Subscribe to Updates
Get the latest creative news from FooBar about art, design and business.
Author: roovari
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ಕೂಟ ದಿನಾಂಕ 14 ಫೆಬ್ರವರಿ 2026ರ ಶನಿವಾರ ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥಿಸುಬ್ಬ ವಿರಚಿತ ‘ಭರತ ಆಗಮನ’ ಪ್ರಸಂಗದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ಸಮರ್ಥ ವಿಷ್ಣು, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀರಾಮ (ಗುಂಡ್ಯಡ್ಕ ಈಶ್ವರ ಭಟ್), ಭರತ (ಶುಭ ಅಡಿಗ), ವಶಿಷ್ಠ (ಹರಿಣಾಕ್ಷಿ ಜೆ. ಶೆಟ್ಟಿ), ಲಕ್ಷ್ಮಣ (ಪ್ರೇಮಲತಾ ಟಿ. ರಾವ್) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ಭಾಸ್ಕರ್ ಬಾರ್ಯ ವಂದಿಸಿದರು. ಶ್ರೀ ಹರ್ಷ ಪುಣಚ ಪ್ರಾಯೋಜಿಸಿದ್ದರು. ಕಿಶೋರಿ ದುಗ್ಗಪ್ಪ ನಡುಗಲ್ಲು ಹಾಗೂ ಭಾರತೀ ರೈ ಅರಿಯಡ್ಕ ಸಹಕರಿಸಿದರು.
ಹಲವು ಮಜಲುಗಳನ್ನು ಕಂಡ ಮಕ್ಕಳ ಕಾವ್ಯವು ಜೀವಂತಿಕೆಯಿಂದ ಕೂಡಿದ್ದು ವೈವಿಧ್ಯಮಯವಾಗಿ ಮುಂದುವರಿಯುತ್ತಿದೆ. ‘ಬೆಳ್ಳಕ್ಕಿ ಸಾಲು’ (2011) ಎಂಬ ಸಂಕಲನದ ಮೂಲಕ ಮಾಲತಿ ಪಟ್ಟಣಶೆಟ್ಟಿಯವರು ಈ ಪರಂಪರೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಕ್ಕಳ ಕುತೂಹಲವನ್ನು ತಣಿಸುವ, ಅರಿವಿನ ಪರಿಧಿಯನ್ನು ವಿಸ್ತರಿಸುವ, ಮೌಲ್ಯ ಆದರ್ಶಗಳನ್ನು ನಿರೂಪಿಸುವ, ಸಚ್ಚಾರಿತ್ರ್ಯವನ್ನು ನಿರ್ಮಿಸುವ ಕವಿತೆಗಳನ್ನು ಎಳೆಯರಿಗೆ ಖುಷಿಯಾಗುವಂತೆ ಒದಗಿಸಬೇಕಾದದ್ದು ಮಕ್ಕಳ ಕವನಗಳ ಕರ್ತವ್ಯ. ಕನ್ನಡದ ಭವಿಷ್ಯದ ಬಗ್ಗೆ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲಿ ಎಳೆಯ ಮಕ್ಕಳು ಕೂಡ ಸಾಹಿತ್ಯದ ಒಲವನ್ನು ಪ್ರೋತ್ಸಾಹಿಸಲು ಯತ್ನಿಸಿರುವುದು ಸಂತಸದ ವಿಷಯ. ನಾಡಿನ ಜನಜೀವನದ ಅಂಗವಾಗಿ ಮೂಡಿದ 27 ಕವನಗಳು ಮೊದಲ ಓದಿಗೇ ಸುಲಭವಾಗಿ ತೆರೆದುಕೊಳ್ಳುತ್ತವೆ. ಕೈಕೈ ಹಿಡಿದು ನಡೆದಾಡುವ ಪುಟ್ಟ ಮಕ್ಕಳಂತಿರುವ ಪ್ರಾಸಗಳು ತಾವಾಗಿಯೇ ಬೆಳೆದು ಮೈಗೂಡಿದ್ದು ಅಲ್ಲಲ್ಲಿ ಒಪ್ಪುವ ನುಡಿಗಳು ಛಂದೋಬದ್ಧವಾಗಿ ಮೈವೆತ್ತು ಮಿಂಚುತ್ತವೆ. ವಿವರಿಸಿದ ವಿಚಾರಗಳು ಪ್ರಗತಿಪರವಾಗಿದ್ದು ನೀತಿಬೋಧಕವಾಗಿವೆ. ಭಾಷೆ ಸರಳವಾಗಿದ್ದು ವಾಚನೀಯವಾಗಿದೆ. ಇದರಲ್ಲಿ ಅಜ್ಜ ಅಜ್ಜಿಯ ಪ್ರೀತಿಯಿದೆ. ದೇಶಭಕ್ತಿ, ನೀತಿಬೋಧೆ, ಐಕ್ಯಗಾನಗಳಿವೆ. ಪ್ರಾಣಿ ಪಕ್ಷಿಗಳ ಸಖ್ಯವಿದೆ. ‘ಬೆಳ್ಳಕ್ಕಿ ಸಾಲು’,…
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ವತಿಯಿಂದ, ವಿದ್ಯಾರ್ಥಿ ಪರಿಷತ್, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಲಾದ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 12 ಫೆಬ್ರವರಿ 2026ರಂದು ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಯಶಸ್ವಿಯಾಗಿ ನೆರವೇರಿತು. ‘ವ್ಯಕ್ತಿತ್ವದಿಂದ ನಾಯಕತ್ವದತ್ತ–ವಿವೇಕಾನಂದರ ಪಥ’ ಎಂಬ ಸಮಕಾಲೀನ ವಿಷಯವು ವಿದ್ಯಾರ್ಥಿಗಳಲ್ಲಿ ವಿಶೇಷ ಸ್ಪಂದನ ಮೂಡಿಸಿತು. ಕಾರ್ಯಕ್ರಮವನ್ನು ದೀಪಪ್ರಜ್ವಲನದ ಮೂಲಕ ಉದ್ಘಾಟಿಸಲಾಯಿತು. ಉದ್ಘಾಟನಾ ಭಾಷಣ ಮಾಡಿದ ಮಂಗಳೂರು ರಾಮಕೃಷ್ಣ ಮಿಷನ್ ಬಾಲಕಾಶ್ರಮದ ನಿರ್ವಾಹಕರು ಸ್ವಾಮಿ ಯುಗೇಶಾನಂದಜಿ ಇವರು “ಸ್ವಾಮಿ ವಿವೇಕಾನಂದರ ಜೀವನವು ಯುವಜನತೆಗೆ ಶಾಶ್ವತ ಪ್ರೇರಣೆಯಾಗಿದೆ. ವ್ಯಕ್ತಿತ್ವ ವಿಕಾಸದ ಮೂಲಕವೇ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆತರಲು ಸಾಧ್ಯ” ಎಂದು ತಿಳಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುತ್ತೂರು ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಗಳು ಸಂಯೋಜಕರಾದ ಶ್ರೀ ಜಿ.ಎಲ್. ತ್ರಿಪುರಾಂತಕ “ವ್ಯಕ್ತಿತ್ವದಿಂದ ನಾಯಕತ್ವದತ್ತ–ವಿವೇಕಾನಂದರ ಪಥ” ಎಂಬ ವಿಷಯದ ಕುರಿತು ವಿಶ್ಲೇಷಣಾತ್ಮಕ ಉಪನ್ಯಾಸ ನೀಡಿದರು. “ವ್ಯಕ್ತಿತ್ವ ನಿರ್ಮಾಣವು ಆತ್ಮಶ್ರದ್ಧೆ, ಆತ್ಮವಿಶ್ವಾಸ, ಶಿಸ್ತು ಮತ್ತು ಮೌಲ್ಯಾಧಾರಿತ…
ಮಂಗಳೂರು : ಕನ್ನಡದ ಹಿರಿಯ ಸಂಶೋಧಕ, ವಿಮರ್ಶಕ ಪ್ರೊ. ಬಿ.ಎ. ವಿವೇಕರ ರೈ ಇವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಬಿಡುಗಡೆ ಸಮಾರಂಭವು ದಿನಾಂಕ 11 ಫೆಬ್ರವರಿ 2026ರಂದು ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಆಕೃತಿ ಆಶಯ ಪಬ್ಲಿಕೇಶನ್ಸ್ ಇದರ ವತಿಯಿಂದ ಪ್ರಕಟಿಸಲಾದ ಕೃತಿ ಬಿಡುಗಡೆ ಸಮಾರಂಭದಲ್ಲಿ ಹಿರಿಯ ವಿದ್ವಾಂಸರು, ಲೇಖಕರು, ಕೃತಿಕಾರರಾದ ಡಾ. ಚಿನ್ನಪ್ಪ ಗೌಡ, ಚಂದ್ರಕಲಾ ನಂದಾವರ, ಡಾ. ನಾ. ದಾಮೋದರ ಶೆಟ್ಟಿಯವರು ಗದ್ಯ ಹಾಗೂ ಕಾವ್ಯಗಳ ಮೂಲಕ ಕೃತಿಯ ವೈಶಿಷ್ಟ್ಯವನ್ನು ವಿವರಿಸಿದರು. ಈ ವೇಳೆ ಚಂದ್ರಕಲಾ ನಂದಾವರ ಮಾತನಾಡಿ, “ವ್ಯಕ್ತಿ ಚಿತ್ರಣಕ್ಕೆ ಭಿನ್ನವಾದ ಮಾದರಿಯಾಗಿ ಮುಂದಿನವರಿಗೆ ಏನನ್ನು ದಾಟಿಸಬಹುದು, ಹಿರಿಯರು ಮಾಡಿದ್ದನ್ನು ಮುಂದಿನವರಿಗೆ ದಾಟಿಸಿದರೆ ಹೇಗೆ ಒಳ್ಳೆಯದನ್ನು ಕಾಣಬಹುದು ಎಂಬುದನ್ನು ದಾರಿಯಾಗಿದೆ ಈ ಪುಸ್ತಕ” ಎಂದು ಬಣ್ಣಿಸಿದರು. ಹಿರಿಯ ವಿದ್ವಾಂಸ ಡಾ. ಕೆ. ಚಿನ್ನಪ್ಪ ಗೌಡ ಮಾತನಾಡಿ, “80ರ ಹರೆಯದ ಡಾ. ಬಿ.ಎ. ವಿವೇಕ ರೈಯವರು ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಸರಣಿ- 1ರ…
ಮುಂಬೈ : ‘ಪಯಣ’ ಬೆಂಗಳೂರು ಪ್ರಸ್ತುತ ಪಡಿಸುವ ಶ್ರೀಜಿತ್ ಸುಂದರಂ ನಿರ್ದೇಶನದ ‘ತಲ್ಕಿ’ ನಾಟಕದ ಪ್ರದರ್ಶನವನ್ನು ದಿನಾಂಕ 16 ಫೆಬ್ರವರಿ 2026ರಂದು ಸಂಜೆ ಗಂಟೆ 6-00ಕ್ಕೆ ಮಹಾರಾಷ್ಟ್ರ ಮುಂಬೈಯ ದಾದರ್ ಮಾತುಂಗ ಕಲ್ಚರಲ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ. ನಾಟಕದ ಕುರಿತು : ‘ತಲ್ಕಿ’ ನಾಟಕವು ಸಮುದಾಯದವರ ಜೀವನ ಕಥೆಗಳ ಆಧಾರದ ಸತ್ಯ ಕಥೆಗಳು. ಬರವಣಿಗೆ, ಸಮಾಜಸೇವೆ, ಸಮುದಾಯ ಮುಖ್ಯಸ್ಥರು, ಅಮ್ಮಂದಿರು, ಹೀಗೆ ಸಮಾಜದ ಬೇರೆ ಬೇರೆ ಘಟಕಗಳಲ್ಲಿ ಕೆಲಸ ಮಾಡುತ್ತಿರುವ, ಐವತ್ತು ವರ್ಷ ದಾಟಿರುವ ಮಂಗಳಮುಖಿಯರು ತಮ್ಮ ಈಡೇರದ ಕನಸ್ಸುಗಳನ್ನು ನನಸು ಮಾಡಿಕೊಳ್ಳಲು ನಟನೆ ಹಾಗೂ ರಂಗ ಪ್ರಕ್ರಿಯೆಗಳ ನೆರವಿನಿಂದ ಹೋರಾಡಲು ಅವಕಾಶ ಕಲ್ಪಿಸಿಕೊಡುವ ವಿಶಿಷ್ಟ ಯತ್ನ ಈ ನಾಟಕ. ಇವರೆಲ್ಲರಿಗೂ ಇರುವ ಒಂದು ಸಾಮ್ಯತೆ ಎಂದರೆ ಸಮಯ ಹಾಗೂ ಸಮಾಜ ನೀಡಿರುವ ಗಾಯದ ಗುರುತುಗಳು. ಬೆಂಗಳೂರಿನ ಬೇರೆ ಬೇರೆ ಪ್ರದೇಶಗಳ ಜೊತೆ ಅವಿನಾಭಾವ ಸಂಬಂಧವಿರುವ ಅವರ ದೇಹದ ಮೇಲಿನ ಗುರುತುಗಳು, ಆ ಪ್ರದೇಶಗಳ ಗುರುತುಗಳಾಗಿ ಮಾರ್ಪಟ್ಟಿವೆ ಎನ್ನಬಹುದು. ಇಂತಹ ಹಿಂಸೆ,…
ಮೂಡುಬಿದಿರೆ : ಕಡಂದಲೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ದಿನಾಂಕ 21 ಫೆಬ್ರವರಿ 2026ರಂದು ನಡೆಯಲಿರುವ ಮೂಡುಬಿದಿರೆ ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಇವರು ಆಯ್ಕೆಯಾಗಿರುತ್ತಾರೆ ಎಂಬುದಾಗಿ ಕ.ಸಾ.ಪ. ಮೂಡುಬಿದಿರೆ ತಾಲೂಕು ಅಧ್ಯಕ್ಷರಾದ ಕೆ. ವೇಣುಗೋಪಾಲ ಶೆಟ್ಟಿಯವರು ತಿಳಿಸಿದ್ದಾರೆ. ಮಂಗಳೂರು ತಾಲೂಕಿನ ಕಂಕನಾಡಿ ಗ್ರಾಮದ ಪಕ್ಕಲಡ್ಕದ ಅಹಮ್ಮದ್ ಕೆ.ಪಿ. ಹಾಗೂ ಫಾತಿಮಾ ದಂಪತಿಯ ಸುಪುತ್ರರಾಗಿ 1947ರಲ್ಲಿ ಜನಿಸಿದ ಅವರು ಬಿ.ಕಾಂ ಪದವೀಧರರು. 1968ರಲ್ಲಿ ರಾಜ್ಯ ಸರಕಾರದ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ತನ್ನ ವೃತ್ತಿ ಜೀವನವನ್ನು ಪ್ರಾರಂಭಿಸಿದ ಅವರು ನಂತರ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ಅಧೀಕ್ಷರಾಗಿಯೂ ಭಡ್ತಿ ಪಡೆದು 37 ವರ್ಷಗಳ ತನ್ನ ಸಾರ್ಥಕ ಸೇವೆಯನ್ನು ಮುಗಿಸಿ 2005ರಲ್ಲಿ ನಿವೃತ್ತರು. ಕೃಷಿಯ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಸಣ್ಣ ಕಥಾ ರಚನೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದವರು. ಈಗಾಗಲೇ ‘ಪಾದದಡಿಯ ಸ್ಪರ್ಗ’, ‘ಬಿಳಿಗೋಡೆ’, ‘ಅಲೆಮಾರಿ’, ‘ಭ್ರಮೆ’ ‘ಒಂಟಿತೆಪ್ಪ’, ‘ನೆನಪುಗಳು ಸಾಯುವುದಿಲ್ಲ’,…
ಬೆಂಗಳೂರು : ಜನಸಂಸ್ಕೃತಿ ಪ್ರತಿಷ್ಠಾನ ಕಾವ್ಯಮಂಡಲ ಮತ್ತು ಸ್ನಾತಕೋತ್ತರ ಕೇಂದ್ರ ರಾಮನಗರ ಬೆಂಗಳೂರು ವಿಶ್ವವಿದ್ಯಾನಿಲಯ ಇದರ ವತಿಯಿಂದ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ ಕಾರ್ಯಕ್ರಮವನ್ನು ದಿನಾಂಕ 15 ಫೆಬ್ರವರಿ 2026ರಂದು ಸಂಜೆ 6-00 ಗಂಟೆಗೆ ಬೆಂಗಳೂರು ವಿ.ವಿ.ಯ ಜ್ಞಾನ ಭಾರತಿ ಆವರಣ ಡಾ. ವೆಂಕಟಗಿರಿಗೌಡ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಲ್ಕೆರೆ ಶಿವಕುಮಾರ್ ಮತ್ತು ಸಂಗಡಿಗರಿಂದ ‘ಮಂಟೇಸ್ವಾಮಿ ಮತ್ತು ಮಲೆ ಮಹಾದೇಶ್ಯರ’ ಮಹಾ ಕಾವ್ಯ ಗಾಯನ ನಡೆಯಲಿದೆ. ಸಂಜೆ 6-00 ಗಂಟೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಚಲಂ ಹಾಡ್ಲಹಳ್ಳಿ ಇವರು ಅಧ್ಯಕ್ಷತೆ ವಹಿಸಲಿದ್ದು, ಡಾ. ಎಚ್. ಲಕ್ಷ್ಮೀ ನಾರಾಯಣ ಸ್ವಾಮಿ ಇವರು ಕವಿಗೋಷ್ಠಿಗೆ ಚಾಲನೆ ನೀಡಲಿದ್ದಾರೆ. 7-00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕುಲಪತಿಗಳಾದ ಡಾ. ಜಯಕರ್ ಎಸ್.ಎಂ. ಇವರು ವಹಿಸಲಿದ್ದು, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಟಿ. ವೆಂಕಟೇಶ ಮೂರ್ತಿ ಇವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರಿನ ಚಂಚನ ಪಾಳ್ಯದ ಶೃತಿ ಶಿಲ್ಪಿ ಏಕತಾರಿ ರಾಮಯ್ಯ ಇವರಿಗೆ…
ಉಡುಪಿ : ದೊಂದಿ (ಪಂಜು) ಬೆಳಕಿನ ಯಕ್ಷಗಾನವು ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ಕಲೆ. ಇದು ಆಧುನಿಕ ವಿದ್ಯುತ್ ದೀಪಗಳಿಲ್ಲದೆ ಕೇವಲ ಪಂಜಿನ ಬೆಳಕಿನಲ್ಲಿ ನಡೆಯುವ ಅಪರೂಪದ ಪ್ರದರ್ಶನ. ಇಂತಹ ಪ್ರದರ್ಶನವು ಮಾಹೆಯ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾದ ಯಕ್ಷಗಾನ ಕೇಂದ್ರ ಇಂದ್ರಾಳಿಯಲ್ಲಿ ದಿನಾಂಕ 06 ಫೆಬ್ರವರಿ 2026ರಂದು ಮಾಸಿಕ ಕಾರ್ಯಕ್ರಮದ ಅಂಗವಾಗಿ ಕೇಂದ್ರದ ವಿದ್ಯಾರ್ಥಿಗಳಿಂದ ‘ಚಕ್ರವ್ಯೂಹ’ ಎಂಬ ಯಕ್ಷಗಾನ ಪ್ರಸಂಗ ಪ್ರದರ್ಶನಗೊಂಡಿತು. ಕೇಂದ್ರದ ಗುರುಗಳ ಮುತುವರ್ಜಿಯಿಂದ ಅದ್ಭುತವಾಗಿ ಮೂಡಿಬಂತು. ಭಾಗವತರ ರಾಗಭರಿತ ಗಾಯನ, ಚಂಡೆ ಮದ್ದಲೆಗಳ ಘೋಷದಿಂದ ರಂಗಭೂಮಿ ಜೀವಂತವಾಯಿತು. ಪಾತ್ರಧಾರಿ ವಿದ್ಯಾರ್ಥಿಗಳು ಅದ್ಭುತ ವೇಷಭೂಷಣ, ಮುಖವರ್ಣಿಕೆ ಮತ್ತು ಸಂಭಾಷಣೆಯ ಮೂಲಕ ಪ್ರೇಕ್ಷಕರನ್ನು ಆಕರ್ಷಿಸಿದರು. ಭಾಗವತರಾಗಿ ಗೋಪಾಡಿ ಉಮೇಶ್ ಸುವರ್ಣ, ಚಂಡೆಯಲ್ಲಿ ಕೃಷ್ಣಮೂರ್ತಿ ಭಟ್ ಬಗ್ವಾಡಿ, ಮದ್ದಳೆಯಲ್ಲಿ ಬಸವ ಮರಕಾಲ ಮುಂಡಾಡಿ ಸಹಕರಿಸಿದರು. ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀ ಸುರೇಶ್ ಮರಕಾಲ ಮುಂಡಾಡಿ ದೊಂದಿ ಬೆಳಕನ್ನು ಆಯೋಜಿಸಿದರು. ಕೇಂದ್ರದ ವಿದ್ಯಾರ್ಥಿಗಳು ವಿವಿಧ ಪಾತ್ರಗಳಲ್ಲಿ ತಮ್ಮ ಅಭಿನಯವನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಿದರು. ಒಟ್ಟಿನಲ್ಲಿ ದೊಂದಿ ಬೆಳಕಿನ…
ಕಾಸರಗೋಡು : ಶ್ರೀ ಪುರಂದರದಾಸ ಸಂಗೀತ ಕಲಾ ಮಂದಿರ ಎಸ್.ವಿ.ಟಿ. ರಸ್ತೆ, ಕಾಸರಗೋಡು ಈ ಸಂಸ್ಥೆಯ 22ನೇ ‘ದ್ವಿದಿನ ಸಂಕೀರ್ತನಾ ಆರಾಧನೋತ್ಸವ’ವು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದ ವ್ಯಾಸ ಮಂಟಪದಲ್ಲಿ ದಿನಾಂಕ 14 ಮತ್ತು 15 ಫೆಬ್ರುವರಿ 2026ರಂದು ಹಮ್ಮಿಕೊಳ್ಳಲಾಗಿದೆ. ಭಾವೈಕ್ಯರಾದ ಸಂಗೀತ ವಿದ್ವಾನ್ ಶ್ರೀ ರಮಣ ಮಾಸ್ಟರ್ ಇವರ ಶುಭಾನುಗ್ರಹ ಹಾಗೂ ಶತಾಯುಷಿ ಮೃದಂಗ ವಿದ್ವಾನ್ ಬಾಬು ರೈ ಇವರ ಶುಭಾಶೀರ್ವಾದಗಳೊಂದಿಗೆ ಸಂಸ್ಥೆಯ ಸ್ಥಾಪಕರೂ ರೂವಾರಿಗಳೂ ಆದ ಕಲ್ಮಾಡಿ ಸದಾಶಿವ ಆಚಾರ್ಯ, ಕ್ಷೇತ್ರ ಸಮಿತಿ ಮುಖ್ಯಸ್ಥ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಸಂಪ್ರಾರ್ಥಿಸಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮ ಸಂಪನ್ನಗೊಳಿಸಿದರು. ಕಾರ್ಯಕ್ರಮದಲ್ಲಿ ಮನಮೋಹನ ಕೆರೆಮನೆ, ಪ್ರಜಿತ್, ಶ್ರೀಧರ್ ಭಟ್, ಬಾಲರಾಜ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಂಗೀತ ವಿದ್ವಾಂಸರುಗಳಿಂದ ಸಂಗೀತ ಕಾರ್ಯಕ್ರಮ ಚಾಲನೆಗೊಂಡಿತು.
ಮಂಗಳೂರು : ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಏಕದಿನ ಸಾಹಿತ್ಯ ಅಭಿಯಾನವು ದಿನಾಂಕ 10 ಫೆಬ್ರುವರಿ 2026ರಂದು ಮಂಗಳವಾರ ಮಂಗಳೂರಿನ ಪಳ್ನೀರು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮುಖೇನ ಕಾರ್ಯಕ್ರಮ ಆರಂಭವಾಯಿತು. ಶಿಕ್ಷಕರು, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ದೀಪ ಬೆಳಗಿಸಿ ಉದ್ಘಾಟನೆಗೈದರು. ಶ್ರೀ ಉಮೇಶ್ ರಾವ್ ಕುಂಬಳೆ ಕಾರ್ಯಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಪ್ರಸ್ತಾವನೆ ನುಡಿಗಳನ್ನಾಡಿದರು. ಕನ್ನಡ ಭವನ ಮತ್ತು ಗ್ರಂಥಾಲಯ ಕಾಸರಗೋಡು, ಇದರ ಸ್ಥಾಪಕ ಅಧ್ಯಕ್ಷರು ಡಾ. ವಾಮನ್ ರಾವ್ ಬೇಕಲ್ ಕನ್ನಡ ಸಾಹಿತ್ಯದ ಬಗ್ಗೆ ಒಲವು ಆಸಕ್ತಿ ಮೂಡಲು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಹಿತನುಡಿಗಳನಾಡಿದರು. ಶ್ರೀಮತಿ ಸಂಧ್ಯಾರಾಣಿ ಟೀಚರ್ ಕನ್ನಡ ಭವನ ಕಾಸರಗೋಡು ಸಂಚಾಲಕರು, ಸ್ಥಾಪಕರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕರು ಶ್ರೀಮತಿ ಲವೀನ ಅನಿಟ ಡಿಸೋಜಾ…