Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟಕ ಹಾಗೂ ರಂಗ ಚಟುವಟಿಕೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 28
    Drama

    ನಾಟಕ ಹಾಗೂ ರಂಗ ಚಟುವಟಿಕೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 28

    August 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಕಲಾಮಂದಿರದ ಆವರಣದಲ್ಲಿ ಕಚೇರಿಯನ್ನು ಹೊಂದಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ದತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. 35 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ / ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ / ಡಿಪ್ಲೊಮೋ ಪಡೆದವರಾಗಿರಬೇಕು. ರಂಗಭೂಮಿ ಅನುಭವ ಅಪೇಕ್ಷಣೀಯ, ಅರ್ಹತೆಯುಳ್ಳ 22ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ದಿನಾಂಕ 28 ಆಗಸ್ಟ್ 2024ರ ಒಳಗೆ ತಲುಪುವಂತೆ ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು-05 ಈ ವಿಳಾಸಕ್ಕೆ ಅರ್ಜಿ ಸಲ್ಲಿಸುವುದು. ಸಂದರ್ಶನದ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು. ನಮೂನೆಯನ್ನು ರಂಗಾಯಣದ ವೆಬ್‌ಸೈಟ್ rangayanamysore.karnataka.gov.in ನಿಂದ ಡೌನ್‌ ಲೋಡ್ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ಧರಾಗಿರಬೇಕು.

    ಸಂದರ್ಶನದ ವೇಳೆ ಹಾಜರುಪಡಿಸಬೇಕಾದ ಮೂಲ ದಾಖಲಾತಿಗಳು
    1. ಜನ್ಮ ದಿನಾಂಕ ದೃಢೀಕರಣ ಪತ್ರ
    2. ಎನ್.ಎಸ್.ಡಿ / ಡಿಪ್ಲೊಮೋ ಪ್ರಮಾಣ ಪತ್ರ
    3. ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣ ಪತ್ರ
    4. ರಂಗಭೂಮಿ ಅನುಭವ ಕುರಿತ ಸ್ವವಿವರ ಪತ್ರ (ಅಗತ್ಯ ದಾಖಲೆಗಳೊಂದಿಗೆ)
    5. ಆಧಾರ್ ಕಾರ್ಡ್

    Share. Facebook Twitter Pinterest LinkedIn Tumblr WhatsApp Email
    Previous Articleವೈವಿಧ್ಯಮಯ ಭರತನಾಟ್ಯ ಕಾರ್ಯಕ್ರಮ ‘ಪದ್ಮ ಪಲ್ಲವ’
    Next Article ನೀರ್ಚಾಲು ಶಾಲಾ ಸಭಾಂಗಣದಲ್ಲಿ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 25
    roovari

    Comments are closed.

    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಮೈಸೂರು ಮತ್ತು ಬೆಂಗಳೂರಿನಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನ | ಮೇ 04

    May 3, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.