Subscribe to Updates

    Get the latest creative news from FooBar about art, design and business.

    What's Hot

    ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ

    June 23, 2025

    ಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24

    June 23, 2025

    ‘ಬನ್ನಂಜೆ 90 – ಉಡುಪಿ ನಮನ’ ಕಾರ್ಯಕ್ರಮದ ಪೂರ್ವಭಾವಿ ಸಭೆ

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯೋಗೀಂದ್ರ ಮರವಂತೆಯವರ ‘ಏರೋ ಪುರಾಣ-ವಿಮಾನ ಲೋಕದ ಅನುಭವ, ಅಚ್ಚರಿ’ ಪ್ರಬಂಧ ಸಂಕಲನ ಲೋಕಾರ್ಪಣೆ
    Book Release

    ಯೋಗೀಂದ್ರ ಮರವಂತೆಯವರ ‘ಏರೋ ಪುರಾಣ-ವಿಮಾನ ಲೋಕದ ಅನುಭವ, ಅಚ್ಚರಿ’ ಪ್ರಬಂಧ ಸಂಕಲನ ಲೋಕಾರ್ಪಣೆ

    January 6, 2024Updated:January 8, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮರವಂತೆ : ಮರವಂತೆಯ ಸಾಧನಾ ಸಮಾಜ ಸೇವಾ ವೇದಿಕೆ, ಹಳೆ ವಿದ್ಯಾರ್ಥಿ ಸಂಘ, ಆಸರೆ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಐ. ವಸಂತಕುಮಾರಿ ಕಲಾಂಗಣದಲ್ಲಿ ದಿನಾಂಕ 24-12-2023ರಂದು ನಡೆದ ಸಮಾರಂಭದಲ್ಲಿ ಯೋಗೀಂದ್ರ ಮರವಂತೆ ಅವರ ‘ಏರೋ ಪುರಾಣ-ವಿಮಾನ ಲೋಕದ ಅನುಭವ, ಅಚ್ಚರಿ’ ಪ್ರಬಂಧ ಸಂಕಲನ ಬಿಡುಗಡೆಯಾಯಿತು.

    ಕೃತಿ ಬಿಡುಗಡೆ ಮಾಡಿದ ಕತೆ, ಕಾದಂಬರಿಕಾರ, ವಿಮರ್ಶಕ ಶ್ರೀಧರ ಬಳೆಗಾರ್ ಇವರು ಮಾತನಾಡುತ್ತಾ “ಯಂತ್ರ ಜಗತ್ತು ಈಗ ಮನುಷ್ಯನನ್ನು ಜೀವ ಜಗತ್ತನಿಂದ ದೂರ ಸೆಳೆಯುತ್ತಿದೆ ಮತ್ತು ಜೀವ ಜಗತ್ತನ್ನು ನಾಶಮಾಡುತ್ತಿದೆ. ಮನುಷ್ಯನ ಜೀವನದ ಎಲ್ಲಾ ವಿಭಾಗಗಳನ್ನು ವಿಜ್ಞಾನ ಆಕ್ರಮಿಸಿರುವ ಸನ್ನಿವೇಶದಿಂದಾಗಿ ಈ ಪ್ರಕ್ರಿಯೆಯನ್ನು ತಡೆಯಲಾಗುವುದಿಲ್ಲ. ಈಗ ವೈದ್ಯರು, ವಿಜ್ಞಾನಿಗಳು ಮನುಷ್ಯನನ್ನು ಯಂತ್ರವೆಂದು ಪರಿಗಣಿಸುತ್ತಿರುವಾಗ ವಿಮಾನ ತಂತ್ರಜ್ಞ ಆಗಿರುವ ಯೋಗೀಂದ್ರ ಈ ಕೃತಿಯಲ್ಲಿ ವಿಮಾನಗಳನ್ನು ಜೀವಿಗಳಾಗಿ ಬಿಂಬಿಸುತ್ತಾರೆ. ಜೀವಿಗಳಿಗಿದ್ದಂತೆ ಅವುಗಳಿಗೆ ಹುಟ್ಟು, ಬಾಲ್ಯ, ಯೌವನ, ವೃದ್ಧಾಪ್ಯ, ಸಾವು ಇದೆ. ಅವುಗಳ ಜೀವಯಾನ ಅವುಗಳದ್ದೇ ಆದ ಸ್ಮಶಾನದಲ್ಲಿ ಅಂತ್ಯಗೊಳ್ಳುತ್ತದೆ ಎನ್ನುವುದನ್ನು ವಿವಿಧ ರೂಪಕಗಳ ಮೂಲಕ ಚಿತ್ರಿಸುತ್ತಾರೆ. ವಿಮಾನಗಳ ತಾಂತ್ರಿಕ ಪರಿಚಯ ನೀಡುವ ಕೃತಿಗಳು ಕನ್ನಡದಲ್ಲಿ ಬಂದಿರಬಹುದು. ಆದರೆ ಯೋಗೀಂದ್ರರು ವಿಮಾನಕ್ಕೆ ವ್ಯಕ್ತಿತ್ವ ಆರೋಪಿಸುವ ಮೂಲಕ ವಿಶಿಷ್ಟತೆ ಮೆರೆದಿದ್ದಾರೆ.. ‘ಏರೋ ಪುರಾಣ’ದ ಮೂಲಕ ತಮ್ಮ ನಾಲ್ಕನೆ ಪ್ರಬಂಧ ಸಂಕಲನ ಹೊರತಂದ ಯೋಗೀಂದ್ರ ಅವರು ಸ್ವಂತಿಕೆಯ ಮತ್ತು ಲವಲವಿಕೆಯ ಕಾವ್ಯಾತ್ಮಕ ಭಾಷೆ ಹಾಗೂ ಆಕರ್ಷಕ ನಿರೂಪಣಾ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಓದುಗರು ಅವರಿಂದ ಇನ್ನಷ್ಟು ಮಹತ್ವದ ಕೃತಿಗಳನ್ನು ನಿರೀಕ್ಷಿಸಬಹುದು” ಎಂದು ಹೇಳಿದರು.

    ಕೃತಿ ಪರಿಚಯ ಮಾಡಿದ ಲೇಖಕ ರಾಜೀವ ನಾಯ್ಕ್ ಕೋನಳ್ಳಿ ಅವರು ‘ಏರೋ ಪುರಾಣ’ ಹೇಗೆ ಕನ್ನಡದ ಅನನ್ಯ ಕೃತಿಯಾಗಿದೆ ಎನ್ನುವುದನ್ನು ಪುಸ್ತಕದಿಂದ ಆಯ್ದ ವಿವಿಧ ಉದಾಹರಣೆಗಳ ಮೂಲಕ ನಿರೂಪಿಸಿದರು. ಕೃತಿಯನ್ನು ಬೆಂಗಳೂರಿನ ಪ್ರಿಸಮ್ ಬುಕ್ಸ್ ಪ್ರಕಟಿಸಿದೆ.

    ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಬಿ.ಬಿ. ಹೆಗ್ಡೆ ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಮಾತನಾಡಿ “ಸಮಕಾಲೀನ ಕನ್ನಡದ ಮಹತ್ವದ ಕೃತಿಯಾಗಿ ಹೊಮ್ಮಿರುವ ಈ ಪುಸ್ತಕವನ್ನು ಯುವ ಓದುಗರು ಓದಬೇಕು. ಇದರ ಯಾವುದಾದರೊಂದು ಪ್ರಬಂಧ ಪದವಿ ತರಗತಿಯ ಪಠ್ಯಪುಸ್ತಕದಲ್ಲಿ ಸೇರಬೇಕು. ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು” ಎಂದರು.

    ಆಸರೆ ಟ್ರಸ್ಟಿನ ದಯಾನಂದ ಬಳೆಗಾರ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ ಮಡಿವಾಳ ವಂದಿಸಿ, ಸಾಧನಾ ಸದಸ್ಯ ಜತೀಂದ್ರ ಮರವಂತೆ ನಿರೂಪಿಸಿದರು. ಚೇತನ್ ಶೆಟ್ಟಿ, ರಾಜೀವ ನಾಯ್ಕ ಕೋನಳ್ಳಿ, ಯೋಗೀಂದ್ರ ಮರವಂತೆ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಅಂಬಲಪಾಡಿಯಲ್ಲಿ ‘ಅಂಬಲಪಾಡಿ ನಾಟಕೋತ್ಸವ -2023’ದ ಉದ್ಘಾಟನೆ
    Next Article ರೇಡಿಯೋ ಕುಂದಾಪುರ ಸ್ಟುಡಿಯೋದಲ್ಲಿ ಯಶಸ್ವೀ ಕಲಾವೃಂದ ಹೂವಿನಕೋಲು ಸಮಾರೋಪ
    roovari

    Add Comment Cancel Reply


    Related Posts

    ಲೋಕಾರ್ಪಣೆಗೊಂಡ ‘ನಡುರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನ

    June 23, 2025

     ಲೋಕಾರ್ಪಣೆಗೊಂಡ ‘ತತ್ತ್ವಭಾಗವತಮ್’ ನಾಲ್ಕು ಕೃತಿಗಳು

    June 23, 2025

    ದೇಲಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಕನ್ನಡ ಸಾಹಿತ್ಯ ಅಭಿಯಾನ

    June 23, 2025

    ಮಂಗಳೂರಿನ ಸಂತ ರೀತಾ ಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’

    June 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.