Subscribe to Updates
Get the latest creative news from FooBar about art, design and business.
Author: roovari
ಉಡುಪಿ : ದಿ. ಫ್ರಾನ್ಸಿಸ್ ದಾಂತಿ ಸ್ಮಾರಕ ಪ್ರತಿಷ್ಠಾನ ಮತ್ತು ಕಥೋಲಿಕ್ ಸಭಾ ಉಡುಪಿ ಪ್ರದೇಶ ಸಂಯುಕ್ತಾಶ್ರಯದಲ್ಲಿ ನೀಡಲಾಗುವ ರಾಜ್ಯ ಮಟ್ಟದ ‘ಫಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ’ಕ್ಕೆ ಕೆಥೋಲಿಕ್ ಕೊಂಕಣಿ ಕ್ರೈಸ್ತರಿಂದ 2025ರ ಜನವರಿಯಿಂದ ಡಿಸೆಂಬರ್ವರೆಗೆ ಪ್ರಕಟಿತ ಕನ್ನಡ ಭಾಷಾ ಕೃತಿಗಳನ್ನು ಆಹ್ವಾನಿಸಲಾಗಿದೆ. ಧಾರ್ಮಿಕ, ವೈಚಾರಿಕ, ವೈಜ್ಞಾನಿಕ, ಐತಿಹಾಸಿಕ, ಸಮಾಜಶಾಸ್ತ್ರ, ಜಾನಪದ ಅಧ್ಯಯನ, ಜೀವನ ಚರಿತ್ರೆ, ವ್ಯಕ್ತಿಚಿತ್ರ, ಸಂಪಾದಿತ ಕೃತಿಗಳ ಸಂಗ್ರಹ, ಕೊಂಕಣಿಯಿಂದ ಭಾಷಾಂತರಿತ ಕೃತಿಗಳು, ಕಥಾ ಸಂಗ್ರಹ, ಕಾದಂಬರಿ, ಕಾವ್ಯ ಸಂಗ್ರಹ, ನಾಟಕ, ಕಿರುನಾಟಕ ಸಂಗ್ರಹ ಇತ್ಯಾದಿಗಳನ್ನು ಪ್ರಶಸ್ತಿಗಾಗಿ ಕಳಿಸಬಹುದು. ಮುದ್ರಿತ ಕೃತಿಗಳ 4 ಪ್ರತಿಗಳನ್ನು ದಿನಾಂಕ 31 ಮಾರ್ಚ್ 2026ರೊಳಗೆ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ 90359 96144ನ್ನು ಸಂಪರ್ಕಿಸಲು ತಿಳಿಸಿದೆ.
ಶಿರೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ದಿನಾಂಕ 08 ಫೆಬ್ರವರಿ 2026ರಂದು ಶಿರೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ಕೊಂಕಣಿ ಸಂಭ್ರಮ್’ ಕಾರ್ಯಕ್ರಮದ ಉದ್ಘಾಟನೆಯನ್ನು ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ಆಚಾರ್ ಇವರು ಉದ್ಘಾಟಿಸಿ “ಕೊಂಕಣಿ ಭಾಷಾಭಿಮಾನದೊಂದಿಗೆ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬೆಳಗಿಸುವುದರಲ್ಲಿ ಕೊಂಕಣಿಗರು ಒಂದಾಗಿ ಸಾಮರಸ್ಯದಿಂದ ಬಾಳಿರಿ” ಎಂದು ಶುಭ ಹಾರೈಸಿದರು. ಸಭಾ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ಸ್ವಾಗತಿಸಿ ಕೊಂಕಣಿ ಭಾಷೆಯನ್ನು ಮನೆಮನೆಗಳಲ್ಲಿ ಮಾತಾಡುವ ಮುಖಾಂತರ ಎಲ್ಲರೂ ಸಮಾನತೆಯ ಭಾವನೆಯನ್ನು ಹೊಂದಿ ಅಕಾಡೆಮಿ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು. ಮುಖ್ಯ ಅತಿಥಿಗಳಾಗಿ ಶಿರೂರು ಗ್ರಾಮ ಪಂಚಾಯತ್ ಸದಸ್ಯರಾದ ಶಂಕರ ಡಿ. ಮೇಸ್ತ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಕಾಪ್ಸಿ ನೂರು ಮಹಮದ್, ಪೇಚೆ ಶ್ರೀ ವೆಂಕಟರಮಣ ದೇವಸ್ಥಾನ ಶಿರೂರು ಪದಾಧಿಕಾರಿಗಳು ಶ್ರೀ…
ಮುಂಬೈ : ಮುಂಬೈ ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಯನವು ಸ್ಥಾಪಿತವಾಗಿ 125 ವರ್ಷಗಳು ಸಂದಿರುವ ಸಂಭ್ರಮದಲ್ಲಿ ಕನ್ನಡ ವಿಭಾಗವು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 06 ಫೆಬ್ರವರಿ 2026ರಂದು ಕವಿ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ನಡೆಯಿತು. ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಪಾಲ್ಗೊಂಡು ‘ಅಭಿಜಾತ ಸಾಹಿತ್ಯದ ಆವಶ್ಯಕತೆ’ ಎಂಬ ವಿಷಯದ ಕುರಿತು ಮಾತನಾಡಿದ ಖ್ಯಾತ ಬಹುಶ್ರುತ ವಿದ್ವಾಂಸರೂ, 2026ರ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರೂ ಆದ ಶತಾವಧಾನಿ ಡಾ. ಆರ್. ಗಣೇಶ್ “ಒಂದು ದೇಶದ ಸಂಸ್ಕೃತಿಯ ದಾರ್ಢ್ಯವನ್ನು ಅರಿಯಬೇಕಾದರೆ ಅಲ್ಲಿಯ ಅಭಿಜಾತ ಸಾಹಿತ್ಯ ಎಷ್ಟರ ಮಟ್ಟಿಗೆ ನೆಲೆಯೂರಿದೆ ಎಂದು ನೋಡಬೇಕಾಗುತ್ತದೆ. ಅಭಿಜಾತ ಸಾಹಿತ್ಯವನ್ನು ಆಧುನಿಕ ದೇಶಗಳು ಕೂಡ ಕಾಪಾಡಿಕೊಂಡು ಬಂದಿವೆ. ಅದು ಜನಜೀವನದಲ್ಲಿ ಒಂದು ಮಟ್ಟದಲ್ಲಿ ಹಾಸುಹೊಕ್ಕಾಗಿದೆ. ಅಭಿಜಾತ ಕೃತಿಯ ಲಕ್ಷಣ ಏನೆಂದರೆ ಅದು ಹೇಳಬೇಕಾದುದನ್ನು ಎಂದೂ ಹೇಳಿ ಮುಗಿಸಿರುವುದಿಲ್ಲ. ಅನುಭವದಲ್ಲಿ ಹೊಸತನ್ನು ತಂದುಕೊಡುವುದು ಅಭಿಜಾತ ಸಾಹಿತ್ಯದ ಮುಖ್ಯ ಲಕ್ಷಣ. ಒಂದು ಕೃತಿಗೆ ಕಾಲಪ್ರತಿಷ್ಠೆ ಬೇಕು;…
ಬೀದರ್ : ನಾಟ್ಯಶ್ರೀ ನೃತ್ಯಾಲಯದಿಂದ ಕೊಡಲಾಗುವ 2026ನೇ ಸಾಲಿನ ‘ನಾಟ್ಯಶ್ರೀ ಪ್ರಶಸ್ತಿ’ಗೆ ನೃತ್ಯ ಕಲಾವಿದೆ ಮಂಗಳೂರಿನ ಸನಾತನ ನೃತ್ಯಾಲಯದ ಮುಖ್ಯಸ್ಥೆ ಶಾರದಾಮಣಿ ಶೇಖರ್ ಇವರನ್ನು ಆಯ್ಕೆ ಮಾಡಲಾಗಿದೆ. ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ನೇತೃತ್ವದಲ್ಲಿ ಸಭೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಪ್ರಶಸ್ತಿಯು ರೂ.20,000/- ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ದಿನಾಂಕ 22 ಫೆಬ್ರವರಿ 2026ರಂದು ಬೀದರ್ ನ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಸತ್ಯಮೂರ್ತಿ ತಿಳಿಸಿದ್ದಾರೆ.
ಮುಲ್ಕಿ : ಕಿಲ್ಪಾಡಿಯ ಆದಿ ಕಿಲ್ಲಾಡಿ ಬಬ್ಬುಸ್ವಾಮಿ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಮತ್ತು ದ.ಕ. ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಕವಿ ಹಾಗೂ ಲೇಖಕ ಶಂಕರ್ ಪಡಂಗ ಕಿಲ್ಪಾಡಿಯವರ ‘ಕಾಣೆಯಾದಳು ಹುಡುಗಿ ಹಗಲುಗನಸಿನಲ್ಲಿ’ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿಯು ದಿನಾಂಕ 08 ಫೆಬ್ರವರಿ 2026ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ ನಡಿಕುದ್ರು ವಹಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಮಕ್ಕಳಲ್ಲಿ ಮೊಬೈಲ್ ಬಂದ ನಂತರ ಓದುವ ಹವ್ಯಾಸ ಕಡಿಮೆಯಾಗಿದೆ, ಕನ್ನಡಮ್ಮನ ಸೇವೆ ಮಾಡುವ ಮೂಲಕ ಮಾತೃಭಾಷೆಗೆ ಪ್ರೋತ್ಸಾಹ ನೀಡಬೇಕು ಕನ್ನಡ ಉಳಿಸಿ ಬೆಳೆಸಬೇಕು” ಎಂದರು. ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶ್ರೀಕಾಂತ ಭಟ್ ಪರೆಂಕಿಲ ಆಶೀರ್ವಚನ ನೀಡಿದರು. ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್…
ಮಂಗಳೂರು : ಶ್ರೀ ನಂದನೇಶ್ವರ ಯಕ್ಷಗಾನ ಮಂಡಳಿ ಇದರ ವತಿಯಿಂದ ದಿನಾಂಕ 08 ಫೆಬ್ರವರಿ 2026ರಂದು ಪಣಂಬೂರಿನ ಶ್ರೀ ನಂದನೇಶ್ವರ ದೇವಸ್ಥಾನದಲ್ಲಿ ‘ಯಕ್ಷ ಪರಮೇಶ’ ಎಂಬ ಪುಸ್ತಕ ಬಿಡುಗಡೆಗೊಂಡಿತು. ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಪುನರೂರು ಇವರು ಬಿಡುಗಡೆಗೊಳಿಸಿ ಮಾತನಾಡಿ “ಇಂದು ಎಷ್ಟೋ ಕಲಾವಿದರು ಅಸಾಮಾನ್ಯ ಪ್ರತಿಭೆಯಿದ್ದರೂ ಮಾಸಿ ಹೋಗುತ್ತಿದ್ದಾರೆ. ಅವರ ಸಾಧನೆ, ವಿಭಿನ್ನ ದೃಷ್ಟಿಯ ವೇಷಗಾರಿಕೆ, ಕಲಾ ವಲಯಕ್ಕೆ ಅವರದ್ದೇ ಆದ ಕೊಡುಗೆಗಳು ಗುರುತಿಸಲ್ಪಡಬೇಕು. ಆಧುನಿಕ ತಂತ್ರಜ್ಞಾನದಲ್ಲಿ ಅದಕ್ಕೆ ಅನೇಕ ಆಯಾಮಗಳಿವೆ. ರವಿಯವರು ಅಳಿದ ಶ್ರೇಷ್ಠ ಕಲಾವಿದ ಸವ್ಯಸಾಚಿ ಪಿ.ವಿ. ಪರಮೇಶರ ಜೀವನಗಾಥೆಯನ್ನು ಪುಸ್ತಕದ ದಾಖಲೆಯಲ್ಲಿ ಮೂಡಿಸಿದ್ದಾರೆ. ವಾಸುದೇವ ಐತಾಳರ ಆರ್ಥಿಕ ಬೆಂಬಲದಿಂದ ಪ್ರಕಟಗೊಂಡ ಈ ಪುಸ್ತಕದಂತೆಯೇ ಎಲೆಮರೆಯ ಕಲಾವಿದರ ಕೃತಿಗಳೂ ಬರಲಿ” ಎಂದು ಹೇಳಿದರು. ಡಾ. ಎಂ. ಪ್ರಭಾಕರ ಜೋಷಿಯವರು “ಕಲಾ ವಲಯದಲ್ಲಿ ಪರಮೇಶರಿಗಿದ್ದ ಕೌಶಲತೆಯು ಅದ್ಭುತವಾದುದು. ಯಕ್ಷ ರಂಗದ ಪರಿಪೂರ್ಣ ಪರಿಚಯ, ಪ್ರಸಾದನಾ ವೇಗ, ಪೇಟಗಳ ರಚನೆ, ಬೇರೆ ಬೇರೆ ರಂಗಗಳ ದುಡಿಮೆ – ಎಲ್ಲವೂ ಮಿಳಿತವಾಗಿದ್ದ…
ಮಂಗಳೂರು : ನೃತ್ಯಾಭ್ಯಾಸೀ ಮಕ್ಕಳಲ್ಲಿ ಭಾರತೀಯ ಕಲೆಗಳಲ್ಲಿರುವ ಪರಸ್ಪರ ಸಂಬಂಧವನ್ನು ಪರಿಚಯಿಸುತ್ತಾ, ಸಮಕಾಲೀನವಾದ ಹತ್ತನೇ ಹಾಗೂ ಪದವಿ ಪೂರ್ವ ತರಗತಿಗಳ ಪಬ್ಲಿಕ್ ಪರೀಕ್ಷೆಗಳ ಸುತ್ತಮುತ್ತಲಿನ ವಿಚಾರಗಳನ್ನು ಕತೆ-ಕೇಳುವಿಕೆ ಹಾಗೂ ಸಂಭಾಷಣೆಗಳ ಮೂಲಕ ಚರ್ಚಿಸುವ ಅಪೂರ್ವ ಗೊಂಬೆಯಾಟ ಕಾರ್ಯಕ್ರಮವು ಮಂಗಳೂರಿನ ಹಿಂದಿ ಪ್ರಚಾರ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ನಾದನೃತ್ಯ ಕಲಾಶಾಲೆಯಲ್ಲಿ ದಿನಾಂಕ 07 ಫೆಬ್ರವರಿ 2026ರ ಸಂಜೆ ನಡೆಯಿತು. ಡಾ. ಭ್ರಮರಿ ಶಿವಪ್ರಕಾಶರ ಪರಿಕಲ್ಪನೆಯಲ್ಲಿ ಈ ಕಾರ್ಯಕ್ರಮವನ್ನು ಘನ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಮಕ್ಕಳ ಶಿಕ್ಷಣದಲ್ಲಿ ಅಪಾರ ಆಸಕ್ತಿ ಹೊಂದಿದ್ದು ಸೃಜನಾತ್ಮಕವಾಗಿ ಗೊಂಬೆಯಾಟದ ಮೂಲಕ ಕತೆ ಹೇಳುವುದರಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿರುವ ಶ್ರೀಮತಿ ಉಜ್ವಲಾ ಕೃಷ್ಣರಾಜ್ ತನ್ನ ಗೊಂಬೆ ಲಲಿತಜ್ಜಿಯ ಕೈಯಿಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭಾರಂಭಗೈದರು. ನಾದನೃತ್ಯದ ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಶುಕೀ ರಾವ್, ಮಹಾಲಕ್ಷ್ಮೀ ಶೆಣೈ, ಶಿವಾನಿ, ವರ್ಣಿಕಾ ಆಚಾರ್ಯ, ಚಿನ್ಮಯೀ ಕೋಟ್ಯಾನ್, ಪ್ರಾಪ್ತ ಶೆಟ್ಟಿ ಹಾಗೂ ಸಮನ್ವಿತಾ ಪಿ.ಎಸ್. ಇವರುಗಳು ಹಿರಿಯ ವಾಗ್ಗೇಯಕಾರ ಊತ್ತುಕ್ಕಾಡು…
ಮೈಸೂರು : ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ (ರಿ.) ಆಯೋಜಿಸುವ ‘ನೆನಪಿನಂಗಳ’ ರಂಗಭೂಮಿಯ ನೆನ್ನೆ ನಾಳೆಗಳ ನಡುವೆ 2ನೇ ಸಂವಾದ ಕಾರ್ಯಕ್ರಮವನ್ನು ದಿನಾಂಕ 14 ಫೆಬ್ರವರಿ 2026ರಂದು ಸಂಜೆ 5-00 ಗಂಟೆಗೆ ಮೈಸೂರು ರಂಗಾಯಣದ ‘ಶ್ರೀರಂಗ’ದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂಗಳದಲ್ಲಿ ಹಿರಿಯ ರಂಗಕರ್ಮಿ ಶ್ರೀಮತಿ ಹರಿಪ್ರಸಾದ್ ಇವರು ಭಾಗವಹಿಸಲಿದ್ದಾರೆ.
ಉಪ್ಪಿನಂಗಡಿ : ಕಾಂಚನ ಲಕ್ಷ್ಮೀ ನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ ವತಿಯಿಂದ ಸಂಗೀತ ರತ್ನ ವಿ. ಕಾಂಚನ ವೆಂಕಟಸುಬ್ರಹ್ಮಣ್ಯಂ ಇವರ 105ನೇ ಜನ್ಮವರ್ಷ ಮಹೋತ್ಸವ ಹಾಗೂ 72ನೇ ವರ್ಷದ ‘ಕಾಂಚನೋತ್ಸವ-2026’ ಇದರ ಸಮಾರೋಪ ಸಮಾರಂಭವು ದಿನಾಂಕ 07 ಫೆಬ್ರವರಿ 2026ರಂದು ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ “ಪ್ರೀತಿ, ವಿಶ್ವಾಸ, ಸಂಸ್ಕೃತಿ, ಸಂಸ್ಕಾರದೊಂದಿಗೆ ಸಂಗೀತ ಮತ್ತು ದೇವತಾರಾಧನೆಯನ್ನು ಕಾಂಚನ ಕುಟುಂಬ ಮೈಗೂಡಿಸಿಕೊಂಡಿದೆ. ಸಂಗೀತಕ್ಕಾಗಿ ಈ ಕುಟುಂಬ ಎಲ್ಲವನ್ನೂ ಧಾರೆ ಎರೆದಿದೆ. ಹೀಗಾಗಿ ಕಾಂಚನ ಎಂಬ ಪುಟ್ಟ ಹಳ್ಳಿ ಇಂದು ದೇಶದಾದ್ಯಂತ ಪರಿಚಿತವಾಗಿದೆ” ಎಂದು ಹೇಳಿದರು. ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಮಾತನಾಡಿ, “ದೇಶದ ಶ್ರೇಷ್ಠ ಪೀಟೀಲು ವಾದಕ ಎಲ್. ಸುಬಹ್ಮಣ್ಯಂ ಅವರಂತೆ ಆಗಬಹುದಾದ ನೂರಾರು ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ. ಅವರಿಗೆ ಪ್ರೇರಣೆ, ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ನಾವುಗಳು ಕಾಂಚನ ಕುಟುಂಬದ ಸಂಗೀತ ಪರಂಪರೆಯನ್ನು ಉಳಿಸಿಕೊಳ್ಳಲು ಕೈಜೋಡಿಸಬೇಕಾಗಿದೆ” ಎಂದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅಧ್ಯಕ್ಷತೆ ವಹಿಸಿ…
ಮೈಸೂರು : ಕಲಾಮಂದಿರದಲ್ಲಿ ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ವತಿಯಿಂದ ಆಯೋಜಿಸಲಾದ ‘ಆಯಾಮೋತ್ಸವ – ಸಂಗೀತ, ನೃತ್ಯ, ನಾಟಕಗಳ ಉತ್ಸವ’ ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 08 ಫೆಬ್ರವರಿ 2026ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಕಾಳಚನ್ನೇಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. “ಆಯಾಮ ಸಂಸ್ಥೆಯ ಸ್ಥಾಪಕಿ ಹಾಗೂ ನಿರ್ದೇಶಕಿ ಡಾ. ಶಾಂಭವಿ ಸ್ವಾಮಿ ಇವರು ಹಲವು ವರ್ಷಗಳಿಂದ ಆಯಾಮ ಸಂಸ್ಥೆಯ ಮೂಲಕ ಗ್ರಾಮೀಣ ಹಾಗೂ ನಗರ ಮಕ್ಕಳಿಗೆ ಕಲೆ, ಸಾಹಿತ್ಯ, ಸಂಗೀತವನ್ನು ಕಲಿಸುವ ಮೂಲಕ ಸಂಗೀತ, ನಾಟಕ, ನೃತ್ಯಗಳ ಬಗ್ಗೆ ಮಕ್ಕಳಲ್ಲಿ ಅಭಿರುಚಿ ಬೆಳೆಸುವಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಯಾಮ ಸಂಸ್ಥೆ ಶ್ಲಾಘನೀಯ ಕಾರ್ಯ ಮಾಡುತ್ತಿದೆ” ಎಂದು ಪ್ರೊ. ಕಾಳಚನ್ನೇಗೌಡ ಅವರು ಪ್ರಶಂಸಿಸಿದರು. ಮಾನವ ಜೀವನದ ಬೆಳವಣಿಗೆಯನ್ನು ವಿವರಿಸಿದ ಅವರು, ಮನುಷ್ಯ ಅಲೆಮಾರಿಯಾಗಿ ಬದುಕುತ್ತಿದ್ದ ಕಾಲದಿಂದ ನೆಲೆ ನಿಂತು ಕೃಷಿ ಕಲಿತ ನಂತರ ಕಲೆ,…