Author: roovari

ಹೆಸರಾಂತ ಹಿರಿಯ ಸಂಶೋಧಕಿ ಡಾ. ಜೋತ್ಸ್ನಾ ಕಾಮತ್ ಕನ್ನಡ ಸಾಹಿತ್ಯ ಲೋಕದ ಅನನ್ಯ ಬರಹಗಾರ್ತಿ ಮತ್ತು ಒಬ್ಬ ದಿಟ್ಟ ನಿಲುವಿನ ದಕ್ಷ ಆಡಳಿತಗಾರ್ತಿ. 1937 ಜನವರಿ 24ರಂದು ಶ್ರೀ ಶಾರದಾ ಬಾಯಿ ಮತ್ತು ಗಣೇಶ ರಾವ್ ದಂಪತಿಗಳ ಪುತ್ರಿಯಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಜನಿಸಿದರು. ಇವರ ವಿದ್ಯಾಭ್ಯಾಸವೆಲ್ಲ ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಯಲ್ಲಿ ನಡೆಯಿತು. ಕೊಂಕಣಿ, ಕನ್ನಡ, ಇಂಗ್ಲೀಷ್, ಹಿಂದಿ, ಮರಾಠಿ, ಬೆಂಗಾಳಿ ಹಾಗೂ ಸಂಸ್ಕೃತ ಭಾಷೆಗಳಲ್ಲಿ ಪರಿಣತರಾದ ಇವರು ಇತಿಹಾಸದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಬಿ.ಎ. ಪದವಿಯ ಬಳಿಕ ಒಂದು ವರ್ಷ ‘ಡಿಪ್ಲೋಮಾ ಇನ್ ಎಜುಕೇಶನ್’ ಅಧ್ಯಯನ ಮಾಡಿ ಧಾರವಾಡದ ವನಿತಾ ಹೈಸ್ಕೂಲಿನಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಮುಂದೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದುಕೊಂಡರು. ಡಾ. ಬಿ.ಎ. ಸಾಲೆತೊರೆ, ಡಾ. ಪಿ.ಬಿ. ದೇಸಾಯಿ ಮತ್ತು ಡಾ. ಜಿ.ಎಸ್. ದೀಕ್ಷಿತ್ ರಂತಹ ಇತಿಹಾಸ ವಿದ್ವಾಂಸರಿಂದ ಪ್ರಭಾವಿತರಾಗಿ ಎರಡು ವರ್ಷಗಳ ಕಾಲ ಸಹಾಯಕ ಸಂಶೋಧಕಿಯಾಗಿ ಕಾರ್ಯ…

Read More

ಬಂಟ್ವಾಳ : ಡಾ. ಗೀತಾ ಎನ್. ಇವರ ‘ಹಕ್ಕಿಮರಿ ಮತ್ತು ಇತರ ಕಿಶೋರ ಗೀತೆಗಳು’ ಕವನಸಂಕಲನ ಲೋಕಾರ್ಪಣಾ ಕಾರ್ಯಕ್ರಮವು ದಿನಾಂಕ 13 ಜನವರಿ 2026ರಂದು ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಪಾಣೆಮಂಗಳೂರು ಶಾರದಾ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಪರಮೇಶ್ವರ ಜಿ. ಹೆಗಡೆ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, “ಗೀತಾ ಎನ್. ಅವರು ಕನ್ನಡ ಸಾಹಿತ್ಯದಲ್ಲಿ ತೊಡಗಿಸಿಕೊಂಡು, ಛಂದೋಬದ್ಧ ಕವನಗಳನ್ನು ಷಟ್ಟದಿಗಳನ್ನು ಬರೆದಿರುವುದಲ್ಲದೆ, ಕಿಶೋರ ಗೀತೆಗಳನ್ನು ಪ್ರಕಟಿಸಿರುವುದು ಶ್ಲಾಘನೀಯ” ಎಂದರು. ಅತಿಥಿಯಾಗಿದ್ದ ಉಪನ್ಯಾಸಕ ವಿಶ್ವನಾಥ್ ಶುಭ ಹಾರೈಸಿದರು. ಕೃತಿ ಕುರಿತು ಮುನ್ನುಡಿ ಬರೆದಿರುವ ಆಂಗ್ಲ ಭಾಷಾ ಉಪನ್ಯಾಸಕ, ಸಾಹಿತಿ ರಾಧೇಶ ತೋಳ್ತಾಡಿ ಮಾತನಾಡಿ, “ಮಕ್ಕಳ ಕವಿತೆಗೆ ವಿಶೇಷ ಸ್ಥಾನಮಾನಗಳಿದ್ದು, ಮಕ್ಕಳ ಜೊತೆ ಹೆಚ್ಚು ಒಡನಾಡುವ ಮಹಿಳೆಯರ ದನಿ ಮಕ್ಕಳ ಕವಿತೆಗಳ ಕ್ಷೇತ್ರದಲ್ಲಿ ವಿರಳವಾಗುತ್ತಿರುವ ಹೊತ್ತಿನಲ್ಲಿ ಡಾ. ಗೀತಾ ಎನ್. ಅವರ ಕೃತಿ ಬಂದದ್ದು ಸಂತಸದ ಸಂಗತಿ.…

Read More

ಮಂಗಳೂರು : ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ (ರಿ.) ಇವರ ವತಿಯಿಂದ ‘ಗುರುಕುಲ ಉತ್ಸವ 2026’ ತ್ರಯೋದಶ ನಾಟ್ಯ ಸಂಭ್ರಮವು ದಿನಾಂಕ 17 ಜನವರಿ 2026ರಂದು ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿ ವಿನಾಯಕ ಸಭಾ ವೇದಿಕೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆ.ಸಿ ಇಂಟರ್ನ್ಯಾಷನಲ್ ಸ್ಕೂಲ್ ಕಾರ್ಕಳ ಇದರ ಉಪಾಧ್ಯಕ್ಷರಾದ ಪದ್ಮ ಪ್ರಸಾದ್ ಜೈನ್ “ಮಕ್ಕಳಿಗೆ ಸಂಸ್ಕೃತಿಯ ಪರಿಚಯ ಮಾಡಿಕೊಡುವುದರಿಂದ ಸಂಸ್ಕಾರಯುತ ಸಮಾಜವನ್ನು ಸೃಷ್ಟಿಸಲು ಸಾಧ್ಯ. ಮಂತ್ರ ನಾಟ್ಯಕಲಾ ಗುರುಕುಲವು ಮಕ್ಕಳಲ್ಲಿ ಸಂಸ್ಕಾರವನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದೆ” ಎಂಬುದಾಗಿ ಅಭಿಪ್ರಾಯಪಟ್ಟರು. ಸಭಾಧ್ಯಕ್ಷತೆಯನ್ನು ಶ್ರೀ ರಾಜೇಶ್ ಅತ್ತಾವರ ಇವರು ವಹಿಸಿದ್ದು, ಹರೀಶ್ ಮಾಸ್ಟರ್, ಆನಂದ ಕೆ. ಅಸೈಗೋಳಿ, ನರೇಶ್ ಪಂಡಿತ್ ಹೌಸ್, ಗುರುಕುಲದ ಗೌರವಾಧ್ಯಕ್ಷೆ ಶ್ರೀಮತಿ ಶಕೀಲಾ ಜನಾರ್ದನ, ಟ್ರಸ್ಟಿಗಳು ಶ್ರೀಮತಿ ಶೈನಾ ಶ್ರಾವಣ್, ಬಬಿತಾ ಕಿರಣ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಿಂದ ನಡೆದ ಈ ಕಾರ್ಯಕ್ರಮದಲ್ಲಿ ಏಕಾದಶ ತಂಡಗಳ ಭರತನಾಟ್ಯ ಹಾಗೂ ಜಾನಪದ ನೃತ್ಯ ಕಾರ್ಯಕ್ರಮ ನೆರವೇರಿತು.…

Read More

ಧಾರವಾಡ : ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ 2026ನೇ ಸಾಲಿನ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಧಾರವಾಡದ ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹಾಗೂ ಹಾವೇರಿಯ ಹಿರಿಯ ಕವಿ ಸತೀಶ ಕುಲಕರ್ಣಿ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಪ್ರಶಸ್ತಿ ಪುರಸ್ಕೃತರ ಮಾಹಿತಿ ಪ್ರಕಟಿಸಿದರು. ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಯು ರೂ. ಒಂದು ಲಕ್ಷ ನಗದು ಹಾಗೂ ಸ್ಮರಣಿಕೆ ಹೊಂದಿದೆ. ಆದರೆ ಈ ಸಲ ಇಬ್ಬರು ಸಾಧಕರಿಗೆ ಪ್ರಶಸ್ತಿ ಹಂಚಿರುವ ಹಿನ್ನೆಲೆಯಲ್ಲಿ ತಲಾ ರೂ.50 ಸಾವಿರ ನೀಡಲಾಗುವುದು. ದಿನಾಂಕ 31 ಜನವರಿ 2026ರಂದು ಸಂಜೆ ಗಂಟೆ 5-00ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Read More

ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯ (ರಿ.) ಮತ್ತು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಲಲಿತ ಕಲಾ ಸಂಘ ಇವರ ಸಹಯೋಗದೊಂದಿಗೆ ವಿದುಷಿ ಶೀಲಾ ದಿವಾಕರ್ ಇವರಿಗೆ ‘ಗಾನ ಶಾರದೆಗೆ ನಮನ’ ಗುರುವಿಗೊಂದು ನಾಟ್ಯ ನಮನ ಕಾರ್ಯಕ್ರಮವನ್ನು ದಿನಾಂಕ 26 ಜನವರಿ 2026ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ ಆಚಾರ್ಯ ಪಿ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ಎಂಡ್ ಕಲ್ಚರಲ್ ಟ್ರಸ್ಟ್ (ರಿ.) ಇವರ ನಿರ್ದೇಶಕರಾದ ಡಾ. ಭ್ರಮರಿ ಶಿವಪ್ರಕಾಶ್ ಮತ್ತು ಕಲಾಪೋಷಕರಾದ ಎಲ್. ದಿವಾಕರ್ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ. ಭ್ರಮರಿ ಶಿವಪ್ರಕಾಶ್ ಇವರಿಂದ ನುಡಿ ನಮನ, ಸಂಪತ್ ಎಸ್.ಬಿ. ಹೊಸಬೆಟ್ಟು ಮತ್ತು ಆದರ್ಶ್ ಎಸ್.ಜೆ. ಮುಲ್ಕಿ ಇವರ ಗೀತ ನಮನಕ್ಕೆ ವಿಜಯ್ ಆಚಾರ್ಯ ಕುಳಾಯಿ ಕೀ ಬೋರ್ಡ್ ಮತ್ತು ಪ್ರಥಮ್…

Read More

ಮೂಡುಬಿದಿರೆ : ಸುರಸಾರವ ಸಂಗೀತ ಶಾಲೆಯ ವತಿಯಿಂದ ದ್ವಿತೀಯ ವರ್ಷದ ‘ಸಂಗೀತೋತ್ಸವ-2026’ ದಣಿದ ದನಿಗೆ ರಾಗದ ಬೆಸುಗೆ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2026ರಂದು ಸಂಜೆ 5-00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಆಯೋಜಿಸಲಾಗಿದೆ. ಸಂಸ್ಥೆಯ ಅತ್ಯುನ್ನತ ಪುರಸ್ಕಾರವಾದ ‘ಸುರಸಾರವ ಕಲಾವಿಭೂಷಣ’ ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಶ್ರೀಪತಿ ಭಟ್ ಇವರಿಗೆ ನೀಡಿ ಗೌರವಿಸಲಾಗುವುದು. ಉಡುಪಿಯ ಶ್ರೀಮತಿ ಪೂರ್ಣಿಮಾ, ವೇದಮೂರ್ತಿ ಶಶಿಧರ್ ಪುರೋಹಿತ್ ಕಟಪಾಡಿ, ಆಲ್ವಿನ್ ಅಂದ್ರಾದೆ ಸಾಸ್ತಾನ ಮತ್ತು ಸುಶಾಂತ್ ಭಂಡಾರಿ ಮಂಗಳೂರು ಇವರಿಗೆ ‘ಸುರಸಾರವ ಕಲಾಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಮುಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉದ್ಯಮಿ ಶ್ರೀಪತಿ ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.ಮತ್ತಿತರರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 1-45ರಿಂದ ಶಾರದಾ ಪೂಜೆ, ಗುರುವಂದನೆ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ…

Read More

ಮಂಗಳೂರು : ನೃತ್ಯ ಭಾರತಿ (ರಿ.) ಕದ್ರಿ ಮಂಗಳೂರು ಮತ್ತು ಶ್ರೀಮತಿ ರಾಧಾ ಕೆ. ಹಾಗೂ ಶಿವಪ್ರಸಾದ್ ಎಂ. ಭಟ್ ಇವರ ವತಿಯಿಂದ ವಿದುಷಿ ಶ್ರಾವ್ಯ ಎಂ. ಭಟ್ ಇವರ ಭರತನಾಟ್ಯ ರಂಗಪ್ರವೇಶಂ ಕಾರ್ಯಕ್ರಮವನ್ನು ದಿನಾಂಕ 24 ಜನವರಿ 2026ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಂತಲಾ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರು ಉಳ್ಳಾಲ್ ಮೋಹನ್ ಕುಮಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಕರ್ನಾಟಕ ಕಲಾಶ್ರೀ ರಾಜಶ್ರೀ ಉಳ್ಳಾಲ್, ವಿದ್ವಾನ್ ಸುಜಯ್ ಶ್ಯಾನ್ ಬೋಗ್ ಮತ್ತು ವಿದುಷಿ ಶ್ರೀವಿದ್ಯಾ ರಾವ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ಗೀತಾ ಸರಳಾಯ ಇವರ ನಿರ್ದೇಶನ, ವಿದುಷಿ ರಶ್ಮಿ ಸರಳಾಯ ಇವರ ನಟುವಾಂಗ, ವಿದ್ವಾನ್ ವಿನೀತ್ ಪುರವಂಕರ ಇವರ ಹಾಡುಗಾರಿಕೆ, ವಿದ್ವಾನ್ ಪೇಯನ್ನೂರ್ ರಾಜನ್ ಇವರ ಮೃದಂಗ ಮತ್ತು ಉಡುಪಿಯ ವಿದ್ವಾನ್ ಮುರಳೀಧರ ಇವರು ಕೊಳಲು ವಾದನದಲ್ಲಿ ಸಹಕರಿಸಲಿದ್ದಾರೆ.

Read More

ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ‘ಸಾಹಿತ್ಯ ವೈಭವ 2026’ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2026ರಂದು ಬೆಳಗ್ಗೆ 9-00 ಗಂಟೆಗೆ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅಭಿಷೇಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಎಸ್. ಗಣೇಶ್ ರಾವ್ ಇವರು ಉದ್ಘಾಟನೆ ಮಾಡಲಿದ್ದು, ಕೇಂದ್ರ ಚುಟುಕು ಸಾಹಿತ್ಯ ಪರಿಷತ್ತು ರಾಜ್ಯ ಪ್ರಧಾನ ಸಂಚಾಲಕರಾದ ಡಾ. ಎಂ.ಜಿ.ಆರ್. ಅರಸ್ ಇವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಚುಟುಕು ಸಾಹಿತಿ, ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಇವರ ನೇನೋಕತೆಗಳ ಸಂಕಲನ ‘ಕೋಲ್ಮಿಂಚು’ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಹಾಗೂ ಚುಸಾಪ ಗೌರವಾಧ್ಯಕ್ಷ ಇರಾ ನೇಮು ಪೂಜಾರಿಯವರ ‘ಚುಟುಕು ಕಾವ್ಯ ಕಾಮಿನಿ’ ಕಾವ್ಯಸಂಕಲನವನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

Read More

ವಿಜಯಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವಿಜಯಪುರ ಜಿಲ್ಲಾ ಸಮಿತಿಯು ಆಯೋಜಿಸಿದ್ದ ಕುಮಾರ ವಾಲ್ಮೀಕಿ ರಚಿಸಿದ ತೊರವೆ ರಾಮಾಯಣದ ಸೀತಾರಾಮ ಕಲ್ಯಾಣ ಪ್ರಸಂಗದ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವು ದಿನಾಂಕ 19 ಜನವರಿ 2026ರಂದು ಯಶಸ್ವಿಯಾಗಿ ಪೂರ್ಣಗೊಂಡಿತು. ಹಿರಿಯ ಗಮಕಿ ಶ್ರೀಮತಿ ಶಾಂತಾಬಾಯಿ ಕೌತಾಳ ಇವರು ಸ್ಪಷ್ಟವಾಗಿ, ನಿರಾಯಾಸವಾಗಿ ಗಮಕ ವಾಚನ ಮಾಡಿದರು ಮತ್ತು ಹಿರಿಯ ಸಾಹಿತಿ, ಗಮಕ ಸಾಹಿತ್ಯ ಪರಿಷದ್ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಶ್ರೀ ಕಲ್ಯಾಣರಾವ ದೇಶಪಾಂಡೆ ವ್ಯಾಖ್ಯಾನ ಮಾಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಜರುಗಿದ ಕಾರ್ಯಕ್ರಮದಲ್ಲಿ 55ಕ್ಕಿಂತ ಹೆಚ್ಚು ಆಸಕ್ತರಿಗೆ ಹಿರಿಯ ಕಲಾವಿದರಿಬ್ಬರೂ ಗಮಕದ ಸವಿ ಉಣಬಡಿಸಿದರು.

Read More

ಕನ್ನಡ ಮಹಿಳಾ ಸಾಹಿತ್ಯ ಪರಂಪರೆಯ ನಾಲ್ಕು ಪೀಳಿಗೆಗಳನ್ನು ವಿಮರ್ಶಕರು ಸ್ಪಷ್ಟವಾಗಿ ಗುರುತಿಸಿದ್ದಾರೆ. ಮೊದಲ ಪೀಳಿಗೆಯ ಲೇಖಕಿಯರಾದ ಕೊಡಗಿನ ಗೌರಮ್ಮ, ಶ್ಯಾಮಲಾ ಬೆಳಗಾಂವಕರ ಮೊದಲಾದವರು ಸಾಮಾಜಿಕ ಹಿನ್ನೆಲೆಯಲ್ಲಿ ಹೆಣ್ಣಿನ ಸಮಸ್ಯೆಗಳ ಕುರಿತು ಮೂಲಭೂತ ಪ್ರಶ್ನೆಗಳನ್ನು ಎತ್ತಿದರು. ಸಮಾಜದ ಜ್ವಲಂತ ಸಮಸ್ಯೆಗಳ ಚಿತ್ರಣವನ್ನು ನೀಡಲು ವಾಸ್ತವದ ಹಾದಿಯನ್ನು ಅನುಸರಿಸಿದರು. ಆ ಕಾಲದ ಹೆಂಗಸರಿಗೆ ಸ್ವತಂತ್ರ ಅಸ್ತಿತ್ವವಿಲ್ಲದಿದ್ದುದರಿಂದ ಇವರ ಕತೆಗಳಲ್ಲಿ ಹೆಂಗಸರು ಹೆಚ್ಚಾಗಿ ಶೋಷಿತ ಪಾತ್ರಗಳಾಗಿ ಕಾಣಿಸಿಕೊಂಡರು. ಅವರ ಅಸ್ತಿತ್ವ, ಹೃದಯವಂತಿಕೆ ಮತ್ತು ಪ್ರತಿಭೆಗಳನ್ನು ಸಮಾಜವು ಗುರುತಿಸುವುದಿಲ್ಲ ಎಂಬ ನೋವು ಅವರಿಂದ ಕತೆಗಳನ್ನು ಬರೆಸಿತು. ಎರಡನೇ ಪೀಳಿಗೆಯ ಪ್ರಮುಖ ಲೇಖಕಿಯರಾದ ತ್ರಿವೇಣಿ, ಅನುಪಮಾ ನಿರಂಜನ ಮೊದಲಾದವರ ಕತೆ ಕಾದಂಬರಿಗಳು ಹೆಣ್ಣಿನ ಅಸ್ಮಿತೆಯ ಅರಿವು, ಆಕೆಯ ಕ್ರಿಯಾಶಕ್ತಿಯನ್ನು ಅನಾವರಣಗೊಳಿಸುವುದರೊಂದಿಗೆ ವೈಜ್ಞಾನಿಕ ತಿಳಿವು ಮತ್ತು ಮನೋವೈಜ್ಞಾನಿಕ ಒಳನೋಟಗಳನ್ನು ಒದಗಿಸಿದ್ದರಿಂದ ಅವರ ಕೃತಿಗಳಿಗೆ ಆಳ, ವಿಸ್ತಾರಗಳು ಒದಗಿದವು. ರಾಜಲಕ್ಷ್ಮಿ ಎನ್. ರಾವ್ ಮತ್ತು ವೀಣಾ ಶಾಂತೇಶ್ವರರ ಕತೆಗಳಲ್ಲಿ ಕಾಣುವ ಅಂತರ್ಮುಖತೆ, ದ್ವಂದ್ವ ಮತ್ತು ದಿಟ್ಟತನಗಳು ನವ್ಯ ಮನೋಧರ್ಮದ ಅಂಗವಾಗಿ ಬಂದವು.…

Read More