Subscribe to Updates
Get the latest creative news from FooBar about art, design and business.
Author: roovari
ಬಂಟ್ವಾಳ : ಕಲಾನಿಕೇತನ ಡಾನ್ಸ್ ಫೌಂಡೇಷನ್ ಕಲ್ಲಡ್ಕ ಇವರು ಪ್ರಸ್ತುತ ಪಡಿಸುವ ‘ರಜತ ಕಲಾ ಯಾನ’ ಸಂಭ್ರಮವನ್ನು ದಿನಾಂಕ 26 ಅಕ್ಟೋಬರ್ 2025ರಂದು ಬಂಟ್ವಾಳ ಬಿ.ಸಿ. ರೋಡ್ ಇಲ್ಲಿರುವ ಸ್ಪರ್ಶ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಚಕ್ರಪಾಣಿ ನೃತ್ಯ ಕಲಾ ಕೇಂದ್ರದ ಸುರೇಶ್ ಅತ್ತಾವರ ಮತ್ತು ಸ್ಮಿಥೇಶ್ ಎಸ್. ಬಾರ್ಯ ಇವರು ಭಾಗವಹಿಸಲಿದ್ದಾರೆ. ವಿದುಷಿ ಅಮೃತ ಸಂದೀಪ್ ಆಚಾರ್ಯ, ವಿದುಷಿ ಹರ್ಷಿತಾ ಟಿ.ಪಿ., ವಿದುಷಿ ಪ್ರಜ್ಞಾ, ವಿದುಷಿ ರಾಜಶ್ರೀ ಅಭಿಷೇಕ್, ವಿದುಷಿ ಶ್ರೀದೇವಿ, ವಿದುಷಿ ಕೀರ್ತಿ ಪ್ರಭು ಕೆ., ವಿದುಷಿ ಪೂಜಾ ಪ್ರಶಾಂತ್ ಆಚಾರ್ಯ, ವಿದುಷಿ ಮಹಿಮಾ ಎಂ. ಪಣಿಕರ್, ವಿದುಷಿ ಪ್ರತೀಕ್ಷಾ ಕೆ. ಆಚಾರ್ಯ, ವಿದುಷಿ ದೀಪಾಲಿ, ವಿದುಷಿ ಶಾಶ್ವತ ತಾರನಾಥ್, ವಿದುಷಿ ಅನುರಾಧ ವೈ., ವಿದುಷಿ ಸೃಜನಾ ಕೆ.ಸಿ., ವಿದುಷಿ ಪ್ರಥ್ವಿ ಸಿ. ಗೌಡ, ವಿದುಷಿ ಹರಿಪ್ರಿಯಾ, ವಿದುಷಿ ಮೇಘಾ ಎನ್., ವಿದುಷಿ ಅನುಷಾ ರಾವ್, ವಿದುಷಿ ಚಂದನ ಕೊಪ್ಪಳ, ವಿದುಷಿ ಕೃತಿ ಆರ್., ವಿದುಷಿ ಅಂಜನಾ ಕೆ. ರಾವ್…
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ, ಆರ್ಟ್ ಕೆನರಾ ಟ್ರಸ್ಟ್ ಮತ್ತು ಮಂಗಳೂರು ಆರ್ಟ್ ಅರ್ಚಿವಲ್ ಪ್ರಾಜೆಕ್ಟ್ ಇವುಗಳ ಸಹಯೋಗದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನದ ಉದ್ಘಾಟನೆಯನ್ನು ದಿನಾಂಕ 25 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಎಂ. ಪ್ರಶಾಂತ್ ಶೇಟ್, ಜಯಂತ್ ಕೋಡ್ಕಣಿ ಮತ್ತು ಸುಭಾಸ್ ಚಂದ್ರ ಬಸು ಇವರುಗಳು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಅಂಪೈರ್ ಕಸ್ತೂರಿ ಬಾಲಕೃಷ್ಣ ಪೈ ಇವರನ್ನು ಸನ್ಮಾನಿಸಲಾಗುವುದು. ದಿನಾಂಕ 01 ನವೆಂಬರ್ 2025ರ ತನಕ ಬೆಳಗ್ಗೆ 11-00 ಗಂಟೆಯಿಂದ ಸಂಜೆ 7-00 ಗಂಟೆ ತನಕ ಪ್ರದರ್ಶನವು ತೆರೆದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಿರಾಜ ಶೆಟ್ಟಿ 99863 66355 ಮತ್ತು ರಾಜೇಂದ್ರ ಕೇದಿಗೆ 94800 14812 ಇವರನ್ನು ಸಂಪರ್ಕಿಸಿರಿ.
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಇದರ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಅಕ್ಟೋಬರ್ ತಿಂಗಳ ಕಾರ್ಯಕ್ರಮದಲ್ಲಿ ಕುಂದಾಪುರ ಕುಂದೇಶ್ವರದ ಶ್ರೀ ಏಕನಾಥೇಶ್ವರಿ ಭಜನಾ ಮಂಡಳಿ ಇವರಿಂದ ‘ಭಕ್ತಿ ಗೀತೆಗಳು’ ಕಾರ್ಯಕ್ರಮವನ್ನು ದಿನಾಂಕ 26 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಯು.ಎಸ್.ಎ.ಯ ಎಸ್.ಎಲ್.ಕೆ. ಆಸ್ಟಿನ್ ಇದರ ಸೀನಿಯರ್ ಮ್ಯಾನೇಜರ್ ಎಮ್. ರಾಜೇಶ್ ರತ್ನಾಕರ ಪೈ ಇವರು ಕೊಡುಗೆ ನೀಡಿದ 55 ಇಂಚಿನ ಟಿ.ಸಿ.ಎಲ್. ಟಿ.ವಿ.ಯ ಉದ್ಘಾಟನೆ ನಡೆಯಲಿದೆ.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಪಾರವಾಗಿ ಅನುಭವಿರುವ ಹಿರಿಯ ನಾಗರಿಕರು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಅವರು ತಮ್ಮ ಸ್ವರಚಿತ ಕವನವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು. ಕವನಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಲು ಸಮಿತಿ ರಚಿಸಲಾಗುವುದು. ಕವನ 16 ಗೆರೆಗಳನ್ನು ಮೀರಿರಬಾರದು. ಒಬ್ಬರು ಒಂದು ಕವನವನ್ನು ಮಾತ್ರ ಕಳುಹಿಸಬಹುದು. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನ)ಗಳನ್ನೂ ಕಳುಹಿಸಬಹುದು. ಲಕೋಟೆಯ ಮೇಲೆ ‘ರಾಜ್ಯೋತ್ಸವ ಹಿರಿಯರ ಕವಿಗೋಷ್ಠಿ’ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಮಾತ್ರ ಅವಕಾಶ. ಕವನಗಳನ್ನು ಕಳುಹಿಸಲು ಕಡೆಯ ದಿನಾಂಕ 05 ನವೆಂಬರ್ 2025 ಆಗಿದ್ದು, ಈ ಕೆಳಗಿನ ಮೊಬೈಲ್ ಗಳಿಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು. ಕವನದ ಜೊತೆಗೆ ಆಧಾರ್ ಕಾರ್ಡ್ ಅಥವಾ ಹಿರಿಯ ನಾಗರಿಕ ದೃಢೀಕರಣ ಪತ್ರದ ನಕಲನ್ನು ಕಳುಹಿಸಿತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು,…
ಪೆರಿಯ : ಬೇಕಲದ ಗೋಕುಲಂ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ಅಡಿಯಲ್ಲಿ ನಡೆಯುತ್ತಿರುವ ಐದನೇ ದೀಪಾವಳಿ ಸಂಗೀತೋತ್ಸವದ ಎರಡನೇ ದಿನ ದಿನಾಂಕ 21 ಅಕ್ಟೋಬರ್ 2025ರಂದು ಗೋಶಾಲೆಯ ಸಂಸ್ಥಾಪಕರೂ ಜ್ಯೋತಿಷ್ಯ ಪಂಡಿತರೂ ಆದ ವಿಷ್ಣುಪ್ರಸಾದ್ ಹೆಬ್ಬಾರ್ ರಚಿಸಿದ ನವಗ್ರಹ ಕುರಿತ ಸಂಗೀತ ಕೀರ್ತನೆಗಳನ್ನು ಕಾಸರಗೋಡು ಜಿಲ್ಲೆಯ ಸುಪ್ರಸಿದ್ಧ ಕರ್ನಾಟಕ ಸಂಗೀತ ತಜ್ಞ ವೆಳ್ಳಿಕೋತ್ ವಿಷ್ಣುಭಟ್ ಬಿಡುಗಡೆ ಮಾಡಿ ಹಾಡಿದರು. ವಿಷ್ಣು ಭಟ್ ಇವರು ಒಂಬತ್ತು ಗ್ರಹಗಳ ಮೇಲೆ ಲಾವಂಗಿ, ಚಕ್ರವಾಕಂ, ಆನಂದ ಭೈರವಿ, ಧನ್ಯಾಸಿ, ಆರಾಭಿ, ಹಂಸಧ್ವನಿ, ವಸಂತ, ಶ್ರೀ ರಾಗಂ ಮತ್ತು ಹಂಸನಾದಂಗಳಲ್ಲಿ ಒಂಬತ್ತು ಕೃತಿಗಳನ್ನು ರಚಿಸಿದ್ದಾರೆ. ಪಕ್ಕ ವಾದ್ಯದಲ್ಲಿ ವೀಣೆಯಲ್ಲಿ ವೈ.ಜಿ. ಶ್ರೀಲತಾ ನಿಕ್ಷಿತ್, ಪಿಟೀಲಿನಲ್ಲಿ ಸುನೀತಾ ಹರಿಶಂಕರ್, ಮೃದಂಗದಲ್ಲಿ ತ್ರಿಪುಣಿತುರ ರಾಜ್ ನಾರಾಯಣನ್, ಘಟಂನಲ್ಲಿ ರೋಹಿತ್ ಪ್ರಸಾದ್, ಮೋರ್ಸಿಂಗ್ ನಲ್ಲಿ ಗೋಪಿ ನಾದಾಲಯ ಸಹಕರಿಸಿದರು. ಎರಡನೇ ದಿನ ಚೆನ್ನೈನಲ್ಲಿ ಅನಸೂಯಾ ಪಾಠಕ್, ಸರ್ವೇಶ್ ದೇವಸ್ಥಲಿ, ಅದಿತಿ ಪ್ರಹ್ಲಾದ್, ಅಭಿಜ್ಞಾ ರಾವ್, ಶಿಲ್ಪಾ ಪಂಚ ಮತ್ತು ಅಜಯ್ ಮುಕ್ಕು ಚೆನ್ನೈ,…
ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ಕಲಾಕೇಂದ್ರದ ನಿಕಟಪೂರ್ವ ಅಧ್ಯಕ್ಷರಾದ ರಂಗಭೂಮಿ ನಿರ್ದೇಶಕರಾದ ಐರೋಡಿ ವೈಕುಂಠ ಹೆಬ್ಬಾರ್ ಸಂಸ್ಮರಣಾ ಕಾರ್ಯಕ್ರಮವನ್ನು ದಿನಾಂಕ 26 ಅಕ್ಟೋಬರ್ 2025ರಂದು ಅಪರಾಹ್ನ 2-30 ಗಂಟೆಗೆ ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಧಾಕೃಷ್ಣ ಕಲ್ಚಾರ್ ರಚಿತ ‘ಶಲ್ಯಭೇಧನ’ ತಾಳಮದ್ದಲೆಯಲ್ಲಿ ಗಣೇಶ ಆಚಾರ್ಯ ಬಿಲ್ಲಾಡಿ, ರಾಘವೇಂದ್ರ ಹೆಗಡೆ, ವಾಗ್ವೀಲಾಸ ಭಟ್ಟ, ಉಮಾಕಾಂತ ಭಟ್, ರಾಧಾಕೃಷ್ಣ ಕಲ್ಚಾರ್, ಪ್ರಭಾಕರ ಜೋಷಿ ಮತ್ತು ಮಲ್ಪೆ ಲಕ್ಷ್ಮೀನಾರಾಯಣ ಸಾಮಗ ಇವರುಗಳು ಭಾಗವಹಿಸಲಿದ್ದಾರೆ. 5-00 ಗಂಟೆಗೆ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ಅಧ್ಯಕ್ಷರಾದ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ದಿವಂಗತ ವೈಕುಂಠ ಹೆಬ್ಬಾರ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಗೇರುಸೊಪ್ಪೆ ಶಾಂತಪ್ಪಯ್ಯ ರಚಿತ ‘ಶಲ್ಯ ಸಾರಥ್ಯ’ ತಾಳಮದ್ದಲೆಯಲ್ಲಿ ಶಂಕರ ಪೈ, ಕೃಷ್ಣ ಪ್ರಕಾಶ್ ಉಳಿತ್ತಾಯ, ರಾಜಾರಾಮ ರಾವ್, ಜಬ್ಬಾರ್ ಸಮೊ, ಪವನ್ ಕಿರಣಕೆರೆ…
ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ದೀಪಾವಳಿ ಪ್ರಯುಕ್ತ ಪ್ರಸ್ತುತ ಪಡಿಸುವ ‘ಉದಯರಾಗ – 62’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ದಿನಾಂಕ 26 ಅಕ್ಟೋಬರ್ 2025ರಂದು ಬೆಳಗ್ಗೆ 6-00 ಗಂಟೆಗೆ ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಡೆಯಲಿದೆ. ಕೃಷ್ಣಾಪುರದ ಗಣೇಶ್ ಐತಾಳ್ ಇವರ ಹಾಡುಗಾರಿಕೆಗೆ ಪ್ರಣವ್ ಅಡಿಗ ಕೊಳಲು ಮತ್ತು ಕಾರ್ತಿಕ್ ಭಟ್ ಇನ್ನಂಜೆ ಇವರು ತಬಲಾದಲ್ಲಿ ಸಾಥ್ ನೀಡಲಿದ್ದಾರೆ. ಭಾರತಾಂಜಲಿಯ ಶ್ರೀಧರ ಹೊಳ್ಳ ಇವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.
ಮಂಗಳೂರು : ಕುಂದಾಪುರದ ಕಾರ್ವಾಲ್ ಮನೆತನ ಹಾಗೂ ಮಾಂಡ್ ಸೊಭಾಣ್ ಜಂಟಿಯಾಗಿ, ಕೊಂಕಣಿ ಕಲೆ, ಸಂಸ್ಕೃತಿಗೆ ಮಹತ್ತರ ಕೊಡುಗೆ ನೀಡಿದ ಕಲಾವಿದರನ್ನು ಗೌರವಿಸಲು ನೀಡುವ 21ನೇ ವರ್ಷದ ‘ಕಲಾಕಾರ್ ಪುರಸ್ಕಾರ’ಕ್ಕೆ ಕಾಸರಗೋಡು ಚಿನ್ನಾ ಇವರನ್ನು ಆಯ್ಕೆ ಮಾಡಲಾಗಿದೆ. ದಿನಾಂಕ 02 ನವೆಂಬರ್ 2025ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 6-00 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಇವರು ರೂ.50,000/- ನಗದು ಒಳಗೊಂಡ ಈ ಪುರಸ್ಕಾರವನ್ನು ಪ್ರದಾನ ಮಾಡಲಿರುವರು. ಭಾಷಾ ತಜ್ಞ ಡೊ ಪ್ರತಾಪ್ ನಾಯ್ಕ್ ಮತ್ತು ಮಸ್ಕತ್ ನಲ್ಲಿರುವ ಉದ್ಯಮಿ ಹಾಗೂ ಶ್ರೇಷ್ಟ ಕಲಾಪ್ರೋತ್ಸಾಹಕ ಸ್ಟ್ಯಾನ್ಲಿ ಫೆರ್ನಾಂಡಿಸ್ (ದಾಟ್ಟು) ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಶ್ರೀನಿವಾಸ ರಾವ್ ಎಸ್. (68) ಕಾಸರಗೋಡು ಚಿನ್ನಾ ಎಂದು ರಂಗಲೋಕದಲ್ಲಿ ಪ್ರಸಿದ್ಧರು. ನಟನೆಯಲ್ಲಿ ಚಿನ್ನದ ಪದಕದೊಡನೆ ಡಿ.ಎಫ್.ಎ. ಪದವಿ ಪಡೆದಿದ್ದಾರೆ. 1969ರಲ್ಲಿ ರಂಗ ಪ್ರವೇಶ ಮಾಡಿದ ಇವರು ಕೊಂಕಣಿ,…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಶರಸೇತು ಬಂಧನ’ ಪ್ರಸಂಗದೊಂದಿಗೆ ದಿನಾಂಕ 21 ಅಕ್ಟೋಬರ್ 2025ರ ಮಂಗಳವಾರ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ನಿತೀಶ ಕುಮಾರ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಪರೀಕ್ಷಿತ್ ಹಂದ್ರಟ್ಟ, ಸಮರ್ಥ ವಿಷ್ಣು ಈಶ್ವರಮಂಗಲ ಭಾಗವಹಿಸಿದರು. ಅರ್ಜುನನಾಗಿ ಭಾಸ್ಕರ ಬಾರ್ಯ ಹಾಗೂ ಮಾಂಬಾಡಿ ವೇಣುಗೋಪಾಲ ಭಟ್, ಹನುಮಂತನಾಗಿ ಗುಡ್ಡಪ್ಪ ಬಲ್ಯ, ವೃದ್ಧ ವಿಪ್ರನಾಗಿ ದುಗ್ಗಪ್ಪ ಯನ್., ಶ್ರೀರಾಮನಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಪಾತ್ರಗಳನ್ನು ಪೋಷಿಸಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿಡುಗಳ ಕೃಷ್ಣ ಭಟ್ ಜೋಡುಕಟ್ಟೆ ಪ್ರಾಯೋಜಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಇತ್ತೀಚೆಗೆ ಅಗಲಿದ ನಾಡಿನ ಹೆಸರಾಂತ ಭಾಗವತ ದಿನೇಶ ಅಮ್ಮಣ್ಣಾಯ ಇವರಿಗೆ ನುಡಿ ನಮನ ಸಲ್ಲಿಸಲಾಯಿತು. ಭಾಸ್ಕರ ಬಾರ್ಯ ಹಾಗೂ ಗುಡ್ಡಪ್ಪ ಬಲ್ಯ…
ಮಂಗಳೂರು : ಕೊಟ್ಟಾರದ ಭರತಾಂಜಲಿಯ ಕಿಂಕಿಣಿ ತ್ರಿಂಶತ್ ಸಂಭ್ರಮದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆ ‘ನೃತ್ಯ ರತ್ನ ಶೋಧ 2025’ ಕಾರ್ಯಕ್ರಮವು ದಿನಾಂಕ 18 ಅಕ್ಟೋಬರ್ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಈ ಭರತನಾಟ್ಯ ಸ್ಪರ್ಧೆಗೆ ಚಾಲನೆ ನೀಡಿದ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಇವರು ಮಾತನಾಡುತ್ತಾ “ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆಯನ್ನು ಆಯೋಜಿಸಿರುವುದರಿಂದ ಭರತನಾಟ್ಯದ ವಿವಿಧ ಬಾಣಿ (ಶೈಲಿ)ಗಳು ಒಂದೇ ವೇದಿಕೆಯಲ್ಲಿ ಅನಾವರಣಗೊಂಡಿದೆ. ದೇಶದ ನಾನಾ ಭಾಗದಲ್ಲಿನ ಗುರುಗಳ ಭರತನಾಟ್ಯ ಶೈಲಿಯು ಒಂದೇ ವೇದಿಕೆಯಲ್ಲಿ ಪ್ರಸ್ತುತವಾಗುವ ಮೂಲಕ ನೃತ್ಯನಂದನವನದ ಅನಾವರಣಗೊಂಡಿತು” ಎಂದು ಹೇಳಿದರು. “ಶಾಸ್ತ್ರೀಯತೆ ಹಾಗೂ ಯುವಪ್ರತಿಭೆಗಳ ಸ್ಪರ್ಧಾತ್ಮಕ ಮತ್ತು ಪ್ರದರ್ಶನಾತ್ಮಕ ವಿಚಾರಗಳಲ್ಲಿ ಒಂದು ಪ್ರಮುಖ ಘಟನೆಯಾಗಿ ಹೊರಹೊಮ್ಮಿದೆ. ರಾಷ್ಟ್ರಮಟ್ಟದ ಸ್ಪರ್ಧೆಯು ಕಲಾವಿದರಿಗೆ ತಮ್ಮ ನೈಪುಣ್ಯವನ್ನು ಪ್ರಸ್ತುತ ಪಡಿಸಲು ಮಾತ್ರವಲ್ಲ, ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಯನ್ನು ಕಾಪಾಡಿ ಮುಂದುವರಿಸಲು ಪ್ರೇರಣೆಯಾಗಿದೆ. ಈ ಸ್ಪರ್ಧೆಯು ರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗಳು ಶ್ರೇಷ್ಠತೆಯ ಹೊಸ ಮಾನದಂಡಗಳನ್ನು ನಿರ್ಮಿಸಿದೆ” ಎಂದು ತೀರ್ಪುಗಾರರಾಗಿ ಆಗಮಿಸಿದ ಬೆಂಗಳೂರಿನ ನೃತ್ಯ…