Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯ ಗೌಡ ಸಮಾಜದ ಸಭಾಂಗಣದಲ್ಲಿ ‘ಅರೆಭಾಷೆ ದಿನಾಚರಣೆ’
    Literature

    ಮಡಿಕೇರಿಯ ಗೌಡ ಸಮಾಜದ ಸಭಾಂಗಣದಲ್ಲಿ ‘ಅರೆಭಾಷೆ ದಿನಾಚರಣೆ’

    December 20, 2023No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಜಿಲ್ಲೆಯ ಗೌಡ ಸಮಾಜ-ಸಂಘಟನೆಗಳ ಸಹಯೋಗದಲ್ಲಿ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮವು ದಿನಾಂಕ 15-12-2023ರಂದು ನಡೆಯಿತು.

    ಈ ಕಾರ್ಯಕ್ರಮಕ್ಕೆ ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ ಇವರು ಚಾಲನೆ ನೀಡಿ ಮಾತನಾಡುತ್ತಾ “ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಅರೆಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಗ್ರಾಮೀಣ ಪ್ರದೇಶದಲ್ಲಿಯೂ ‘ಅರೆಭಾಷೆ ದಿನಾಚರಣೆ’ಯನ್ನು ಆಯೋಜಿಸುವಂತಾಗಬೇಕು. ಕನ್ನಡ ಉಪ ಭಾಷೆಯಾದ ಅರೆಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮನೆಗಳಲ್ಲಿ ಅರೆಭಾಷೆಯನ್ನು ಮಾತನಾಡುವಂತಾಗಬೇಕು. ಇದರಿಂದ ಮಕ್ಕಳಿಗೆ ಭಾಷೆ ಕಲಿಸಲು ಸಾಧ್ಯವಾಗಲಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಶೇ.75ಕ್ಕೂ ಹೆಚ್ಚು ಜನರು ಅರೆಭಾಷೆ ಮಾತನಾಡುವವರು ವಾಸಿಸುತ್ತಿದ್ದಾರೆ. ಅರೆಭಾಷೆ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

    ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಕೊಲ್ಯದ ಗಿರೀಶ್ ಅವರು ಮಾತನಾಡಿ “ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೆ ಹಲವರು ಶ್ರಮಿಸಿದ್ದಾರೆ. ಅರೆಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಬೆಳೆಸುವತ್ತ ಒತ್ತು ನೀಡಿ ಕಾರ್ಯಕ್ರಮವನ್ನು ತಮ್ಮ ಅವಧಿಯಲ್ಲಿ ಆಯೋಜಿಸಲಾಗಿತ್ತು. ಅರೆಭಾಷೆಯು ವಿಶಿಷ್ಟ ಮಾತೃ ಹೃದಯ ಭಾಷೆಯಾಗಿದ್ದು, ಈ ಭಾಷೆಯ ಅಸ್ತಿತ್ವ ಉಳಿಸುವಂತಾಗಬೇಕು ಎಂದರು. ಸಾಂಸ್ಕೃತಿಕ ಸಮಾವೇಶಗಳು, ಸಾಹಿತ್ಯ ಸಮ್ಮೇಳನಗಳು, ಹೀಗೆ ಹಲವು ಕಾರ್ಯಕ್ರಮಗಳನ್ನು ಹೊರಜಿಲ್ಲೆಗಳಲ್ಲೂ ಸಹ ಆಯೋಜಿಸಿ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗಿತ್ತು. ‘ಹಿಂಗಾರು’ ತ್ರೈಮಾಸಿಕ ಪತ್ರಿಕೆಯನ್ನು ಪ್ರಕಟಿಸುವ ನಿಟ್ಟಿನಲ್ಲಿ ‘ಸಂಪಾದಕೀಯ ಸಲಹಾ ಸಮಿತಿ’ ರಚಿಸಿಕೊಂಡು ಹೊರ ತರುವಂತಾಗಬೇಕು” ಎಂದರು.

    ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಮಾತನಾಡಿ “ಅರೆಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಅರೆಭಾಷೆ ಮಾತಾಡುವುದರ ಜೊತೆಗೆ, ಓದುವ ಮತ್ತು ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಲೇಖನ, ಕಥೆ, ಕವನ, ಬರೆಯುವ ಮೂಲಕ ಅರೆಭಾಷೆ ಬೆಳವಣಿಗೆಗೆ ಮುಂದಾಗಬೇಕಿದೆ. ‘ಸಾಹೇಬ್ರು ಬಂದವೆ’ ನಾಟಕವನ್ನು ಹಲವು ಕಡೆ ಪ್ರದರ್ಶನ ಮಾಡುವ ಮೂಲಕ ಅರೆಭಾಷೆ ಮಹತ್ವ ತಿಳಿಸುವಲ್ಲಿ ಸಹಕಾರಿಯಾಯಿತು ಎಂಬುದನ್ನು ಮರೆಯುವಂತಿಲ್ಲ. ಅರೆಭಾಷೆಯಲ್ಲಿ ವಿಡಂಬನೆ, ಹಾಸ್ಯ, ಗಂಭೀರತೆ ಮತ್ತಿತರ ಪ್ರಯೋಗಗಳು ಈ ನಾಟಕದಲ್ಲಿ ಕಾಣಬಹುದಾಗಿದೆ. ಅರೆಭಾಷೆಯಲ್ಲಿ ಪದಕೋಶ, ವಿಶ್ವಕೋಶ, ಪಾರಂಪರಿಕ ವಸ್ತುಕೋಶ ಹೀಗೆ ಹಲವು ಪುಸ್ತಕಗಳನ್ನು ಪ್ರಕಟಿಸುವ ಮೂಲಕ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗಿದೆ. ಅವುಗಳನ್ನು ಅಧ್ಯಯನ ಮಾಡುವಂತಾಗಬೇಕು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆಯಾಗಿರುವುದು ದೊಡ್ಡ ಸಾಧನೆ ಎಂದರೆ ತಪ್ಪಾಗಲಾರದು. ಅರೆಭಾಷೆ ಪುಸ್ತಕಗಳ ಡಿಜಿಟಲೀಕರಣ. ಅರೆಭಾಷೆ ಸಾಧಕರ ಮಾಲೆ, ಸಾಕ್ಷ್ಯಚಿತ್ರ, ಚಿತ್ರಕಲಾ ಶಿಬಿರ, ಅರೆಭಾಷೆ ಐ.ಎಸ್.ಒ. ಕೋಡ್ ಮಾನ್ಯತೆಗೆ ಪ್ರಯತ್ನ, ವಿಚಾರ ಸಂಕಿರಣಗಳು ಹೀಗೆ ಹಲವು ಕಾರ್ಯಕ್ರಮಗಳನ್ನು ತಮ್ಮ ಅವಧಿಯಲ್ಲಿ ಆಯೋಜಿಸಿ ಅರೆಭಾಷೆ ಅಭಿವೃದ್ಧಿಗೆ ಶ್ರಮಿಸಲಾಗಿದೆ. ಯಾವುದೇ ಭಾಷೆಯನ್ನು ಭೌದ್ಧಿಕವಾಗಿ ಸಂಪಾದಿಸಬೇಕು ಮತ್ತು ಬೆಳೆಸಬೇಕು, ಆ ಮೂಲಕ ಭಾಷೆಯನ್ನು ಉಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಅಧ್ಯಯನ ಕಡೆ ಗಮನಹರಿಸಬೇಕು” ಎಂದು ನುಡಿದರು.

    ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಆರ್. ಸೋಮಣ್ಣ ಇವರು ಮಾತನಾಡಿ “ಅರೆಭಾಷೆ ಅಕಾಡೆಮಿ ಸ್ಥಾಪನೆಗೆ ಎಲ್ಲರೂ ಶ್ರಮಿಸಿದ್ದಾರೆ. ಅರೆಭಾಷೆಯನ್ನು ಮುಂದಿನ ಜನಾಂಗಕ್ಕೂ ತಿಳಿಸುವ ನಿಟ್ಟಿನಲ್ಲಿ ಅರೆಭಾಷೆ ಮಾತನಾಡುವಂತಾಗಬೇಕು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯ ಚಟುವಟಿಕೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟವು ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ. ಇದರಿಂದ ಹಲವು ಕಾರ್ಯಕ್ರಮಗಳ ಆಯೋಜನೆಗೆ ಸಹಕಾರಿಯಾಗಿದೆ” ಎಂದು ನುಡಿದರು.

    ನಿವೃತ್ತ ಪೊಲೀಸ್ ಅಧೀಕ್ಷಕರಾದ ಚೊಕ್ಕಾಡಿ ಅಪ್ಪಯ್ಯ ಅವರು ಮಾತನಾಡಿ “ಕೋಡಿ ಕುಶಾಲಪ್ಪ ಗೌಡ ಮತ್ತು ಪುರುಷೋತ್ತಮ ಬಿಳಿಮಲೆ ಅವರು ಬರೆದಿರುವ ಪುಸ್ತಕವನ್ನು ಎಲ್ಲಾ ಅರೆಭಾಷಿಕರು ಓದುವಂತಾಗಬೇಕು” ಎಂದರು. ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ ಅವರು ಮಾತನಾಡಿ “ಮಾತೃ ಭಾಷೆಯಾದ ಅರೆಭಾಷೆಯನ್ನು ಕನ್ನಡದ ಜೊತೆ ಕಲಿಯಬೇಕು” ಎಂದರು. ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಅಂಬೆಕಲ್ ನವೀನ್ ಅವರು ಮಾತನಾಡಿದರು.

    ಇದೇ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಮಾತನಾಡಿ “ಹಿಂಗಾರು ತ್ರೈಮಾಸಿಕ ಪುಸ್ತಕ ಪ್ರಕಟಿಸುವ ನಿಟ್ಟಿನಲ್ಲಿ ಸಂಪಾದಕೀಯ ಸಮಿತಿ ರಚಿಸಿಕೊಂಡು ನಿಯಮಾನುಸಾರ ತ್ವರಿತ ಕ್ರಮವಹಿಸಲಾಗುವುದು” ಎಂದು ತಿಳಿಸಿದರು.

    ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ, ಉಪಾಧ್ಯಕ್ಷರಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಕುದುಪಜೆ ರೋಹಿಣಿ, ಪೇರಿಯನ ಮುತ್ತಮ್ಮ, ನಾರೋಲನ ಭಾಗೀರಥಿ, ಬಾರನ ಶೋಭಾ, ಮೂಲೆಮಜಲು ಅಮಿತಾ, ಕಟ್ರತನ ಲಲಿತ ಐಯ್ಯಣ್ಣ, ಬೈಮನ ಜ್ಯೋತಿ, ಜಿಲ್ಲೆಯ ಕೊಡಗು ಗೌಡ ವಿವಿಧ ಸಮಾಜ ಹಾಗೂ ಸಂಘಟನೆಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

    ಕೊಡಗು ಗೌಡ ಮಹಿಳಾ ಒಕ್ಕೂಟದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಬೈತಡ್ಕ ಜಾನಕಿ ಬೆಳ್ಯಪ್ಪ ಅವರು ಅರೆಭಾಷೆ ದಿನಾಚರಣೆ ಮಹತ್ವದ ಕುರಿತು ಹಾಡು ಹಾಡಿದರು. ಪ್ರೇಮ ರಾಘವಯ್ಯ ಮತ್ತು ರೇವತಿ ರಮೇಶ್ ಅವರು ನಾಡಗೀತೆ ಹಾಡಿದರು. ರಿಜಿಸ್ಟ್ರಾರ್ ಚಿನ್ನಸ್ವಾಮಿ ಸ್ವಾಗತಿಸಿ, ವಿನೋದ್ ಮೂಡಗದ್ದೆ ನಿರೂಪಿಸಿ, ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಕೊಡಗು ಗೌಡ ವಿದ್ಯಾ ಸಂಘದ ಕಾರ್ಯದರ್ಶಿ ಪೇರಿಯನ ಉದಯ್ ಕುಮಾರ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಳಗಾವಿಯಲ್ಲಿ ‘ಈ ಹೊತ್ತಿಗೆ’ಯಿಂದ ‘ನಾಟಕ ರಚನಾ ಕಮ್ಮಟ’ | ಕೊನೆಯ ದಿನಾಂಕ ಜನವರಿ 7
    Next Article ಕುಶಾಲನಗರ ಗೌಡ ಸಮಾಜ ಆಶ್ರಯದಲ್ಲಿ ‘ಅರೆಭಾಷೆ ದಿನಾಚರಣೆ’
    roovari

    Add Comment Cancel Reply


    Related Posts

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    ಪುಸ್ತಕ ವಿಮರ್ಶೆ | ಡಾ. ಪಾದೇಕಲ್ಲು ವಿಷ್ಣು ಭಟ್ಟ ಇವರ ವಿಮರ್ಶಾ ಕೃತಿ ‘ಗ್ರಂಥಾಲೋಕ’

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.