Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅರಿವು ತಿಳಿವು’ ತಿಂಗಳ ಕಾರ್ಯಕ್ರಮದಲ್ಲಿ “ಭೌತಿಕ ಶೋಧ” ದ ಕುರಿತು ಉಪನ್ಯಾಸ
    Literature

    ‘ಅರಿವು ತಿಳಿವು’ ತಿಂಗಳ ಕಾರ್ಯಕ್ರಮದಲ್ಲಿ “ಭೌತಿಕ ಶೋಧ” ದ ಕುರಿತು ಉಪನ್ಯಾಸ

    October 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಮತ್ತು ಕನ್ನಡ ಸಂಘ ಕಾಂತಾವರ ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸುವ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮವು ದಿನಾಂಕ 21-10-2023 ರಂದು ಕಾರ್ಕಳದ ಸರಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಖ್ಯಾತ ಇತಿಹಾಸ ತಜ್ಞ ಹಾಗೂ ಬಂಟ್ವಾಳದ ತುಳು ಬದುಕು ವಸ್ತುಸಂಗ್ರಹಾಲಯ ಮತ್ತು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಎಂಬ ವಿಷಯದ ಕುರಿತು ಮಾತನಾಡುತ್ತಾ “ಚರಿತ್ರೆ ಎನ್ನುವುದು ಕೇವಲ ಕಾಲ ಮತ್ತು ಘಟನೆಗಳ ಮೊತ್ತವಷ್ಟೇ ಆಗಿರದೆ ಮೌಖಿಕ ಸಾಹಿತ್ಯ ಮತ್ತು ಭೌತಿಕ ಸಾಮಾಗ್ರಿಗಳು ಕೂಡಾ ಚರಿತ್ರೆಯ ಭಾಗಗಳೇ ಆಗಿವೆ. ಮನುಷ್ಯ ನಿರ್ಮಿತ ಈ ಭೌತಿಕ ವಸ್ತುಗಳೆಲ್ಲವೂ ಗತಕಾಲದ ಜೀವನಕ್ರಮ ಮತ್ತು ಸಂಸ್ಕೃತಿಯನ್ನು ನಮಗೆ ಪರಿಚಯಿಸಿದರೆ, ಬದಲಾದ ಇಂದಿನ ಜೀವನಶೈಲಿ ಹಾಗೂ ಮುಂದೆ ಎದುರಾಗಲಿರುವ ಆಪತ್ತಿನ ಬಗ್ಗೆಯೂ ಸೂಚ್ಯವಾಗಿ ಅವು ನಮಗೆ ತಿಳಿಸಿಕೊಡುತ್ತವೆ. ಪ್ರತಿಯೊಂದು ಭೌತಿಕ ವಸ್ತುವಿನ ಹಿಂದೆಯೂ ಒಂದೊಂದು ಚರಿತ್ರೆಯಿದ್ದು, ಇವೆಲ್ಲವೂ ಒಂದು ಕಾಲದ ತುಳುನಾಡಿನ ಸಾಮಾಜಿಕ ವ್ಯವಸ್ಥೆಯ ಪರಿಚಯವನ್ನು ಮಾಡಿಕೊಡುತ್ತವೆ. ನಮ್ಮ ಹಿರಿಯರು ಬೆಳೆದು ಬಂದ ಬದುಕಿನ ಕ್ರಮವನ್ನು ಇಂದು ಅನೇಕ ಕಾರಣಗಳಿಂದಾಗಿ ಉಳಿಸಿಕೊಳ್ಳಲಾಗದಿದ್ದರೂ ಆ ಭೌತಿಕ ವಸ್ತುಗಳನ್ನು ಮುಂದಿನ ಪೀಳಿಗೆಯ ನೆನಪಿಗಾಗಿಯೂ ಕಾಪಿಡಬೇಕಾಗಿದೆ. ಇತಿಹಾಸ ಪ್ರಜ್ಞೆಯನ್ನು ಉಳಿಸಿಕೊಳ್ಳುವುದಕ್ಕೆ ಮತ್ತು ಅವುಗಳಿಂದ ನಾವು ಅನೇಕ ಪಾಠಗಳನ್ನೂ ಕಲಿಯಬೇಕಾಗಿರುವುದರಿಂದ ಅವುಗಳ ರಕ್ಷಣೆಯೂ ಮಹತ್ವದ ಸಂಗತಿಯಾಗಿದೆ” ಎಂದರು.

    ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅ.ಭಾ.ಸಾ.ಪ. ತಾಲೂಕು ಘಟಕದ ಗೌರವಾಧ್ಯಕ್ಷರಾದ ನಿತ್ಯಾನಂದ ಪೈ, ಉಪಾಧ್ಯಕ್ಷರಾದ ಏರ್‌ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್, ಡಾ.ನಾ.ಮೊಗಸಾಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿ, ವೀಣಾ ರಾಜೇಶ್ ಅತಿಥಿಗಳನ್ನು ಪರಿಚಯಿಸಿ, ಸದಾನಂದ ನಾರಾವಿ ಸ್ವಾಗತಿಸಿ, ಅ.ಭಾ.ಸಾ.ಪ ತಾಲೂಕು ಅಧ್ಯಕ್ಷರಾದ ಮಿತ್ರಪ್ರಭಾ ಹೆಗ್ಡೆ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡಬಿದಿರೆಯ ವಿದ್ಯಾಗಿರಿಯಲ್ಲಿ ‘ಮುಸ್ರಾಲೊ ಪಟ್ಟೋ’ ಕಾದಂಬರಿ ಬಿಡುಗಡೆ  
    Next Article ಮಂಗಳೂರು ವಿವಿಯಲ್ಲಿ ಕನ್ನಡ ಸಾಹಿತ್ಯ ಚರಿತ್ರೆ ರಚನೆ ಪ್ರಾರಂಭಿಕ ಪ್ರಯತ್ನಗಳು ಎಂಬ ವಿಷಯದಲ್ಲಿ ವಿಶೇಷೋಪನ್ಯಾಸ 
    roovari

    Add Comment Cancel Reply


    Related Posts

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    ಗಣೇಶ ಪ್ರಸಾದಜೀಯವರ 9ನೆಯ ಕೃತಿ ‘ಕಾಂತೆ ಕವಿತೆ’ ಲೋಕಾರ್ಪಣೆ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.