Author: roovari

ಮಂಗಳೂರು : ಶರಧಿ ಪ್ರತಿಷ್ಠಾನ (ರಿ.) ಮಂಗಳೂರು ಆಯೋಜಿಸುವ ‘ಕಲಾಪರ್ಬ’ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳವನ್ನು ದಿನಾಂಕ 09ರಿಂದ 11 ಜನವರಿ 2026ರವರೆಗೆ ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ, ರಾಷ್ಟ್ರಮಟ್ಟದ ಛಾಯಚಿತ್ರ ಪ್ರದರ್ಶನ, ಶಿಲ್ಪಕಲಾ ಪ್ರದರ್ಶನ, ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, ಕಲಾ ವಿಚಾರಗೋಷ್ಠಿ, ಸಂಗೀತ, ಭಾವಚಿತ್ರ ಮತ್ತು ವ್ಯಂಗ್ಯ ಚಿತ್ರ ರಚನೆ ಪ್ರದರ್ಶನ ನಡೆಯಲಿದೆ.

Read More

ನೃತ್ಯ ಕಲಾವಿದ/ಕಲಾವಿದೆಯಾಗಿ ಕಲಾಮಾತೆಯ ಸೇವಾ ಕೈಂಕರ್ಯದಲ್ಲಿ ನಿರಂತರವಾಗಿ ಮುಂದುವರೆದು, ನಟರಾಜನ ದಯೆಗೆ ಪಾತ್ರರಾಗಿ, ಕಲಾ ರಸಿಕರ ಮನದಲ್ಲಿ ಸದಾ ನೆಲೆಗೊಂಡು ಅತ್ಯುತ್ತಮ ಸ್ಥಾನ ಗಳಿಸಿಕೊಳ್ಳುವುದು ಒಂದು ದೊಡ್ಡ ಸಾಧನೆ. ಈ ಸಾಧನೆಗೆ ಪರಿಪಕ್ವ ಮನಸ್ಸು ಮತ್ತು ಶಾಂತಚಿತ್ತದಿಂದ ಎಲ್ಲವನ್ನೂ ಒಂದೇ ರೀತಿಯಲ್ಲಿ ಒಪ್ಪಿಕೊಳ್ಳುವ – ಅಪ್ಪಿಕೊಳ್ಳುವ ಗುಣವು ಬೇಕೇ ಬೇಕು. ಧನಾತ್ಮಕ ಮತ್ತು ಮುಖ್ಯವಾಗಿ ಋಣಾತ್ಮಕ ಅಂಶಗಳನ್ನೂ ಪಡೆದುಕೊಂಡು, ಅದನ್ನು ಮನದಲ್ಲಿ ಅಳೆದು ತೂಗಿ, ತಪ್ಪುಗಳಿದ್ದರೆ ತಿದ್ದಿಕೊಂಡು ಮುಂದಿನ ದಿನಗಳಲ್ಲಿ ಹೊಸ ಬದಲಾವಣೆಯನ್ನು ಸೃಷ್ಟಿಸಿ ಎಲ್ಲರಿಂದ ಸೈ ಅನ್ನಿಸಿಕೊಳ್ಳಲು ಬಹಳ ಕಾಲ ಹಿಡಿಯುತ್ತದೆ. ಈ ಮಧ್ಯೆ ಅದೆಷ್ಟೋ ಅಡಚಣೆಗಳು, ಕಠೋರ ಮಾತುಗಳು, ಮೂಕ ರೋದನೆ ಮತ್ತು ಕೆಲವೊಮ್ಮೆ ಪ್ರತಿಭಟನೆ ಹೀಗೆ ಹಲವಾರು ಆಪತ್ತನ್ನು ಎದುರಿಸುತ್ತಾ, ಒಳ್ಳೆಯದನ್ನು ಸ್ವೀಕರಿಸಿ, ಖುಷಿ ಪಟ್ಟುಕೊಳ್ಳುತ್ತಾ ಸಾಗುತ್ತದೆ ಕಲಾ ಬದುಕು. ನಾವು ಮಾಡುವ ಕೆಲಸಗಳು ಎಲ್ಲರನ್ನೂ ತಲುಪುವುದಿಲ್ಲ, ತಲುಪಿದರೂ ಸಹಜವಾದ ಬದಲಾವಣೆಯನ್ನು ಅವರವರ ದೃಷ್ಟಿಕೋನದಲ್ಲಿ ಉಂಟುಮಾಡಿ ನಮ್ಮನ್ನು ಕ್ರಿಯಾತ್ಮವಾಗಿ ಬೆಳೆಸುತ್ತದೆ. ಇಂತಹ ಕಲಾವಿದ/ಕಲಾವಿದೆಯರು ನಮ್ಮ ನಡುವೆ ಹಲವರಿದ್ದಾರೆ.…

Read More

ಹಾಸನ : ಪ್ರತಿಮಾ ಟ್ರಸ್ಟ್ (ರಿ.) ಚನ್ನರಾಯಪಟ್ಟಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಉಮೇಶ್ ತೆಂಕನಹಳ್ಳಿಯವರ ರಚನೆ ಮತ್ತು ನಿರ್ದೇಶನದಲ್ಲಿ ‘ನಮಗೂ ಬದುಕು ಕೊಡಿ’ ಪರಿಸರ ಸ್ನೇಹಿ ನಾಟಕ ಪ್ರದರ್ಶನವನ್ನು ದಿನಾಂಕ 06 ಜನವರಿ 2026ರಂದು ಬೆಳಿಗ್ಗೆ 10-00 ಗಂಟೆಗೆ ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಹಾಸನ ಶ್ರೀ ತಣ್ಣೀರುಹಳ್ಳ ಮಠದ ಮಠಾಧೀಶರಾದ ಶ್ರೀ ವಿಜಯಕುಮಾರಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಹಾಸನ ಜಿಲ್ಲಾಧಿಕಾರಿ ಶ್ರೀಮತಿ ಕೆ.ಎಸ್. ಲತಾ ಕುಮಾರಿ ಇವರು ಉದ್ಘಾಟನೆ ಮಾಡಲಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಂದ ಈ ನಾಟಕ ಪ್ರಸ್ತುತಗೊಳ್ಳಲಿದೆ.

Read More

ಬಂಟ್ವಾಳ : ಕಥಾಬಿಂದು ಪ್ರಕಾಶನ ಮಂಗಳೂರು, ಭಯಂಕೇಶ್ವರ ದೇವಸ್ಥಾನ ಪಾಣೆಮಂಗಳೂರು ನರಿಕೊಂಬು, ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದ ಸಂಯುಕ್ತ ಆಶ್ರಯದಲ್ಲಿ ಪಾಣೆಮಂಗಳೂರಿನ ಭಯಂಕೇಶ್ವರ ದೇವಸ್ಥಾನದಲ್ಲಿ ದಿನಾಂಕ 04 ಜನವರಿ 2025ರಂದು ಕಥಾಬಿಂದು ಸಾಹಿತ್ಯ ಸಂಭ್ರಮ 2026 ನೆರವೇರಲಿದೆ. ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಲೇಖಕರ 10 ಕೃತಿಗಳ ಅನಾವರಣ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ‘ಕನ್ನಡ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಮಂದಿ ಸಾಧಕರಿಗೆ ಕನ್ನಡ ರತ್ನ ರಾಜ್ಯ ಪ್ರಶಸ್ತಿಯನ್ನು ಪಿ.ವಿ. ಪ್ರದೀಪ್ ಕುಮಾರ್ ಪ್ರಧಾನ ಮಾಡಲಿರುವರು. ಕ.ಸಾ.ಪ. ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಭಯಂಕೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ರಘುನಾಥ ಸೋಮಯಾಜಿ ಉದ್ಘಾಟಿಸಿಸುವರು. ಯುಗ ಪುರುಷ ಮಾಸ ಪತ್ರಿಕೆಯ ಸಂಪಾದಕ ಭುವನಾಭಿರಾಮ…

Read More

ಮಂಗಳೂರು : ಬೈಕಾಡಿ ಪ್ರತಿಷ್ಠಾನ (ರಿ.) ಮಂಗಳೂರು ಇದರ ವತಿಯಿಂದ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 05 ಜನವರಿ 2026ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ. ಹಿರಿಯ ಜಾನಪದ ಕಲಾವಿದರಾದ ಶ್ರೀ ರಮೇಶ್ ಕಲ್ಮಾಡಿ ಇವರಿಗೆ ಲೇಖಕರು ಮತ್ತು ಜನಪದ ವಿದ್ವಾಂಸರಾದ ಡಾ. ಕೆ. ಚಿನ್ನಪ್ಪ ಗೌಡ ಇವರು ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ನೀಡಿ ಗೌರವಿಸಲಿದ್ದಾರೆ. ಹಿರಿಯ ಭರತನಾಟ್ಯ ಗುರುಗಳಾದ ಶ್ರೀ ಮೋಹನ್ ಕುಮಾರ್ ಉಳ್ಳಾಲ ಇವರಿಗೆ ‘ಜೀವಮಾನ ಸಾಧನಾ ಪುರಸ್ಕಾರ’ ಮತ್ತು ಕಲಾವಿದ ಅರವಿಂದ ಕುಡ್ಲ ಇವರಿಗೆ ‘ಯುವ ಪುರಸ್ಕಾರ’ ಪ್ರದಾನ ಮಾಡಲಾಗುವುದು. ನೃತ್ಯ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ನೃತ್ಯ ಗುರುಗಳ ಭಾವಚಿತ್ರ ಮತ್ತು ವಿವರವನ್ನೊಳಗೊಂಡ ಕ್ಯಾಲೆಂಡರ್ ಇದೇ ವೇದಿಕೆಯಲ್ಲಿ ಡಾ. ಎಂ. ಮೋಹನ ಆಳ್ವ ಇವರ ಅಮೃತಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ವೇದಿಕೆಯಲ್ಲಿ ಗೌರವಾನ್ವಿತರಾದ ಕಾರ್ಕಳ ವಿಧಾನ ಸಭಾ ಕ್ಷೇತ್ರ ಶಾಸಕರಾದ ಸುನಿಲ್ ಕುಮಾರ್ ವಿ., ಕರ್ನಾಟಕ ವಿಧಾನ ಪರಿಷತ್ ಮಾಜಿ…

Read More

ಸುಳ್ಯ : ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವತಿಯಿಂದ ‘ಸುನಾದ ಸಂಗೀತೋತ್ಸವ’ವು ದಿನಾಂಕ 28 ಡಿಸೆಂಬರ್ 2025ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಆವರಣದಲ್ಲಿ ನಡೆಯಿತು. ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ ಕಾರ್ಯಕ್ರಮ ಉದ್ಘಾಟಿಸಿದರು. ಸುನಾದ ಸಂಗೀತ ಶಾಲೆಯ ಅಧ್ಯಕ್ಷ ಕಾಂಚನ ಈಶ್ವರ ಭಟ್, ವಿಜಯಶ್ರೀ, ಶಶಿಕಲಾ ಹರಪ್ರಸಾದ್, ವಿದ್ವಾನ್ ವೇಣುಗೋಪಾಲ್, ಶ್ಯಾನುಭೋಗ್ ಮಹಾಬಲೇಶ್ವರ ಭೀರ್ಮುಕಜೆ ಉಪಸ್ಥಿತರಿದ್ದರು. ಬಳಿಕ ಗುರುವಂದನೆ, ಸುನಾದ ಶಾಲಾ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ನಡೆಯಿತು. ಮಧ್ಯಾಹ್ನ ‘ಪಂಚರತ್ನ ಗೋಷ್ಠಿ ಗಾಯನ’ ಪ್ರಸ್ತುತಿ ಹಾಗೂ ಸಂಜೆ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಸಂಗೀತಾಸಕ್ತರ ಮನ ಗೆದ್ದಿತು. ವಿದ್ವಾನ್ ಹೆಮ್ಮಿಗೆ ಎಸ್. ಪ್ರಶಾಂತ್ ಇವರ ಹಾಡುಗಾರಿಕೆ ಮನಸೂರೆಗೊಂಡಿತು. ವಯೋಲಿನ್‌ನಲ್ಲಿ ವಿದ್ವಾನ್ ವೇಣುಗೋಪಾಲ ಶಾನುಭೋಗ್‌, ಮೃದಂಗ ವಿದ್ವಾನ್ ಕಾಂಚನ ಎ. ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ತುಮಕೂರು ಬಿ. ಶಶಿಶಂಕರ್ ಸಹಕರಿಸಿದರು.

Read More

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 04 ಜನವರಿ 2026ರಂದು ಬೆಳಗ್ಗೆ 9-00 ಗಂಟೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 9-30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್‌ಬಿರ್ರ್ ಶಾಲಾ ಆವರಣದಿಂದ ಪ್ರಾರಂಭವಾಗುವ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎಂ.ಎಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸುವರು. ಗಂಟೆ 10-15ಕ್ಕೆ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸಮ್ಮೇಳನ ಉದ್ಘಾಟಿಸಲಿದ್ದು, ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ವಿವಿಧ ಅಕಾಡೆಮಿಗಳ ಅಧ್ಯಕ್ಷರು ಭಾಗವಹಿಸುವರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶಮೀಮಾ ಕುತ್ತಾರ್ ಇವರ ‘ಪಡಿಞ್ಞಾರ್ರೋ ಪೂ’ (ಕಥಾ ಸಂಕಲನ), ಹಸೀನ ಮಲ್ನಾಡ್ ಇವರ ‘ಮಿನ್ನಾಂಪುಲು’ (ಹನಿಗವನ ಸಂಕಲನ), ಎನ್.ಎಂ. ಹನೀಫ್ ನಂದರಬೆಟ್ಟು ಇವರ ‘ಸಂಪುಕಾತ್’ (ಕವನ ಸಂಕಲನ). ಬಶೀರ್…

Read More

ಪುಟ್ಟಮಕ್ಕಳಿಗೆ ಸೂಕ್ತ ನಾಟ್ಯಶಿಕ್ಷಣ ನೀಡಿ ಅವರನ್ನು ರಂಗದ ಮೇಲೆ ಉತ್ತಮವಾಗಿ ಪ್ರದರ್ಶನ ನೀಡುವಂತೆ ಸುಸಜ್ಜಿತಗೊಳಿಸುವುದು ಸುಲಭದ ಕೆಲಸವಲ್ಲ. ಅಂಥ ಸ್ತುತ್ಯಾರ್ಹ ತರಬೇತಿ ನೀಡಿ, ತಮ್ಮ ಸುಮನೋಹರ ನೃತ್ಯ ಸಂಯೋಜನೆಯಲ್ಲಿ ಉದಯೋನ್ಮುಖ ಕಲಾವಿದರನ್ನು ಕಲಾಶಿಲ್ಪವಾಗಿಸಿ ಜನಮಾನಸವನ್ನು ಗೆಲ್ಲುವಂಥ ಒಂದು ಸುಂದರ ನೃತ್ಯಪ್ರದರ್ಶನವನ್ನು ನೀಡಿ ಯಶಸ್ವಿಯಾದವರು ಹೆಸರಾಂತ ಉತ್ತಮ ನೃತ್ಯಗುರು ಹಾಗೂ ಮುಖ್ಯವಾಗಿ ಕಲಾವಿದೆಯಾಗಿ ಖ್ಯಾತರಾಗಿರುವ ವಿದುಷಿ ಎ. ಕುಸುಮಾ. ‘ನರ್ತನ ಶ್ರುತಿ’ – ಶೀರ್ಷಿಕೆಯಲ್ಲಿ ‘ಶರ್ವಾಣಿ ನಾಟ್ಯ ಕಲಾಕೂಟ ಅಕಾಡೆಮಿ ಆಫ್ ಆರ್ಟ್ಸ್’ ದಿನಾಂಕ 31 ಡಿಸೆಂಬರ್ 2025ರಂದು ನಯನ ರಂಗಮಂದಿರದಲ್ಲಿ ಶಾಲೆಯ ದಶಮಾನೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿದ್ದು ಮೆಚ್ಚುಗೆ ಪಡೆಯಿತು. ವಿದುಷಿ ಕುಸುಮಾ ಇವರ ನೇತೃತ್ವದಲ್ಲಿ ನೃತ್ಯ ಪ್ರಸ್ತುತಿಗಳು ಜನರಂಜಿಸಿ ಕಣ್ಮನಕ್ಕೆ ಆನಂದವನ್ನು ನೀಡಿದವು. ಉದಯೋನ್ಮುಖ ಪುಟ್ಟ ಕಲಾವಿದೆಯರ ಅಂಗಶುದ್ಧತೆ, ಪರಿಶ್ರಮ ಮತ್ತು ಬದ್ಧತೆಯ ನೃತ್ಯಾಭ್ಯಾಸ ಎದ್ದು ಕಂಡಿತು. ಪುಷ್ಪಾಂಜಲಿಯೊಂದಿಗೆ ನೃತ್ತ ನಮನಗಳ ಮೂಲಕ ಪ್ರಥಮ ವಂದನೆ ಹಾಗೂ ಕೃತಜ್ಞತೆ ಸಲ್ಲಿಸಿ, ಮುಂದೆ ಹಲವಾರು ದೈವೀಕ ಕೃತಿಗಳನ್ನು ಬಹು ಸೊಗಸಾಗಿ ನಿರೂಪಿಸಿದರು.…

Read More

ಮೂಡುಬಿದಿರೆ : ಕನ್ನಡ ಸಂಘ ಕಾಂತಾವರದ ಐವತ್ತರ ಸಂಭ್ರಮದ ದ್ವಿತೀಯ ಕಾರ್ಯಕ್ರಮದ ಅಂಗವಾಗಿ ದಿನಾಂಕ 28 ಡಿಸೆಂಬರ್ 2025ರಂದು ಕಾಂತಾವರ ಕನ್ನಡ ಭವನದಲ್ಲಿ ನಾಡಿನ ಎಂಟು ಮಂದಿ ಸಾಧಕರಿಗೆ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹಿರಿಯ ಸಾಹಿತಿ ಮೋಹನ ಕುಂಟಾರ್ ಕಾಸರಗೋಡು “ನಮ್ಮ ಭಾಷೆ, ಸಂಸ್ಕೃತಿ ಉಳಿವಿಗೆ ಕನ್ನಡ ಪರ ಕೆಲಸಗಳು ನಿರಂತರವಾಗಿ ನಡೆಯುತ್ತಿರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಚಟುವಟಿಕೆಗಳು ಕುಂಠಿತವಾಗುತ್ತಿರುವುದು ಖೇದಕರ ಸಂಗತಿ. ಆದರೆ ಡಾ. ನಾ. ಮೊಗಸಾಲೆಯವರು ಕಾಂತಾವರ ಎಂಬ ಸಣ್ಣ ಹಳ್ಳಿಯಲ್ಲಿ ಕನ್ನಡ ಸಂಘವನ್ನು ಕಟ್ಟಿ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಕನ್ನಡದ ಕಂಪನ್ನು ನಾಡಿನ ಉದ್ದಕ್ಕು ಪಸರಿಸುತ್ತಿರುವುದು ಶ್ಲಾಘನಾರ್ಹ” ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಧರ್ಮದರ್ಶಿ ಹರಿಕೃಷ್ಣ ಪುನರೂರು “ಕಾಂತಾವರದಲ್ಲಿ ಕನ್ನಡ ಸಂಘವನ್ನು ಕಟ್ಟಿ ಬೆಳೆಸಿದ ಡಾ. ಮೊಗಸಾಲೆಯವರು ಜನರಲ್ಲಿ ಕನ್ನಡ ಪುಸ್ತಕದ ಪ್ರೀತಿ, ಓದುವ ಹವ್ಯಾಸವನ್ನು ಬೆಳೆಸಿ ಲೇಖಕರು, ಸಾಹಿತಿಗಳಿಗೆ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದಾರೆ” ಎಂದರು. ಮೊಗಸಾಲೆ…

Read More

ಕುಂದಾಪುರ : ಸಂಗೀತ ಭಾರತಿ ಟ್ರಸ್ಟ್ ಮತ್ತು ಕುಂದಾಪುರ ಭಂಡಾರ್‌ ಕರ್ಸ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ ‘ಶಿಶಿರ ಸಂಗೀತ ಮಹೋತ್ಸವ’ವು ದಿನಾಂಕ 28 ಡಿಸೆಂಬರ್ 2025ರಂದು ಕಾಲೇಜಿನ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಿತು. ದಿ. ಎ. ವೈಕುಂಠ ಹೆಬ್ಬಾರ್ ಹಾಗೂ ದಿ. ಅವಿನಾಶ್ ಹೆಬ್ಬಾರ್ ಸ್ಮರಣಾರ್ಥ ಏರ್ಪಡಿಸಿದ ಈ ಕಾರ್ಯಕ್ರಮವನ್ನು ಖ್ಯಾತ ಗಾಯಕರಾದ ಓಂಕಾರ್ ಹವಾಲ್ದಾರ್ ಮತ್ತು ಮಾನಸಿ ಶಾಸ್ತ್ರಿ ಬೆಂಗಳೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಗೀತ ಭಾರತಿ ಟ್ರಸ್ಟ್ ಅಧ್ಯಕ್ಷ ಕೆ. ಶ್ರೀಧರ ಕಾಮತ್, ಭಂಡಾರ್‌ ಕರ್ಸ್ ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು, ಸಂಗೀತ ಭಾರತಿ ಟ್ರಸ್ಟಿನ ಕಾರ್ಯದರ್ಶಿ ನಾರಾಯಣ ಕೆ., ಟ್ರಸ್ಟಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಡಾ. ಎಚ್.ಆರ್. ಹೆಬ್ಬಾರ್, ಡಾ. ಆದರ್ಶ ಹೆಬ್ಬಾರ್, ಸುಪ್ರಸನ್ನ ನಕ್ಕತ್ತಾಯ, ರೇಖಾ ಕಾರಂತ್ ಉಪಸ್ಥಿತರಿದ್ದರು. ಕಲಾವಿದರಾದ ಸಿತಾರ್ ವಾದಕ ಅರ್ಜುನ್ ಆನಂದ ಬೆಂಗಳೂರು, ತಬಲಾ ಕಲಾವಿದರಾದ ಸಾಗರ್‌ಭರತ್ ರಾಜ್ ಬೆಂಗಳೂರು, ವಿಘ್ನೇಶ್ ಕಾಮತ್‌ ಕೋಟೇಶ್ವರ, ಹಾರ್ಮೋನಿಯಮ್ ಕಲಾವಿದ…

Read More