Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭ
    Yakshagana

    ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭ

    April 25, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭವು ದಿನಾಂಕ 19-04-2024ರಂದು ನಡೆಯಿತು.

    ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿರವರು “ಯಕ್ಷಧ್ರುವ ಟ್ರಸ್ಟ್ ಯಕ್ಷಾಭಿಮಾನಿಗಳ ಆಶೀರ್ವಾದದಿಂದ ಬೆಳೆಯುತಿದ್ದು, ಸಹೃದಯಿ ದಾನಿಗಳ ನೆರವಿನಿಂದ ಈಗಾಗಲೇ ಪಟ್ಲ ಫೌಂಡೇಷನ್ ನಿಂದ ಸುಮಾರು ರೂ.12 ಕೋಟಿ ಹಣವನ್ನು ಅಶಕ್ತ ಕಲಾವಿದರಿಗೆ ಸಹಾಯಹಸ್ತ ನೀಡಿದೆ. ಇತ್ತೀಚೆಗೆ ಅಮೇರಿಕಾದಲ್ಲಿನ ಸಹೃದಯಿಯೋರ್ವರು ಉಡುಪಿ ಸಮೀಪ ನೀಡಿರುವ ಒಂದು ಕೋಟಿ ವೆಚ್ಚದ ಜಾಗದಲ್ಲಿ 20 ಮನೆಗಳನ್ನು ನಿರ್ಮಾಣ ಮಾಡಲಿದ್ದೇವೆ. ದೈವಾರಾಧನೆ, ನಾಟಕ, ಯಕ್ಷಗಾನದ ಕಲಾವಿದರಿಗೆ ಟ್ರಸ್ಟಿನಿಂದ ವಿಮಾ ಯೋಜನೆ, ನಾಲ್ಕು ಸಾವಿರ ಮಂದಿಗೆ ಯಕ್ಷ ಶಿಕ್ಷಣದ ಮೂಲಕ ಶಿಕ್ಷಣವನ್ನು ಟ್ರಸ್ಟ್ ನೀಡುತ್ತಿದ್ದು ಕಲಾವಿದರಿಗೆ ಸೇವೆ ಮಾಡುತ್ತಿರುವವರಿಗೆ ಜನರ ಆಶೀರ್ವಾದವಿರಲಿ.” ಎಂದು ಹೇಳಿದರು.

    ಸವಣೂರು ವಿದ್ಯಾರಶ್ಮಿ ವಿದ್ಯಾ ಸಂಸ್ಥೆಗಳ ಸಂಚಾಲಕ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಗೌರವಾಧ್ಯಕ್ಷ ಸವಣೂರು ಕೆ. ಸೀತಾರಾಮ ರೈರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, “ಕಳೆದ ಆರು ವರ್ಷ ಜೈರಾಜ್ ಭಂಡಾರಿರವರ ಸಾರಥ್ಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕವು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ಪ್ರಸ್ತುತ ಅಧ್ಯಕ್ಷ ಕರುಣಾಕರ್ ರೈ ದೇರ್ಲರವರ ಅಧ್ಯಕ್ಷತೆಯಲ್ಲಿ ಏಳನೇ ವರ್ಷವನ್ನು ಆಚರಿಸುತ್ತಿದೆ. ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಈ ಟ್ರಸ್ಟ್ ಎಲ್ಲೆಡೆ ಮನೆಮಾತಾಗಿದೆ. ಪಟ್ಟ ಸತೀಶ್ ಶೆಟ್ಟಿರವರ ಸೇವೆ ದೇಶ-ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು ಇದೊಂದು ಉತ್ತಮ ಸಂಘಟನೆ ಎಂಬುದಾಗಿ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ” ಎಂದರು.

    ಅಕ್ಷಯ ಕಾಲೇಜು ಚೇರ್ ಮ್ಯಾನ್ ಜಯಂತ್ ನಡುಬೈಲುರವರು ಮಾತನಾಡಿ, ಪಟ್ಲ ಸತೀಶ್ ಶೆಟ್ಟಿರವರು ಯಕ್ಷಗಾನ ರಂಗದ ಅಶಕ್ತ ಕಲಾವಿದರಿಗೆ ನೆರವಿನ ಹಸ್ತ ಚಾಚುವ ಮೂಲಕ ಒಂದರ್ಥದಲ್ಲಿ ಕಲಾವಿದರಿಗೆ ಬದುಕು ಕಟ್ಟಿಕೊಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಬಡ ಕುಟುಂಬವೊಂದಕ್ಕೆ ಪಟ್ಲ ಫೌಂಡೇಶನ್‌ನಿಂದ ಮನೆ ನಿರ್ಮಾಣ ಮಾಡಿರುವುದು ಶ್ಲಾಘನೀಯ. ಅದೇ ಕುಟುಂಬದ ವಿದ್ಯಾರ್ಥಿನಿಗೆ ನಮ್ಮ ಅಕ್ಷಯ ಕಾಲೇಜು ಉಚಿತವಾಗಿ ವಿದ್ಯಾಭ್ಯಾಸವನ್ನು ಕಲ್ಪಿಸುತ್ತದೆ.” ಎಂದರು.

    ಯಕ್ಷಧ್ರುವ ಪಟ್ಲ ಫೌಂಡೇಷನ್ ಪುತ್ತೂರು ಘಟಕದ ಅಧ್ಯಕ್ಷ ಎನ್. ಕರುಣಾಕರ್ ರೈರವರು ಸ್ವಾಗತಿಸಿ ಮಾತನಾಡಿದರು. ಟ್ರಸ್ಟಿನ ಉಪಾಧ್ಯಕ್ಷರಾದ ಎನ್. ರವೀಂದ್ರ ಶೆಟ್ಟಿ ನುಳಿಯಾಲು, ಶ್ರೀಮತಿ ಹರಿಣಾಕ್ಷಿ ಜೆ. ಶೆಟ್ಟಿ, ಸದಸ್ಯ ಉದಯ ವೆಂಕಟೇಶ್, ಡಾ. ರಾಜೇಶ್ ಬೆಜ್ಜಂಗಳ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಸಮಿತಿ ಸದಸ್ಯ ಸುಬ್ಬಪ್ಪ ಕೈಕಂಬ ವಂದಿಸಿದರು. ಪ್ರಧಾನ ಸಂಚಾಲಕ ಪ್ರಶಾಂತ್ ರೈ ಮುಂಡಾಲಗುತ್ತು ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ನಿಕಟಪೂರ್ವ ಅಧ್ಯಕ್ಷ ಜೈರಾಜ್ ಭಂಡಾರಿ, ಬೆಂಗಳೂರು ಘಟಕದ ಅಧ್ಯಕ್ಷ ಹೇಮಂತ್ ರೈ ಮನವಳಿಕೆ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ರೈ ಬಿ., ಕೋಶಾಧಿಕಾರಿ ದತ್ತಾತ್ರೇಯ ರಾವ್ ಸಹಿತ ಸಮಿತಿ ಸದಸ್ಯರುಗಳು, ಗೌರವ ಸಲಹೆಗಾರರು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದರು.

     

    ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಜನಪ್ರಿಯ ಪ್ರಸಂಗ ‘ತ್ರಿಜನ್ಮ ಮೋಕ್ಷ’ ಪೌರಾಣಿಕ ಪುಣ್ಯ ಕಥಾನಕವನ್ನು ಆಡಿ ತೋರಿಸಲಾಯಿತು. ಭಾಗವತರಾಗಿ ಪಟ್ಲ ಸತೀಶ್ ಶೆಟ್ಟಿ, ಪ್ರಫುಲ್ಲಚಂದ್ರ ನೆಲ್ಯಾಡಿ, ಚೆಂಡೆಮದ್ದಳೆಯಲ್ಲಿ ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ಶೆಟ್ಟಿ ವಗೆನಾಡು, ಕೌಶಿಕ್ ರಾವ್ ಪುತ್ತಿಗೆ, ಸಂಗೀತ ಪೂರ್ಣೇಶ್ ಆಚಾರ್ಯ, ಸ್ತ್ರೀ ಪಾತ್ರದಲ್ಲಿ ಅಕ್ಷಯ್ ಮಾರ್ನಾಡ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು, ಹಾಸ್ಯ ಪಾತ್ರದಲ್ಲಿ ಮವ್ವಾರು ಬಾಲಕೃಷ್ಣ ಮಣಿಯಾಣಿ, ಸಂದೇಶ್ ಮಂದಾರ, ಪುರುಷ ಪಾತ್ರದಲ್ಲಿ ರಾಧಾಕೃಷ್ಣ ನಾವಡ ಮಧೂರು, ಮಾನ್ಯ ಸಂತೋಷ್, ಮೋಹನ್ ಬೆಳ್ಳಿಪ್ಪಾಡಿ, ಲೋಕೇಶ್ ಮುಚ್ಚೂರು, ಜಯಕೀರ್ತಿ ಜೈನ್ ಮಾಳ, ಭುವನ್ ಮೂಡುಜೆಪ್ಪು, ದಿವಾಣ ಶಿವಶಂಕರ ಭಟ್, ರಾಕೇಶ್ ರೈ ಅಡ್ಕ, ಮನೀಶ್ ಪಾಟಾಳಿ ಎಡನೀರು, ಹರಿರಾಜ್ ಶೆಟ್ಟಿಗಾರ್ ಕಿನ್ನಿಗೋಳಿ, ರೋಹಿತ್ ಮಳಲಿ, ಮನ್ವಿತ್ ನಿಡ್ಯೋಡಿ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಡಿ. ಮಾಧವ ಬಂಗೇರ ಕೊಳ್ತಮಜಲು, ಸಚಿನ್ ಅಮೀನ್ ಉದ್ಯಾವರ, ರಮೇಶ್ ಪಟ್ರಮೆ, ಲಕ್ಷ್ಮಣ ಪೆರ್ಮುದೆ, ದಿವಾಕರ್ ಕಾಣಿಯೂರು, ಮಧುರಾಜ್ ಪೆರ್ಮುದೆಯವರು ಅಭಿನಯಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ನಲ್ಲಿ ‘ಪ್ರೊ. ನಾಗರಾಜ ಜವಳಿ ಅವರ ಗ್ರಂಥಗಳ ಸ್ವೀಕಾರ ಸಮಾರಂಭ’
    Next Article ‘ನಿರಂಜನ ಪ್ರಶಸ್ತಿ’ ಮತ್ತು ‘ಶಂಕರ ಸಾಹಿತ್ಯ ಪ್ರಶಸ್ತಿ’ ಪ್ರಕಟ
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.