Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ : ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 09 ಫೆಬ್ರುವರಿ 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೋಮವಾರಪೇಟೆಯ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ. ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶ್ರೀಮತಿ ಜಲಜಾ ಶೇಖರ್ ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಇಲ್ಲಿಯವರೆಗೆ ಏಳು ಪುಸ್ತಕಗಳನ್ನು ಇವರು ಹೊರತಂದಿದ್ದು ಇವರ ಎಂಟನೆಯ ಪುಸ್ತಕವು ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಳ್ಳಲಿದೆ. ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತಿಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ. ಶೈಕ್ಷಣಿಕ, ಸಾಹಿತ್ಯ ಅಲ್ಲದೆ ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಸೋಮವಾರಪೇಟೆಯ ‘ಅಕ್ಕನ ಬಳಗ’ದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಡಿ.ಸಿ.ಸಿ. ಬ್ಯಾಂಕ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರ ಮಂಡನೆ, ಕವಿಗೋಷ್ಠಿಗಳಲ್ಲಿ…
ತಮ್ಮ ಮೊದಲ ಕೃತಿಯಾದ ‘ಬಾ ಪರೀಕ್ಷೆಗೆ’ ಎಂಬ ಸಂಕಲನದಿಂದ ತೊಡಗಿ ‘ಮೌನ ಕರಗುವ ಹೊತ್ತು’ ಎಂಬ ಕವನ ಸಂಗ್ರಹಗಳಿಂದ ಆಯ್ದ 103 ಕವಿತೆಗಳೊಂದಿಗೆ ನಂತರದ ದಿನಗಳಲ್ಲಿ ರಚಿಸಿದ 22 ಕವಿತೆಗಳೂ ಸೇರಿದಂತೆ ಒಟ್ಟು 125 ಕವಿತೆಗಳ ಗುಚ್ಛವೇ ‘ಹೂ ದಂಡಿ.’ (2005) “ನುಗ್ಗಿ ಬಂದ ಸಂವೇದನೆಯ ನೆರೆಗೆ ದಂಡೆಯನ್ನು, ಒಡ್ಡನ್ನು ಕಟ್ಟಿದ್ದರಿಂದಲೇ ಅವು ಹುಚ್ಚು ಹೊಳೆಯಾಗಿ ಕೊಚ್ಚಿ ಹೋಗದಂತೆ, ವೇದನೆಯ ಜಡಿಮಳೆಯಾಗಿ ಸುರಿದು ಕಾಲಗರ್ಭದಲ್ಲಿ ಇಂಗಿ ಕಳೆದು ಹೋಗದಂತೆ, ಆ ಪ್ರವಾಹವನ್ನು ಅರಿವಿನತ್ತ ಪ್ರವಹನೀಯಗೊಳಿಸಿದ್ದರಿಂದ, ಸಂವೇದನೆಗಳ ಒತ್ತಡಗಳನ್ನು ಕಾವ್ಯದಲ್ಲಿ ಹರಿಯಬಿಟ್ಟದ್ದರಿಂದ ಬದುಕು ಸಹನೀಯವಾಗಿದೆ. ಶಾಂತ, ಹೂ ಹಗುರಾದ ಮನಸ್ಸಿನ ನಿರಾಳ ಭಾವದ ಈ ದಂಡಿ (ದಡ)ದಲ್ಲಿ ಕುಳಿತು ಇದುವರೆಗೆ ಬರೆದ ಕವಿತೆಗಳ ವಾಚನ ಮಾಡುವಾಗ ಅಭಿವ್ಯಕ್ತಿಯ ಹೆದ್ದೆರೆಗಳ ಮೊರೆತ ಮರುಕಳಿಸಿ ಗದ್ಗದಿತಳಾಗುತ್ತೇನೆ” ಎಂದು ಕವಯತ್ರಿಯು ಲೇಖಕರ ನುಡಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ. ‘ದಂಡಿ’ ಎಂಬ ಪದವನ್ನು ‘ದಂಡೆ’ ಎಂಬುದಾಗಿ ಪರಿಭಾವಿಸಿದರೆ ಅದಕ್ಕೆ ಮಾಲೆ ಎಂಬ ಅರ್ಥ ದೊರೆಯುವುದರಿಂದ ಈ ಸಂಕಲನವನ್ನು ‘ಹೂವಿನ ಮಾಲೆ’ ಎಂದೂ…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿದ ಸೃಜನಶೀಲ, ಸಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿತಕ್ಕದ್ದು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೋಟೆಯ ಮೇಲೆ ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ’ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ : 94483 46276 ಇಲ್ಲಿಗೆ ದಿನಾಂಕ…
ಮಂಗಳೂರು : ಪ್ರಸಿದ್ದ ಸಂಗೀತ ಸಂಸ್ಥೆ ಸ್ವರಲಯ ಸಾಧನಾ ಫೌಂಡೇಶನ್ ಹಾಗೂ ಕಲಾ ಶಾಲೆ ವತಿಯಿಂದ ದಿನಾಂಕ 14 ಜನವರಿ 2026ರಂದು ಮಂಗಳೂರಿನ ಪುರಭವನದಲ್ಲಿ ಆಯೋಜನೆಗೊಳ್ಳಲಿರುವ ಸ್ವರ ಸಂಕ್ರಾಂತಿ ಕಾರ್ಯಕ್ರಮದಲ್ಲಿ ದೇಶದ ಖ್ಯಾತ ಹಿಂದೂಸ್ಥಾನಿ ಗಾಯಕ, ಪದ್ಮಶ್ರೀ ಪಂಡಿತ್ ಅಜೋಯ್ ಚಕ್ರವರ್ತಿ ಇವರಿಂದ ‘ಸ್ವರ ಸಂಧ್ಯಾ’ ಸಂಗೀತ ಕಛೇರಿ ನಡೆಯಲಿದೆ. ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಕಛೇರಿ ನಡೆಸಿಕೊಡಲಿರುವ ಪಂಡಿತ್ ಅಜೋಯ್ ಚಕ್ರವರ್ತಿ ಇವರಿಗೆ ಹಾರ್ಮೋನಿಯಂನಲ್ಲಿ ಅಜಯ್ ಜೋಗ್ಲೆಕರ್ ಮತ್ತು ತಬಲಾದಲ್ಲಿ ಇಶಾನ್ ಘೋಷ್ ಸಹಕರಿಸಲಿದ್ದಾರೆ. ಪದ್ಮಶ್ರೀ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕುಮಾರ್ ಗಂಧರ್ವ ರಾಷ್ಟ್ರೀಯ ಪ್ರಶಸ್ತಿ, ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ, 2012ರಲ್ಲಿ ಆಳ್ವಾಸ್ ವಿರಾಸತ್ ಪ್ರಶಸ್ತಿ ಸಹಿತ ನೂರಾರು ಪ್ರಶಸ್ತಿಗಳು ಅಜೋಯ್ ಚಕ್ರವರ್ತಿ ಇವರಿಗೆ ಸಂದಿವೆ. ಮಧ್ಯಾಹ್ನ 2-00 ಗಂಟೆಗೆ ಸ್ವರ ಸಂಕ್ರಾಂತಿ ಕಾರ್ಯಕ್ರಮ ಆರಂಭವಾಗಲಿದ್ದು, ಮೊದಲಿಗೆ ಕಲಾ ಶಾಲೆಯ 100ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ‘ಸ್ವರಲಯ ಸಿಂಫೋನಿ’ ವಯೋಲಿನ್ ಕಛೇರಿ ನಡೆಯಲಿದೆ. ಸಂಜೆ 4-00 ಗಂಟೆಗೆ ಸಭಾ…
ಮಂಗಳೂರು : ಶಕ್ತಿನಗರದ ಪದವು ಫ್ರೆಂಡ್ಸ್ ಕ್ಲಬ್ (ರಿ.) ಇದರ ಸ್ವರ್ಣ ಸಂಭ್ರಮದ ಪ್ರಯುಕ್ತ ಸ್ವರ್ಣ ಸಂಭ್ರಮ ಸಮಿತಿ ಸಹಯೋಗದೊಂದಿಗೆ ‘ರಂಗೋಲಿ ಸ್ಪರ್ಧೆ’ಯನ್ನು ದಿನಾಂಕ 18 ಜನವರಿ 2026ರಂದು ಶಕ್ತಿನಗರದ ಸರಕಾರಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. 1ರಿಂದ 7ನೇ ತರಗತಿ, 8ರಿಂದ 12ನೇ ತರಗತಿಯವರೆಗೆ ಹಾಗೂ ಪದವಿ ತರಗತಿಯಿಂದ ಮೇಲ್ಪಟ್ಟು ಸಾರ್ವಜನಿಕ ಹೀಗೆ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ರಂಗೋಲಿ ಪುಡಿ ಮಾತ್ರ ಬಳಸಿ ರಚಿಸಬೇಕು. ಇದೊಂದು ವೈಯುಕ್ತಿಕ ಸ್ಪರ್ಧೆಯಾಗಿದ್ದು, ಯಾವುದೇ ಅಚ್ಚುಗಳನ್ನು ಬಳಸುವಂತಿಲ್ಲ. ಹೆಚ್ಚಿನ ವಿವರಗಳಿಗೆ ಪ್ರಸಾದ್ ಟಿ. 9243303006 ಮತ್ತು ರವಿಚಂದ್ರ 9900713662 ಸಂಖ್ಯೆಯನ್ನು ಸಂಪರ್ಕಿಸಿರಿ.
ಧಾರವಾಡ : ಕನ್ನಡದ ಆದ್ಯ ನಾಟಕಕಾರ, ಕವಿ, ಕೀರ್ತನಕಾರ, ಕನ್ನಡದ ಕಟ್ಟಾಳು ‘ಶಾಂತಕವಿ ಸಕ್ಕರಿ ಬಾಳಾಚಾರ್ಯ’ ಇವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕೆಂಬ ಆಶಯದೊಂದಿಗೆ ಹಾಗೂ ಕನ್ನಡ ರಂಗಭೂಮಿಯಲ್ಲಿ ಅತ್ಯುತ್ತಮವೆನಿಸಬಹುದಾದ ಹೊಸ ನಾಟಕ ಕೃತಿಗಳು ಬರುತ್ತಿಲ್ಲದಿರುವುದನ್ನು ಮನಗಂಡು ನಾಟಕಕಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಉತ್ತಮ ನಾಟಕಗಳನ್ನು ಪ್ರಕಟಿಸಿ ರಂಗದ ಮೇಲೆ ತರುವ ಸದುದ್ದೇಶದಿಂದ ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟ್ (ರಿ.) ಧಾರವಾಡ ಇವರು ಶಾಂತಕವಿ ಸಕ್ಕರಿ ಬಾಳಾಚಾರ್ಯ ‘ಶಾಂತರಂಗ’ ನಾಟಕಕಾರ ಪ್ರಶಸ್ತಿಯನ್ನು ಸ್ಥಾಪಿಸಿ ಪ್ರತಿ ವರುಷ ಕನ್ನಡದ ಅತ್ಯುತ್ತಮ ನಾಟಕ ರಚನಕಾರರಿಗೆ ಪ್ರಶಸ್ತಿಯನ್ನು ಕೊಡಲು ನಿರ್ಧರಿಸಿದೆ. 2025ನೇ ಸಾಲಿನ ಪ್ರಶಸ್ತಿಗಾಗಿ ಆಗಸ್ಟ್ ತಿಂಗಳಿನಲ್ಲಿ ನಾಟಕ ರಚನಾಕಾರರಿಂದ ಹಸ್ತಪ್ರತಿಗಳನ್ನು ಆಹ್ವಾನಿಸಿ ಅತ್ಯುತ್ತಮ ನಾಟಕ ಪ್ರಶಸ್ತಿಗೆ ರೂ.15,000/- ಜೊತೆಗೆ ಶಾಂತಕವಿಗಳ ಸ್ಮರಣಿಕೆ, ಶಾಲು, ಹಾರ, ಫಲ ತಾಂಬೂಲ ಮತ್ತು ಪ್ರಶಸ್ತಿ ಪತ್ರವನ್ನು ಕೊಡಲಾಗುವುದೆಂದು ಹಾಗೂ ತೀರ್ಪುಗಾರರ ಮೆಚ್ಚುಗೆ ಪಡೆದ ಎರಡು ನಾಟಕ ಕೃತಿಗಳಿಗೆ ಧಾರವಾಡದ ಅಭಿನಯ ಭಾರತಿ ಸಂಸ್ಥೆ ವತಿಯಿಂದ ತಲಾ ರೂ.2,500/-ಗಳ ಪ್ರೋತ್ಸಾಹ ಧನವನ್ನು…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ. ಈ ದತ್ತಿಯನ್ನು ಗೌರಮ್ಮರವರ ಪುತ್ರ ಬಿ.ಜಿ. ವಸಂತರವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 22 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2025-26ನೇ ಸಾಲಿನ 23ನೇ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದಾಗ 10 ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಪ್ರಸ್ತುತ ಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ ಅವರು ಎಲ್ಲ ಪುಸ್ತಕಗಳನ್ನು ಪರಮಾರ್ಶಿಸಿ ಶ್ರೀಮತಿ ಪೂಜಾರಿರ ಕೃಪಾ ದೇವರಾಜ್ ಇವರು ರಚಿಸಿದ ‘ಮಂತ್ರ ಪುಷ್ಪ’ -ಕಥೆಗಳ ಕ್ಯಾನ್ವಾಸ್ ಕೃತಿಗೆ ಪ್ರಶಸ್ತಿ ಲಭ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ಸಾಹಿತಿ ಮತ್ತು ಕವಿಯತ್ರಿಯಾಗಿರುವ ಶ್ರೀಮತಿ ಪೂಜಾರಿರ ಕೃಪಾ ದೇವರಾಜ್ ರವರು ‘ಭಾವದ ಕದತಟ್ಟಿ’ – ಕವನ ಸಂಕಲನ, ‘ಮರ್ಮರ’ ಕಥಾ ಸಂಕಲನ…
ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ವತಿಯಿಂದ ‘ಸಂವಾದ ಕಾರ್ಯಕ್ರಮ’ವನ್ನು ದಿನಾಂಕ 16 ಜನವರಿ 2026ರಂದು ಸಂಜೆ 3-30 ಗಂಟೆಗೆ ಕಾಸರಗೋಡಿನ ಕರಂದಕ್ಕಾಡಿಗೆ ಸಮೀಪದ ಐ.ಎಂ.ಎ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಗುರುಪ್ರಸಾದ ಐತಾಳ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಡಾ. ಶ್ರೀಪತಿ ಕಜಂಪಾಡಿ, ಡಾ. ತೇಜಸ್ವಿ ವ್ಯಾಸ, ಶ್ರೀ ರಾಧಾಕೃಷ್ಣ ಉಳಿಯತಡ್ಕ, ಡಾ. ಧನಂಜಯ ಕುಂಬ್ಳೆ ಮತ್ತು ಶ್ರೀಮತಿ ಸ್ನೇಹಲತಾ ದಿವಾಕರ್ ಇವರುಗಳು ಸಂವಾದಕ್ಕೆ ಚಾಲನೆ ನೀಡಲಿದ್ದಾರೆ.
ಮಂಗಳೂರು : ಅರೆಹೊಳೆ ಪ್ರತಿಷ್ಠಾನವು ‘ನಾನು ಬರೆದ ಕಥೆ’ ಎಂಬ ಕನ್ನಡ ಸಣ್ಣ ಕಥಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕಥೆಗಾರರಿಂದ ಸ್ವರಚಿತ ಅಪ್ರಕಟಿತ ಕಥೆಗಳನ್ನು ಆಹ್ವಾನಿಸಿದೆ. 2000 ಶಬ್ದ ಮಿತಿಯ ಕಥೆಗಳಾಗಿರಬೇಕು. ಆಯ್ಕೆಯಾದ ಕಥೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳಿದ್ದು ಅನುಕ್ರಮವಾಗಿ ರೂ.7000/-, ರೂ.5000/- ಮತ್ತು ರೂ.3,000/- ನಗದು, ಪ್ರಶಸ್ತಿ ಪತ್ರ ನೀಡಲಾಗುವುದು. ತೀರ್ಪುಗಾರರ ಮೆಚ್ಚುಗೆ ಪಡೆದ ಐದು ಕಥೆಗಳಿಗೆ ತಲಾ ರೂ.1000/- ಬಹುಮಾನವಿರುತ್ತದೆ. ಕಥೆ ಕಳಿಸಲು ಕೊನೆಯ ದಿನ ಜನವರಿ 30 ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ತಿಳಿಸಿದ್ದಾರೆ.
ಮಂಗಳೂರು : ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ದಿನಾಂಕ 04 ಜನವರಿ 2026ರಂದು ಸಂಜೆ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’ದ ಸಮಾರೋಪ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ “ಯಕ್ಷಗಾನ ಕರಾವಳಿಯ ಶ್ರೇಷ್ಠ ಕಲೆ. ಈ ಕಲೆಯನ್ನು ಕೇವಲ ಜಿಲ್ಲೆಗೆ ಸೀಮಿತಗೊಳಿಸದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಮಕ್ಕಳಿಗೆ ಯಕ್ಷಶಿಕ್ಷಣ ಕಲಿಸುವ ಮೂಲಕ ವಿಸ್ತರಣೆಯಾಗಲಿ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ನೀಡುವ ಮೂಲಕ ಯಕ್ಷಗಾನ ಕಲೆಯನ್ನು ರಾಜ್ಯದಾದ್ಯಂತ ವಿಸ್ತರಿಸುತ್ತಿರುವ ಕೀರ್ತಿ ಪ್ರಖ್ಯಾತ ಯುವ ಭಾಗವತರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ ಸಲ್ಲುತ್ತದೆ. ಯಕ್ಷಗಾನದ ಮೂಲಕ ಪುರಾಣ, ಇತಿಹಾಸವನ್ನು ವಿಶ್ವಕ್ಕೆ ಪರಿಚಯಿಸಿದ ಪಟ್ಲ ಫೌಂಡೇಶನ್ ಟ್ರಸ್ಟಿನ ಕೆಲಸ ಕಾರ್ಯ ಶ್ಲಾಘನೀಯ” ಎಂದು ತಿಳಿಸಿದರು. ಇನ್ನೋರ್ವ ಮುಖ್ಯ…