Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ ಸಮಾರಂಭ
    Cultural

    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ ಸಮಾರಂಭ

    December 27, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ಸಮಾರೋಪ ಸಮಾರಂಭದ ದಿನಾಂಕ 26 ಡಿಸೆಂಬರ್ 2024ರಂದು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಅನ್ನಪೂರ್ಣ ಪಿ. ಜಿ. ಮಾತನಾಡಿ “ಕಾಲೇಜಿನಲ್ಲಿ ನಡೆಯುವ ವಿವಿಧ ಸಂಘದ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ವಿಶೇಷ ಕೌಶಲ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ಕಲಾವಿಭಾಗವನ್ನು ಆಯ್ಕೆಮಾಡಿಕೊಂಡ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಕೀಳರಿಮೆಗೆ ಒಳಗಾಗುವ ಅಗತ್ಯವಿಲ್ಲ. ಸಮಾಜದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿರುವವರ ಶೈಕ್ಷಣಿಕ ಹಿನ್ನೆಲೆಯನ್ನು ಗಮನಿಸಿದರೆ ಈ ಅಂಶ ಸ್ಪಷ್ಟವಾಗುತ್ತದೆ. ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ”. ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಅಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್‌. ಸುಬ್ರಹ್ಮಣ್ಯ ಮಾತನಾಡಿ “ಇಂದಿನ ಕಾಲಘಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆಗಳು ಇರುವುದು ಸಹಜ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತರಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಮಂದಿನ ದಿನಗಳಲ್ಲಿ ಸಾಕಷ್ಟು ಅವಕಾಶಗಳು ಲಭ್ಯವಾಗಬಲ್ಲದು.” ಎಂದು ನುಡಿದರು.
    ಕಾರ್ಯಕ್ರಮದ ವೇದಿಕೆಯಲ್ಲಿ ಕಲಾಸಂಘದ ಸಂಯೋಜಕರಾದ ಮೋನಿಷಾ ಎನ್‌. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಲಾಸಂಘದ ವತಿಯಿಂದ ನಡೆಸಲ್ಪಟ್ಟ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಹೇಶ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ , ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರೂಪಶ್ರೀ ಸ್ವಾಗತಿಸಿ, ವರ್ಷಾ ನಿರೂಪಿಸಿ, ಯುಕ್ತಾ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರಾಗ ತರಂಗ(ರಿ.)ಮಂಗಳೂರು-“ಬಾಲ ಪ್ರತಿಭಾ-2024 ಸ್ಪರ್ಧೆಗಳು
    Next Article ನೀರ್ಚಾಲಿನಲ್ಲಿ ಶ್ರೀಕೃಷ್ಣ ಭಟ್ ಇವರಿಗೆ ಸಹಸ್ರಚಂದ್ರ ದರ್ಶನ ಅಭಿನಂದನಾ ಸಮಾರಂಭ | ಜನವರಿ 05
    roovari

    Add Comment Cancel Reply


    Related Posts

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.