Author: roovari

ಮುದ್ರಾಡಿ: ನಮ ತುಳುವೆರ್ ಕಲಾ ಸಂಘಟನೆ (ರಿ.) ನಾಟ್ಕದೂರು, ಮುದ್ರಾಡಿ ಯೋಜಿಸುವ 11ನೇ ವರ್ಷದ ‘ಮುದ್ರಾಡಿ ರಾಷ್ಟ್ರೀಯ ರಂಗೋತ್ಸವ’ ಕಾರ್ಯಕ್ರಮವು ದಿನಾಂಕ 03 ಏಪ್ರಿಲ್ 2025 ರಿಂದ 07 ಏಪ್ರಿಲ್ 2025ರ ವರೆಗೆ ಮುದ್ರಾಡಿಯ ಬಿ.ವಿ. ಕಾರಂತ ಬಯಲು ರಂಗಸ್ಥಳದಲ್ಲಿ ನಡೆಯಲಿದೆ. ದಿನಾಂಕ 03 ಏಪ್ರಿಲ್ 2025ರಂದು ತೆಲುಗು ನಾಟಕ ‘ಮಾಯಾ ಬಜಾರ್’ ಪ್ರದರ್ಶನಗೊಳ್ಳಲಿದ್ದು, ದಿನಾಂಕ 04 ಏಪ್ರಿಲ್ 2025ಕ್ಕೆ ತೆಲುಗು ನಾಟಕ ‘ಪಾತಾಳ ಭೈರವಿ’ ಪ್ರದರ್ಶನಗೊಳ್ಳಲಿದೆ. ದಿನಾಂಕ 05 ಏಪ್ರಿಲ್ 2025ರಂದು ಕನ್ನಡದ ‘ಅಂಬೆ’ ನಾಟಕ ಪ್ರದರ್ಶನಗೊಳ್ಳಲಿದ್ದು, ದಿನಾಂಕ 06 ಏಪ್ರಿಲ್ 2025ರಂದು ತೆಲುಗು ನಾಟಕ ‘ಲವಕುಶ’ ಹಾಗೂ ದಿನಾಂಕ 07 ಏಪ್ರಿಲ್ 2025ರಂದು ತೆಲುಗು ನಾಟಕ ಭಕ್ತ ಪ್ರಹ್ಲಾದ ಪ್ರದರ್ಶನಗೊಳ್ಳಲಿದೆ ಎಂದು ನಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷರಾದ ಶ್ರೀ ಸುಕುಮಾರ್ ಮೋಹನ್ ತಿಳಿಸಿದ್ದಾರೆ.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನಸಾಲಿನ ‘ಜಿ.ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’ಗೆ ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಪುಸ್ತಕವು ಆಯ್ಕೆಯಾಗಿದ್ದು, ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 21 ಮಾರ್ಚ್ 2025ರ ಶುಕ್ರವಾರದಂದು ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ’ ನಡೆಯಿತು. 2023 ಜನವರಿಯಿಂದ 2023 ಡಿಸೆಂಬರ್ ಒಳಗೆ ಪ್ರಕಟವಾದ ವಿವಿಧ ಕೃತಿಗಳನ್ನು ಒಟ್ಟು 52 ದತ್ತಿಗಳ 57 ಪ್ರಶಸ್ತಿಗಳಿಗೆ ಬರಹಗಾರರಿಂದ ಆಹ್ವಾನಿಸಲಾಗಿತ್ತು. 2024ನೇ ಸೆಪ್ಟೆಂಬರ್ 25 ಮತ್ತು 26ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರ ಅಧ್ಯಕ್ಷತೆಯಲ್ಲಿ ಎರಡೂ ದಿನಗಳು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿಷಯ ತಜ್ಞರನ್ನೊಳಗೊಂಡ ಸಮಿತಿಯು 2023ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಆಯ್ಕೆ ಮಾಡಿದ್ದು, ಇದರಲ್ಲಿ ಸುಲೋಚನಾ ಅವರ ‘ಸತ್ಯದರ್ಶನ’ ಕೃತಿಯು ‘ಜಿ.ಪಿ. ರಾಜರತ್ನಂ ಸಂಸ್ಕರಣ ದತ್ತಿ’ ಪ್ರಶಸ್ತಿಗೆ ಆಯ್ಕೆಯಾಗಿತ್ತು.

Read More

ಉಡುಪಿ: ಮಾಹೆ ವಿ.ವಿ. ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಿಂದ ಗೋವಿಂದ ಪೈ ಸಂಶೋಧನ ಸಂಪುಟ ಭಾಗ-2ರ ಅನಾವರಣ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 23 ಮಾರ್ಚ್ 2025ರ ಭಾನುವಾರ ಬೆಳಗ್ಗೆ 10 ಗಂಟೆಗೆ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕೇಂದ್ರದ ಸಲಹ ಸಮಿತಿಯ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ್ ರೈ ಇವರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಯಮದಲ್ಲಿ ಗ್ರಂಥವನ್ನು ಮಾಹೆ ಸಹ ಕುಲಾಧಿಪತಿಗಳಾದ ಡಾ. ಎಚ್‌.ಎಸ್. ಬಲ್ಲಾಳ್ ಅನಾವರಣಗೊಳಿಸಲಿದ್ದು, ಕುಲಪತಿ ಲೆ. ಜ. ಡಾ. ಎಂ. ಡಿ. ವೆಂಕಟೇಶ್, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತಿತರರು ಭಾಗವಹಿಸುವರು. ಇದರೊಂದಿಗೆ 2024ನೇ ಸಾಲಿನ ಗೋವಿಂದ ಪೈ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ ಡಾ. ಹಂ.ಪ. ನಾಗರಾಜಯ್ಯ ಅವರಿಗೆ ಪ್ರದಾನ ಮಾಡಲಾಗುವುದು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ತಾಳ್ತಜೆ ವಸಂತ ಕುಮಾರ್ ಅಭಿನಂದನ ಭಾಷಣ ಮಾಡಲಿರುವರು. ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.…

Read More

ಕಟೀಲು : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಹಯೋಗದಲ್ಲಿ ಹಮ್ಮಿಕೊಂಡ ಎರಡು ದಿನಗಳ ಯಕ್ಷಗಾನ ತಾಳಮದ್ದಲೆ ಕಮ್ಮಟದ ಉದ್ಘಾಟನಾ ಸಮಾರಂಭವು ದಿನಾಂಕ 18 ಮಾರ್ಚ್ 2025ರ ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಕಟೀಲು ಕ್ಷೇತ್ರದಲ್ಲಿ ಇವತ್ತು 6 ಯಕ್ಷಗಾನ ಮೇಳಗಳಿವೆ. ಆರು ಮೇಳಗಳಿಗೂ ಪ್ರತಿರಾತ್ರಿ ಯಕ್ಷಗಾನ ಕಾರ್ಯಕ್ರಮವಿದೆ. ಅಲ್ಲದೆ ಹಲವಾರು ವರ್ಷಗಳವರೆಗೆ ಯಕ್ಷಗಾನ ಕಾರ್ಯಕ್ರಮ ನಿಗದಿಯಾಗಿದೆ. ಇದು ದುರ್ಗಾ ಮಾತೆಯ ಲೀಲಿಯೂ ಹೌದು, ಯಕ್ಷಗಾನದ ಶಕ್ತಿಯೂ ಹೌದು. ಯಕ್ಷಗಾನದ ಬೆಳವಣಿಗೆಗೆ ಕಟೀಲು ಕ್ಷೇತ್ರದ ಕೊಡುಗೆ ಶ್ಲಾಘನೀಯ. ಯಕ್ಷಗಾನ ನಮ್ಮ ಮಣ್ಣಿನ ಕಲೆ. ಇದು ಅನ್ಯ ಕಲಾಪ್ರಕಾರಗಳ ಹಾಗೆ ಅಲ್ಲ. ಇಲ್ಲಿ ಅಭಿನಯ, ನೃತ್ಯ, ಮಾತು , ಹಾಡು, ವೇಷಭೂಷಣ, ಬಣ್ಣಗಾರಿಕೆ ಹೀಗೆ…

Read More

ಕಾಸರಗೋಡು : ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಮತ್ತು ‘ಸ್ವರ ಚಿನ್ನಾರಿ’ (ಸಂಗೀತ ಘಟಕ) ಪ್ರಸ್ತುತ ಪಡಿಸುವ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ -2’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 23 ಮಾರ್ಚ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಕಾಸರಗೋಡಿನ ಕರೆಂದಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಚಿನ್ನಾರಿ ಚಿನ್ನಾರಿ ಇದರ ನಿರ್ದೇಶಕರಾದ ಕೆ. ಸತೀಶ್ಚಂದ್ರ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಖ್ಯಾತ ಚಲನಚಿತ್ರ ನಟ ಹಾಗೂ ರಂಗನಟರಾದ ಕೆ.ಎಸ್. ಶ್ರೀಧರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಚಲನಚಿತ್ರ ನಿರ್ಮಾಪಕರಾದ ಟಿ.ಎ. ಶ್ರೀನಿವಾಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸ್ವರ ಚಿನ್ನಾರಿ ಸಹಕಾರ್ಯದರ್ಶಿಯಾದ ಪ್ರತಿಜ್ಞಾ ಕಣ್ಕಲ್ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.

Read More

ಬೆಂಗಳೂರು: 2023ನೆಯ ಸಾಲಿನ ವಿವಿಧ ಕೃತಿಗಳಿಗೆ ದತ್ತಿ ಪುರಸ್ಕಾರ ನೀಡುವ ಕಾರ್ಯಕ್ರಮ ದಿನಾಂಕ 21 ಮಾರ್ಚ್ 2025 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ “ಕನ್ನಡ ಸಾಹಿತ್ಯ ಪರಿಷತ್ತು ಅಕ್ಷರ ಸಂಸ್ಕೃತಿಯನ್ನು ಉಳಿಸಿ ಬೆಳಸಲು ಶ್ರೊಮಿಸುತ್ತಿದೆ. ಈ ಪ್ರಕ್ರಿಯೆಯಲ್ಲಿ ದತ್ತಿ ಪುರಸ್ಕಾರಗಳು ಮುಖ್ಯ ಪಾತ್ರವನ್ನು ವಹಿಸುತ್ತಿವೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಹತ್ವವೆಂದರೆ ಅದರ ದತ್ತಿನಿಧಿಗಳು. ಹಿತೈಷಿಗಳು, ಗಣ್ಯರು, ಸಂಸ್ಥೆಗಳು ತಮ್ಮ ಕನ್ನಡ ಪ್ರೀತಿಯನ್ನು ದತ್ತಿ ಇಡುವ ಮೂಲಕ ವ್ಯಕ್ತ ಪಡಿಸಿದ್ದಾರೆ. ದತ್ತಿಗಳು ವೈವಿಧ್ಯಮಯ ಆಶಯಗಳನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತು 2023ರ ಜನವರಿಯಿಂದ ಡಿಸಂಬರ್ ಅಂತ್ಯದವರೆಗೂ ಪ್ರಕಟವಾದ ಕೃತಿಗಳನ್ನು ವಿವಿಧ ಪುಸ್ತಕ ದತ್ತಿ ಪುರಸ್ಕಾರಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. ಇದಕ್ಕೆ ರಾಜ್ಯ ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು ಅವುಗಳಲ್ಲಿ 12 ಜನ ಪರಿಣಿತರ ಸಮಿತಿ ಪ್ರಾಥಮಿಕವಾಗಿ…

Read More

ಬೆಂಗಳೂರು : ಚಿತ್ರಕೂಟ ಸ್ಕೂಲ್ ಅರ್ಪಿಸುತ್ತಿರುವ ‘ಚಿಟ್ಟೆ ಮಕ್ಕಳ ಮೇಳ’ ಬೇಸಿಗೆ ಶಿಬಿರವನ್ನು ದಿನಾಂಕ 06 ಏಪ್ರಿಲ್ 2025ರಿಂದ 26 ಏಪ್ರಿಲ್ 2025ರವರೆಗೆ ಬೆಳಿಗ್ಗೆ 9-30ರಿಂದ 4-00 ಗಂಟೆಗೆ ತನಕ ಬೆಂಗಳೂರಿನ ನಾಗದೇವನ ಹಳ್ಳಿ ಕೆಂಗೇರಿ ಮುಖ್ಯ ರಸ್ತೆ ನಂ.37/6 ಚಿತ್ರಕೂಟ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ನಾಟಕ ಮತ್ತು ಪ್ರದರ್ಶನ, ಜನಪದ ಕುಣಿತಗಳು, ಸಂಗೀತ, ಚಿತ್ರಕತೆ, ಕರಕುಶಲ ಕಲೆಗಳು, ದೇಸಿ ಆಟಗಳು, ಮುಖವಾಡ ತಯಾರಿಕೆ, ಮ್ಯಾಜಿಕ್, ಮಕ್ಕಳ ಸಂಜೆ, ಪರಿಸರ ಜಾಗೃತಿ ಜಾತ, ಹೋಳಿ ಹಬ್ಬ, ಸಾಧಕರಿಗೆ ಸನ್ಮಾನ, ಮಲ್ಲಕಂಬ, ಕೋಲು ಹೋರಾಟ ಮತ್ತು ಭರತನಾಟ್ಯ ಇತ್ಯಾದಿಗಳನ್ನು ರಂಗಾಯಣ, ನೀನಾಸಂ, ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ, ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಪರಿಣಿತಿ ಪಡೆದ ಕಲಾವಿದರಿಂದ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8217637620 ಮತ್ತು 9663399966 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಧಾರವಾಡ : ತಮ್ಮ ರಚಿತ ಮತ್ತು ನಿರ್ದೇಶಿತ ನಾಟಕಗಳಾದ ‘ಗತಿ’ ಮತ್ತು ‘ಅತೀತ’ ಮೂಲಕ ಧಾರವಾಡದ ರಂಗಾಸಕ್ತರಿಗೆ ಚಿರಪರಿಚಿತರಾಗಿರುವ ಎಸ್.ಎನ್. ಸೇತುರಾಮ್ ಅವರು ತಮ್ಮ ಹೊಸ ನಾಟಕ ‘ತಳಿ’ ತೆಗೆದುಕೊಂಡು ಧಾರವಾಡಕ್ಕೆ ಬರುತ್ತಿದ್ದಾರೆ. ದಿನಾಂಕ 26 ಮಾರ್ಚ್ 2025, ಬುಧವಾರ ಸಂಜೆ 06-30 ಗಂಟೆಗೆ ಧಾರವಾಡದ ಸೃಜನಾ ಡಾ. ಅಣ್ಣಾಜಿರಾವ ಸಿರೂರ ರಂಗಮಂದಿರದಲ್ಲಿ ಸ್ನೇಹ ಪ್ರತಿಷ್ಠಾನ ಧಾರವಾಡ ಹಾಗೂ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಧಾರವಾಡ ಸಂಯುಕ್ತ ಆಶ್ರಯದಲ್ಲಿ ಅನನ್ಯ ಸಂಸ್ಥೆ ಬೆಂಗಳೂರು ಅರ್ಪಿಸುತ್ತಿರುವ ಈ ನಾಟಕ ‘ತಳಿ’ ಖಂಡಿತವಾಗಿ ಧಾರವಾಡದ ರಂಗಪ್ರೇಮಿಗಳಿಗೆ ವಿಶ್ವ ರಂಗಭೂಮಿ ದಿನಾಚರಣೆಯ ಹಿನ್ನೆಲೆಯಲ್ಲಿ ಅತ್ಯುತ್ತಮ ಕೊಡುಗೆ. ಎಸ್.ಎನ್. ಸೇತುರಾಂ ಒಬ್ಬ ಕನ್ನಡದ ಕಥೆಗಾರ, ನಟ, ನಿರ್ದೇಶಕ ಮತ್ತು ನಾಟಕಕಾರ. ಬಾಲ್ಯದಿಂದಲೂ ರಂಗಭೂಮಿಯ ಕಡೆಗಿನ ಸೆಳೆತ ಇವರನ್ನು 1981ರಿಂದ ಹವ್ಯಾಸಿ ರಂಗಭೂಮಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಟಿ.ಎನ್. ಸೀತಾರಾಂರವರ ಮಾಯಾಮೃಗ, ಮನ್ವಂತರ, ಮುಕ್ತ ಧಾರಾವಾಹಿಗಳಲ್ಲಿ ಇವರು ಅಭಿನಯಿಸಿದ್ದಾರೆ. ಮಂಥನ, ದಿಬ್ಬಣ ಮತ್ತು ಅನಾವರಣ ಧಾರಾವಾಹಿಗಳನ್ನು ಇವರು ನಿರ್ದೇಶಿಸಿದ್ದಾರೆ.…

Read More

ಮದ್ದೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಮಹಿಳಾ ಸರ್ಕಾರಿ ಕಾಲೇಜು ಮದ್ದೂರು, ಕ್ಷೀರಸಾಗರ ಮಿತ್ರಕೂಟ (ರಿ.) ಕೀಲಾರ ಮಂಡ್ಯ ಜಿಲ್ಲೆ, ಕರ್ನಾಟಕ ಜಾನಪದ ಪರಿಷತ್ತು ಮದ್ದೂರು ತಾಲೂಕು ಘಟಕ ಮತ್ತು ರಂಗ ಚಂದಿರ ಟ್ರಸ್ಟ್ (ರಿ.) ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ 2025 ಅಂಗವಾಗಿ ರಂಗಸಂದೇಶ, ವಿಚಾರಸಂಕಿರಣ, ರಂಗಗೌರವ ಹಾಗೂ ರಂಗಸಂಭ್ರಮ ಕಾರ್ಯಕ್ರಮವನ್ನು ದಿನಾಂಕ 27 ಮಾರ್ಚ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಮದ್ದೂರು ಮಹಿಳಾ ಸರ್ಕಾರಿ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮದ್ದೂರು ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ.ಬಿ. ನಾರಾಯಣ ಇವರ ಅಧ್ಯಕ್ಷತೆಯಲ್ಲಿ ಮಾನ್ಯ ಶಾಸಕರಾದ ಕೆ.ಎಂ. ಉದಯ್ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ರಂಗಭೂಮಿ ಕಲಾವಿದ ಸುರೇಶ್ ಕಂಠಿ ಇವರು ರಂಗ ಸಂದೇಶ ನೀಡಲಿದ್ದಾರೆ. ‘ರಂಗಭೂಮಿ ಮತ್ತು ಚಳುವಳಿ’ ಎಂಬ ವಿಷಯದ ಬಗ್ಗೆ ರಂಗಭೂಮಿ ಮತ್ತು ಚಲನಚಿತ್ರ ನಟರಾದ ಪಣ್ಣೆದೊಡ್ಡಿ ಆನಂದ್ ವಿಷಯ ಮಂಡನೆ ಮಾಡಲಿದ್ದಾರೆ. ರಾಮಯ್ಯ, ಸಿ. ಪುಟ್ಟಸ್ವಾಮಿ,…

Read More

ಬೆಂಗಳೂರು : ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್ ಮತ್ತು ಅದಮ್ಯ ರಂಗ ಸಂಸ್ಕೃತಿ ಟ್ರಸ್ಟ್ (ರಿ.) ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ‘ರಂಗೋತ್ಸವ’ ಕಾರ್ಯಕ್ರಮವನ್ನು ದಿನಾಂಕ 26, 27 ಮತ್ತು 28 ಮಾರ್ಚ್ 2025ರಂದು ಮಧ್ಯಾಹ್ನ ಗಂಟೆ 1-15ಕ್ಕೆ ಬೆಂಗಳೂರಿನ ಕಬ್ಬನ್ ಪಾರ್ಕ್ ಕೆ.ಜಿ.ಎಸ್. ಕ್ಲಬ್ ಚನ್ನಬಸವಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 26 ಮಾರ್ಚ್ 2025ರಂದು ಮಾಲತೇಶ ಬಡಿಗೇರ ಇವರ ನಿರ್ದೇಶನದಲ್ಲಿ ನೇತಾಜಿ ಕನ್ನಡ ಯುವಕ ಸಂಘ (ರಿ.) ಅಭಿನಯಿಸುವ ‘ಧೀರ ಭಗತ್’, ದಿನಾಂಕ 27 ಮಾರ್ಚ್ 2025ರಂದು ಛಾಯಾಭಾರ್ಗವಿ ಇವರ ನಿರ್ದೇಶನದಲ್ಲಿ ಚಿಕ್ಕ ಬಳ್ಳಾಪುರದ ಐಶ್ವರ್ಯ ಕಲಾನಿಕೇತನ (ರಿ.) ಅಭಿನಯಿಸುವ ‘ಶೂದ್ರ ತಪಸ್ವಿ’ ಮತ್ತು ದಿನಾಂಕ 28 ಮಾರ್ಚ್ 2025ರಂದು ಮೈಕೊ ಶಿವಶಂಕರ್ ಇವರ ನಿರ್ದೇಶನದಲ್ಲಿ ಕರ್ನಾಟಕ ಸಚಿವಾಲಯ ಕ್ಲಬ್ ಅಭಿನಯಿಸುವ ‘ನಮ್ಮ ನಿಮ್ಮೊಳಗೊಬ್ಬ’ ನಾಟಕಗಳು ಪ್ರದರ್ಶನಗೊಳ್ಳಲಿದೆ.

Read More