Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಕರಾವಳಿ ಉತ್ಸವ – 2025 ಅಂಗವಾಗಿ ದಿನಾಂಕ 21 ಡಿಸೆಂಬರ್ 2025ರಂದು ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಜರಗಿತು. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದ ಆಕಾಶವಾಣಿ ಮತ್ತು ದೂರದರ್ಶನ ಖ್ಯಾತಿಯ ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡವು ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಿತು. ಯಕ್ಷಗಾನ ರಂಗದ ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ಭಾಗವತ ಹರೀಶ ಶೆಟ್ಟಿ ಸೂಡ ಇವರ ಹಾಡುಗಾರಿಕೆಗೆ ವಿಕಾಸ್ ರಾವ್ ಕೆರೆಕಾಡ್, ಶ್ರೀಶ ರಾವ್ ನಿಡ್ಲೆ ಮತ್ತು ಕೀರ್ತನ್ ಹಿಮ್ಮೇಳದಲ್ಲಿ ಸಹಕರಿಸಿದರು. ಜಿಲ್ಲಾಡಳಿತದ ಪರವಾಗಿ ದ.ಕ. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಇವರು ಕರ್ನಾಟಕ…
ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ತುಮಕೂರಿನ ಜಾನಪದ ವಿದ್ವಾಂಸರಾದ ಡಾ. ಚಿಕ್ಕಣ್ಣ ಯಣ್ಣೆಕಟ್ಟೆ ಇವರು ‘ಡಾ. ಜೀ.ಶಂ.ಪ. ತಜ್ಞ ಪ್ರಶಸ್ತಿ’ ಹಾಗೂ ಕಲಬುರಗಿಯ ಡಾ. ಎಚ್.ಟಿ. ಪೋತೆ ಇವರು ‘ಡಾ. ಬಿ.ಎಸ್. ಗದ್ದಗಿಮಠ ತಜ್ಞ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹಾಗೂ ರಿಜಿಸ್ಟ್ರಾರ್ ಎನ್. ನಮ್ರತಾ ಇವರು ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ‘ಜಾನಪದ ತಜ್ಞ ಪ್ರಶಸ್ತಿ’ಯು ತಲಾ ರೂ.50,000/- ನಗದು ಒಳಗೊಂಡಿದೆ. ‘ವಾರ್ಷಿಕ ಗೌರವ ಪ್ರಶಸ್ತಿ’ಗೆ 31 ಜಿಲ್ಲೆಗಳಿಂದ 30 ಕಲಾವಿದರನ್ನು ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯು ತಲಾ ರೂ.25,000/- ನಗದು ಒಳಗೊಂಡಿದೆ. ಪ್ರಶಸ್ತಿ ಮೊತ್ತದ ಜತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುವುದು. ಗೌರವ ಪ್ರಶಸ್ತಿಗೆ ಬೆಂಗಳೂರಿನ ಸಿದ್ದರಾಜು (ನೀಲಗಾರರ ಪದ ಮತ್ತು ತಂಬೂರಿ ಪದ), ಬೆಂಗಳೂರು ಗ್ರಾಮಾಂತರದ ಬಚ್ಚಮ್ಮ (ಸೋಬಾನೆ ಪದ, ತತ್ವಪದ, ಸಂಪ್ರದಾಯ ಪದ), ರಾಮನಗರದ ಬಿ. ಸಿದ್ದರಾಜಯ್ಯ (ಜಾನಪದ ಗಾಯನ),…
ಮಂಗಳೂರು : ಶರಧಿ ಪ್ರತಿಷ್ಠಾನ (ರಿ.) ಮಂಗಳೂರು ಆಯೋಜಿಸುವ ‘ಕಲಾಪರ್ಬ’ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳದಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ಯನ್ನು ದಿನಾಂಕ 10 ಜನವರಿ 2026ರಂದು ಮಧ್ಯಾಹ್ನ 3-30ರಿಂದ 5-30ರವರೆಗೆ ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾಗಿದೆ. 2ರಿಂದ 4ನೇ ತರಗತಿ, 5ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ಹಾಗೂ ಕಾಲೇಜು ವಿಭಾಗ ಈ ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಾಳುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನದ ಜೊತೆ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೂ ಅಭಿನಂದನಾ ಪತ್ರ ಮತ್ತು ಪದಕ ನೀಡಲಾಗುವುದು. ಸ್ಪರ್ಧೆಯ ವಿಷಯ : 2ರಿಂದ 4ನೇ ತರಗತಿ : ಸೂರ್ಯೋದಯ, 5ರಿಂದ 7ನೇ ತರಗತಿ : ವನ್ಯಜೀವಿ, 8ರಿಂದ 10ನೇ ತರಗತಿ : ಪ್ರಕೃತಿ / ಸಂಸ್ಕೃತಿ, ಕಾಲೇಜು ವಿಭಾಗ : ತುಳುನಾಡಿನ / ಪದ್ಧತಿ ಭಾಗವಹಿಸಲಿರುವ ವಿದ್ಯಾರ್ಥಿಗಳು ಮಧ್ಯಾಹ್ನ ಗಂಟೆ 2-30ಕ್ಕೆ ಹಾಜರಿರಬೇಕು. ಶಾಲಾ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಡ್ರಾಯಿಂಗ್ ಶೀಟನ್ನು ನೀಡಲಾಗುವುದು ಉಳಿದ ಪರಿಕರಗಳನ್ನು ಸ್ಪರ್ಧಾಳುಗಳೇ…
ನೃತ್ಯಕ್ಷೇತ್ರದೊಳಗೆ ಇಂದು ಅನೇಕ ಆವಿಷ್ಕಾರಗಳು ನಡೆಯುತ್ತಿದ್ದು, ಹೊಸ ವಿಚಾರಗಳನ್ನು ಹೊತ್ತು ತರುವ ಕೆಲಸವನ್ನು ಅದೆಷ್ಟೋ ಕಲಾವಿದರು ಪ್ರಾಮಾಣಿಕವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಪ್ರಾಯೋಗಿಕವಾಗಿ ಮಂಡಿಸುವ ವಿಚಾರಗಳನ್ನು ಈ ರೀತಿಯಲ್ಲೂ ತಿಳಿಸಬಹುದಾ?! ಎಂದು ಕಲಾ ರಸಿಕರಲ್ಲಿ ಹೊಸದೊಂದು ಕಲ್ಪನೆ ಮೂಡುವ ರೀತಿಯಲ್ಲಿ ನೃತ್ಯ ಕಲಾಲೋಕ ಸಾಗುತ್ತಿದೆ. ಹೊಸ ವಿಚಾರಗಳನ್ನು ಪ್ರಾಯೋಗಿಕವಾಗಿ ಮುನ್ನಡೆಸುವಾಗ ಸೈದ್ಧಾಂತಿಕ ಜ್ಞಾನ ಮತ್ತು ಅದರ ಒಳಹರಿವು ನಮ್ಮಲ್ಲಿ ಉಂಟಾಗಲೇಬೇಕು. ಇದರಿಂದಲೇ ನೃತ್ಯ ಪ್ರದರ್ಶನಗಳು ಕಲಾ ರಸಿಕರ ಮನ ಮುಟ್ಟುವ ಮೂಲಕ ವೇದಿಕೆಯಲ್ಲಿ ಗೆದ್ದು ಬೀಗುತ್ತವೆ. ನಿರಂತರ ಓದು, ಕ್ರಿಯಾಶೀಲ ಚಿಂತನೆ ಮತ್ತು ಆಳವಾದ ಅಧ್ಯಯನಶೀಲ ಮನಸ್ಥಿತಿಯ ಗುರುಗಳು ಹಲವರಿದ್ದಾರೆ. ಈ ಸಾಲಿನಲ್ಲಿ ಗುರುತಿಸಿಕೊಂಡಿರುವ ಅಗ್ರಪಂಕ್ತಿಯ ನೃತ್ಯಗುರು ಕಲೈಮಾಮಣಿ ಡಾ. ಲಕ್ಷ್ಮೀ ರಾಮಸ್ವಾಮಿ. ಭರತನೃತ್ಯದ ಮೂಲ ನೆಲೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಇವರು ಹುಟ್ಟು ಹಾಕಿದ ನೃತ್ಯಸಂಸ್ಥೆ ಶ್ರೀ ಮುದ್ರಾಲಯವು 35 ವರುಷಗಳಿಂದ ಹಲವಾರು ನೃತ್ಯರೂಪಕಗಳನ್ನು, ಮಾರ್ಗಂ ಚೌಕಟ್ಟುಗಳನ್ನು ಕಲಾ ರಸಿಕರಿಗೆ ನೀಡಿರುತ್ತದೆ. ಶ್ರೀ ಮುದ್ರಾಲಯದ ಹೊಸ ಪ್ರಯತ್ನ ‘ಐಕ್ಯಂ’ ಎನ್ನುವ ಮನೋಚಿಂತನೆಯ…
ದಲಿತ – ಬಂಡಾಯ ಸಾಹಿತ್ಯವು ಹೊಸ ದಿಕ್ಕಿನತ್ತ ಹೊರಳಿದಾಗ ಹಸಿಹಸಿ ಅನುಭವ, ಪೂರ್ವ ನಿಯೋಜಿತ ಮಾದರಿ, ಏಕರೀತಿಯ ಘಟನಾವಳಿ, ಧ್ವನಿರಹಿತ ಭಾಷೆ, ವರದಿಗಾರಿಕೆಯ ಶೈಲಿ ಮತ್ತು ಸುಲಭ ಪರಿಹಾರಗಳನ್ನು ಮೀರಿ ಬದುಕಿನ ಆಳ ವಿಸ್ತಾರಗಳನ್ನು ಶೋಧಿಸುವ ಕವಿತೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರತೊಡಗಿದವು. ಹಿರಿಯ ಕವಯತ್ರಿ ಮಾಲತಿ ಪಟ್ಟಣಶೆಟ್ಟಿಯವರ ‘ಮೌನ ಕರಗುವ ಹೊತ್ತು’ (1999) ಅದಕ್ಕೆ ಒಂದು ನಿದರ್ಶನವಾಗಿದೆ. “ಕ್ಷೋಭೆಗೊಂಡು ಉರಿದುರಿದ ಮನವು ತನ್ನ ಆತ್ಮಬಲವನ್ನು ಪ್ರಜ್ವಲಿಸಿಕೊಳ್ಳುತ್ತ, ಇಷ್ಟು ವರ್ಷಗಳ, ಶತಮಾನಗಳ ಶೋಷಣೆ, ಕ್ರೌರ್ಯ, ಅನ್ಯಾಯಗಳಿಗೆ ಸಂಯಮ ತೋರುತ್ತ, ಆತ್ಮಹನನ ಮಾಡಿಕೊಳ್ಳುತ್ತ ಬಂದುದರ ತಿಳಿವಿನ ಸೂರ್ಯ ಈಗ ಮೂಡಿ ಮೌನ ಕರಗುವ ಹೊತ್ತಿನತ್ತ ಬೆರಳು ಮಾಡುವ ಕವಿತೆಗಳು ಇಲ್ಲಿವೆ” ಎಂದು ಕವಯತ್ರಿಯು ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಎಂದು ಹೆಣ್ಣಿನ ಶೋಷಣೆಯ ವಿರುದ್ಧ ದನಿಯಾಗುವ, ಲಿಂಗ ಸಮಾನತೆಯನ್ನು ಪ್ರತಿಪಾದಿಸುವ, ಸಾಮಾಜಿಕ ಅನ್ಯಾಯಗಳನ್ನು ಸಂಯಮದಿಂದ ಮಂಡಿಸುವ ರೀತಿಯು ಮುಖ್ಯವಾಗುತ್ತದೆ. ಹೆಚ್ಚಿನ ಲೇಖಕಿಯರು ಪುರುಷ ನಿಂದೆಯಲ್ಲೇ ನೆಮ್ಮದಿಯನ್ನು ಕಂಡುಕೊಳ್ಳುತ್ತಿರುವ ಹೊತ್ತಿನಲ್ಲಿ ಸಮಸ್ಯೆಯನ್ನು ಸಮಚಿತ್ತದಿಂದ ಗ್ರಹಿಸಿ, ಆರೋಗ್ಯಪೂರ್ಣ ಧೋರಣೆಯನ್ನು…
ಮೂಡುಬಿದಿರೆ : ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫರ್ನಾಂಡಿಸ್ ಇವರು 2025ನೇ ಸಾಲಿನ ‘ದೇಶ್’ ರತ್ನಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೆಹಲಿಯ ಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಇವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ ಅಸೋಸಿಯೇಷನ್ ಹಾಗೂ ವಿವಿಧ ಸಚಿವಾಲಯಗಳ ಜಂಟಿ ಆಶ್ರಯದಲ್ಲಿ ಈ ಗೌರವವನ್ನು ನೀಡಲಾಗುತ್ತದೆ. ಈ ಹಿಂದೆ ಇವರು ರಾಜ್ಯ ಸರ್ಕಾರದ ಪ್ರತಿಷ್ಠಿತ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೂ ಪಾತ್ರರಾಗಿದ್ದರು. ರಿಶಲ್ ಅವರ ಲೇಖನಿಯಿಂದ ಮೂಡಿಬಂದ ಕೃತಿಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ‘ಭಾರತ್ @2047 ರೋಲ್ ಆಫ್ ಯೂತ್’ ಪುಸ್ತಕವು ಯುವಶಕ್ತಿಯ ಮಹತ್ವದ ಬಗ್ಗೆ ಬೆಳಕು ಚೆಲ್ಲಿದ್ದು, ಸ್ವತಃ ಭಾರತದ ಪ್ರಧಾನ ಮಂತ್ರಿಯವರಿಂದ ಪ್ರಶಂಸೆಗೆ ಒಳಗಾಗಿದೆ. ಸುರಾಜ್ಯ – ಗುಡ್ ಗವರ್ನನ್ಸ್ ವೀಲ್ ಆಫ್ ಡೆಮಾಕ್ರಸಿ :…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ದಿನಾಂಕ 03 ಜನವರಿ 2026ರಂದು ಅಕಾಡೆಮಿ ಸಭಾಂಗಣದಲ್ಲಿ ಸಂಜೆ 4-00 ಗಂಟೆಗೆ ‘ಕಾವ್ಯಾಂ ವ್ಹಾಳೊ- 10’ ಶೀರ್ಷಿಕೆಯಡಿ ಕವಿಗೋಷ್ಠಿಯನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ವಹಿಸಿಕೊಳ್ಳಲಿದ್ದು, ‘ಸಾಮರಸ್ಯ’ ಮಂಗಳೂರು ಇದರ ಅಧ್ಯಕ್ಷರಾದ ಮಂಜುಳಾ ನಾಯಕ್ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೊಂಕಣಿ ಸಾಮರಸ್ಯದ ಪುಸ್ತಕಗಳನ್ನು ಹಾಗೂ ಸಂಗೀತದ ಕ್ಯಾಸೆಟ್ಗಳನ್ನು ಹಲವಾರು ವರ್ಷಗಳಿಂದ ಊರಿಂದೂರಿಗೆ ಹಬ್ಬ- ಹರಿದಿನಗಳಲ್ಲಿ ಕೊಂಡು ಹೋಗಿ ಮಾರಿ, ಸಾಹಿತ್ಯ ಸೇವೆಯನ್ನು ಮಾಡುತ್ತಿರುವ ಆಲ್ವಿನ್ ಸಿಕ್ವೇರಾ (ಮೆಲೋಡಿ ಮಾಸ್ಟರ್) ಇವರನ್ನು ಸನ್ಮಾನಿಸಲಾಗುವುದು. ಖ್ಯಾತ ಕವಿಗಳಾದ ಶ್ರೀ ಅರವಿಂದ ಶ್ಯಾನಭಾಗ್ರವರು ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಮರ್ಲಿನ್ ಮಸ್ಕರೇನ್ಹಸ್, ನವೀನ್ ಕುಲ್ಶೇಕರ್, ವಾಯ್ಲೆಟ್ ಪಿರೇರಾ, ಸುಮಾ ವಸಂತ್, ರಿಚ್ಚರ್ಡ್ ಪಿರೇರಾ, ಪ್ರೀತಾ ಮಿರಾಂದಾ, ಸ್ಟ್ಯಾನಿಸ್ಲಸ್ ಡಿಸೋಜ, ರಮಾನಾಥ ಮೇಸ್ತ, ಅರುಣ್ ದಾಂತಿ ಹಾಗೂ ಸಪ್ನಾ ಮೇ ಕ್ರಾಸ್ತಾ ಇವರು ತಮ್ಮ ಕವಿತೆಗಳನ್ನು ವಾಚಿಸುವರು. ಕೊಂಕಣಿ ಭಾಂದವರು ಈ ಕಾರ್ಯಕ್ರಮದಲ್ಲಿ…
ಉಡುಪಿ : ನಾಡಿನ ಹಿರಿಯ ಕವಿ, ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಕೊನೆಯ ದಿನಾಂಕ 15 ಮಾರ್ಚ್ 2026. ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ, ಉಡುಪಿ -576 102. ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 10,000/- ರೂಪಾಯಿಗಳ ಒಂದು ವಾರ್ಷಿಕ ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ, 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನುಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಲಾಗ್: https://govindapairesearch.blogspot.com ಅಥವಾ ದೂರವಾಣಿ ಸಂಖ್ಯೆ/ಮೊಬೈಲ್ ನಂ. 94488 68868/ 94494 71449; ಕಛೇರಿ: 0820-2521159 ಸಂಪರ್ಕಿಸಬಹುದು. ನಿಯಮಗಳು…
ಬೆಂಗಳೂರು : ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಇವರು ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಆರ್.ಆರ್. ನಗರದ ಖಾಸಗಿ ಆಸ್ಪತ್ರೆಯಲ್ಲಿ ದಿನಾಂಕ 26 ಡಿಸೆಂಬರ್ 2025ರಂದು ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಇವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು. ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲೀಷ್, ತೆಲುಗು, ತಮಿಳು, ಮರಾಠಿ, ಮಲಯಾಳಂ ಹಾಗೂ ಸಂಸ್ಕೃತ ಭಾಷೆಗಳಲ್ಲಿಯೂ ಪ್ರಾವೀಣ್ಯತೆ ಸಾಧಿಸಿದ್ದರು. ಸರಿತಾ ಜ್ಞಾನಾನಂದ ಮೂಲತಃ ಬೆಂಗಳೂರಿನವರು. ತಂದೆ ಎನ್.ಆರ್. ನಂಜುಂಡಸ್ವಾಮಿ, ತಾಯಿ ಸುಬ್ಬಮ್ಮ. 21 ಜನವರಿ 1943ರಲ್ಲಿ ಜನಿಸಿದ ಇವರು ಮ್ಯೆಸೂರು ವಿಶ್ವವಿದ್ಯಾಲಯದಿಂದ ಬಿ.ಎ. ಮತ್ತು ಬಿ.ಎಡ್. ಹಾಗೂ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಎಂ.ಎಡ್. ಪದವಿಗಳನ್ನು ಪಡೆದಿದ್ದರು. ಸರಿತಾ ಇವರು ಬೆಂಗಳೂರು ಹಾಗೂ ಕೆ.ಜಿ.ಎಫ್.ಗಳಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ‘ಒಂದೂರಲ್ಲಿ ಒಬ್ಬ ನಿರ್ಮಲಾ’, ‘ಬೆಂಕಿ ಹೂ’, ‘ಪರಿಪೂರ್ಣ’, ‘ಒಲಿದರೆ ನಾರಿ’ ಸೇರಿ ಹಲವು ಕಾದಂಬರಿ ರಚಿಸಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ರಚಿಸಿದ್ದು,…
ಮಂಗಳೂರು : ‘ದಿ ಡ್ಯಾಪರ್ ಎಕ್ಸ್ಪೋ’ ಪೇಂಟಿಂಗ್, ಚಿತ್ರಕಲೆ, ಮಂಡಲ, ಸ್ಟ್ರಿಂಗ್ ಆರ್ಟ್, ಛಾಯಾಚಿತ್ರಗಳ ಪ್ರದರ್ಶನದ ಉದ್ಘಾಟನೆಯು ಮಂಗಳೂರು ಎಂ.ಜಿ. ರೋಡ್ ನಲ್ಲಿರುವ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ 17 ಜನವರಿ 2025ರಂದು 3-00 ಗಂಟೆಗೆ ನಡೆಯಲಿದೆ. 18 ಮತ್ತು 19 ಜನವರಿ 2025ರಂದು ಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ. ನಿವೃತ್ತ ಪ್ರಾಂಶುಪಾಲ ಪ್ರೊ. ಜಿ.ಎನ್. ಭಟ್ ಪ್ರದರ್ಶನ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕಲಾವಿದ ಎಂ. ಪ್ರಭಾಕರ್ ಜೋಶಿ, ಜಾದೂಗಾರ ಪ್ರೊ. ಶಂಕರ್, ಕಲಾವಿದ ಗಣೇಶ್ ಸೋಮಯಾಜಿ ಭಾಗವಹಿಸುವರು. ಪ್ರದರ್ಶನವು ಬೆಳಿಗ್ಗೆ 10-00ರಿಂದ ಸಂಜೆ 7-30ರವರೆಗೆ ಇರಲಿದೆ ಎಂದು ಸಂಘಟಕರಾದ ಉದಯ್ ಕೃಷ್ಣ ಜಿ. ಮತ್ತು ಅವರ ಪುತ್ರಿ ನಿಯತಿ ಯು. ಭಟ್ ತಿಳಿಸಿದ್ದಾರೆ.