Author: roovari

ಮಂಗಳೂರು : ಇತ್ತೀಚೆಗೆ ನಿಧನರಾದ ಎಂ. ಲಕ್ಷ್ಮೀನಾರಾಯಣ ಭಟ್ ಅವರಿಗೆ ಹರಿಕಥಾ ಪರಿಷತ್ ಮಂಗಳೂರು ವತಿಯಿಂದ ಆಯೋಜಿಸಲಾದ ನುಡಿನಮನ ಕಾರ್ಯಕ್ರಮ ದಿನಾಂಕ 07 ಜೂನ್ 2025ರಂದು ಮಂಗಳೂರಿನ ಹೊಟೇಲ್ ವುಡ್ಲ್ಯಾಂಡ್ಸ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ವಕೀಲ, ಹರಿದಾಸ ಹಾಗೂ ಹರಿಕಥಾ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಮಾತನಾಡಿ “ಸಂತ ಭದ್ರಗಿರಿ ಅಚ್ಯುತದಾಸರಿಗೆ ಮೂರು ದಶಕಗಳ ಕಾಲ ತಬ್ಲಾ ಸಾಥಿಯಾಗಿ, ಆಪ್ತ ಸಹಾಯಕನಾಗಿ, ಮುಂದೆ ಹರಿಕಥಾ ಪರಿಷತ್, ಮಂಗಳೂರು ಇದರ ಪ್ರಾರಂಭದ ದಿನಗಳಲ್ಲಿ ಗೌರವ ಸಲಹೆಗಾರರಾಗಿ, ಉಪಾಧ್ಯಕ್ಷರಾಗಿ ಅಮೂಲ್ಯ ಸೇವೆ ಸಲದಲಿಸಿದ, ಕೊಡಿಯಾಲ್ ಬೈಲ್ ಲಕ್ಷ್ಮೀನಾರಾಯಣಿ ದೇವಸ್ಥಾನದ ಪ್ರಧಾನ ಅರ್ಚಕರೂ ಆದ ಎಂ. ಲಕ್ಷ್ಮೀನಾಯಣ ಭಟ್ ಅವರು ಹರಿಕಥಾ ರಂಗಕ್ಕೆ ಹಾಗೂ ಒಟ್ಟಾರೆಯಾಗಿ ಧಾರ್ಮಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಸಲ್ಲಿಸಿದ ಸೇವೆ ಅಪಾರವಾದುದು” ಎಂದರು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಸ್ವಾಗತಿಸಿ, ಮಂಗಳೂರು ವಿಭಾಗದ ಸಂಚಾಲಕ ಸುಧಾಕರ ರಾವ್ ಪೇಜಾವರ,…

Read More

ಕೋಟ: ಕಾರ್ಕಡ ತಾರಾನಾಥ ಹೊಳ್ಳರ ಮನೆಯಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಸ್ಥೆಯ ಚಿಣ್ಣರ ಶುಭಾಶಯ ‘ಗಾನ ಸುಧೆ’ ಕಾರ್ಯಕ್ರಮವು ದಿನಾಂಕ 06 ಜೂನ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳನ್ನು ಅಭಿನಂದಿಸಿದ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷರಾದ ತಾರಾನಾಥ ಹೊಳ್ಳ ಮಾತನಾಡಿ “ಗುರುಮುಖೇನವಾದ ನಿರಂತರ ಅಭ್ಯಾಸದಿಂದ ಶಿಷ್ಯರನ್ನನೇಕರಿಂದ ಎತ್ತರಕ್ಕೇರಿದ ಸಂಸ್ಥೆ ಯಶಸ್ವಿ ಕಲಾವೃಂದ. ಹಲವಾರು ಮಕ್ಕಳು ತೆಕ್ಕಟ್ಟೆ ಕೇಂದ್ರದಲ್ಲಿ ಕಲಿತು ರಂಗಕ್ಕಾಗಿ ಅವಕಾಶಕ್ಕೆ ಎದುರು ನೋಡುತ್ತಿರುವುದನ್ನು ಗಮನಿಸಿದ್ದೇನೆ. ಆಯ್ದ ಮಕ್ಕಳಿಗೆ ಅವಕಾಶ ಕೊಟ್ಟರೆ ಭವಿಷ್ಯಕ್ಕೆ ಕಲಾವಿದರನ್ನು ಪ್ರೋತ್ಸಾಹಿಸಿದ ಹಿರಿಮೆ ನಮ್ಮದಾಗುತ್ತದೆ. ಅದ್ಭುತ ಪ್ರದರ್ಶನದ ಮೂಲಕ ಜನ ಮೆಚ್ಚುಗೆಗೆ ಪಾತ್ರವಾದ ಚಿಣ್ಣರ ‘ಗಾನ ಸುಧೆ’ ನೆರೆದ ಪ್ರೇಕ್ಷಕರನ್ನು ಮೂಕ ಪ್ರೇಕ್ಷಕರಾಗುವಂತೆ ಮಾಡಿತು” ಎಂದರು. ಶ್ರೀಮತಿ ಭೂಮಿಕಾ, ಅನೂಪ್ ಜಿ. ರಾವ್, ಶ್ರೀಮತಿ ತಾರಾನಾಥ ಹೊಳ್ಳ, ಕಾರ್ಯದರ್ಶಿ ವೆಂಕಟೇಶ ವೈದ್ಯ, ರಾಘವೇಂದ್ರ ಹೆಗಡೆ ಯಲ್ಲಾಪುರ, ರಾಹುಲ್ ಕುಂದರ್ ಕೋಡಿ, ಪೂಜಾ ಆಚಾರ್, ಪಂಚಮಿ ವೈದ್ಯ, ಪವನ್ ಆಚಾರ್, ಹರ್ಷಿತಾ ಅಮೀನ್ ಉಪಸ್ಥಿತರಿದ್ದರು.

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯಿಂದ ಆಸಕ್ತರಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ನಾಟಕ ಅಕಾಡೆಮಿಯು ರಂಗಭೂಮಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿದ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ 2024-25ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಪ್ರತಿ ಸಾಲಿಗೆ ತಲಾ ಒಂದು ಪುಸ್ತಕ ಬಹುಮಾನವನ್ನು ನೀಡಲಾಗುವುದು. ಬಹುಮಾನವು ರೂ.25,000/- ನಗದು ನೀಡಲಾಗುವುದು. ಕೃತಿಯನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡುವುದು. ಕೃತಿಗಳು ಜನವರಿ 2024ರಿಂದ ಡಿಸೆಂಬರ್ 2024ರೊಳಗೆ ಮುದ್ರಣವಾಗಿ ಪ್ರಕಟಣೆಯಾಗಿರಬೇಕು. ಅನುವಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. ಪುಸ್ತಕಗಳು ಯಾವುದೇ ಪದವಿಗಾಗಿ, ಪಿ.ಎಚ್.ಡಿ. ಮತ್ತು ಪಠ್ಯ ಪುಸ್ತಕಕ್ಕೆ ಸಿದ್ದಪಡಿಸಲಾದ ವಿಷಯವಾಗಿರಬಾರದು. ಬಹುಮಾನಕ್ಕಾಗಿ ಕಳುಹಿಸಲ್ಪಡುವ ಕೃತಿಗಳು ನಾಟಕವಾಗಿರಬಾರದು. ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. ಮರು ಮುದ್ರಣ ಪುಸ್ತಕವಾಗಿರಬಾರದು. ಅಕಾಡೆಮಿಯ ಸದಸ್ಯರು ರಚಿಸಿರುವ ಕೃತಿಗಳಾಗಿರಬಾರದು ಹಾಗೂ ಸಂಪಾದಿತ ಕೃತಿಗಳು ಸಹ ಆಗಿರಬಾರದು. ಕೃತಿಯು ಕನಿಷ್ಠ 60…

Read More

ಕಾಂತಾವರ : ಕಳೆದ ನಲುವತ್ತೇಳು ವರುಷಗಳಿಂದ ಮುದ್ದಣ ಕಾವ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2025ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ. ಪ್ರಶಸ್ತಿಯು ರೂಪಾಯಿ 10,000 ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘ [email protected] ಎನ್ನುವ ಮೈಲ್ ಐಡಿ ಮೂಲಕ ಪಡೆದುಕೊಳ್ಳಬಹುದು. ಇಲ್ಲವೇ ಅಧ್ಯಕ್ಷರನ್ನು (9900701666) ಅಥವಾ ಪ್ರಧಾನ ಕಾರ್ಯದರ್ಶಿ ಅವರನ್ನು (9008978366) ಮೇಲಿನ ದೂರವಾಣಿಯಲ್ಲಿ ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ 15 ಸಪ್ಟಂಬರ 2025. ಪ್ರಶಸ್ತಿ ಘೋಷಣೆ 01 ನವಂಬರ 2025 ಎಂದು ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ಪಂಕಜಶ್ರೀ ಪ್ರಶಸ್ತಿ’ಗೆ ಮುಂಬೈನ ಕಥೆಗಾರ್ತಿ ಮಿತ್ರಾ ವೆಂಕಟ್ರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ. ಕನ್ನಡದ ಪ್ರಮುಖ ಲೇಖಕಿಯಾಗಿದ್ದ ಎ.ಪಂಕಜ ‘ಅನುರಾಗ ಬಂಧನ’, ‘ನಾದಭಂಗ’’, ಸುಖಸ್ವಪ್ನ’ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದವರು. ‘ಊರ್ಮಿಳಾ’ ಇವರ ಪ್ರಸಿದ್ಧ ನಾಟಕ. ಇವರ ‘ಕಾಗದದ ದೋಣಿ’ ಕಾದಂಬರಿ ಕೇಂದ್ರ ಸಾಹಿತ್ಯ ಅಕಾಡಮಿ ಅನುವಾದ ಪುರಸ್ಕಾರವನ್ನು ಪಡೆದಿತ್ತು. ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಗೌರವದಿಂದ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಲೇಖಕಿಯರಿಗೆ ಪ್ರತಿ ವರ್ಷ ಪುರಸ್ಕಾರ ನೀಡುವಂತೆ ನಿಯಮವನ್ನು ರೂಪಿಸಿದ್ದಾರೆ. 2025ನೆಯ ಸಾಲಿನ ಈ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಿತ್ರಾ ವೆಂಕಟ್ರಾಜ್ ಕುಂದಾಪುರ ಮೂಲದವರು. ವಿವಾಹವಾಗಿ ಮುಂಬೈನಲ್ಲಿ ನೆಲೆಸಿದ ನಂತರವೇ ಅವರ ಸಾಹಿತ್ಯ ಸೇವೆ ತೀವ್ರತೆಯನ್ನು ಪಡೆದು ಕೊಂಡಿತು. ಕನ್ನಡದ ಮಹತ್ವದ ಕಥೆಗಾರ್ತಿಯರಲ್ಲಿ ಒಬ್ಬರು ಎನ್ನಿಸಿ ಕೊಂಡಿರುವ ಇವರು ‘ರುಕುಮಾಯಿ’, ‘ಹಕ್ಕಿ ಮತ್ತು ಅವಳು’, ‘ಮಾಯಕದ ಸತ್ಯ’ ಮತ್ತು ‘ನನ್ನಕ್ಕ ನಿಲೂಫರ್’ ನಾಲ್ಕು ಕಥಾ ಸಂಕಲನಗಳನ್ನು…

Read More

ಮುಂಬೈ : ಸುರ್ ಬಹಾರ್ ಸಂಗೀತ್ ಸಭಾ ಪ್ರಸ್ತುತ ಪಡಿಸುವ ಮುಂಬೈ ಸಂಗೀತ ಕಛೇರಿಯು ದಿನಾಂಕ 14 ಜೂನ್ 2025ರಂದು ಸಂಜೆ 5-30 ಗಂಟೆಗೆ ಮುಂಬೈಯ ಮುಲುಂದ್ ವೆಸ್ಟ್ ನಲ್ಲಿ ನಡೆಯಲಿದೆ. ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಪುಣೆಯ ವಿದುಷಿ ಪೌರ್ಣಿಮ ಧೂಮಲೆ ಇವರ ಹಾಡುಗಾರಿಕೆಗೆ ಪ್ರವೀಣ್ ಕರ್ಕರೆ ತಬಲಾದಲ್ಲಿ ಹಾಗೂ ಸುಧಾಂಶು ಘರ್ಪುರೆ ಹಾರ್ಮೋನಿಯಂನಲ್ಲಿ ಸಾಥ್ ನೀಡಲಿದ್ದಾರೆ.

Read More

ಬೆಂಗಳೂರು : ಮಂಗಳೂರಿನ ಆಯನ ನಾಟಕದ ಮನೆ ಪ್ರಸ್ತುತ ಪಡಿಸುವ ರಂಗಾಸಕ್ತರ ಗಮನ ಸೆಳೆದ ಈ ವರ್ಷದ ಒಂದು ಪ್ರಮುಖ ಕನ್ನಡ ನಾಟಕ ‘ಅಶ್ವತ್ಥಾಮ’ NOT OUT ದಿನಾಂಕ 13 ಜೂನ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ಪ್ರದರ್ಶನಗೊಳ್ಳಲಿದೆ. ರಂಗದಲ್ಲಿ ಚಂದ್ರಹಾಸ್ ಉಳ್ಳಾಲ್, ಪ್ರಭಾಕರ್ ಕಾಪಿಕಾಡ್ ಮತ್ತು ಡಾ. ದಿನೇಶ್ ನಾಯಕ್ ಇವರು ನಟಿಸಲಿದ್ದು, ಮೋಹನಚಂದ್ರ ಇವರು ನಿರ್ದೇಶನ ಮಾಡಲಿದ್ದಾರೆ. ನಾಟಕದ ಬಗ್ಗೆ : ಮಹಾಭಾರತದ ಹಲವಾರು ದುರಂತ ಪಾತ್ರಗಳಲ್ಲಿ ಅಶ್ವತ್ಥಾಮನ ಪಾತ್ರವೂ ಒಂದು. ಕುರುಕ್ಷೇತ್ರ ಯುದ್ಧದ ಬಳಿಕ ಉಪಪಾಂಡವರ ಹತ್ಯೆಯ ಕಾರಣದಿಂದಾಗಿ ಸಾವಿಲ್ಲದೆ ಸದಾ ಮರಣಕ್ಕಾಗಿ ಹಪಹಪಿಸುವ ಶಾಪಗ್ರಸ್ತ. ನಾಟಕ ಸುತ್ತುವುದೇ ಸಾವಿಲ್ಲದ ಬದುಕು ಒಂದು ಶಾಪ ಎಂದು ಗ್ರಹಿಸಿದ (ಕೃಷ್ಣನ) ಚಿಂತನೆ ; ಸತ್ತಿದ್ದರೂ ಇನ್ನೂ ಅಜರಾಮರ ಎಂದು ಬದುಕುವ (ಅಶ್ವತ್ಥಾಮನ) ಮನ:ಸ್ಥಿತಿ. ಇವೆರಡರ ನಡುವೆ ತನ್ನವರ ಕೊಲೆಯ ಪ್ರತೀಕಾರದಿಂದ ನಿರ್ಮಾಣಗೊಂಡ ಯುದ್ಧದ ಕಾರಣಗಳ ಹಿಂದಿರುವ (ಶಕುನಿಯ) ಮರ್ಮ.. ಈ ಮೇಲಿನ ಮೂರೂ ಪಾತ್ರಗಳು ನಾವೇ…

Read More

ಬಾನಂಗಳದಿ ಕೆಂಪುರಂಗಿನ ಓಕುಳಿ ರವಿ ಕಿರಣ ತೂರಿ ಮರದಿ ಬಾನುಲಿ ಕಿಟಕಿಯಿಂದ ಗೃಹದ ಒಳ ಪ್ರವೇಶ ರಂಗಾಗಿ ಬೆರಗಿಂದ ಕಂಗೊಳಿಪ ಆಕಾಶ || ಸುತ್ತ ಮುತ್ತೆಲ್ಲ ಹಸಿರಿನ ಆವರಣ ಹಸಿರ ಮೇಲೆ ಮಂಜು ಹನಿಯ ಹೂರಣ ಖಗ ಮೃಗಗಳ ಕೂಗಿನ ಸೆಳೆತ ಶುಕ ಪಿಕಗಳ ನಾದದ ಉಲಿತ || ಬಣ್ಣ ಬಣ್ಣದ ಹೂಗಳ ಸಾಕ್ಷಾತ್ಕಾರ ದುಂಬಿಗಳ ಖುಶಿಯ ಝೇಂಕಾರ ಪ್ರಕೃತಿ ಸೌಂದರ್ಯ ನಯನ ಮನೋಹರ ನೀಡಲು ಮನುಜಗೆ ಆನಂದ ಆಹ್ಲಾದಕರ || ಮಂದ ಮಾರುತದ ಸವಿಯಾದ ನಾದ ಬಾನಾಡಿಗಳ ಹಾರಾಟ ಸೆಳೆವ ಮೋದ ನೋಡಿರೆಲ್ಲ ರೋಮಾಂಚನ ದೃಶ್ಯವ ಕವಿಯು ಬರೆವ ಮನದಲ್ಲೆ ಕಾವ್ಯವ || ವಿಮಲಾ ಭಾಗ್ವತ್ ಸಿರ್ಸಿ ಉತ್ತರ ಕನ್ನಡ

Read More

ಮಡಿಕೇರಿ : ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಲಾಲಿ ಪೆಟಲ್ ಸಭಾಂಗಣದಲ್ಲಿ ದಿನಾಂಕ 08 ಜೂನ್ 2025ರಂದು ಆಯೋಜಿತ ಪತ್ರಕರ್ತೆ ದೀಪಾ ಭಾಸ್ತಿಗೆ ಅಭಿನಂದನಾ ಸಮಾರಂಭ ಮತ್ತು ಸಂವಾದ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಪಾಲ್ಗೊಂಡು ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಮಾತನಾಡಿ “ಪದಗಳ ತರ್ಜುಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು, ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಬಾನು ಮುಷ್ತಾಕ್ ಇವರ ‘ಎದೆಯ ಹಣತೆ’ ಕೃತಿ ಸೇರಿದಂತೆ 6 ಕಥಾಸಂಕಲನಗಳಲ್ಲಿನ 12 ಕಥೆಗಳನ್ನು ಆಯ್ಕೆ ಮಾಡಿ ಇಂಗ್ಲೀಷ್ ನಲ್ಲಿ ಬರೆದ ‘ಹಾರ್ಟ್ ಲ್ಯಾಂಪ್’ ಕೃತಿ ಸಂಬಂಧಿತ ಮಾಹಿತಿ ನೀಡಿದ ದೀಪಾ ಭಾಸ್ತಿ “ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ ಮಾಡುವಾಗ ಖಂಡಿತವಾಗಿಯೂ ಪದಗಳನ್ನು ತರ್ಜುಮೆ ಮಾಡಬಾರದು. ಇದರ ಬದಲಿಗೆ ಮೂಲಕೃತಿಯಲ್ಲಿನ ಪದಗಳ ಭಾವವನ್ನು ಅರ್ಥೈಸಿಕೊಂಡು ತನ್ನದೇ ಶೈಲಿಯಲ್ಲಿ ಭಾವಾನುವಾದ ಮಾಡಿದರಷ್ಟೇ ಅನುವಾದ ಸಾಹಿತ್ಯಕ್ಕೆ ಗಟ್ಟಿತನ ದೊರಕುತ್ತದೆ. ಪಂಪ, ಕುವೆಂಪು ಸೇರಿದಂತೆ ಕನ್ನಡದ ಅನೇಕ…

Read More

ಬೆಂಗಳೂರು : ಕರ್ನಾಟಕ ಯಕ್ಷಧಾಮ ಮಂಗಳೂರು, ಪದ್ಮ ಕಮಲ ಟ್ರಸ್ಟ್ ಬೆಂಗಳೂರು, ಕಲ್ಕೂರ ಪ್ರತಿಷ್ಠಾನಗಳ ಸಹಯೋಗದೊಂದಿಗೆ ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ‘ಸುವರ್ಣ ಪರ್ವ’ ಸರಣಿ ಕಾರ್ಯಕ್ರಮದ ಅಂಗವಾಗಿ ಸುವರ್ಣ ಸಂಮಾನ – ಯಕ್ಷಗಾನ ಪ್ರದರ್ಶನ ದಿನಾಂಕ 09 ಜೂನ್ 2025ರಂದು ಬೆಂಗಳೂರಿನ ಪರಂಪರಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಯಕ್ಷಗಾನ ಸಂಶೋಧಕ ಹಾಗೂ ವಿದ್ವಾಂಸರಾದ ಆನಂದರಾಮ ಉಪಾಧ್ಯ ಮಾತನಾಡಿ “ಸಂಘಟನೆ ಮತ್ತು ನಿರಂತರತೆ ಎರಡೂ ಸುಲಭದ್ದಲ್ಲ. ಎಪ್ಪತ್ತರ ದಶಕದಲ್ಲಿ ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ, ಸುಮಾರು ಐವತ್ತು ವರ್ಷಗಳ ಸಾರ್ಥಕ ದಿಗ್ವಿಜಯವನ್ನು ಸಾಧಿಸಿದ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆಯವರು ಯಕ್ಷ ಯುಗ ಪ್ರವರ್ತಕರು. ಅನೇಕ ಮಕ್ಕಳ ಮೇಳಗಳು ಇವತ್ತು ಹುಟ್ಟಿ, ಪ್ರದರ್ಶನಗೊಳ್ಳುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಯಶಸ್ಸಿನ ಗಾಥೆಯೇ ಮೂಲ ಪ್ರೇರಣೆ. ಮುಗ್ಧ ಮನಸ್ಸಿನ ಮಕ್ಕಳಲ್ಲಿ ಪರಂಪರೆಯ ಯಕ್ಷಗಾನದ ಅಭಿರುಚಿಯನ್ನು ಮೂಡಿಸಿ, ಯಕ್ಷಗಾನ ಪ್ರೇಕ್ಷಕರ ಸಹೃದಯತೆಯನ್ನು ತಿದ್ದಿದ ಮಕ್ಕಳ ಮೇಳ ಐತಿಹಾಸಿಕ ದಾಖಲೆಯನ್ನು ಮೆರೆದಿದೆ” ಎಂದು…

Read More