Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಆರ್ಯಭಟ’ ಪ್ರಶಸ್ತಿ’ಗೆ ಭಾಜನರಾದ ರಂಗಕರ್ಮಿ ಶಶಿಕಾಂತ ಯಡಹಳ್ಳಿ
    Awards

    ‘ಆರ್ಯಭಟ’ ಪ್ರಶಸ್ತಿ’ಗೆ ಭಾಜನರಾದ ರಂಗಕರ್ಮಿ ಶಶಿಕಾಂತ ಯಡಹಳ್ಳಿ

    June 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : “ಆರ್ಯಭಟ ಸಾಂಸ್ಕೃತಿಕ ಸಂಸ್ಥೆ”ಯು 49ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, 6 ಜನ ವಿದೇಶದಲ್ಲಿದ್ದು ಸಾಧನೆ ಮಾಡಿದ ಕನ್ನಡಿಗರ ಸಮೇತ ವಿವಿಧ ಕ್ಷೇತ್ರಗಳಲ್ಲಿ ಕೃಷಿ ಮಾಡಿದ ಒಟ್ಟು 60 ಸಾಧಕರಿಗೆ ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. 23-06-2024ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ‘ಆರ್ಯಭಟ ಪ್ರಶಸ್ತಿ’ಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಬಿ. ಪ್ರಭಾಕರ ಶಾಸ್ತ್ರಿಯವರು ಪ್ರದಾನ ಮಾಡಲಿದ್ದಾರೆ.

    ಕಳೆದ ಮೂರು ದಶಕಗಳಿಂದ ಕನ್ನಡ ರಂಗಭೂಮಿಯಲ್ಲಿ ಕಲಾವಿದರಾಗಿ, ನಿರ್ದೇಶಕರಾಗಿ, ನಾಟಕಕಾರರಾಗಿ, ರಂಗವಿಮರ್ಶಕರಾಗಿ, ರಂಗ ತರಬೇತಿ ಶಿಕ್ಷಕರಾಗಿ, ರಂಗಭೂಮಿ ಪತ್ರಿಕೆಯ ಸಂಪಾದಕರಾಗಿ, ರಂಗ ಸಂಘಟಕರಾಗಿ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲುಸುತ್ತಾ ಬಂದಿರುವ ಶಶಿಕಾಂತ ಯಡಹಳ್ಳಿಯವರು ಈ ಸಲದ ಅಂತರಾಷ್ಟ್ರೀಯ ‘ಆರ್ಯಭಟ’ ಪ್ರಶಸ್ತಿಗೆ ರಂಗಭೂಮಿ ವಿಭಾಗದಿಂದ ಆಯ್ಕೆಯಾಗಿದ್ದಾರೆ.

    ‘ಸೃಷ್ಟಿ ಜನನಾಟ್ಯ ಕಲಾ ಕೇಂದ್ರ’ ಎನ್ನುವ ಸಂಸ್ಥೆಯನ್ನು ಹುಟ್ಟುಹಾಕಿ ನಿರಂತರವಾಗಿ ನಾಟಕಗಳನ್ನು ರಚಿಸಿ ನಿರ್ದೇಶಿಸಿ ನಿರ್ಮಿಸುತ್ತಾ ಬಂದಿರುವ ಯಡಹಳ್ಳಿಯವರು ಕನ್ನಡ ರಂಗಭೂಮಿಗರ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ಕೊಡುತ್ತಾ ಬಂದಿದ್ದಾರೆ. ‘ಸೃಷ್ಟಿ ಅಕಾಡೆಮಿ’ಯನ್ನು ಸ್ಥಾಪಿಸಿ ಕಳೆದ 24 ವರ್ಷಗಳಿಂದ ಮೂರು ಸಾವಿರಕ್ಕೂ ಹೆಚ್ಚು ಯುವಜನರಿಗರ ರಂಗಭೂಮಿಯಾದಿಯಾಗಿ ದೃಶ್ಯಮಾಧ್ಯಮಗಳ ಕುರಿತು ಅಭಿನಯ ಮತ್ತು ನಿರ್ದೇಶನದ ತರಬೇತಿಯನ್ನು ಕೊಡುತ್ತಾ ಬಂದಿದ್ದಾರೆ. ತಮ್ಮದೇ ಆದ ‘ಸೃಷ್ಟಿ ಆಪ್ತ ರಂಗಮಂದಿರ’ವನ್ನೂ ದೊಮ್ಮಲೂರಿನಲ್ಲಿ ಸ್ಥಾಪಿಸಿ ಬಡಾವಣಾ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ.

    ಒಂದೂವರೆ ದಶಕಗಳ ಕಾಲ ‘ಇಪ್ಟಾ’ ಸಂಸ್ಥೆಯ ಸಂಘಟಕರಾಗಿ ಹಲವಾರು ಬೀದಿನಾಟಕಗಳನ್ನು ರಚಿಸಿ ನಿರ್ದೇಶಿಸಿ ರಾಜ್ಯಾದ್ಯಂತ ಪ್ರದರ್ಶಿಸಿ ಸಾವಿರಾರು ಪ್ರದರ್ಶನಗಳನ್ನು ಮಾಡಿಸಿದ್ದಾರೆ. ಸಾಮಾಜಿಕ ಕಾಳಜಿ ಹಾಗೂ ಜನಸಾಮಾನ್ಯರ ಬಗ್ಗೆ ಕಳಕಳಿ ಇರುವ ನಾಟಕಗಳನ್ನೇ ಹೆಚ್ಚಾಗಿ ಮಾಡಿಸಿದ್ದು ಜನರಲ್ಲಿ ಜಾಗೃತಿಯನ್ನುಂಟು ಮಾಡುವ ನಿಟ್ಟಿನಲ್ಲಿ ತಮ್ಮೆಲ್ಲಾ ಬೀದಿ ನಾಟಕಗಳನ್ನು ಕಟ್ಟಿ ಕೊಟ್ಟಿದ್ದಾರೆ. 30ಕ್ಕೂ ಹೆಚ್ಚು ಪೂರ್ಣಪ್ರಮಾಣದ ನಾಟಕಗಳನ್ನು ರಚಿಸಿದ್ದು, 20ಕ್ಕೂ ಹೆಚ್ಚು ಪ್ರಿಸೀನಿಯಂ ನಾಟಕಗಳನ್ನು ನಿರ್ದೇಶಿಸಿದ್ದಾರೆ.

    ಐದು ವರ್ಷಗಳ ಕಾಲ ‘ರಂಗಭೂಮಿ ವಿಶ್ಲೇಷಣೆ’ ಎನ್ನುವ ರಂಗ ಪತ್ರಿಕೆಯ ಸಂಪಾದಕರಾಗಿ ರಂಗಚಟುವಟಿಕೆಗಳನ್ನು ದಾಖಲಿಸಿದ್ದ ಯಡಹಳ್ಳಿಯವರು ಪ್ರೀಲಾನ್ಸ್ ಪತ್ರಕರ್ತರಾಗಿಯೂ, ಕ್ರಿಯಾಶೀಲವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಟಿ.ವಿ. ಸುದ್ದಿ ವಾಹಿನಿಗಳಲ್ಲಿ ಪ್ಯಾನಲಿಸ್ಟ್ ಆಗಿ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಆಗುಹೋಗುಗಳ ಕುರಿತು ವಿಶ್ಲೇಷಣೆ ಮಾಡುತ್ತಾ ಬಂದಿದ್ದಾರೆ. ಇಂತಹ ಬಹುಮುಖ ಸಾಂಸ್ಕೃತಿಕ ಲೋಕದ ಪ್ರತಿಭಾನ್ವಿತರಿಗೆ ‘ಆರ್ಯಭಟ’ದಂತಹ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ದೊರಕಿದ್ದು ಸೂಕ್ತವಾಗಿದೆ. ಶಶಿಕಾಂತ ಯಡಹಳ್ಳಿಯವರಿಗೆ ಅಭಿನಂದನೆಗಳು.

    Share. Facebook Twitter Pinterest LinkedIn Tumblr WhatsApp Email
    Previous Articleಕಡಂದಲೆಯಲ್ಲಿ ಯಕ್ಷಶಿಕ್ಷಣ ನಾಟ್ಯ ತರಬೇತಿ ಅಭಿಯಾನ ಕಾರ್ಯಕ್ರಮ
    Next Article ‘ಕುವೆಂಪು ಸಿರಿಗನ್ನಡ ದತ್ತಿ’ ಹಾಗೂ ‘ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.