Subscribe to Updates
Get the latest creative news from FooBar about art, design and business.
Author: roovari
ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಪ್ರಸ್ತುತ ಪಡಿಸುವ ‘ಅಪ್ಪ’ ಅರೆಭಾಷೆ ನಾಟಕ ಪ್ರದರ್ಶನವನ್ನು ದಿನಾಂಕ 27 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಲೋಕೇಶ್ ಊರುಬೈಲ್ ಇವರು ರಚಿಸಿ ನಿರ್ದೇಶನ ಮಾಡಿರುವ ಈ ನಾಟಕಕ್ಕೆ ಮಹೇಶ್ ಆಚಾರಿ ಹೊನ್ನಾವರ ವಿನ್ಯಾಸ ಮತ್ತು ರೋಹಿತ್ ಮಲ್ಪೆ ಮತ್ತು ದಿವಾಕರ್ ಕಟೀಲ್ ಸಂಗೀತ ನೀಡಿರುತ್ತಾರೆ. ರಾಜ್ ಮುಖೇಶ್, ವಿನೋದ್ ಮೂಡಗದ್ದೆ, ಶಶಿಕಾಂತ್ ಮಿರ್ತ್ತೂ, ಪ್ರಸನ್ನ ಅಚ್ಚಿಪಳ್ಳ, ಚೈತನ್ ಬೊಳ್ಳೂರು, ಸುನಿಲ್ ಅಜ್ಜಾವರ, ಯುವರಾಜ್ ಬಾಳೆಗುಡ್ಡೆ, ತಿರುಮಲೇಶ್ವರಿ ಅರ್ಬಡ್ಕ, ಪ್ರಾಪ್ತಿ ಆಲಂಕಲ್ಯ, ಅರ್ಪಿತಾ ಚೊಕ್ಕಾಡಿ, ಮೌರ್ಯ ನಾರ್ಕೋಡು, ಸುನಂದಾ ಶೆಟ್ಟಿ, ಗ್ರೀಷ್ಮ ಕೇದ್ಕಾರ್, ಗೌತಮ್ ಎಂ.ಬಿ., ಗೌತಮಿ ಬಂಗಾರ್ ಕೊಡಿ, ಕೆ.ಟಿ. ಭಾಗೇಶ್, ಚಂದ್ರಶೇಖರ ಪೇರಾಲ್, ನಿತ್ಯಾನಂದ ಮಲೆಯಾಳ, ಸೌಮ್ಯ ಆಲಂಕಲ್ಯ ಮುಂತಾದ ಕಲಾವಿದರು ಭಾಗವಹಿಸಲಿದ್ದಾರೆ.
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿನಾಂಕ 23 ನವೆಂಬರ್ 2025ರಂದು ಆಯೋಜಿಸಲಾದ ‘ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು’ ಕುರಿತ ವಿಚಾರ ಸಂಕಿರಣ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ರಂಗಕರ್ಮಿ ಡಾ. ಜನಾರ್ದನ (ಜನ್ನಿ) ಮೈಸೂರು ಇವರು ಮಾತನಾಡಿ “ಕನ್ನಡ ರಂಗಭೂಮಿ ಭಾರತ ದೇಶದಲ್ಲಿಯೇ ಹೊಸ ರೀತಿಯ ಆಯಾಮ ತೆರೆದುಕೊಂಡಿದೆ. ಕನ್ನಡ ರಂಗಭೂಮಿಯ ಹೊಸಹೊಸ ಪ್ರಯೋಗಗಳು ಭಾರತೀಯ ರಂಗಭೂಮಿಯ ಮುಖವಾಣಿಯಾಗಿ ಕೆಲಸ ಮಾಡಿದೆ. ಆ ಮೂಲಕ ಭಾರತೀಯ ರಂಗಭೂಮಿಯ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ಅವು ಎಲ್ಲವೂ ವಿಮರ್ಶೆ, ಚರ್ಚೆ, ಸಂವಾದ ಹಾಗೂ ಮರು ತಿದ್ದುಪಡಿಗೆ ಒಳಗಾಗಿದೆ ಎಂಬುದೇ ವಿಶೇಷ. ಸಿನೆಮಾದಲ್ಲಿ ಸಣ್ಣ ಮನುಷ್ಯರನ್ನು ದೊಡ್ಡದಾಗಿ ತೋರಿಸುತ್ತಾರೆ. ಆದರೆ ರಂಗಭೂಮಿ ಮನುಷ್ಯರನ್ನು ಇದ್ದ ಹಾಗೆ ತೋರಿಸುತ್ತದೆ. ಅಂದರೆ ಸತ್ಯವನ್ನು ತೋರಿಸುವ ಮಾಧ್ಯಮವಾಗಿದೆ. ಕಣ್ಣಿಗೆ ಕಣ್ಣು ಇಟ್ಟು ಮಾತನಾಡುವ ಏಕೈಕ ಸಾಧನ…
ಉಡುಪಿ : ಯಕ್ಷಗಾನ ಕಲಾರಂಗದ ವತಿಯಿಂದ ನೀಡುವ ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ 23 ನವೆಂಬರ್ 2025ರಂದು ಅತ್ಯಂತ ಯಶಸ್ವಿಯಾಗಿ ಜರಗಿತು. ಶಾಸಕ ಯಶ್ಪಾೈಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ‘ಡಾ. ಜಿ. ಶಂಕರ್ ಪ್ರಶಸ್ತಿ’ ಪ್ರದಾನ ಮಾಡಿದ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಯಕ್ಷಗಾನ ಕಲಾರಂಗದ ಸಾಧನೆಗೆ ಅಭಿನಂದಿಸಿ “ವಿದ್ವಾಂಸರೊಬ್ಬರು ಇತ್ತೀಚಿಗೆ ಮಾಡಿದ ಹೇಳಿಕೆಯೊಂದನ್ನು ಉಲ್ಲೇಖಿಸಿ ಕಲಾವಿದರು ಇಂತಹ ಕ್ಷುಲ್ಲಕ ಮಾತುಗಳಿಗೆ ಅಧೀರರಾಗಬೇಕಿದ್ದಿಲ್ಲ, ಶತಮಾನಗಳಿಂದಲೂ ಸಮಾಜವನ್ನು ತಿದ್ದುವಲ್ಲಿ ಯಕ್ಷಗಾನ ಕಲೆ ಗಣನೀಯಪಾತ್ರ ವಹಿಸಿದೆ. ಯಕ್ಷಗಾನ ಕಲಾರಂಗ ಸಾಮಾಜಿಕ ಸಾಂಸ್ಕೃತಿಕ ಕೆಲಸಗಳನ್ನು ಮಾಡುವ ಸಂಘಟನೆಗಳಿಗೆ ಮಾದರಿಯಾಗಿದೆ” ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಎಂ. ರಾಘವೇಂದ್ರ ಭಟ್ ಶುಭಾಶಂಸನೆಗೈದರು. ಬಿ.ಆರ್. ವೆಂಕಟರಮಣ, ಹರೀಶ್ ರಾಯಸ್, ಡಾ. ಕಬ್ಯಾಡಿ ಹರಿರಾಮ ಆಚಾರ್ಯ, ಕೆ. ಮಹೇಶ್ ಉಡುಪ, ಡಾ. ಪಡಾರು ರಾಮಕೃಷ್ಣ ಶಾಸ್ತ್ರಿ ಅಭ್ಯಾಗತರಾಗಿ ಭಾಗವಹಿಸಿದ್ದರು. ಕಲಾವಿದರಾದ ಸುಬ್ರಹ್ಮಣ್ಯ ಚಿಟ್ಟಾಣಿ, ಕಕ್ಕುಂಜೆ…
ಮಂಗಳೂರು : ಮಧುರ ತರಂಗ (ರಿ.) ಮಂಗಳೂರು ಅರ್ಪಿಸುವ ವಜ್ರ ಮಹೋತ್ಸವದ ಅಂಗವಾಗಿ ‘ಶ್ರೀ ಸಿದ್ಧಿವೃದ್ಧಿ ಸ್ವರಮಾಧುರ್ಯ’ ಸಂಗೀತ ಗಾಯನ ಸ್ಪರ್ಧೆ ಕಾರ್ಯಕ್ರಮವು ದಿನಾಂಕ 22 ನವೆಂಬರ್ 2025ರ ಶನಿವಾರ ಬೆಳಿಗ್ಗೆ 9-00ರಿಂದ 7-30ರವರೆಗೆ ಮಂಗಳೂರು ಪಾಂಡೇಶ್ವರ ಪೊಲೀಸ್ ಲೇನ್ ಇಲ್ಲಿರುವ ಶ್ರೀ ಮುನೀಶ್ವರ ಮಹಾ ಗಣಪತಿ ದೇವಸ್ಥಾನದ ಸಭಾಗ್ರಹದಲ್ಲಿ ನಡೆಯಿತು. ಆಚಾರ್ಯ ಜಗದೀಶ್ ಶಿವಪುರ ರಚಿಸಿರುವ 150 ಗೀತೆಗಳಲ್ಲಿ ವಿಭಿನ್ನ 10 ಗೀತೆಗಳಲ್ಲಿ ಆಯ್ಕೆ ಮಾಡಿ ಹಾಡಿ ವಿಜೇತರಿಗೆ ನಗದು ಬಹುಮಾನ, ಪ್ರಮಾಣ ಪತ್ರ, ಫಲಕ ನೀಡಲಾಯಿತು. ಷಟ್ಟಿ ಪೂರ್ತಿ 60 ತುಂಬಿದ ಹಿರಿಯ ಸಂಗೀತ ಆಸಕ್ತಿಯುಳ್ಳ ಕಲಾ ಪ್ರೇಮಿಗಳಿಗೆ ಪದ್ಮನಾಭ ರಾಮಕೃಷ್ಣ ಮಂಟಪದಲ್ಲಿ ಗಾಯನ ಸ್ಪರ್ಧೆ ನಡೆಯಿತು. ಬೆಳಿಗ್ಗೆ ದೀಪ ಪ್ರಜ್ವಲನೆಯೊಂದಿಗೆ ಸಮಾರಂಭ ಉದ್ಘಾಟನೆಯನ್ನು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಶ್ರೀಮತಿ ಸುಗುಣ ಕಾಮತ್ ಇವರು ಮಾಡಿದರು. ಸಂಗೀತ ಶಿಕ್ಷಕ, ಗಾಯಕ ನಿರ್ದೇಶಕ ಆಚಾರ್ಯ ಜಗದೀಶ್ ಶಿವಪುರ ಪ್ರಸ್ತಾವನೆ ಮಾಡಿದರು. ಖ್ಯಾತ ಸಂಗೀತ ನಿರ್ದೇಶಕರಾದ ಚರಣ್ ಕುಮಾರ್ ಶುಭಾಶoಸನೆ…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಸಮಿತಿ ಇದರ ವತಿಯಿಂದ ಹಿರಿಯ ಕನ್ನಡಪರ ಹೋರಾಟಗಾರ, ಸಾಹಿತಿ ಹಾಗೂ ಪರ್ತಕರ್ತರೂ ಆದ ಜಾಣಗೆರೆ ವೆಂಕಟರಾಮಯ್ಯ ಇವರಿಗೆ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 25 ನವೆಂಬರ್ 2025ರಂದು ಬೆಳಗ್ಗೆ 11-00 ಗಂಟೆಗೆ ಕ.ರಾ.ರ.ಸಾ. ನಿಗಮದ ಆನೇಕಲ್ ಘಟಕದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀಮತಿ ಬೇಬಿಬಾಯಿ ಇವರು ಧ್ವಜಾರೋಹಣ ಮತ್ತು ಮೆರವಣಿಗೆ ಉದ್ಘಾಟನೆ ಮಾಡಲಿದ್ದು, ವಿವಿಧ ಜಾನಪದ ಕಲಾ ತಂಡಗಳು ಆನೇಕಲ್ ಬಸ್ ನಿಲ್ದಾಣದಿಂದ ಆನೇಕಲ್ ಬಸ್ ಘಟಕದವರೆಗೆ ನಡೆಯುವ ಮೆರವಣಿಗೆಯಲ್ಲಿ ಭಾಗವಹಿಸಲಿದೆ. ಮಾನ್ಯ ಸಾರಿಗೆ ಹಾಗೂ ಮುಜುರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ವಿಭಾಗೀಯ ನಿಯಂತ್ರಣಾಧಿಕಾರಿ ಪುರುಷೋತ್ತಮ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾನ್ಯ ಶಾಸಕರಾದ ಬಿ. ಶಿವಣ್ಣ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ರಾಜ್ಯ ಗೌರವಾಧ್ಯಕ್ಷರಾದ ವ.ಚ. ಚನ್ನೇಗೌಡ ಇವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಮಂಗಳೂರು : ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 22 ನವೆಂಬರ್ 2025ರಂದು ನಡೆದ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪರವರ ಕವನಗಳ ವಾಚನ, ಗಾಯನ ಹಾಗೂ ಭಾವಾರ್ಥ ವಿಚಾರ ಸಂಕಿರಣ ಕಾರ್ಯಕ್ರಮವು ಸೌಹಾರ್ದ ಸಾಹಿತ್ಯ ವೇದಿಕೆ ಹುಬ್ಬಳ್ಳಿ ಇದರ ಮಂಗಳೂರು ಘಟಕದ ಅಡಿಯಲ್ಲಿ ಸಂಸ್ಥೆಯ ಸಂಸ್ಥಾಪಕ ಗೊಗೇರಿ ಇವರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಮಂಗಳೂರಿನ ಖ್ಯಾತ ನಾಮರೂ, ಕವಿಗಳೂ ಸೇರಿ ಜಿ.ಎಸ್.ಎಸ್.ರವರ ಇತರೇತರ ಕವನಗಳನ್ನು ಆರಿಸಿ ವಾಚಿಸಿದರು ಮತ್ತು ಸವಿವರವಾಗಿ ಭಾವಾರ್ಥ ಮಂಡನೆ ಮಾಡಿದರು. ವಿಶೇಷ ಅತಿಥಿಗಳಾಗಿ ಎನ್.ಎಸ್.ಸಿ.ಡಿ.ಎಫ್. ಮುಖ್ಯಸ್ಥ ಖ್ಯಾತ ಗಾಯಕ ಗಂಗಾಧರ ಗಾಂಧಿ, ಕಥಾಬಿಂದು ಪ್ರಕಾಶನ ಮುಖ್ಯಸ್ಥರು ಪಿ.ವಿ. ಪ್ರದೀಪ್ ಕುಮಾರ್, ಸಾಹಿತಿ ಕೊಲಚಪ್ಪೆ ಗೋವಿಂದ ಭಟ್ ರವರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇನ್ನೊರ್ವ ಅತಿಥಿಯಾಗಿ ಸ್ತ್ರೀ ಅಂದರೆ ಅಷ್ಟೇ ಸಾಕೆ ಎಂಬ ಜಿ.ಎಸ್.ಎಸ್.ರವರ ಕವನದ ವಾಚನ ಹಾಗೂ ಅರ್ಥ ಮಂಡಿಸಿದ ಮಂಗಳೂರಿನ ಮೂಲವ್ಯಾಧಿ ತಜ್ಞ ವೈದ್ಯ ಹಾಗೂ ಕಣಚೂರು ವೈದ್ಯಕೀಯ ಕಾಲೇಜಿನ ಸಲಹೆಗಾರ ಡಾ. ಸುರೇಶ ನೆಗಳಗುಳಿಯವರು ಮಾತನಾಡುತ್ತಾ ಬೇರೆಲ್ಲೂ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಘಟಕದ ವತಿಯಿಂದ ಪರಿಷತ್ತಿನ ಸಾಧಕರಿಗೆ ಸನ್ಮಾನ ಸಮಾರಂಭವು ಮಂಗಳೂರಿನ ವುಡ್ ಲ್ಯಾಂಡ್ಸ್ ಹೊಟೇಲಿನಲ್ಲಿ ದಿನಾಂಕ 21 ನವೆಂಬರ್ 2025ರಂದು ಜರಗಿತು. ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದು, ಇತ್ತೀಚೆಗೆ ‘ವಿಶುಕುಮಾರ ಪ್ರಶಸ್ತಿ’ಗೆ ಭಾಜನರಾದ ಶ್ರೀ ಬೆನೆಟ್ ಅಮ್ಮನ್ನ, ಮುಂಬಯಿ ಮಹಿಳೆಯರ ಬಗ್ಗೆ ಪುಸ್ತಕ ಬರೆದು ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಸಾಹಿತಿ ಶ್ರೀಮತಿ ಸುಖಲಾಕ್ಷಿ ವೈ. ಸುವರ್ಣ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಹಲವು ಪ್ರಶಸ್ತಿ ಪುರಸ್ಕೃತರೂ, ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತನದ ಅಭಿಯಾನದಲ್ಲಿ ನೂರಕ್ಕಿಂತಲೂ ಅಧಿಕ ಸದಸ್ಯರನ್ನು ನೋಂದಣಿ ಮಾಡಿಸಿ ಜನಜನಿತರೂ ಆದ ಶ್ರೀ ಇಸ್ಮಾಯಿಲ್ ಬಬ್ಬುಕಟ್ಟೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅರೆಹೊಳೆ ಸದಾಶಿವರಾಯರು ಸಾಧಕರನ್ನು ಸನ್ಮಾನಿಸಿ ಮಾತನಾಡುತ್ತಾ, “ಪರಿಷತ್ತಿನ ಒಳಗಿನ ಸಾಧಕರನ್ನೇ ಗುರುತಿಸಿ ಗೌರವಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಸಂಭ್ರಮಾಚರಣೆ ಮನೆಯೊಳಗಿನಿಂದಲೇ ಆದರೆ ಅದು ಹೆಚ್ಚು ಆಪ್ತವೂ ಅರ್ಥಪೂರ್ಣವೂ ಆಗುತ್ತದೆ. ಮತ್ತಷ್ಟು ಸಾಧಿಸಲು ಪ್ರೇರಣೆಯಾಗುತ್ತದೆ”…
ಕುಶಾಲನಗರ : ಕುಶಾಲನಗರದ ಎ.ಪಿ.ಸಿ.ಎಂ.ಎಸ್. ಕನ್ವೆನ್ಷನ್ ಸಭಾಂಗಣದಲ್ಲಿ ದಿನಾಂಕ 21 ನವೆಂಬರ್ 2025ರಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು, ಕೊಡಗು ಜಿಲ್ಲಾ ಘಟಕ, ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದೊಂದಿಗೆ ಕನ್ನಡ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್. ಉಪ್ಪಾರ್ “ಕನ್ನಡ ಭಾಷೆಯನ್ನು ಬೆಳೆಸುವ ಅಗತ್ಯವಿಲ್ಲ ನಾವು ಬಳಸಿದರೆ ಸಾಕು, ನಮ್ಮ ಕನ್ನಡ ಭಾಷೆ ಅನ್ನದ ಭಾಷೆಯಾಗಬೇಕು, ಕರ್ನಾಟಕ ಸರಕಾರದ ನೇಮಕಾತಿಗಳಲ್ಲಿ ಕನ್ನಡ ಭಾಷಿಕರಿಗೆ ಆದ್ಯತೆ ಸಿಗಬೇಕು. ಜೊತೆಗೆ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ಮಕ್ಕಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ಮೀಸಲಾತಿ ಸಿಗಬೇಕು ಅಂದಾಗ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ.…
ಮಂಡ್ಯ : ಕರ್ನಾಟಕ ಸಂಘ ಮಂಡ್ಯ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ ಗಂಟೆ 11-00ಕ್ಕೆ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನ ವನರಂಗದಲ್ಲಿ ಆಯೋಜಿಸಲಾಗಿದೆ. ಮಂಡ್ಯದ ಎಸ್.ಬಿ. ಎಜುಕೇಷನ್ ಟ್ರಸ್ಟ್ ಇವರ ಅಧ್ಯಕ್ಷರಾದ ಡಾ. ಬಿ. ಶಿವಲಿಂಗಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಪ್ರಸಿದ್ಧ ಗಾಯಕರಾದ ಡಾ. ಅಪ್ಪಗೆರೆ ತಿಮ್ಮರಾಜು ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಿ ರಾಜ್ಯೋತ್ಸವ ಕುರಿತು ಮಾತನಾಡಲಿದ್ದಾರೆ. ಮಂಡ್ಯ ಜಿಲ್ಲಾ ಲಯನ್ಸ್ ಇದರ ಮಾಜಿ ರಾಜ್ಯಪಾಲರಾದ ಶ್ರೀ ಲಯನ್ ಕೆ. ದೇವೇಗೌಡ ಮತ್ತು ಪರಿಸರ ಇಂಜಿನಿಯರಿಂಗ್ ಸಂಘ ಕರ್ನಾಟಕ ಇದರ ಅಧ್ಯಕ್ಷರಾದ ಡಾ. ಕೆ.ಸಿ. ಜಯರಾಮು ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಇದರ ಪ್ರಾಂಶುಪಾಲರಾದ ಪ್ರೊ. ಗುರುರಾಜಪ್ರಭು ಕೆ. ಇವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ.
ಸಾಗರ : ನಾಟ್ಯಶ್ರೀ ಕಲಾತಂಡ (ರಿ.) ಶಿವಮೊಗ್ಗ, ಶ್ರೀ ಗುರು ಯಕ್ಷಗಾನ ಮಂಡಲಿ ಸಾಗರ, ವಿದ್ವಾನ್ ದತ್ತಮೂರ್ತಿ ಭಟ್ ಸಂಘಟನೆಯಲ್ಲಿ ‘ಯಕ್ಷ ಷಡಾಖ್ಯಾನಮ್’ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಸಾಗರ ಎಲ್.ಬಿ. ಕಾಲೇಜ್ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ‘ದುಷ್ಯಂತ ಶಾಕುಂತಲಾ’, ‘ಅದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಮಹಾತ್ಮೆ’, ‘ದ್ರುಪದ ಗರ್ವಭಂಗ’, ‘ಲವ ಕುಶ’, ‘ರಾಜ ಉಗ್ರಸೇನ’, ‘ಚಕ್ರವ್ಯೂಹ’ ಪ್ರಸಂಗದ ಯಕ್ಷಗಾನ ಪ್ರದರ್ಶನವು ಪ್ರಸಿದ್ಧ ಕಲಾವಿದರಿಂದ ಪ್ರದರ್ಶನಗೊಳ್ಳಲಿದೆ.