Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಂಬೇಡ್ಕರ್ ಭವನದಲ್ಲಿ ಸಂಪನ್ನಗೊಂಡ ‘ಅನುಪದಮ್ – 2024’
    Bharathanatya

    ಅಂಬೇಡ್ಕರ್ ಭವನದಲ್ಲಿ ಸಂಪನ್ನಗೊಂಡ ‘ಅನುಪದಮ್ – 2024’

    September 20, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರತ್ನ ಕಲಾಲಯ ಮಂಗಳೂರು ಇದರ 3ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ ‘ಅನುಪದಮ್ – 2024’ ಇದರಲ್ಲಿ ರತ್ನ ಕಲಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ಹಾಗೂ ತಾಳ ಪ್ರವೀಣ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರಿಂದ ವಿದ್ಯಾರ್ಥಿಗಳು ಹಾಗೂ ಹೆತ್ತವರಿಗಾಗಿ ನೃತ್ಯದ ಬಗ್ಗೆ ಪ್ರೇರಣೆ ನೀಡುವ ಕಾರ್ಯಾಗಾರ ದಿನಾಂಕ 14 ಸೆಪ್ಟೆಂಬರ್ 2024ರಂದು ಮಂಗಳೂರಿನ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಿತು.


    ನಾಟರಾಜನ ಮೂರ್ತಿಗೆ ಮಂಗಳ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ‘ಕರ್ನಾಟಕ ರಾಜ್ಯೋತ್ಸವ’ ಹಾಗೂ ‘ನಾಟ್ಯರಾಣಿ ಶಾಂತಲಾ’ ಪ್ರಶಸ್ತಿ ಪುರಸ್ಕೃತ ನೃತ್ಯಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರನ್ನು ಚಂಡೆ ವಾದನಗಳ ಮೂಲಕ ಬರಮಾಡಿಕೊಳ್ಳಲಾಯಿತು ಹಾಗೂ ವಿದ್ಯಾರ್ಥಿಗಳಿಂದ ಭಕ್ತಿ – ಗೌರವಪೂರ್ಣವಾದ ಪಾದ ಪೂಜೆ ನಡೆಯಿತು. ಕಲಾಸಕ್ತರನ್ನು ಉದ್ದೇಶಿಸಿ ಮಾತನಾಡಿದ ನಾಟ್ಯಗುರು “ಶಾಸ್ತ್ರೀಯತೆಯನ್ನು ಉಳಿಸಿಕೊಂಡು ಏನೂ ತೊಂದರೆಯಾಗದಂತೆ ಸನಾತನ ಕಲೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಎಲ್ಲಾ ನೃತ್ಯಗುರುಗಳಿಗೂ ಇದೆ” ಎನ್ನುತ್ತಾ ರತ್ನ ಕಲಾಲಯದ ಉತ್ತಮ ಭವಿಷ್ಯಕ್ಕೆ ಶುಭ ಹಾರೈಸಿದರು.


    ಖ್ಯಾತ ಹರಿದಾಸರು ಹಾಗೂ ವಿಶ್ವಕರ್ಮ ಕಲಾ ಪರಿಷತ್ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಸ್. ಪಿ. ಗುರುದಾಸ್ ಮಾತನಾಡಿ “ಯಾವುದೇ ಕಲೆಯನ್ನು ಆಯ್ಕೆಮಾಡಲು ಮೊದಲು ಬೇಕಾಗಿರುವುದು ಪ್ರತಿಭೆ. ಪ್ರತಿಭೆಯ ಹರಿವು ಎಂಬುದು ವ್ಯಕ್ತಿಯ ಕಲ್ಯಾಣ ಮತ್ತು ಸಮಾಜದ ಶ್ರೇಯಸ್ಸಿಗಾಗಿ ಸದ್ಬಳಕೆಯಾಗಬೇಕು. ಹರಿಯುವ ನದಿಗೆ ದಡ ಇರುವಂತೆ ಯಾವುದೇ ಕಲೆಗೆ ಶಾಸ್ತ್ರದ ಚೌಕಟ್ಟು ಬೇಕು. ದಡ ಇಲ್ಲದ ನದಿಯ ಪ್ರವಾಹದಿಂದ ಅನಾಹುತ ಸಂಭವಿಸುವಂತೆ ಶಾಸ್ತ್ರದ ಚೌಕಟ್ಟು ಇಲ್ಲದ ಕಲೆಯು ತನ್ನ ಮೂಲ ಸತ್ವವನ್ನು ಕಳೆದುಕೊಳ್ಳಬಹುದು. ಎಂದರು.


    ಎಸ್. ಕೆ. ಜಿ. ಐ. ಕೋ – ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ. ಪಿ. ಉಪೇಂದ್ರ ಆಚಾರ್ಯ ಮಾತನಾಡಿ “ಗುರುವಿನ ಮೇಲಿನ ವಿಶ್ವಾಸ ಹಾಗೂ ತಮ್ಮ ಶಕ್ತಿಯ ಮೇಲಿನ ನಂಬಿಕೆಯಿಂದ ವಿದ್ಯೆಯನ್ನು ಸಿದ್ಧಿಸಿಕೊಂಡು ರತ್ನ ಕಲಾಲಯ ಮುನ್ನಡೆಯಲಿ.” ಎಂದು ಹಾರೈಸಿದರು.
    ತಾಳ ಪ್ರವೀಣ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಮಾತನಾಡಿ ನೃತ್ಯ ವಿದ್ಯಾರ್ಥಿಗಳು ತಮ್ಮಲ್ಲಿ ಕ್ರಿಯಾಶೀಲತೆ, ಶ್ರದ್ಧೆ, ಭಕ್ತಿ ಮತ್ತು ಪರಿಶ್ರಮದ  ಕೆಲಸ ಇವುಗಳನ್ನು ಹೇಗೆ ಅಳವಡಿಸಿಕೊಳ್ಳಬಹುದು ಎಂಬುದನ್ನು ಕಥೆಗಳ ಮೂಲಕ ವಿವರಿಸುತ್ತಾ, ಬೈಕಾಡಿ ಪ್ರತಿಷ್ಠಾನ ಮತ್ತು ರತ್ನ ಕಲಾಲಯ ಅತ್ಯಲ್ಪ ಸಮಯದಲ್ಲಿ ಸಾಧಿಸಿದ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಬೈಕಾಡಿ ಪ್ರತಿಷ್ಠಾನದ ಅಧ್ಯಕ್ಷೆಯಾದ ರತ್ನಾವತಿ ಜೆ. ಬೈಕಾಡಿ ಸ್ವಾಗತಿಸಿ, ವಾರುಣಿ ಮಂಗಳಾದೇವಿ ಇವರು ಸಭಾಕಾರ್ಯಕ್ರಮ ಹಾಗೂ ರಶ್ಮಿ ಭಟ್ ಭಾರತನಾಟ್ಯ ಕಾರ್ಯಕ್ರಮ ನಿರೂಪಿಸಿ, ರತ್ನ ಕಲಾಲಯದ ನಿರ್ದೇಶಕಿಯಾದ ಅಕ್ಷತಾ ಬೈಕಾಡಿ ವಂದಿಸಿದರು. ಬೈಕಾಡಿ ಪ್ರತಿಷ್ಠಾನದ ಕಾರ್ಯದರ್ಶಿ ಭರತ್ ರಾಜ್ ಬೈಕಾಡಿ ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ರತ್ನಕಲಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ಪ್ರಸ್ತುತಗೊಂಡಿತು. ಇವರಿಗೆ ನಟುವಾಂಗದಲ್ಲಿ ಅಕ್ಷತಾ ಬೈಕಾಡಿ, ಗಾಯನದಲ್ಲಿ ಲಾವಣ್ಯಾ ಸುಧಾಕರ್ ಮಂಗಳೂರು, ಮೃದಂಗದಲ್ಲಿ ಮನೋಹರ ರಾವ್ ಮಂಗಳೂರು, ಕೊಳಲಿನಲ್ಲಿ ರಾಜಗೋಪಾಲನ್ ಕಾಞಗಾಡ್ ಹಾಗೂ ಪ್ರಸಾಧನದಲ್ಲಿ ವೆಂಕಟೇಶ್ ಆಚಾರ್ಯ ಮಂಗಳೂರು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡ್ನಾಕೂಡು ಚಿನ್ನಸ್ವಾಮಿ ಜನ್ಮದಿನಾಚರಣೆ ಮತ್ತು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ | ಸೆಪ್ಟೆಂಬರ್ 22
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’ | ಸೆಪ್ಟೆಂಬರ್ 21
    roovari

    Comments are closed.

    Related Posts

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ನೃತ್ಯ ವಿಮರ್ಶೆ | ನೃತ್ಯ ನಿರಂತರತೆಯ ಅನಾವರಣ – ‘ನೃತ್ಯೋಲ್ಲಾಸ’

    January 5, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.