Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆ ಹಯಗ್ರೀವದಲ್ಲಿ ‘ಅರ್ಥಾಂಕುರ-3’
    Yakshagana

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಅರ್ಥಾಂಕುರ-3’

    October 3, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ : ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ (ರಿ.) ಕೊಮೆ ತಕ್ಕಟ್ಟೆ ಆಯೋಜಿಸಿದ ಹೊಸ ತಲೆಮಾರಿನ ಅರ್ಥಧಾರಿಗಳ ವೇದಿಕೆಯಾದ ‘ಅರ್ಥಾಂಕುರ’ ಸರಣಿಯ ಮೂರನೇ ಕಾರ್ಯಕ್ರಮವು ದಿನಾಂಕ 01-10-2023ರಂದು ರೋಟರಿ ಕ್ಲಬ್ ತೆಕ್ಕಟ್ಟೆ ಇದರ ಸಹಕಾರದೊಂದಿಗೆ ನಡೆಯಿತು.
    ಜೇಸಿ ತರಬೇತುದಾರರಾಗಿ, ನಿರೂಪಕರಾಗಿ, ಸಂಘಟಕರಾಗಿ, ಬರಹಗಾರರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪರಿಚಾರಕರಾಗಿ ಗುರುತಿಸಿಕೊಂಡು ಆದರ್ಶ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ರೂಪಿಸಿ ಇದೀಗ ಕರ್ನಾಟಕ ರಾಜ್ಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶ್ರೀ ನರೇಂದ್ರ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಯಕ್ಷಗುರುಗಳಾದ ಸೀತಾರಾಮ ಶೆಟ್ಟಿ ಕೊಯಿಕೂರು “ವ್ಯಕ್ತಿ ಸಮಾಜಮುಖಿಯಾಗಿ ಬೆಳೆಯಬೇಕು. ಪ್ರತಿಭೆ ನಿಂತ ನೀರಾಗಬಾರದು. ಅವಕಾಶ ಪಡೆದು ಇತರರಿಗೆ ಅವಕಾಶ ನೀಡುವ ಸಲುವಾಗಿ ಸದಾ ಚಿಂತಿಸುವ ನರೇಂದ್ರ ಕುಮಾರ್ ಹತ್ತು ಹಲವು ಕಾರ್ಯಕ್ರಮಗಳನ್ನು ಸಂಯೋಜಿಸಿ ಸೈ ಎನಿಸಿಕೊಂಡವರು. ಸಂಸ್ಥೆಯ ನಿಕಟವರ್ತಿಗಳಾದ ಇವರ ಸಾಧನೆ ಸಂಸ್ಥೆಗೆ ಹೆಮ್ಮೆ ತಂದ ವಿಶಯ. ಇವರನ್ನು ಸಮ್ಮಾನಿಸಿ ಸಂಸ್ಥೆ ಧನ್ಯತೆಯನ್ನು ಹೊಂದಿದೆ” ಎಂದು ಅಭಿನಂದನಾ ಮಾತುಗಳನ್ನಾಡಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ನರೇಂದ್ರ ಕುಮಾರ್ ಕೋಟ “ಅವಕಾಶ ಹಾಗೂ ಸ್ವಾತಂತ್ರ್ಯ ಸಿಕ್ಕಿದರೆ ಸಾಧಿಸುವುದಕ್ಕೆ ಸಾಧ್ಯ. ಹೊಸ ಪರಿಕಲ್ಪನೆಗಳು ಇತರರಿಗೂ ಪ್ರೇರಣೆ ಆಗುತ್ತದೆ. ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಕಾಯಕ ಬಹಳ ದೊಡ್ಡದು. ಸಂಸ್ಥೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ, ಗುರುತಿಸುವ ದೊಡ್ಡ ಜವಾಬ್ದಾರಿಯನ್ನು ಹೊತ್ತು ಕರಾವಳಿ ಭಾಗದಲ್ಲಿ ಉತ್ತುಂಗದಲ್ಲಿದೆ. ಬೆಳೆಸಿದ ಮಕ್ಕಳನ್ನು ಬಳಸಿ, ತೊಡಗಿಸಿಕೊಂಡರೆ ಅದ್ಭುತ ಪ್ರತಿಭೆ ಅನಾವರಣಗೊಳ್ಳುತ್ತದೆ. ಸಂಸ್ಥೆಯ ಕಾರ್ಯ ಶ್ಲಾಘನೀಯ” ಎಂದರು.

    ಮುಖ್ಯ ಅತಿಥಿಗಳಾಗಿ ಹಿರಿಯ ಅರ್ಥಧಾರಿ ಕುಮಾರ್ ಮಾಸ್ಟರ್ ಕೋಟೇಶ್ವರ ಮಾತನ್ನಾಡಿ “ಬಡಗಿನ ಸಂಘಟಕರು ಬಡಗಿನ ಕಲಾವಿದರಿಗೆ ಅವಕಾಶ ನೀಡಿ ಬೆಳೆಸುವ ಕೆಲಸವನ್ನೇ ಮರೆತಿದ್ದಾರೆ. ಸಮರ್ಥ ಅರ್ಥದಾರಿಗಳು ಇದ್ದೂ ತೆಂಕಿನ ವ್ಯಾಮೋಹದಿಂದ ಬಡಗಿನ ಕಲಾವಿದರನ್ನು ನಿರ್ಲಕ್ಷಿಸಿ, ಅವಕಾಶ ವಂಚಿತರನ್ನಾಗಿ ಮಾಡಿರುವುದು ನಿಜಕ್ಕೂ ವಿಷಾದದ ಸಂಗತಿ. ಯಶಸ್ವೀ ಕಲಾವೃಂದದ ಅರ್ಥಾಂಕುರ ನಿಜಕ್ಕೂ ಅರ್ಥಪೂರ್ಣ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ತೆಕ್ಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಸುಧಾಕರ ಶೆಟ್ಟಿ, ಗುರುಗಳಾದ ಲಂಬೋದರ ಹೆಗಡೆ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಗೋಪಾಲ ಪೂಜಾರಿ ಸ್ವಾಗತಿಸಿ, ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷ ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿ, ರೊ.ಡಾ.ಗಣೇಶ್ ಧನ್ಯವಾದಗೈದರು. ಬಳಿಕ ಹೊಸ ತಲೆಮಾರಿನ ಅರ್ಥಧಾರಿಗಳ ಪರಿಶೋಧ ಕಾರ್ಯಕ್ರಮದಡಿಯಲ್ಲಿ ‘ಕೃಷ್ಣಾರ್ಜುನ ಕಾಳಗ’ ತಾಳಮದ್ದಲೆ ರಂಗದಲ್ಲಿ ಪ್ರಸ್ತುತಿಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಏಕತಾರಿ ಕಲಾವಿದ ವೀರಭದ್ರಪ್ಪ ನಿಧನ  
    Next Article ಕಾಸರಗೋಡಿನಲ್ಲಿ ನಾರಿ ಚಿನ್ನಾರಿಯ ಸರಣಿ ಕಾರ್ಯಕ್ರಮ ಮತ್ತು ಲೇಖಕಿ ಲಕ್ಷ್ಮೀ ಕೆ.ಯವರ ಕವನ ಸಂಕಲನ ಬಿಡುಗಡೆ
    roovari

    Add Comment Cancel Reply


    Related Posts

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ತಾಳಮದ್ದಳೆ ಜ್ಞಾನಯಜ್ಞ’ | ಮೇ 26

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.