Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹೆಬ್ರಿಯ ಹೆಬ್ಬೇರಿ ಯಕ್ಷಲೋಕದ 5ನೇ ವಾರ್ಷಿಕೋತ್ಸವ
    Yakshagana

    ಹೆಬ್ರಿಯ ಹೆಬ್ಬೇರಿ ಯಕ್ಷಲೋಕದ 5ನೇ ವಾರ್ಷಿಕೋತ್ಸವ

    November 13, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಯಕ್ಷಲೋಕ ಹೆಬ್ಬೇರಿ ಸಂಸ್ಥೆಯ 5ನೇ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 09 ನವೆಂಬರ್ 2024ರ ಶನಿವಾರದಂದು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
    ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ “ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿ ಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ. ಹೀಗಾಗಿ ಕಲಾ ಸೇವೆಯಲ್ಲಿಯೇ ಬದುಕಿನ ಸಾರ್ಥಕ್ಯವನ್ನು ಕಂಡುಕೊಂಡಿದ್ದೇನೆ. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಅದೇ ಉದ್ದೇಶದಿಂದ ಹಲವಾರು ಸಂಘಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಯಕ್ಷಗಾನ ಆಸಕ್ತಿ ನನಗೆ ವರವಾಗಿ ಪರಿಣಮಿಸಿದೆ. 60ರ ವರ್ಷದಲ್ಲಿ ಯಕ್ಷಗಾನವನ್ನು ಗುರು ಸಂಜೀವ ಸುವರ್ಣರ ಬಳಿ ಕಲಿತು 400ಕ್ಕೂ ಅಧಿಕ ಪ್ರದರ್ಶನ ಮಾಡಿದ್ದೇನೆ. ಯಕ್ಷಲೋಕದ ಗುರು ಸುಬ್ರಹ್ಮಣ್ಯ ಪ್ರಸಾದ್ ಅವರೊಡನೆಯೂ ಪಾತ್ರವನ್ನು ಮಾಡಿದ ಸಂತೃಪ್ತಿಯಿದೆ, ಈ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸುವ, ಯಕ್ಷಗಾನ ಕಲೆಗೆ ಪ್ರೋತ್ಸಾಹ ನೀಡುವ ಸುವರ್ಣವಕಾಶ ಲಭಿಸಿತು. ಈ ಕೊಡುಗೆಗಾಗಿಯೇ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಗೌರವ ಒಲಿದು ಬಂತು. ಇದು ಯಕ್ಷಗಾನಕ್ಕೆ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಆ ದೇವರ ಕೃಪೆ ಎಂದೇ ನಂಬಿದ್ದೇನೆ. ನನ್ನ ಟ್ರಸ್ಟ್ ಮೂಲಕ ಸಾಧಕ ಕಲಾವಿದರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಮಾಡುತ್ತಿದ್ದೇನೆ. ಇದೇ ಸೇವೆ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷನಾಗಿಯೂ ಮುಂದುವರಿಸಿದ್ದೇನೆ. ಸೇವೆಯಲ್ಲಿಯೇ ಬದುಕಿನ ಸಾರ್ಥಕವನ್ನು ಕಂಡು ಕೊಂಡಿದ್ದೇನೆ.” ಎಂದು ಹೇಳಿದರು.
    ಕಲಾ ಪೋಷಕ ವಿಜಯ ಕುಮಾರ್ ಕಳ್ತೂರು, ಆವರ್ಸೆ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಶಶಿಧರ ಶೆಟ್ಟಿ, ಪ್ರಥಮ ಧರ್ಜೆ ಗುತ್ತಿಗೆದಾರ ವಾದಿರಾಜ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿ, ಶುಭ ಹಾರೈಸಿದರು.
    ಯಕ್ಷಲೋಕ ಹೆಬ್ಬೇರಿಯ ಅಧ್ಯಕ್ಷ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ, ಗೌರವಾಧ್ಯಕ್ಷ ಲಕ್ಷ್ಮೀಶ ಭಾರದ್ವಾಜ್, ವಿಜಯೇಂದ್ರ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷಲೋಕ ಹೆಬ್ಬೇರಿ ತಂಡದಿಂದ ಗುರು ಸುಬ್ರಹ್ಮಣ್ಯ ಪ್ರಸಾದ್ ಅವರ ನಿರ್ದೇಶನದಲ್ಲಿ `ಶ್ರೀರಾಮ ದರ್ಶನ’ ಯಕ್ಷಗಾನ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಲೋಕಾರ್ಪಣೆಗೊಂಡ ‘ಕನಕ-ಪುರಂದರ’ ಕೃತಿ 
    Next Article ಸಮಾರೋಪಗೊಂಡ ಚಿಟ್ಟಾಣಿ ಸಪ್ತಾಹ ಸಮಾರಂಭ.
    roovari

    Add Comment Cancel Reply


    Related Posts

    ಸರಯೂ ಸಪ್ತಾಹದಲ್ಲಿ ಸಿ. ಎಸ್. ಭಂಡಾರಿ ಇವರಿಗೆ ಸನ್ಮಾನ.

    June 2, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಬಡಗು ಹಿಮ್ಮೇಳ ಮುಮ್ಮೇಳ ತರಗತಿ ಉದ್ಘಾಟನೆ

    June 2, 2025

    ಯಶಸ್ವಿ ಕಲಾವೃಂದದಿಂದ ಗಾನ ಗಾರುಡಿಗ ದಿ. ಕಾಳಿಂಗ ನಾವಡರಿಗೆ ಗಾನ ನಮನ

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.