ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025ನೇ ಸಾಲಿಗೆ ಸಂಬಂಧಿಸಿದಂತೆ ಮೂವರಿಗೆ ‘ಗೌರವ ಪ್ರಶಸ್ತಿ’ಯನ್ನು ಘೋಷಿಸಿದೆ. ಅರೆಭಾಷೆ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ, ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದ ಸಾಧನೆಗಾಗಿ ಪುತ್ತೂರಿನ ಆನಂತರಾಜ ಗೌಡ ಹಾಗೂ ಅರೆಬಾಷಿಕ ಸಂಘಟನಾ ಕ್ಷೇತ್ರದ ಸಾಧನೆಗಾಗಿ ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ.


ದಿನಾಂಕ 14 ಮಾರ್ಚ್ 2026ರಂದು ಮಂಗಳೂರಿನ ಉರ್ವಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ.50,000/- ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅಂದು ನಡೆಯುವ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ನಡೆಯಲಿದೆ.
