Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದಲ್ಲಿ ‘ಅರಿವು -ತಿಳಿವು’ ತಿಂಗಳ ಉಪನ್ಯಾಸ ಡಾ.ಎಚ್.ಎಸ್ ಸತ್ಯನಾರಾಯಣರಿಂದ 
    Literature

    ಕಾರ್ಕಳದಲ್ಲಿ ‘ಅರಿವು -ತಿಳಿವು’ ತಿಂಗಳ ಉಪನ್ಯಾಸ ಡಾ.ಎಚ್.ಎಸ್ ಸತ್ಯನಾರಾಯಣರಿಂದ 

    September 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಂಘ ಕಾಂತಾವರ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಜಂಟಿಯಾಗಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆಯುವ ತಿಂಗಳ ಉಪನ್ಯಾಸ ಕಾರ್ಯಕ್ರಮ ‘ಅರಿವು -ತಿಳಿವು’ ದಿನಾಂಕ 23-09-2023 ರಂದು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

    ಇವರು “ಬಿ.ಜಿ.ಎಲ್  ಸ್ವಾಮಿ ಎಂಬ ಗಿಡಮರಗಳ ಒಡನಾಡಿ” ಈ ವಿಷಯದಲ್ಲಿ ಉಪನ್ಯಾಸ ನೀಡುತ್ತಾ “ಕನ್ನಡ ಶಾಸನಗಳಿಂದ ಮೊತ್ತಮೊದಲಿಗೆ ಸಸ್ಯ ಸಂಕುಲಗಳ ಕುರಿತು ಅಧ್ಯಯನ ಮಾಡಿದ ಹೆಗ್ಗಳಿಕೆ ಡಾ.ಬಿ.ಜಿ ಎಲ್. ಸ್ವಾಮಿಯವರಿಗೆ ಸಲ್ಲುತ್ತದೆ. ‘ಹಸಿರು ಹೊನ್ನು’ ಕೃತಿ ಸಾಹಿತ್ಯ ಲೋಕದಲ್ಲಿ ಸಸ್ಯ ಶಾಸ್ತ್ರಗಳ ಕುರಿತಂತೆ ಇರುವ ಪ್ರಸಿದ್ಧ ಮತ್ತು ವೈಶಿಷ್ಯಪೂರ್ಣ ಕೃತಿಯಾಗಿದೆ. ಡಿ.ವಿ.ಜಿ.ಯವರು ಮಾನವ ಜಗತ್ತಿನ ಭಾವಗಳನ್ನು ಕುರಿತು ಬರೆದರೆ ಮಗ ಬಿ.ಜಿ.ಎಲ್ ಸ್ವಾಮಿಯವರು ಸಸ್ಯ ಸಂಕುಲಗಳ ಹೃದಯಗಳ ಹಾಗೂ ಭಾವಗಳ ಜೊತೆ ಬೆರೆತು ಅರಿತರು. ತಂದೆ ಡಿ.ವಿ.ಜಿ.ಯವರಿಂದ ಶಿಸ್ತುಬದ್ಧ ಬದುಕಿನೊಂದಿಗೆ ಹಾಸ್ಯ ವಿನೋದ ಪ್ರವೃತ್ತಿಯಿಂದಲೇ ವಿಡಂಬನೆಗಳನ್ನೂ ಮಾಡಿದವರು. ಅವರು ಒಬ್ಬ ಒಳ್ಳೆಯ ಪಿಟೀಲು ವಾದಕರಾಗಿ, ವರ್ಣರಂಜಿತ ಕಸೂತಿ ಕಲಾಕರರಾಗಿಯೂ ಇದ್ದರು” ಎಂದು ಬಿ. ಜಿ.ಎಲ್ ಸ್ವಾಮಿಯವರ ಜೀವನ ದರ್ಶನವನ್ನು ಪರಿಚಯಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಾಸಾಪದ ರಾಜ್ಯಾಧ್ಯಕ್ಷ ಸಾಹಿತಿ ಡಾ.ನಾ.ಮೊಗಸಾಲೆಯವರು ವಹಿಸಿದ್ದು, ಅಭಾಸಾಪ ತಾಲೂಕು ಸಮಿತಿಯ ಗೌರವಾಧ್ಯಕ್ಷ ಎಸ್.ನಿತ್ಯಾನಂದ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೋಶಾಧಿಕಾರಿ ಸುಧಾಕರ ಶಾನುಭೋಗರು ಪ್ರಾರ್ಥಿಸಿ, ಕಾರ್ಯದರ್ಶಿ ಗಣೇಶ್ ಜಾಲ್ಸೂರು ಸ್ವಾಗತಿಸಿ, ಜತೆಕಾರ್ಯದರ್ಶಿ ವೀಣಾ ರಾಜೇಶ್ ಉಪನ್ಯಾಸಕಾರರನ್ನು ಪರಿಚಯಿಸಿ,  ಸದಸ್ಯರಾದ ಬಾಲಕೃಷ್ಣ ರಾವ್ ಕಾರ್ಯಕ್ರಮವನ್ನು ನಿರೂಪಿಸಿ, ಅಭಾಸಾಪ ತಾಲೂಕು ಸಮಿತಿಯ ಅಧ್ಯಕ್ಷೆ ಮಿತ್ರಪ್ರಭಾ ಹೆಗ್ಡೆಯವರು ವಂದಿಸಿದರು. ನಿವೃತ್ತ ಪ್ರಾಂಶುಪಾಲೆ ಇಂದಿರಾ.ಕೆ ಇವರ ಸಹಕಾರದಲ್ಲಿ ಕಾರ್ಯಕ್ರಮವು ಶಾಂತಿ ಮಂತ್ರದೊಂದಿಗೆ ಸುಸಂಪನ್ನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬಾಗಲಕೋಟೆಯಲ್ಲಿ ವಿದ್ವಾನ್ ಮಂಜುನಾಥ್ ಮತ್ತು ಡಾ.ಅನಷ್ಕು ಅವರ ಕಾರ್ಯಗಾರ ಮತ್ತು ಭರತನಾಟ್ಯ ಪ್ರದರ್ಶನ | ಸೆಪ್ಟೆಂಬರ್ 30ರಿಂದ 
    Next Article ಯುವ ಪ್ರತಿಭೆಗಳ ಅನಾವರಣಕ್ಕೆ ಸಂಗೀತ ಪರಿಷತ್ತಿನಿಂದ ‘ಯುವ ಸಂಗೀತೋತ್ಸವ’
    roovari

    Add Comment Cancel Reply


    Related Posts

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.