Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಮಂಗಳೂರು ಇದರ ವತಿಯಿಂದ ಹೊಸಬೆಟ್ಟು ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು ಓದುಗರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 16 ನವೆಂಬರ್ 2025ರಂದು ನಡೆದ ಸಮಾರೋಪ ಸಮಾರಂಭದಲ್ಲಿ ನಿರೂಪಕ ಮತ್ತು ಹೆಚ್.ಪಿ.ಸಿ.ಎಲ್.ನ ನಿವೃತ್ತ ಹಿರಿಯ ಪ್ರಬಂಧಕ ಪ್ರಕಾಶ್ ಮಾತನಾಡಿ “ಪುಸ್ತಕ ವಾಚನದ ಅಭಿರುಚಿಯನ್ನು ಮರು ರೂಡಿಸಿಕೊಳ್ಳುವ ಮೂಲಕ ಜ್ಞಾನದಾಹಿಗಳಾಗಬೇಕು” ಎಂದರು. ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಮಾತನಾಡಿ “ಡಿಜಿಟಲ್ ಯುಗದಲ್ಲಿ ಪುಸ್ತಕ ಹಾಗೂ ಪತ್ರಿಕೆಗಳ ಪ್ರಸ್ತುತತೆಯನ್ನು ಓದುಗ ವರ್ಗ ಅರಿತುಕೊಳ್ಳಬೇಕು. ಗ್ರಂಥಾಲಯ ಪಿತಾಮಹರೆಂದು ಪ್ರಖ್ಯಾತರಾಗಿರುವ ಎಸ್.ಆರ್. ರಂಗನಾಥನ್ ಅವರ ಗ್ರಂಥಾಲಯದ ಪಂಚಸೂತ್ರಗಳು ಇಂದಿಗೂ ಪ್ರಸ್ತುತವಾಗಿದೆ” ಎಂದರು. ರಿಜೇಂಟ್ ಪಾರ್ಕ್ ಅಸೋಸಿಯೇಷನ್ನಿನ ಅಧ್ಯಕ್ಷ ವೈ.ಎಂ. ದೇವದಾಸ್ “ಗ್ರಂಥಾಲಯದ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಂಡಾಗ ಸುಂದರ ಸಮಾಜದ ನಿರ್ಮಾಣ ಸಾಧ್ಯ” ಎಂದರು. ಓದುಗ ಬಳಗದ ವಿನ್ಸಟ್ ಪಿಂಟೋ ಅವರು ಮಾತನಾಡಿ “ಗ್ರಂಥಾಲಯದ ಸುಸಜ್ಜಿತ ವಿಸ್ತರಣೆಗೆ ಸರ್ವರ ಸಹಾಯ…
ಮಂಗಳೂರು : ಕಲಾಸೂರ್ಯ ನೃತ್ಯಾಲಯ ಮಂಗಳೂರು ಆಯೋಜಿಸುತ್ತಿರುವ ‘ಕಲಾಭವ’ ಮಾಸಿಕ ನೃತ್ಯ ಸರಣಿ-04ರ ಕಾರ್ಯಕ್ರಮವು ದಿನಾಂಕ 09 ನವೆಂಬರ್ 2025ರಂದು ಮಂಗಳೂರಿನ ಸುಬ್ರಹ್ಮಣ್ಯ ಸದನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಕಲಾಸೂರ್ಯ ನೃತ್ಯಾಲಯದ ನೃತ್ಯಗುರು ವಿದುಷಿ ಶ್ರೀಮತಿ ಸೌಜನ್ಯ ವಿ. ಪಡುವೆಟ್ನಾಯ ಇವರ ಶಿಷ್ಯೆ ಕುಮಾರಿ ಸುಹಾನಿ ಭಂಡಾರಿ ಇವರ ಮೊದಲ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ ಕಲಾಸಕ್ತರ ಮನಸೂರೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಾ. ನಿರೀಕ್ಷಾ ಶೆಟ್ಟಿ ಇವರು “ಇಂದಿನ ಯುವ ಪೀಳಿಗೆ ತಮ್ಮ ಕಲಿಕೆಯ ಜೊತೆಗೆ ಇಂತಹ ಕಲೆಗಳ ಮೇಲೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಎಲ್ಲವನ್ನು ಒಟ್ಟಾಗಿ ಸಮದೂಗಿಸಲು ಕಲಿಯಬೇಕು” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕುಮಾರಿ ಶ್ರೇಯ ಭಾಪಟ್ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಮಾಸ್ಟರ್ ಶ್ಯಾಮ್ ಪಡುವೆಟ್ನಾಯ ಇವರ ಓಂಕಾರನಾದ, ಸೌಜನ್ಯ ಪಡುವೆಟ್ನಾಯ ಇವರ ಶಂಖನಾದ, ಕುಮಾರಿ ಸ್ಮಿತಾ ಇವರ ಪಂಚಾಂಗ ಪಠಣ, ಕುಮಾರಿ ದಶ್ಮಿತ ಇವರಿಂದ ಭರತನಾಟ್ಯದಲ್ಲಿ ಮಾರ್ಗ ಪದ್ಧತಿ ವಿಷಯ ಮಂಡನೆ ಹೆಚ್ಚಿನ ಮೆರುಗು ನೀಡಿತು.…
ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು (51) ದಿನಾಂಕ 19 ನವೆಂಬರ್ 2025ರಂದು ಹೃದಯ ಸ್ತಂಭನದಿಂದ ನಿಧನ ಹೊಂದಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯವರಾದ ಗೌಡರು ಪ್ರತಿಭಾನ್ವಿತ ಯಕ್ಷಗಾನ ಕಲಾವಿದರಾಗಿದ್ದು, ಶಿವರಾಜಪುರ, ಮೇಗರವಳ್ಳಿ, ಮಡಾಮಕ್ಕಿ, ಅಮೃತೇಶ್ವರೀ, ಮಂದಾರ್ತಿ ಮೇಳಗಳಲ್ಲಿ ಸುಮಾರು ಮೂರು ದಶಕಗಳಿಂದ ಕಲಾಸೇವೆ ಮಾಡುತ್ತಾ ಬಂದಿದ್ದರು. ಪೌರಾಣಿಕ ಪುರುಷ ಪಾತ್ರಗಳನ್ನು ಸಮರ್ಥವಾಗಿ ರಂಗದಲ್ಲಿ ಪ್ರಸ್ತುತಗೊಳಿಸುವ ಕಲಾಸಿದ್ಧಿ ಪಡೆದಿದ್ದರು. ಅಂತ್ಯ ಸಂಸ್ಕಾರ ಇಂದು ಶೃಂಗೇರಿ ಸನಿಹದ ನೆಮ್ಮಾರು ಗ್ರಾಮದ ಬುಕ್ಡಿಬೖಲಿನಲ್ಲಿ ಜರಗಲಿದೆ.
ಮಂಗಳೂರು : ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ವೇದಿಕೆ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಜಂಟಿಯಾಗಿ ಆಯೋಜಿಸುವ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 23 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ 2025’ಕ್ಕೆ ಯಕ್ಷಗಾನ ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಆಯ್ಕೆಯಾಗಿದ್ದು, ಪ್ರಶಸ್ತಿಯು ಸನ್ಮಾನ ಪತ್ರ ಮತ್ತು ರೂ.25,000/- ನಗದು ಒಳಗೊಂಡಿದೆ. ಹಿರಿಯ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ವಿದ್ವಾಂಸ ಡಾ. ಪ್ರಭಾಕರ ಜೋಶಿ ಸಂಸ್ಮರಣೆ ಮಾಡುವರು, ಮುಖ್ಯ ಅತಿಥಿಗಳಾಗಿ ಮಂಗಳೂರು ಬಸ್ ಮಾಲಿಕರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಶೀಲ ಅಡ್ಯಂತಾಯ, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಂಜೆ 6-00 ಗಂಟೆಗೆ ‘ಅಂಗದ…
ಬೆಂಗಳೂರು : ಜಂಗಮ ಕಲೆಕ್ಟಿವ್ ಬೆಂಗಳೂರು ಇವರು ಪ್ರಸ್ತುತ ಪಡಿಸುವ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕ ಪ್ರದರ್ಶನವನ್ನು ದಿನಾಂಕ 22 ನವೆಂಬರ್ 2025ರಂದು ಸಂಜೆ 3-30 ಮತ್ತು 7-30 ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ಆಯೋಜಿಸಲಾಗಿದೆ. ಪಠ್ಯ ಆಕರ : ಎನ್.ಕೆ. ಹನುಮಂತಯ್ಯ, ಚಂದ್ರಶೇಕರ್ ಕೆ., ರಚನೆ, ವಿನ್ಯಾಸ, ನಿರ್ದೇಶನ : ಲಕ್ಷ್ಮಣ್ ಕೆ.ಪಿ. ಮತ್ತು ಡ್ರಮಟರ್ಗ್ : ವಿ.ಎಲ್. ನರಸಿಂಹಮೂರ್ತಿ. ಪ್ರದರ್ಶನ ಪಠ್ಯ ವಿನ್ಯಾಸ ಹಾಗೂ ನಟನೆ ಮರಿಯಮ್ಮ ಚೂಡಿ, ಚಂದ್ರಶೇಕರ್ ಕೆ., ಶ್ವೇತಾರಾಣಿ ಹೆಚ್.ಕೆ., ಭರತ್ ಡಿಂಗ್ರಿ ಇವರಿಂದ ಹಾಗೂ ಮಂಜು ನಾರಾಯಣ್ ಬೆಳಕಿನ ವಿನ್ಯಾಸ ಮಾಡಿದ್ದಾರೆ. ‘ಗುರುತು’ ಅನ್ನುವುದು ಕೆಲವರಿಗೆ ಹೆಮ್ಮೆಯಾದರೆ, ಕೆಲವರಿಗದು ಅಸಹ್ಯ, ಹಿಂಸೆ, ಜೀವನದ್ದುದ್ದಕ್ಕೂ ಹೊತ್ತು ತಿರುಗಬೇಕಾದ ಹೆಣಭಾರದ ಚಾಕರಿ. ಹಲವು ಬಾರಿ ‘ಉಳಿವಿಗಾಗಿ’ ಗುರುತುಗಳನ್ನು ಮುಚ್ಚಿಡುತ್ತಾ ಸಾಗುವುದೇ ‘ಬದುಕು’ ಅನ್ನಿಸಿಕೊಂಡು ಹರಿಯುತ್ತಾ ಹಗುರಾಗುವುದು ಸಾಗದ ದಾರಿಯಾಗಿ ಕಂಡು ದಣಿವಾಗುತ್ತದೆ. ದಣಿವಾಗುತ್ತದೆ ಎಂಬ ಕಾರಣಕ್ಕೆ ಹಾರಾಡುವ ಬಯಕೆಯನ್ನು ಬಿಡುವಂತೆಯೂ ಇರುವುದಿಲ್ಲ. ಕತ್ತಲ ದಾರಿಯಲ್ಲಿ ಮಿಂಚುಹುಳುಗಳಿಗಾಗಿ…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡಲಾಗುವ ‘ಗೌರವ ಪ್ರಶಸ್ತಿ 2025’ ಮತ್ತು ‘ಪುಸ್ತಕ ಬಹುಮಾನ 2025’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನ- 2025 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2025ರ ಕ್ಯಾಲೆಂಡರ್ ವರ್ಷದಲ್ಲಿ (2025 ಜನವರಿ 1ರಿಂದ ಡಿಸೆಂಬರ್ 31) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ/ ವಿಮರ್ಶೆ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ರೂ.25,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು ಒಳಗೊಂಡಿದೆ. ಗೌರವ ಪ್ರಶಸ್ತಿ-2025 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನಲ್ಲಿ 1. ಕೊಂಕಣಿ ಸಾಹಿತ್ಯ, 2. ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) 3. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ…
ಮಂಗಳೂರು : ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಇವರು ಕಳೆದ 9 ವರ್ಷಗಳಿಂದ ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ ಯಕ್ಷ ಬಳಗವು ಕೊಡಮಾಡುವ ‘ಕದ್ರಿ ವಿಷ್ಣು ಪ್ರಶಸ್ತಿ’ಯನ್ನು ದಿನಾಂಕ 17 ನವೆಂಬರ್ 2025ರಂದು ಪ್ರದಾನಿಸಿದರು. 27 ವರ್ಷಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆ ಪಡೆಯದೆ ದಾಖಲೆ ಮಾಡಿರುವ ಅಪೂರ್ವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಇವರಿಗೆ ‘ಕದ್ರಿ ವಿಷ್ಣು ಪ್ರಶಸ್ತಿ-2025’ ನೀಡಿ ಗೌರವಿಸಲಾಯಿತು. ಅಭಿನಂದನಾ ಭಾಷಣ ಮಾಡಿದ ಯಕ್ಷ ಬಳಗದ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿಯವರು “ರವಿಶಂಕರ್ ಇವರು, ಹಾಸ್ಯ ರತ್ನ ನಯನ ಕುಮಾರ್, ಉಂಡೆಮನೆ ಶ್ರೀಕೃಷ್ಣ ಭಟ್ ಇವರಿಂದ ಯಕ್ಷ ಶಿಕ್ಷಣ ಪಡೆದು ಕಟೀಲು ಮೇಳಕ್ಕೆ ಸೇರಿದ ಮೂರು ವರ್ಷದಲ್ಲೇ ಪ್ರಧಾನ ಹಾಸ್ಯಗಾರರಾಗಿ ಮುನ್ನಡೆದವರು” ಎಂದು ಹೇಳಿದರು. ಕದ್ರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ…
ಮಂಗಳೂರು : ಸನಾತನ ನಾಟ್ಯಾಲಯದ ನೃತ್ಯ ಗುರು ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆ ನಾಟ್ಯ ವಿದುಷಿ ಕುಮಾರಿ ಅಮೃತಾ ವಿ. ಇವರ ಭರತನಾಟ್ಯ ರಂಗ ಪ್ರವೇಶವು ದಿನಾಂಕ 22 ನವೆಂಬರ್ 2025ರ ಶನಿವಾರ ಸಂಜೆ ಗಂಟೆ 5-30ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ದೀಪ ಬೆಳಗಿಸಿ ಉದ್ಗಾಟಿಸುವ ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಮತ್ತು ಹಿರಿಯ ನೃತ್ಯ ಗುರು ಹಾಗೂ ವಿಮರ್ಶಕಿ ವಿದುಷಿ ಪ್ರತಿಭಾ ಎಂ.ಎಲ್. ಸಾಮಗ ಭಾಗವಹಿಸಲಿದ್ದಾರೆ. ಶ್ರೀಯುತ ವಾಸುದೇವ್ ಪಿ. ಮತ್ತು ಶ್ರೀಮತಿ ರೂಪ ವಾಸುದೇವ್ ಇವರ ಪುತ್ರಿ ಅಮೃತ ಬಿ.ಇ. ಪದವೀಧರೆಯಾಗಿದ್ದು, ಭರತನಾಟ್ಯದ ವಿದ್ವತ್ ಪರೀಕ್ಷೆಯನ್ನು ಅತ್ಯುನ್ನತ ಅಂಕ ದೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಅನೇಕ ಪ್ರಮುಖ ವೇದಿಕೆಗಳಲ್ಲಿ ಏಕಾರ್ಥ ನೃತ್ಯ ಪ್ರದರ್ಶನ ನೀಡಿರುವ ಅಮೃತ ತನ್ನ ಗುರುಗಳೊಂದಿಗೆ ರಾಜ್ಯ ಮತ್ತು ರಾಷ್ಟ್ರದಾದ್ಯಂತ ನೃತ್ಯ…
ಬೆಂಗಳೂರು : ವರ್ಷನಿಧಿ ಪ್ರಕಾಶನ ಇದರ ವತಿಯಿಂದ ಕೃತಿಗಳ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 22 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರು ಜಯನಗರದ 4ನೇ ಬ್ಲಾಕ್ ನಲ್ಲಿರುವ ಭಾರತ್ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಡಾ. ನಟರಾಜ್ ತಲಘಟ್ಟಪುರ ಇವರ ‘ಬಯಲರೂಪ’ ಐತಿಹಾಸಿಕ ನಾಟಕ, ‘ಬೊಗಸೆ ತುಂಬ ಮಣ್ಣು’ ನಾಟಕ, ‘ಮಿಡಿನಾಗರಗಳ ನಡುವೆ’ ಕಥಾ ಸಂಕಲನ, ‘ಬಣ್ಣ ಮೆಚ್ಚಿದವರು’ ನಾಟಕದ ಇಂಗ್ಲೀಷ್ ಅನುವಾದ, ಡಾ ರೇಖಾ ಕೌಶಿಕ್ ಪಿ.ಆರ್. ಇವರ ‘ಅಡ್ಮೈರರ್ಸ್ ಆಫ್ ಕಲರ್’ ಹಿಂದಿ ಅನುವಾದ ಹಾಗೂ ಪ್ರೊ. ಷಾಕಿರಾ ಖಾನಂ ಇವರ ‘ರಂಗೋ ಕೆ ಉಪಾಸಕ್’ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಡೋಜ ಚಂದ್ರಶೇಖರ ಕಂಬಾರ ಇವರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಚಿತ್ರಕಲಾ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್ ಇವರು ಕೃತಿಗಳ ಲೋಕಾರ್ಪಣೆ ಮಾಡಲಿದ್ದಾರೆ.
ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯ ಸರಣಿ-ಮಾಲಿಕೆ 23ರ ‘ನಾಟ್ಯಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 21 ನವೆಂಬರ್ 2025ರಂದು ಸಂಜೆ 5-30 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ನಿವೃತ್ತ ಪ್ರೊಫೆಸರ್ ಡಾ. ಕೆ.ಎಂ. ಉಷಾ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉತ್ತರ ಕನ್ನಡದ ವಿದುಷಿ ಚಿತ್ರಲೇಖಾ ಬೋಳಾರ ಮತ್ತು ವಿದುಷಿ ಅನಯ ವಸುಧಾ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.