ಕಾಸರಗೋಡು : ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಮತ್ತು ‘ಸ್ವರ ಚಿನ್ನಾರಿ’ (ಸಂಗೀತ ಘಟಕ) ಪ್ರಸ್ತುತ ಪಡಿಸುವ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ -2’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 23 ಮಾರ್ಚ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಕಾಸರಗೋಡಿನ ಕರೆಂದಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿದೆ.
ರಂಗಚಿನ್ನಾರಿ ಚಿನ್ನಾರಿ ಇದರ ನಿರ್ದೇಶಕರಾದ ಕೆ. ಸತೀಶ್ಚಂದ್ರ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಖ್ಯಾತ ಚಲನಚಿತ್ರ ನಟ ಹಾಗೂ ರಂಗನಟರಾದ ಕೆ.ಎಸ್. ಶ್ರೀಧರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಚಲನಚಿತ್ರ ನಿರ್ಮಾಪಕರಾದ ಟಿ.ಎ. ಶ್ರೀನಿವಾಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸ್ವರ ಚಿನ್ನಾರಿ ಸಹಕಾರ್ಯದರ್ಶಿಯಾದ ಪ್ರತಿಜ್ಞಾ ಕಣ್ಕಲ್ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.