Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home »  ವಿಮರ್ಶೆ | ಪುಟ್ಟ ಬಾಲಕನ ದಿಟ್ಟ ಪ್ರಥಮ ಸಂಗೀತ ಕಾರ್ಯಕ್ರಮ
    Article

     ವಿಮರ್ಶೆ | ಪುಟ್ಟ ಬಾಲಕನ ದಿಟ್ಟ ಪ್ರಥಮ ಸಂಗೀತ ಕಾರ್ಯಕ್ರಮ

    July 3, 2024Updated:July 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕರ್ನಾಟಕದವರಾಗಿ ಅಮೇರಿಕದಲ್ಲಿ ನೆಲೆಸಿರುವ ಶ್ರೀ ಯೋಗೇಶ್ವರ್ ಮತ್ತು ಶ್ರೀಮತಿ ಪ್ರಜ್ಞಾ ಅವರ ಮೂವರು ಮಕ್ಕಳಲ್ಲಿ ಹಿರಿಯವನೇ 15ರ ಹರೆಯದ ಮಾಸ್ಟರ್ ಅಕುಲ್ ಗೊಂಚಿಗಾರ್. ಅಮೇರಿಕಾದಲ್ಲಿ ಹುಟ್ಟಿ ಬೆಳೆದ ಈ ಬಾಲಕನಿಗೆ ತಂದೆ ತಾಯಂದಿರ ಪ್ರಯತ್ನದಿಂದ ಕರ್ನಾಟಕ ಸಂಗೀತದ ಬಗ್ಗೆ ಒಲಮೆ ಹುಟ್ಟಿಕೊಂಡಿತು. ಬಳಿಕ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಅವರ ಸಂಗೀತ ಪಾಠ ಆತನಲ್ಲಿ ಸಂಗೀತದ ಬಗ್ಗೆ ಹೆಚ್ಚು ಆಕರ್ಷಣೆಯನ್ನು ಉಂಟು ಮಾಡಿರಬೇಕು.

    ಬೆಂಗಳೂರಿನ ಜಯನಗರದ ವಿವೇಕ ಸಭಾಂಗಣದಲ್ಲಿ ಅಕುಲ್ ಬಂಧುಗಳೇ ಹೆಚ್ಚಾಗಿ ಇದ್ದ ಉತ್ತಮ ಸಂಖ್ಯೆಯ ಶ್ರೋತೃಗಳ ಸಮ್ಮುಖದಲ್ಲಿ ದಿನಾಂಕ 29-06- 2024ರಂದು ನಿಗದಿತ ಸಮಯಕ್ಕಿಂತ ಸ್ವಲ್ಪ ತಡವಾಗಿ ಸಂಜೆ ಗಂಟೆ 7-00ಕ್ಕೆ ವಿದ್ವಾನ್ ಕೇಶವ ಮೋಹನ್ ಕುಮಾರ್, ವಿದ್ವಾನ್ ಆನೂರು ವಿನೋದ್ ಶ್ಯಾಮ್ ಮತ್ತು ವಿದ್ವಾನ್ ರಘುನಂದನ್ ಬಿ.ಎಸ್.ರಂತಹ ಅನುಭವೀ ಪಕ್ಕವಾಕ್ಯದೊಂದಿಗೆ ಸಂಗೀತ ಕಚೇರಿ ಪ್ರಾರಂಭವಾಯಿತು.

    ತೋಡಿ ರಾಗ – ಆದಿತಾಳ ವರ್ಣ, ಖರಹರಪ್ರಿಯ ರಾಗದ ತ್ಯಾಗರಾಜರ ಪಕ್ಕಲ ನಿಲಬಡಿ ಕೃತಿ, ಹಂಸಧ್ವನಿ ರಾಗದ ವಿದ್ವಾನ್ ಸಾಯಿ ನರಸಿಂಹನ್ ಅವರಿಂದ ರಚಿತವಾದ ಪಲ್ಲವಿ, ಡಾ. ವಿದ್ಯಾಭೂಷಣರಿಂದ ಜನಪ್ರಿಯವಾದ ಪುರಂದರ ದಾಸರ ಪಿಳ್ಳಂಗೋವಿಯ ದೇವರನಾಮ ಹಾಗೂ ಕುಂತಳವರಾಳಿ ರಾಗದ ಡಾ. ಎಂ. ಬಾಲಮುರಳೀ ಕೃಷ್ಣ ವಿರಚಿತವಾದ ತಿಲ್ಲಾನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

    ಕಾರ್ಯಕ್ರಮದ ಕೊನೆಗೆ ಅತಿಥಿಗಳಾಗಿ ಆಗಮಿಸಿದ ವಿದ್ವಾನ್ ಅಶೋಕ್ ರಮಣಿ, ವಿದುಷಿ ವಸಂತ ಮಾಧವಿ ಹಾಗೂ ಶ್ರೀ ಪಿ. ನಿತ್ಯಾನಂದ ರಾವ್ ಇವರ ಮೆಚ್ಚುಗೆಯ ಮಾತುಗಳು ಕಾರ್ಯಕ್ರಮಕ್ಕೆ ಕನ್ನಡಿ ಹಿಡಿದಂತಿತ್ತು. ಒಟ್ಟಿನಲ್ಲಿ ಹಿರಿಯರ ಪ್ರೋತ್ಸಾಹ, ಗುರುಗಳ ಮಾರ್ಗದರ್ಶನ ಹಾಗೂ ಆತನ ಛಲ, ಸಾಧನೆಗಳ ಮೂಲಕ ಅಕುಲ್ ಮುಂದಕ್ಕೆ ಉತ್ತಮ ಕಲಾವಿದನಾಗುವ ಭರವಸೆಯನ್ನು ಮೂಡಿಸಿದ್ದಾನೆ. ಈತನಿಂದ ಹಾಗೂ ಈತನಂತಹ ನೂರಾರು ಎಳೆಯ ಕಲಾವಿದರಿಂದ ಸಂಗೀತ ಬೆಳೆಯಲೆಂದು ಹಾರೈಸುತ್ತೇನೆ.

    ಪಿ. ನಿತ್ಯಾನಂದ ರಾವ್

     

    Share. Facebook Twitter Pinterest LinkedIn Tumblr WhatsApp Email
    Previous Articleನಿವೃತ್ತ ಮುಖ್ಯ ಶಿಕ್ಷಕ ಕೆ. ನಾರಾಯಣ ಗಟ್ಟಿ ಮಾಸ್ಟ‌ರ್ ಇವರಿಗೆ ಕ.ಸಾ.ಪ.ದಿಂದ ಅಭಿನಂದನೆ
    Next Article ‘ವಿಂಶತಿ’ ಕಾರ್ಯಕ್ರಮದ ಅಂಗವಾಗಿ ಸರಣಿ ತಾಳಮದ್ದಳೆ
    roovari

    Add Comment Cancel Reply


    Related Posts

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಪುಸ್ತಕ ವಿಮರ್ಶೆ | ಡಾ. ಮೋಹನ ಕುಂಟಾರ್ ಇವರ ‘ಪುರಾಣ ಕಥಾಕೋಶ’

    May 28, 2025

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.