ಬೆಂಗಳೂರು : ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 28 ಜೂನ್ 2025ರಂದು ಸಂಜೆ 7-00 ಗಂಟೆಗೆ ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಆಯೋಜಿಲಾಗಿದೆ. ಮೋಲಿಯರ್ ವಿರಚಿತ ‘ದ ಇಮಾಜಿನರಿ ಕುಕೋಲ್ಡ್’ ಮೂಲ ಕಥೆಯನ್ನು ಎಂ. ರಾಮಾರಾವ್ ಕನ್ನಡಕ್ಕೆ ಅನುವಾದಿಸಿದ್ದು, ವಿಕಾಸ್ ಎಸ್. ಇವರು ನಿರ್ದೇಶನ ಮಾಡಿದ್ದಾರೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್ಗಾಗಿ 86605 47776 ಸಂಖ್ಯೆಯನ್ನು ಸಂಪರ್ಕಿಸಬಹುದು.
ಹವ್ಯಾಸಿ ರಂಗಭೂಮಿಯಲ್ಲಿ ಸಾಕಷ್ಟು ಪರಿಣಿತಿಯನ್ನು ಪಡೆದಂತಹ ಹತ್ತಾರು ಹುಡುಗರು ಸೇರಿ ಸ್ಥಾಪಿಸಲ್ಪಟ್ಟ ಸಂಸ್ಥೆಯೇ ‘ಅಂತರಂಗ ಬಹಿರಂಗ’. ಈ ತಂಡದ ಮುಖ್ಯ ಉದ್ದೇಶ ಹೊಸ ಕಲಾವಿದರಿಗೆ ಅವಕಾಶ ಹಾಗೂ ಆಧುನಿಕ ಕಾಂಟೆಂಪರರಿ ವಿಷಯ ಆಧಾರಿತ ಕಥಾ ವಸ್ತು ಕೊಡುವುದು. ಅದರಂತೆಯೇ ನಡೆದು ಬರುತ್ತಿದ್ದು, ಇದರ ಜೊತೆಗೆ ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರ, ಸಾಂಸ್ಕೃತಿಕ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಒಯ್ಯುವುದು ಹಾಗೂ ಆದಷ್ಟು ಹಳೆ ಪ್ರೇಕ್ಷಕರ ಜೊತೆ ಜೊತೆಗೆ ಹೊಸ ಪ್ರೇಕ್ಷಕರನ್ನು ರಂಗಭೂಮಿಗೆ ಆಕರ್ಷಿಸುವುದು ನಮ್ಮ ಮತ್ತೊಂದು ಉದ್ದೇಶವಾಗಿದೆ. ಆರು ವರ್ಷಗಳಲ್ಲಿ ಸುಮಾರು 30,000 ಹೊಸ ಪ್ರೇಕ್ಷಕರನ್ನು ಕರೆ ತಂದಿರುವುದೇ ಈ ತಂಡದ ಹೆಗ್ಗಳಿಕೆ.