Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನ 2023ನೆಯ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ
    Literature

    ಕನ್ನಡ ಸಾಹಿತ್ಯ ಪರಿಷತ್ತಿನ 2023ನೆಯ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ

    April 27, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ.2023 ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

    2023ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560 018’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ.

    ಸ್ಪರ್ಧೆಗೆ ಅನ್ವಯಿಸುವ ನಿಯಮಗಳು:
    1) ಪ್ರತಿಗಳನ್ನು ದಿನಾಂಕ: 31 -05 -2024ರ ಒಳಗೆ ತಲುಪುವಂತೆ ಕಳುಹಿಸಬೇಕು. ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ
    2) ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ
    3) ಬಹುಮಾನದ ಬಗ್ಗೆ ಪರಿಷತ್ತು ತಾನು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತದೆ.
    4) ಯಾವುದೇ ಪುಸ್ತಕ ಪ್ರಶಸ್ತಿ ಪುರಸ್ಕೃತರು ತಾವು ಪ್ರಶಸ್ತಿ ಪಡೆದ ವಿಭಾಗಕ್ಕೆ 3ವರ್ಷ ಅರ್ಜಿ ಸಲ್ಲಿಸುವಂತಿಲ್ಲ.
    5) ಬರಹಗಾರರಿಗೆ ಪುಸ್ತಕ ದತ್ತಿ ಪುರಸ್ಕಾರ ಯಾವುದೇ ಪ್ರಕಾರದಲ್ಲಾಗಲಿ ಮೂರು ಸಲ ಪ್ರಶಸ್ತಿ ಬಂದಿದ್ದೇ ಆದರೆ, ಜೀವಮಾನ ಪೂರ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ದತ್ತಿ ಪುರಸ್ಕಾರಕ್ಕೆ ಅವರು ಅರ್ಜಿ ಸಲ್ಲಿಸುವಂತಿಲ್ಲ.
    6) ಯಾವುದೇ ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ಆ ವರ್ಷ ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ.
    7) ಒಂದಕ್ಕಿತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗೆ ಇರುತ್ತದೆ.
    8) ಪಿ. ಎಚ್. ಡಿ. ಗ್ರಂಥಗಳು ಹಾಗೂ ನಿಘಂಟುಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ
    9) ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸತಕ್ಕದ್ದು.
    10) ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಈ ಹಿಂದೆ ದತ್ತಿ ಪ್ರಶಸ್ತಿ ಬಂದಿದ್ದರೆ ಅದರ ವಿವರಗಳನ್ನೂ ಸ್ಪಷ್ಟವಾಗಿ ದಾಖಲಿಸಬೇಕು.

    11) ಪ್ರತಿ ಪುಸ್ತಕ ದತ್ತಿ ಪ್ರಶಸ್ತಿಗಳಿಗೂ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು.
    12) ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸುವವರು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಹೊಂದಿರಬೇಕು. ಪುಸ್ತಕ ಕಳುಹಿಸುವಾಗ ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸಿ ಕಳುಹಿಸಬೇಕು. ಒಂದು ವೇಳೆ ಇನ್ನೂ ಸದಸ್ಯರಾಗಿರದಿದ್ದಲ್ಲಿ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಪಡೆದುಕೊಂಡು ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದು.
    13) ದತ್ತಿಯ ವಿವರಗಳಿಗಾಗಿ ಐದು ರೂಪಾಯಿಯ ಅಂಚೆಚೀಟಿಯನ್ನು ಲಗತ್ತಿಸಿದ ಕವರ್ ಅನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಕಳುಹಿಸಿ ವಿವರಗಳನ್ನು ಪಡೆಯಬಹುದು ಇಲ್ಲದಿದ್ದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ
    ಫೇಸ್ ಬುಕ್ : https://www.facebook.com/kasapaofficial,
    https://www.facebook.com/KannadaSahityaParishattu
    ಟ್ವಿಟರ್ : https://twitter.com/kannadaparishat
    ಕೂ ಆಪ್ : https://www.kooapp.com/profile/kasapa
    ಇನ್ ಸ್ಟಾಗ್ರಾಮ್ : https://www.instagram.com/kannadasahityaparishattu
    ವೆಬ್ ಸೈಟ್ : https://kannadasahithyaparishattu.in

    www.kasapa.in ಅಥವಾ ದೂರವಾಣಿ ಸಂಖ್ಯೆ 080-26612991/26623584 ಇವುಗಳ ಮೂಲಕವೂ ಮಾಹಿತಿಯನ್ನು ಪಡೆಯ ಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಡಾ. ಲಲಿತಾ ಎಸ್.ಎನ್. ಭಟ್ ಅವರ ‘ಅಪರಾಜಿತಾ’: ಹೆಣ್ಣಿನ ವ್ಯಕ್ತಿತ್ವಕ್ಕೆ ಬರೆದ ಭಾಷ್ಯ
    Next Article ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಶ್ರದ್ಧಾಂಜಲಿ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.