ ಗಜಾಲಿ’ ಲೇಖನ ಪ್ರಕಟಿಸಿರುತ್ತಾರೆ ಹಾಗೂ ಇವರು ಬರೆದಿರುವ ‘ಆಪಾಲಿಪಾ’ ಮಕ್ಕಳ ಕವಿತೆ ಪುಸ್ತಕವನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಪ್ರಕಟಿಸಿರುತ್ತದೆ. ಇವರ ಲೇಖನಗಳು ಹೆಚ್ಚಾಗಿ ಎಲ್ಲಾ ಕೊಂಕಣಿ ಪತ್ರಗಳಲ್ಲಿ ಮತ್ತು ಹಲವು ಜಾಲತಾಣಗಳಲ್ಲಿ ಸರಾಗವಾಗಿ ಪ್ರಸಾರಗೊಳ್ಳುತ್ತವೆ. ವಿನೋದ, ಲಲಿತಪ್ರಬಂಧ, ಕವಿತೆ ಮತ್ತು ಲೇಖನ ವಿಭಾಗಗಳಲ್ಲಿ ಅನೇಕ ಬಹುಮಾನಗಳು ಲಭಿಸಿವೆ. ಆಕಾಶವಾಣಿ ಮಂಗಳೂರು, ರೇಡಿಯೊ ಹಾಗೂ ರೇಡಿಯೊ ಸಾರಂಗ್ ಇವುಗಳಲ್ಲಿ ಭಾಷಣ, ಕವಿತೆಗಳು ಪ್ರಸಾರಗೊಂಡಿವೆ. ಅನೇಕ ಕವಿಗೋಷ್ಠಿಗಳಲ್ಲಿ ಇವರು ಕೊಂಕಣಿ, ಕನ್ನಡ ಮತ್ತು ತುಳು ಭಾಷೆಗಳಲ್ಲಿ ಕವಿತೆ ಪ್ರಸ್ತುತ ಪಡಿಸಿರುತ್ತಾರೆ.

    ಪುಸ್ತಕ ಪುರಸ್ಕೃತ ಕೊಂಕಣಿ ಲೇಖನ ಪುಸ್ತಕ : ‘ಶೆತಾಂ ಭಾಟಾಂ ತೊಟಾಂನಿ’ ಲೇಖಕರು: ವಲೇರಿಯನ್ ಸಿಕ್ವೇರಾ (ವಲ್ಲಿ ಬೋಳ)
    ವಲ್ಲಿ ಬೋಳ ನಾಮಾಂಕಿತದಲ್ಲಿ ಬರೆಯುವ ವಲೇರಿಯನ್ ಸಿಕ್ಕೇರಾರವರು 4 ಆಗಸ್ಟ್ 1959 ಇನವಿಯಲ್ಲಿ ಕಾರ್ಕಳ ತಾಲೂಕಿನ ಬೋಳ ಎಂಬಲ್ಲಿ ಜನಿಸಿದರು. ಇವರದು ಸಾಂಪ್ರದಾಯಿಕ ಕೃಷಿ ಕುಟುಂಬ. 1983ರಲ್ಲಿ ಪಯ್ಣಾರಿ ಪತ್ರಿಕೆಗೆ ಬರೆಯುವ ಮುಖಾಂತರ ಸಾಹಿತ್ಯ ಕ್ಷೇತ್ರಕ್ಕೆ ಕಾಲಿರಿಸಿದ ಇವರು ಸಾಮಾಜಿಕ, ಕೃಷಿ, ಸಂಪ್ರದಾಯ, ಪರಿಸರ, ಜಾಗೃತಿ ಮತ್ತು ಜೀವನದ ಸತ್ಯಗಳು. ಹೀಗೆ ಅನೇಕ ವಿಷಯಗಳಲ್ಲಿ ಸಾಹಿತ್ಯ ಕೃಷಿ ಮಾಡುತ್ತಿದ್ದಾರೆ. ಕಳೆದ 41 ವರುಷಗಳಿಂದ ಇವರ ಸಾವಿರಕ್ಕೂ ಮಿಕ್ಕಿ ಕೊಂಕಣಿ, ತುಳು, ಕನ್ನಡ ಭಾಷೆಗಳಲ್ಲಿ ಲೇಖನ, ಕಥೆ, ಕವಿತೆ, ವಿಡಂಬನೆ, ಪ್ರಬಂಧ, ಚುಟುಕು ಹಾಗೂ ನುಡಿಗಟ್ಟುಗಳು ವಿವಿಧ ಮಾಧ್ಯಮಗಳಲ್ಲಿ ಪ್ರಸಾರಗೊಂಡಿವೆ. ‘ಸಾಂಗ್ಯಾ್ಯ ತುಪೆಂ’ (ಎರಡು ಆವೃತ್ತಿ), ‘ಗಾದ್ಯಾ ಮೆರೆರ್’, ‘ಜಗ್ಗಾಣೆ’ ಎಂಬ ಕೊಂಕಣಿ ಹಾಗೂ ‘ಪೂಂಬೆ’ ಎಂಬ ತುಳು ಪುಸ್ತಕಗಳು ಪ್ರಕಟಗೊಂಡಿವೆ. ‘ನಾಡಾಕ್ ವಚುಯಾಂ’, ‘ಪಾಚ್ವಿ ಪಾಂತ್’, ‘ಲಾಂಪ್ಯಾಂವ್’, ‘ಮಯ್ಗಾ ಫಾತರ್’, ‘ಲಿಸಾಂವ್ ಅನಿ ಸ್ಥೆಸಾಂವ್’, ‘ಜಾಣ್ವಾಯೆಚ್ಯೊ ಸಾಂಗ್ಯಾಚ್’, ‘ಮಾತಿ ಆನಿ ಸತಾಂ’, ‘ಮಾಸ್ಳೆಚಿಂ ಮೆಟಾಂ’, ‘ಕೃಷಿ-ಕಶಿ’ ಎಂಬ ಕೊಂಕಣಿ ಹಾಗೂ ‘ಪಚ್ಚನಿರೆ’ ಎಂಬ ತುಳು ಅಂಕಣಗಳನ್ನು ಬರೆದಿದ್ದಾರೆ.

    award baikady konkani Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ಅನ್ವೇಷಣೆ ರಾಷ್ಟ್ರ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ತಾಜ್ ಮಹಲಿನ ಟೆಂಡರ್’ | ಮಾರ್ಚ್ 16
    roovari

    Add Comment Cancel Reply


    Related Posts

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಮಂಗಳೂರು ಪುರಭವನದಲ್ಲಿ ‘ಬಾಲಗಾನ ಯಶೋಯಾನ’ | ಜೂನ್ 03

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.