Subscribe to Updates

    Get the latest creative news from FooBar about art, design and business.

    What's Hot

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದತ್ತಿ ಪ್ರಶಸ್ತಿ ಮತ್ತು ಬಹುಮಾನಕ್ಕೆ ಪುಸ್ತಕ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 7 ಮತ್ತು 15  
    Awards

    ದತ್ತಿ ಪ್ರಶಸ್ತಿ ಮತ್ತು ಬಹುಮಾನಕ್ಕೆ ಪುಸ್ತಕ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 7 ಮತ್ತು 15  

    October 3, 2023Updated:October 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಆಯೋಜಿಸುವ 2023- 24ರ ಸಾಲಿನ ದತ್ತಿ ಪ್ರಶಸ್ತಿ ಮತ್ತು ಬಹುಮಾನಗಳಿಗೆ ಲೇಖಕಿಯರ ಕೃತಿಗಳನ್ನು ಆಹ್ವಾನಿಸಲಾಗಿದೆ.

    ಡಾ. ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ: ಸಂಘದ ಸದಸ್ಯೆಯಾಗಿದ್ದ ವೈಚಾರಿಕ ಮನೋಧರ್ಮದ ಸಂವೇದನಾಶೀಲ ಲೇಖಕಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಅವರ ಹೆಸರಿನಲ್ಲಿ ಪ್ರತಿ ವರ್ಷ ಕೊಡುವ ಸಾಹಿತ್ಯ ಪ್ರಶಸ್ತಿಗೆ ‘ಪ್ರವಾಸ ಕಥನ’ ಆರಿಸಲಾಗಿದೆ. 2021, 2022, 2023ನೇ ಸಾಲಿನಲ್ಲಿ ಪ್ರಕಟವಾದ ಲೇಖಕಿಯರ ಪ್ರವಾಸ ಕಥನದ ಮೂರು ಪ್ರತಿಗಳನ್ನು ದಿನಾಂಕ 15-11-2023ರೊಳಗೆ ತಲುಪುವಂತೆ ಸಂಘದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪುಸ್ತಕದ ಜತೆಗೆ ವೈಯಕ್ತಿಕ ಮಾಹಿತಿ ಹಾಗೂ ಸಂಪರ್ಕ ಸಂಖ್ಯೆಯಿರುವ ಪ್ರವೇಶ ಪತ್ರವನ್ನು ಲಗತ್ತಿಸಿರಬೇಕು.

    ಚಂದ್ರಭಾಗಿ ರೈ ದತ್ತಿ ಬಹುಮಾನ : ಕರಾವಳಿಯ ಮೊದಲ ತಲೆಮಾರಿನ ಹಿರಿಯ ಲೇಖಕಿ, ಸಂಘದ ಸದಸ್ಯೆಯಾಗಿದ್ದ ಚಂದ್ರಭಾಗಿ ರೈ ಅವರ ಹೆಸರಿನಲ್ಲಿ ಕೊಡುವ ಬಹುಮಾನಕ್ಕೆ 50 ವರ್ಷದ ಒಳಗಿನ ಲೇಖಕಿಯರ ಕನಿಷ್ಠ 40 ಸ್ವರಚಿತ ಕವನಗಳಿರುವ ಅಪ್ರಕಟಿತ ಸಂಕಲನದ ಡಿಟಿಪಿ ಮಾಡಿದ ಹಸ್ತಪ್ರತಿಯನ್ನು ದಿನಾಂಕ 07-11-2023ರ ಒಳಗೆ ಅಂಚೆ ಮೂಲಕ ಸಂಘದ ವಿಳಾಸಕ್ಕೆ ಕಳುಹಿಸಬೇಕು. ಪ್ರತಿ ಕವನಗಳಲ್ಲಿ ಕನಿಷ್ಠ 12 ಸಾಲುಗಳಾದರೂ ಇದ್ದು, ಚುಟುಕು, ಹನಿಗವನಗಳು ಇರಬಾರದು. ಪ್ರಶಸ್ತಿಗೆ ಆಯ್ಕೆಯಾದ ಸಂಕಲನವನ್ನು ಪ್ರಕಟಿಸುವಾಗ ಮುಖಪುಟದಲ್ಲಿ ‘ಚಂದ್ರಭಾಗಿ ರೈ ದತ್ತಿ ಬಹುಮಾನ ಪುರಸ್ಕೃತ’ ಎಂದು ಕಡ್ಡಾಯವಾಗಿ ಮುದ್ರಿಸಬೇಕು. ಹೆಸರು ಮತ್ತು ವಿಳಾಸ ಪ್ರತ್ಯೇಕವಿರಲಿ.

    ಹೆಚ್ಚಿನ ಮಾಹಿತಿಗಾಗಿ : 9482043030, 9742538833 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.

    ವಿಳಾಸ: ಡಾ.ಜ್ಯೋತಿ ಚೇಳ್ಯಾರು, ಅಧ್ಯಕ್ಷರು, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ, ‘ಸಾಹಿತ್ಯಸದನ’, ಅಂಚೆ ಕಚೇರಿ ಬಳಿ, ಉರ್ವಸ್ಟೋರ್, ಮಂಗಳೂರು 575006.

    Share. Facebook Twitter Pinterest LinkedIn Tumblr WhatsApp Email
    Previous Articleಉಳ್ಳಾಲದಲ್ಲಿ ಸಾರ್ವಜನಿಕ ರಸಪ್ರಶ್ನೆ ಸ್ಪರ್ಧೆ | ಅಕ್ಟೋಬರ್ 24ರಂದು
    Next Article ಕನ್ನಡ ಶಾಲೆಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಕಟವಾಗಿರುವ ಮೌಲ್ಯಯುತ ಪುಸ್ತಕಗಳ ಉಚಿತ ವಿತರಣೆ
    roovari

    Add Comment Cancel Reply


    Related Posts

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.