Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಇದರ ವಾರ್ಷಿಕೋತ್ಸವ
    Kannada

    ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಇದರ ವಾರ್ಷಿಕೋತ್ಸವ

    February 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಸುರತ್ಕಲ್ ಇದರ ವಾರ್ಷಿಕೋತ್ಸವವು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ದಿನಾಂಕ 23 ಫೆಬ್ರವರಿ 2025ನೇ ರವಿವಾರದಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ನಡೆಯಿತು.


    ಕಾರ್ಯಕ್ರಮವನ್ನು ವೇ. ಮೂ. ಸೀತಾರಾಮ ಆಚಾರ್ಯ ಪಚ್ಚನಾಡಿ ಹಾಗೂ ಸ್ವಾತಿ ಆಚಾರ್ಯ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಯಕ್ಷಗಾನ ಕಲಾವಿದ ಹಾಗೂ ವಿಮರ್ಶಕರಾದ ಸರ್ಪಂಗಳ ಈಶ್ವರ ಭಟ್ ಮಾತನಾಡಿ “ಶ್ರೀ ದುರ್ಗಾಂಬ ಯಕ್ಷಗಾನ ಮಂಡಳಿಯು ಹಲವಾರು ವರ್ಷಗಳಿಂದ ಯಕ್ಷಗಾನ ಕಲೆಗೆ ಪ್ರೋತ್ಸಾಹವನ್ನು ನೀಡುತ್ತಾ ಉತ್ತಮ ಸೇವಾ ಕಾರ್ಯವನ್ನು ನಡೆಸುತ್ತಿದೆ” ಎಂದು ಶ್ಲಾಘಿಸಿದರು.
    ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಮೊಕ್ತಸರ ಶ್ರೀ ವಿದ್ಯೆಂದ್ರತೀರ್ಥ ಶ್ರೀಪಾದರು ಆಶೀರ್ವಚನವನ್ನು ನೀಡಿ, ಮಂಡಳಿಯ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ, ಇನ್ನಷ್ಟು ಕಲಾಸೇವೆಯನ್ನು ಮಾಡುವ ಶಕ್ತಿಯನ್ನು ಭಗವಂತ ನೀಡಲಿ ಎಂದರು.

    ಇದೇ ಸಂದರ್ಭದಲ್ಲಿ ವಿನಾಯಕ ಯಕ್ಷಗಾನ ಮಂಡಳಿಯ ಸ್ಥಾಪಕ ಸದಸ್ಯ ನಾಗೇಶ ಕಾರಂತ್ ಅವರನ್ನು ಸಮ್ಮಾನಿಸಲಾಯಿತು. ಮಂಡಳಿಯ ನಿರ್ದೇಶಕರಾದ ವಾಸುದೇವ ರಾವ್ ಇವರು ಬರೆದ ‘ಪ್ರಸಂಗ ಪಂಚಕ’ ಪುಸ್ತಕವನ್ನು ಉದ್ಯಮಿ ರಾಘವೇಂದ್ರ ರಾವ್ ಹಾಗೂ ಅನು ರಾಘವೇಂದ್ರ ರಾವ್ ಲೋಕಾರ್ಪಣೆಗೊಳಿಸಿದರು.

    ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ರಾಜೇಶ್ ಕುಳಾಯಿ, ಜಾನಪದ ಸಂಶೋಧಕ ಕೆ. ಎಲ್. ಕುಂಡಂತಾಯ, ನ್ಯಾಯವಾದಿ ದೀಪಿಕಾ ಶೆಟ್ಟಿ, ಬಂಟರ ಸಂಘ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಸರೋಜಾ ತಾರಾನಾಥ ಶೆಟ್ಟಿ, ಶಕುಂತಲಾ ಭಟ್ ಉಪಸ್ಥಿತರಿದ್ದರು.
    ದುರ್ಗಾಂಬ ಮಹಿಳಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ವಿ. ರಾವ್ ಸ್ವಾಗತಿಸಿ, ಎಸ್. ವಾಸುದೇವ ರಾವ್ ಹಾಗೂ ಪಿ. ವೆಂಕಟರಮಣ ಐತಾಳ್ ಅಭಿನಂದಣಾ ಮಾತುಗಳನ್ನಾಡಿ, ವೃಂದಾ ಕೊನ್ನಾ‌ರ್ ನಿರೂಪಿಸಿ, ಸುಮಿತ್ರಾ ಕಲ್ಲೂರಾಯ ವಂದಿಸಿದರು.
    ಸಭಾ ಕಾರ್ಯಕ್ರಮದ ಬಳಿಕ ವಿನಾಯಕ ಯಕ್ಷಗಾನ ಮಂಡಳಿಯಿಂದ ‘ಹನುಮನೊಲುಮೆ’ ತಾಳಮದ್ದಳೆ ಹಾಗೂ ಮಂಡಳಿ ಸದಸ್ಯರಿಂದ ‘ರುಕ್ಕಿಣಿ ಸ್ವಯಂವರ’ ತಾಳಮದ್ದಳೆ ನಡೆಯಿತು.

    kannada yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ‘ರಂಗ ಚಕ್ರ’ ತಂಡದಿಂದ ಉಚಿತ ಅಭಿನಯ ಕಾರ್ಯಾಗಾರ
    Next Article ಪರಿಚಯ ಲೇಖನ | ‘ಯಕ್ಷ ಕೋಲ್ಮಿಂಚು’ ರಾಜೇಶ್‌ ಭಂಡಾರಿ‌ ಗುಣವಂತೆ
    roovari

    Add Comment Cancel Reply


    Related Posts

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಸರಯೂ ಸಪ್ತಾಹದಲ್ಲಿ ರೊ. ಜೆ. ವಿ. ಶೆಟ್ಟರಿಗೆ ಸನ್ಮಾನ.

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.