Subscribe to Updates

    Get the latest creative news from FooBar about art, design and business.

    What's Hot

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅಪ್ಪೆಮ್ಮೆ’ ತುಳು ನಾಟಕದ ಕೃತಿ ಬಿಡುಗಡೆ ಮತ್ತು ಮಕ್ಕಳ ‘ತುಳು ಕವಿಗೋಷ್ಠಿ’ ಸಂಪನ್ನ
    Book Release

    ‘ಅಪ್ಪೆಮ್ಮೆ’ ತುಳು ನಾಟಕದ ಕೃತಿ ಬಿಡುಗಡೆ ಮತ್ತು ಮಕ್ಕಳ ‘ತುಳು ಕವಿಗೋಷ್ಠಿ’ ಸಂಪನ್ನ

    September 26, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಶಸ್ ಪ್ರಕಾಶನ ಕಟಪಾಡಿ, ತುಳುಕೂಟ ಉಡುಪಿ (ರಿ.), ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕಾಪು ವತಿಯಿಂದ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಅವರು ಬರೆದ ‘ಅಪ್ಪೆಮ್ಮೆ’ ತುಳು ನಾಟಕದ ಕೃತಿ ಬಿಡುಗಡೆ ಮತ್ತು ಮಕ್ಕಳ ತುಳು ‘ಕವಿಗೋಷ್ಠಿ’ ಕಾರ್ಯಕ್ರಮವು ದಿನಾಂಕ 24-09-2023ರಂದು ಉಡುಪಿ ಕಿದಿಯೂರು ಹೊಟೇಲಿನ ಪವನ್ ರೂಫ್‌ಟಾಪ್ ಹಾಲ್‌ನಲ್ಲಿ ನಡೆಯಿತು.

    ಬ್ರಹ್ಮಾವರ ನ್ಯೂ ಕರ್ನಾಟಕ ಬಿಲ್ಡರ್ಸ್ ಸಂಸ್ಥೆಯ ಮಾಲಕರಾದ ಚೇತನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ತುಳುನಾಡಿನಲ್ಲಿ ಅವಿಭಕ್ತ ಕುಟುಂಬ ಪದ್ಧತಿ ಮರೆಯಾಗುತ್ತಿದೆ. ಮಕ್ಕಳ ಮತ್ತು ಹೆತ್ತವರ ನಡುವಿನ ಸಂಬಂಧಗಳು ದೂರವಾಗುತ್ತಿದ್ದು, ಕುಟುಂಬವನ್ನು ಜೋಡಿಸುವ ವ್ಯವಸ್ಥೆಯನ್ನು ವಿದ್ಯಾವಂತರಾದ ನಾವು ಮಾಡಬೇಕಾದುದು ಅನಿವಾರ್ಯ” ಎಂದರು.

    ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅಧ್ಯಕ್ಷತೆ ವಹಿಸಿ ಮಾತನಾಡಿ, “ಆಧುನಿಕ ಯುವಜನಾಂಗ ಕೂಡು ಕುಟುಂಬ ಬಿಟ್ಟು ಏಕ ಕುಟುಂಬ ಪದ್ಧತಿಯತ್ತ ಮನಸ್ಸು ಮಾಡುತ್ತಿರುವುದರಿಂದ ವೃದ್ಧಾಶ್ರಮಗಳ ಸಂಖ್ಯೆ ಅಧಿಕವಾಗುತ್ತಿದೆ. ಈ ನಿಟ್ಟಿನಲ್ಲಿ ‘ಅಪ್ಪೆಮ್ಮೆ’ ನಾಟಕ ಹೆತ್ತವರನ್ನು ಬೀದಿಗೆ ಅಟ್ಟಬೇಡಿ ಎಂಬ ಸಂದೇಶ ಸಾರುತ್ತದೆ” ಎಂದರು.

    ಪ್ರತಿಗಳಿಗಾಗಿ:  ಸೀತಾ ಬುಕ್ ಸೆಂಟರ್, ನಗರಸಭೆ ಎದುರು, ಉಡುಪಿ. 9901728373
    ಲೇಖಕ : ಪ್ರಕಾಶ್ ಸುವರ್ಣ 9964019229

    ಉಡುಪಿಯ ಸಮಾಜಸೇವಕರಾದ ಉಡುಪಿ ವಿಶ್ವನಾಥ ಶೆಣೈ ಮತ್ತು ಪ್ರಭಾವತಿ ದಂಪತಿಗಳು ಪುಸ್ತಕ ಬಿಡುಗಡೆ ಮಾಡಿದರು. ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ವಿ.ಕೆ.ಯಾದವ್ ಕೃತಿ ಪರಿಚಯ ಮಾಡಿ, “ವೃದ್ಧಾಶ್ರಮದೊಳಗೆ ನಡೆಯುವ ಸಾಮಾಜಿಕ ಕಥೆಯನ್ನು ನವ್ಯ ನಾಟಕ ಶೈಲಿಯಲ್ಲಿ, ಪರದೆ ನಾಟಕ ಶೈಲಿಯಲ್ಲಿ, ಪ್ರಹಸನ, ರೂಪಕದ ಶೈಲಿಯಲ್ಲಿ ನಾಟಕವನ್ನು ಪ್ರದರ್ಶಿಸಲು ಅನುಕೂಲವಾಗುವಂತೆ ‘ಅಪ್ಪೆಮ್ಮೆ’ ನಾಟಕವನ್ನು ಪ್ರಕಾಶ್ ಸುವರ್ಣ ಅವರು ಸರಳವಾಗಿ ನಿರೂಪಿಸಿದ್ದಾರೆ” ಎಂದರು.

    ಉಡುಪಿಯ ಉದ್ಯಮಿ ಮನೋಹರ್ ಶೆಟ್ಟಿ, ಪಾಂಗಾಳಗುಡ್ಡೆ ಗರಡಿಮನೆ ಸುಧಾಕರ್ ಡಿ.ಅಮೀನ್, ಮತ್ಸ್ಯೋದ್ಯಮಿಗಳಾದ ಹರೀಶ್ ಶ್ರೀಯಾನ್ ಮಲ್ಪೆ, ಉಡುಪಿ ತುಳುಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಿದಿಯೂರ್, ಯಶಸ್ ಪ್ರಕಾಶನ ಸಂಸ್ಥೆಯ ಮುಖ್ಯಸ್ಥೆ ಪ್ರೀತಿ ಪ್ರಕಾಶ ಸುವರ್ಣ ಕಟಪಾಡಿ, ಸುಂದರಿ ಸುವರ್ಣ, ಇಂದಿರಾ ವಿ.ಕಾಂಚನ್, ನಾರಾಯಣ ಸಾಲ್ಯಾನ್, ನವಮಿ ಸುವರ್ಣ ಉಪಸ್ಥಿತರಿದ್ದರು. ಇದೇ ವೇಳೆ ಸಮಾಜಸೇವಕರಾದ ಲೀಲಾಧರ್ ಶೆಟ್ಟಿ ಕರಂದಾಡಿ ಹಾಗೂ ಈಶ್ವರ್ ಮಲ್ಪೆ ಅವರನ್ನು ಸನ್ಮಾನಿಸಲಾಯಿತು.

    ‘ಅಪ್ಪೆಮ್ಮೆ’ ತುಳು ನಾಟಕದ ಕೃತಿ ಬಿಡುಗಡೆಯ ಪ್ರಯುಕ್ತ ನಡೆದ ‘ಅಪ್ಪೆಮ್ಮನೊಟ್ಟುಗು ಜೋಕ್ಲೆ ತುಳು ಕವಿಗೋಷ್ಠಿ’ಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಪ್ರೌಢಶಾಲಾ 16 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಡುಪಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಮತ್ತು ಸಾಹಿತಿ ಪೂರ್ಣಿಮ ಜನಾರ್ದನ ಕೊಡವೂರು ಅಧ್ಯಕ್ಷತೆಯಲ್ಲಿ ಮಕ್ಕಳ ಕವಿಗೋಷ್ಠಿ ಯಶಸ್ವಿವಾಗಿ ನಡೆಯಿತು. ಜನಾರ್ಧನ ಕೊಡವೂರು ಮಾತನಾಡಿ “ಮಕ್ಕಳಲ್ಲಿ ತುಳು ಭಾಷಾ ಬರವಣಿಗೆಯ ಕಲೆಯಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆತ್ತವರೊಂದಿಗೆ ನಡೆಸಿದ ಮಕ್ಕಳ ಕವಿಗೋಷ್ಠಿ ನಿಜಕ್ಕೂ ಅಪರೂಪದ ಅಭಿವೃಕ್ತಿಯಾಗಿದೆ” ಎಂದರು. ಪೂರ್ಣಿಮಾ ಜನಾರ್ದನ ಮಾತನಾಡಿ, “ಪ್ರತಿಯೊಬ್ಬ ಮಕ್ಕಳು ಕೂಡಾ ತಮ್ಮ ಹೆತ್ತವರ ಬಗ್ಗೆ ಸೊಗಸಾಗಿ ಕವಿತೆಗಳನ್ನು ರಚಿಸಿ ಮನದಾಳದಿಂದ ವಾಚಿಸಿ ಸೈ ಎನಿಸಿಕೊಂಡರು” ಎಂದರು.

    ಕವಿಗೋಷ್ಠಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಾದ ಸುಶಾಂತ್ ಎಸ್.ಆಚಾರ್ಯ ಮುದರಂಗಡಿ, ಶಿವಾನಿ ಅಂಬಲಪಾಡಿ, ತೃಷಾ ಅದಮಾರು, ಸಂದರ್ಶಿನಿ ಕಾರ್ಕಳ, ಸಾನ್ವಿ ಪೆರ್ಡೂರು, ಕಾರ್ತಿಕ ಮುದ್ರಾಡಿ, ಶಾನ್ವಿ ಕಾರ್ಕಳ, ಸುಪ್ರಿಯ ಕಾರ್ಕಳ, ಪ್ರೇಕ್ಷಾ ಆಚಾರ್ಯ ನಕ್ರೆ, ನಂದಿನಿ ಅಲೆವೂರು, ಮಹಾಲಕ್ಷ್ಮೀ ಬನ್ನಂಜೆ, ಯಶಸ್ ಪಿ.ಸುವರ್ಣ ಕಟಪಾಡಿ, ಪೂರ್ವಿ ಎಸ್.ಕೋಟ್ಯಾನ್ ಉದ್ಯಾವರ, ಮಿಶಾ ಆರ್. ಕೋಟ್ಯಾನ್ ಪಡುಬಿದ್ರಿ, ಅಭಿಷೇಕ್ ಕುಂಜಾರುಗಿರಿ, ವೈಷ್ಣವಿ ವಿ.ದೇವಾಡಿಗ ಉಡುಪಿ ಇವರು ಸ್ವರಚಿತ ಕವನವಾಚನ ಮಾಡಿದರು. ನಾಟಕಕಾರ ಪ್ರಕಾಶ ಸುವರ್ಣ ಕಟಪಾಡಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕರಾದ ಡಾ.ವಿದ್ಯಾ ಸರಸ್ವತಿ ಕಾರ್ಯಕ್ರಮ ನಿರೂಪಿಸಿ, ಸಾಹಿತಿ ದಯಾನಂದ ಕೆ.ಶೆಟ್ಟಿ ದೆಂದೂರು ವಂದಿಸಿದರು. ಇದೇ ವೇಳೆ ಪುತ್ತೂರು ‘ಶ್ರೀ ಭಗವತಿ ಯಕ್ಷಕಲಾ ಬಳಗ’ದ ಪ್ರಣಮ್ಯ ಉಪಾಧ್ಯ ಮತ್ತು ವೈಷ್ಣವಿ ಅವರಿಂದ ಯಕ್ಷನೃತ್ಯ ಕಾರ್ಯಕ್ರಮ ಹಾಗೂ ಸುದರ್ಶನ್ ಆಚಾರ್ಯ ಬೆಳ್ಮಣ್ ಅವರಿಂದ ಮಿಮಿಕ್ರಿ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬ್ಯಾರಿ ‘ಆಶು ಕವನ ರಚನೆ’ ಮತ್ತು ‘ಒಗಟು ಸ್ಪರ್ಧೆ’ಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 28
    Next Article ಹೂವಿನ‌ಹಡಗಲಿಯಲ್ಲಿ ನೂರುಕೃತಿಗಳ ಲೋಕಾರ್ಪಣೆ ಮತ್ತು ರಾಜ್ಯ ಮಟ್ಡದ ಕವಿಗೋಷ್ಠಿ
    roovari

    Add Comment Cancel Reply


    Related Posts

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.