Subscribe to Updates
Get the latest creative news from FooBar about art, design and business.
Author: roovari
ಬೆಳ್ತಂಗಡಿ : ಧರ್ಮಸ್ಥಳದ ನಿಡ್ಲೆ ಗ್ರಾಮದಲ್ಲಿ 2000ನೇ ವರ್ಷದಿಂದ ನಡೆಯುತ್ತಿರುವ ‘ಕರುಂಬಿತ್ತಿಲ್ ಶಿಬಿರ’ವನ್ನು ದಿನಾಂಕ 20 ಮೇ 2025ರಿಂದ 25 ಮೇ 2025ರವರೆಗೆ ಅಯೋಜಿಸಲಾಗಿದೆ. ವಿಶೇಷ ಕಛೇರಿಗಳು, ಶ್ರೇಷ್ಠ ಕಲಾವಿದರ ವಿಶೇಷ ಸಂದರ್ಶನಗಳು, ಪ್ರತಿ ಶಿಬಿರಾರ್ಥಿಗೂ ಮೃದಂಗ, ವಯೊಲಿನ್ ಜೊತೆ ಪ್ರದರ್ಶನ ನೀಡುವ ಅವಕಾಶ, ಸಂಗೀತ ಕ್ವಿಜ್, ಸಂಗೀತ ಪ್ರಾತ್ಯಕ್ಷಿಕೆ, ಯಕ್ಷಗಾನ ಹಾಗೂ ಇನ್ನಿತರ ನೂತನ ಚಟುವಟಿಕೆಗಳು ಈ ಸಲದ ಶಿಬಿರಾರ್ಥಿಗಳಿಗಾಗಿ ಕಾದಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಡಾ. ಎಂ. ಮೋಹನ್ ಆಳ್ವ, ಶಾಸಕ ಹರೀಶ್ ಪೂಂಜ, ಕ್ಲಿವ್ಲ್ಯಾಂಡ್ ವಿ.ವಿ. ಸುಂದರಂ, ವಿ.ವಿ. ರಮಣಮೂರ್ತಿ ಶಿಬಿರವನ್ನು ತಮ್ಮ ಗೌರವ ಉಪಸ್ಥಿತಿಯಿಂದ ಮೆರುಗು ಗೊಳಿಸಲಿದ್ದಾರೆ. ಶಿಬಿರದ ಕೊನೆಯ ದಿನ ಹೆಸರಾಂತ ವಿದ್ವಾಂಸರಾದ ವಿದ್ಯಾಭೂಷಣ ಇವರಿಂದ ಸಂಗೀತ ಕಛೇರಿ ನಡೆಯಲಿದೆ. ಕರುಂಬಿತ್ತಿಲ್ ಎಂಬ ಪ್ರಶಾಂತ ವಾತಾವರಣದಲ್ಲಿ ಪ್ರತೀ ಮೇ ತಿಂಗಳಲ್ಲಿ ಸಂಗೀತ ಶಿಬಿರದ ಮೂಲಕ ಒಂದು ಪುಟ್ಟ ಸಂಗೀತ ಲೋಕವೇ ಸೃಷ್ಟಿಯಾಗುತ್ತದೆ. ಕರುಂಬಿತ್ತಿಲ್ ಕುಟುಂಬವೇ…
ಮೈಸೂರು : ಮೈಸೂರಿನ ಸಮತಾ ಅಧ್ಯಯನ ಕೇಂದ್ರದ ವತಿಯಿಂದ ಡಾ. ವಿಜಯಾ ದಬ್ಬೆಯವರ ಸ್ಮರಣಾರ್ಥ ವಿದ್ಯಾರ್ಥಿ, ಯುವಜನರಿಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಕವನ ಮತ್ತು ಕಿರಿಯ ಲೇಖಕಿಯರಿಗೆ ಆಯೋಜಿಸಿದ್ದ ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಕವನ ಸ್ಪರ್ಧೆ ವಿಜೇತರು : ಕೆ.ಜಿ.ಎಫ್.ನ ಆರ್. ಬಾಲಾಜಿ ಇವರ ‘ಎಂಟರ ಮನೆಯೊಳಗೆ ಕುಂಟೆ ಬಿಲ್ಲೆಯ ಆಟ’ (ಪ್ರಥಮ), ಕೇರಳ ಕೇಂದ್ರೀಯ ವಿವಿಯ ಜೋತಿರ್ಲಕ್ಷ್ಮಿಯವರ ‘ಫಿಂಗರ್ ಪ್ರಿಂಟಿನಲ್ಲಿ ಅವಳ ವಿಶ್ವರೂಪ’ ಮತ್ತು ಬಂಟ್ವಾಳದ ಜಯಶ್ರೀ ಇಡ್ಕಿದು ಇವರ ‘ಬಾಡಿಗೆ ಕೋಣೆ’ (ಇಬ್ಬರಿಗೂ ದ್ವಿತೀಯ), ಕೊಳ್ಳೇಗಾಲ ಚಿನ್ನಪುರದ ರಶ್ಮಿ ಎಸ್. ನಾಯಕ್ ಇವರ ‘ಹೆಣ್ತನ ಶಾಪವೇ’ (ತೃತೀಯ) ಕವನಗಳು ಮೊದಲ ಮೂರು ಬಹುಮಾನ ಪಡೆದುಕೊಂಡಿವೆ. ಕಥಾ ಸ್ಪರ್ಧೆ ವಿಜೇತರು : ಸಣ್ಣಕಥಾ ಸ್ಪರ್ಧೆಯಲ್ಲಿ ಬೆಂಗಳೂರಿನ ಪಲ್ಲವಿ ಎಡೆಯೂರು ಇವರ ‘ಯುರೋಪ್ಲೊಮೆಟ್ರಿ’ (ಪ್ರಥಮ), ರಾಮನಗರದ ವಿನುತ ಕೆ.ಆರ್. ಇವರ ‘ತಾಯಿ ಅಂದರೆ’ (ದ್ವಿತೀಯ) ಮತ್ತು ಮಾಲೂರಿನ ಡಾ. ಎಸ್. ಶಿಲ್ಪರವರ ‘ಬಾಯಿ ಬಣ್ಣ’ (ತೃತೀಯ) ಮೊದಲ ಮೂರು ಬಹುಮಾನ…
ಬೆಂಗಳೂರು : ಸ್ವಾಭಿಮಾನಿ ಕರ್ನಾಟಕ ವೇದಿಕೆಯ ವತಿಯಿಂದ ಕೊಡಮಾಡುವ 2024ರ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಕನ್ನಡ ಸಾಹಿತ್ಯದ ವಿವಿಧ ಪ್ರಕಾರದ ಎಂಟು ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಕಥಾ ವಿಭಾಗದಲ್ಲಿ ರವಿಕುಮಾರ್ ನೀಹ ಅವರ ‘ಅವು ಅಂಗೇ’, ಮಹಾಂತೇಶ್ ನವಲ್ಕರ್ ಅವರ ‘ಬುದ್ದ ಗಂಟೆಯ ಸದ್ದು’, ಕವನ ವಿಭಾಗದಲ್ಲಿ ಗೀತಾ ಮಂಜು ಬೆಣ್ಣೆಹಳ್ಳಿ ಅವರ ‘ಕಿರು ಬೆಳಕಿನ ಸೂಜಿ’, ಶಶಿ ತರೀಕೆರೆ ಅವರ ‘ಪ್ಯೂಷಾ’, ಪ್ರಬಂಧ ವಿಭಾಗದಲ್ಲಿ ಡಾ. ಶಿವರಾಜ ಬ್ಯಾಡರಹಳ್ಳಿ ಅವರ ‘ಒಂದು ತಲೆ ಚವುರದ ಕಥೆ’, ಡಾ. ಕರವೀರ ಪ್ರಭು ಕ್ಯಾಲಕೊಂಡ ಅವರ ‘ನೀವೂ ನೆಪೋಲಿಯನ್ ಆಗಿ’ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಡಾ. ಸಿ. ಸೋಮಶೇಖರ್ /ಸರ್ವಮಂಗಳಾ ದತ್ತಿ ಪ್ರಶಸ್ತಿಗೆ ಪ್ರೊ. ಧರಣೇಂದ್ರ ಕುರಕರಿ ಅವರ ‘ಜಾತ್ರಿ’ ಕಾದಂಬರಿ ಮತ್ತು ಮಹಾಂತೇಶ ಪಾಟೀಲರ ‘ಬೆಳಕು ಬೆಳೆಯುವ ಹೊತ್ತು’ ವಿಮರ್ಶೆ ಆಯ್ಕೆಯಾಗಿವೆ.
ಮಂಗಳೂರು : ಬ್ಯಾರಿ ಭಾಷೆಯಲ್ಲಿ ನಾಟಕಗಳನ್ನು ರೂಪಿಸಲು ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬ್ಯಾರಿ ಕಿರುನಾಟಕ ತರಬೇತಿ ಕಾರ್ಯಾಗಾರ ಮತ್ತು ಪ್ರದರ್ಶನ ಯೋಜನೆ ಹಮ್ಮಿಕೊಂಡಿದೆ. ಮಂಗಳೂರಿನಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿನಿಮಾ ನಿರ್ದೇಶಕರು ಮತ್ತು ಹಿರಿಯ ಕಲಾವಿದರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಾಗಾರಕ್ಕೆ ಪ್ರವೇಶ ಉಚಿತವಾಗಿದ್ದು, ಆಯ್ಕೆಯಾದ ಕಲಾವಿದರಿಗೆ ತರಬೇತಿ ಸಮಯದಲ್ಲಿ ಊಟೋಪಚಾರ, ಬಸ್ ಪ್ರಯಾಣ ವೆಚ್ಚ ನೀಡಲಾಗುವುದು. ತರಬೇತಿ ಪಡೆದ ಆಯ್ದ ಕಲಾವಿದರ ತಂಡದಿಂದ ನಾಟಕ ಪ್ರದರ್ಶನ ಕಾರ್ಯಕ್ರಮವನ್ನೂ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗುವುದು. ಆಸಕ್ತರು ನೋಂದಾವಣೆಗಾಗಿ ತಮ್ಮ ಹೆಸರು, ಪೂರ್ಣ ಅಂಚೆ ವಿಳಾಸ, ವಿದ್ಯಾರ್ಹತೆ ಮತ್ತು ದೂರವಾಣಿ ಸಂಖ್ಯೆ ಸಹಿತ ಅರ್ಜಿಯನ್ನು ದಿನಾಂಕ 25 ಮೇ 2025ರ ಒಳಗಾಗಿ ತಲುಪುವಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, 2ನೇ ಮಹಡಿ, ಸಾಮರ್ಥ್ಯ ಸೌಧ, ಮಿನಿ ವಿಧಾನಸೌಧದ ಬಳಿ, ಮಂಗಳೂರು -575001 ಇಲ್ಲಿಗೆ ಅಥವಾ bearyacademy@yahoo.in ವಿಳಾಸಕ್ಕೆ ಇ-ಮೇಲ್ ಮಾಡಬಹುದು. ಮಾಹಿತಿಗೆ…
ನೀಲೇಶ್ವರಂ : ಕಲ್ಯಾಶೇರಿ ಕೃಷ್ಣನ್ ನಂಬ್ಯಾರ್ ಭಾಗವತರ್ ಸ್ಮಾರಕ ಸಂಗೀತ ಸಭೆಯ ಪ್ರಥಮ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯನ್ನು ಪ್ರಸಿದ್ಧ ಸಂಗೀತಜ್ಞ ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ದಿನಾಂಕ 04 ಮೇ 2025ರಂದು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ ಸಮರ್ಪಣೆಯು ಸಂಘದ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿಶೇಷ ಸಮಾರಂಭದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬೇಕಲ್ ಗೋಕುಲಂ ಗೋಶಾಲಾ ಟ್ರಸ್ಟಿನ ವಿಷ್ಣು ಪ್ರಸಾದ್ ಹೆಬ್ಬಾರ್ ಇವರು ಉದ್ಘಾಟಿಸಿ, ಪ್ರಶಸ್ತಿಯನ್ನು ಯೋಗೀಶ ಶರ್ಮಾರವರಿಗೆ ಪ್ರದಾನಿಸಿದರು. ಸಭೆಯ ಅಧ್ಯಕ್ಷತೆಯನ್ನು ನರೇಂದ್ರನ್ ಕರಿಂಗಾಟ್ ವಹಿಸಿದ್ದರು ಹಾಗೂ ಪ್ರೊ. ಕೆ.ಪಿ. ಜಯರಾಜನ್ ಅವರು ಮುಖ್ಯ ಪ್ರಭಾಷಣ ನೀಡಿದರು. ಯೋಗೀಶ ಶರ್ಮಾ ಬಳ್ಳಪದವು ಇವರ ಸಾಧನೆಗಳ ಪರಿಚಯವನ್ನು ಶ್ರೀಮತಿ ನಿರಂಜಿನಿ ಜಯರಾಜ್ ನೀಡಿದರು. ಸಂಗೀತ ಕ್ಷೇತ್ರದಲ್ಲಿ ಸುದೀರ್ಘ ಕಾಲದ ನಿಷ್ಠೆಯಿಂದ ಮಾಡಿದ ಕೆಲಸಗಳು, ವೈಶಿಷ್ಟ್ಯಪೂರ್ಣ ಕಲಾಪ್ರದರ್ಶನ ಮತ್ತು ಗುರುವಾಗಿ ನೀಡಿದ ಕೊಡುಗೆಗಳಿಗೆ ಯೋಗೀಶ ಶರ್ಮಾರವರಿಗೆ ಈ ಪ್ರಶಸ್ತಿ ಲಭಿಸಿದೆ. ಎಂ.ಕೆ. ಗೋಪಕುಮಾರ್, ಕೆ.ಎಂ. ಗೋಪಾಲಕೃಷ್ಣನ್ ಮುಂತಾದ ಗಣ್ಯರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಂಘದ…
ಕಾಸರಗೋಡು : ಬದಿಯಡ್ಕದ ವೀಣಾವಾದಿನಿ ಸಂಗೀತ ಹಾಗೂ ವೈದಿಕ-ತಾಂತ್ರಿಕ ವಿದ್ಯಾಪೀಠದ ವತಿಯಿಂದ ‘ನಾದ ಮಾಧುರಿ’ ಮೂರು ದಿನಗಳ ಸಂಗೀತ ಹಾಗೂ ಮೃದಂಗ ಕಾರ್ಯಾಗಾರವು ದಿನಾಂಕ 09ರಿಂದ 11 ಮೇ 2025ರವರೆಗೆ ಬಳ್ಳಪದವು ನಾರಾಯಣೀಯಂ ಕ್ಯಾಂಪಸ್ ನಲ್ಲಿ ನಡೆಯಿತು. ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಕ, ವೀಣಾವಾದಿನಿಯ ನಿರ್ದೇಶಕ ಹಾಗೂ ಗುರು ಯೋಗೀಶ ಶರ್ಮ ಬಳ್ಳಪದವು ಇವರು ಗಾಯನದಲ್ಲಿ ಮಾರ್ಗದರ್ಶನ ನೀಡಿದರು. ಮೃದಂಗ ವಿಭಾಗದಲ್ಲಿ ಕಲಾವಿದರಾದ ಕೃಷ್ಣಕುಮಾರ್ ಚೇರ್ತಲ ಮತ್ತು ಕಲ್ಲೆಕುಳಂಗರ ಉಣ್ಣಿಕೃಷ್ಣನ್ ಇವರ ತಾಳಸಾಧನೆ ಮತ್ತಿತರ ಕೌಶಲ್ಯಗಳಲ್ಲಿ ಮಾರ್ಗದರ್ಶನ ನೀಡಿದರು. ಮುಸ್ಸಂಜೆಯ ಸಂಗೀತಾಭ್ಯಾಸ ತರಗತಿಗಳು, ಮುಂಜಾನೆಯ ಸಾಧನಾ ತರಗತಿಗಳು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿದ್ದವು. ಬೆಂಗಳೂರಿನ ಡಾ. ಪದ್ಮಶ್ರೀ ಇವರು ಮುಂಜಾನೆ ಯೋಗಾಭ್ಯಾಸ ಹೇಳಿಕೊಟ್ಟರು. ಸಮಾರೋಪದಲ್ಲಿ ಕಲ್ಲೆಕುಳಂಗರ ಉಣ್ಣಿಕೃಷ್ಣನ್, ವಯಲಿನ್ ವಿದ್ವಾಂಸ ಪ್ರಭಾಕರ ಕುಂಜಾರು, ಮೂಡುಬಿದಿರೆ ರಮಿತ್ ಕುಮಾರ್, ಅರಿಹಂತ್ ಇಂಡಸ್ಟ್ರೀಸ್ನ ವಿಶ್ವಾಸ್ ಪದ್ಯಾರಬೆಟ್ಟು, ಯೋಗೀಶ ಶರ್ಮಾ ಉಪಸ್ಥಿತರಿದ್ದರು. ಇದಕ್ಕೂ ಮೊದಲು ವೀಣಾವಾದಿನಿಯಲ್ಲಿ ಕಳೆದ ಒಂದು ತಿಂಗಳಿಂದ ತಂತ್ರಪೂಜಾ ಪಾಠಗಳು ಸಹ ಆರಂಭವಾಗಿವೆ.…
ಉಡುಪಿ : ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’, ಉದ್ಯಮ ಮೇಳ ಮತ್ತು ಆಹಾರ ಮೇಳವನ್ನು ದಿನಾಂಕ 18 ಮೇ 2025ರಂದು ಉಡುಪಿ ಗುಂಡಿಬೈಲಿನ ಬ್ರಾಹ್ಮಿ ಸಭಾಭವನದಲ್ಲಿ ಆಯೋಜಿಸಲಾಗಿದೆ. ಜಾನಪದ ನೃತ್ಯ ಸ್ಪರ್ಧೆಯನ್ನು ಶ್ರೀಕ್ಷೇತ್ರ ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣ ಆಸ್ರಣ್ಣ, ಉದ್ಯಮ ಮಳಿಗೆಗಳನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಆಹಾರ ಮೇಳವನ್ನು ಪಾಕಶಾಲಾ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ವಾಸುದೇವ ಅಡಿಗ ಇವರುಗ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಸಂಜೆ 5-30 ಗಂಟೆಗೆ ನಡೆಯಲಿದೆ. ವಿಪ್ರ ಬಾಂಧವರಿಗಾಗಿ ಉಡುಪಿ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಿದ್ದು, 40 ವರ್ಷದೊಳಗಿನ ಹಾಗೂ 40 ವರ್ಷ ಮೇಲ್ಪಟ್ಟ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಸಹಿತ ಆಕರ್ಷಕ ಬಹುಮಾನ ನೀಡಲಾಗುವುದು. ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉಚಿತ ಮಳಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ.…
ಬೆಂಗಳೂರು : ಕನ್ನಡ ಜನಶಕ್ತಿ ಕೇಂದ್ರ ನೀಡುವ ಪ್ರಸಕ್ತ ಸಾಲಿನ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಹಿರಿಯ ಸಂಶೋಧಕ ಡಾ. ಹಂ.ಪ. ನಾಗರಾಜಯ್ಯ ಇವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರೂ. ಇಪ್ಪತ್ತೈದು ಸಾವಿರ ನಗದು, ಕಂಚಿನ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ದಿನಾಂಕ 11 ಜೂನ್ 2025ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ. ಹಂಪನಾ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಹಂ.ಪ. ನಾಗರಾಜಯ್ಯರವರು, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರು ತಾಲೂಕಿನ ಹಂಪಸಂದ್ರ ಹಳ್ಳಿಯಲ್ಲಿ ಪದ್ಮಾವತಮ್ಮ- ಪದ್ಮನಾಭಯ್ಯ ದಂಪತಿಗಳ ಮಗನಾಗಿ ಜನಿಸಿದರು. ಹಂಪಸಂದ್ರ, ಗೌರೀಬಿದನೂರು, ಮಂಡ್ಯ, ಮಧುಗಿರಿ ಶಾಲೆಗಳಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದ ಹಂಪನಾ ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಟರ್ ಮೀಡಿಯೆಟ್…
ಉರ್ವ : ಕೆನರಾ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕಿ ರಾಜೇಶ್ವರಿ ಕುಡುಪು ಇವರು ರಚಿಸಿದ ‘ಕಲಾಸಂಪದ’ ಚಿತ್ರಕಲಾ ಮಾರ್ಗದರ್ಶಿ ಪುಸ್ತಕ ಬಿಡುಗಡೆ ನಗರದ ಪತ್ರಿಕಾಭವನದಲ್ಲಿ ದಿನಾಂಕ 16 ಮೇ 2025ರಂದು ನಡೆಯಿತು. ಪುಸ್ತಕ ಬಿಡುಗಡೆಗೊಳಿಸಿದ ಮಂಗಳೂರು ಉತ್ತರ ವಲಯದ ಜೇಮ್ಸ್ ಕುಟಿನ್ಹ ಮಾತನಾಡಿ, “ಕಲಾಶಿಕ್ಷಕಿಯಾಗಿ ರಾಜೇಶ್ವರಿಯವರ ಸೇವೆ ಮೆಚ್ಚುವಂತದ್ದು. ಉತ್ತರ ವಲಯದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಚಿತ್ರಕಲಾ ಗ್ರೇಡಿಂಗ್ ಪರೀಕ್ಷೆಗೆ ಹಾಜರಾಗಲು ವಿಶೇಷ ಕ್ರಮ ವಹಿಸಲಾಗುವುದು, ‘ಕಲಾಸಂಪದ’ ಪುಸ್ತಕ ಚಿತ್ರಕಲಾ ವಿದ್ಯಾರ್ಥಿಗಳಿಗೆ ಉತ್ತಮ ಕೈಪಿಡಿಯಾಗಿದ್ದು, ಎಲ್ಲರೂ ಕೊಂಡು ಓದಬೇಕು” ಎಂದರು. ಲೇಖಕಿ ರಾಜೇಶ್ವರಿ ಕುಡುಪು ಮಾತನಾಡಿ “ರಚನಾ ಕೌಶಲ, ಕ್ರಿಯಾಶೀಲತೆ ಮತ್ತು ಸೃಜನಶೀಲತೆ ಈ ರೀತಿಯ ಕಲೆಯನ್ನು ಇನ್ನು ಹೆಚ್ಚು ವಿದ್ಯಾರ್ಥಿಗಳನ್ನು ತಲುಪಬೇಕು. ಈ ಉದ್ದೇಶದಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ‘ಕಲಾಸಂಪಕ’ ಎಂಬ ಪುಸ್ತಕ ರಚನೆ ಮಾಡಿ ಎರಡನೇ ಆವೃತ್ತಿಯನ್ನು ಕನ್ನಡ, ಆಂಗ್ಲ ಮಾಧ್ಯಮದೊಂದಿಗೆ ಪುಸ್ತಕ ರೂಪದಲ್ಲಿ ಹೊರತರಲಾಗಿದೆ. ಈ ಪುಸ್ತಕ ಎಂಟನೇ ತರಗತಿ ಮಕ್ಕಳಿಗೆ ಮಾರ್ಗದರ್ಶನವಾಗಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ. ಗ್ರೇಡ್…
ಹುಬ್ಬಳ್ಳಿ : ಹುಬ್ಬಳ್ಳಿಯ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆಯು ‘ಕಾವ್ಯ ಪ್ರಶಸ್ತಿ’ ನೀಡಲು ಕವನ ಸಂಕಲನಗಳನ್ನು ಆಹ್ವಾನಿಸಿದೆ. ಸಂಕಲನವು 2023 ಹಾಗೂ 2024ರಲ್ಲಿ ಮೊದಲ ಬಾರಿಗೆ ಪ್ರಕಟವಾಗಿರಬೇಕು. ಅನುವಾದಿತ ಕೃತಿ ಆಗಿರಬಾರದು. ಈ ಮೊದಲು ಯಾವುದೇ ಪ್ರಶಸ್ತಿಗಳನ್ನು ಪಡೆದಿರಬಾರದು. ಪ್ರಶಸ್ತಿಯು ರೂ.10,000/- ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಸಂಕಲನದ ಎರಡು ಪ್ರತಿಗಳನ್ನು ದಿನಾಂಕ 10 ಜೂನ್ 2025ರೊಳಗೆ ‘ಕಾವ್ಯ ಪ್ರಶಸ್ತಿಗಾಗಿ’ ಎಂದು ನಮೂದಿಸಿ, ಎಂ.ಎ. ಸುಬ್ರಹ್ಮಣ್ಯ, ಸಾಹಿತ್ಯ ಪ್ರಕಾಶನ, ಕೊಪ್ಪೀಕರ್ ರಸ್ತೆ, ಹುಬ್ಬಳ್ಳಿ-580020 ಈ ವಿಳಾಸಕ್ಕೆ ಕಳುಹಿಸಬೇಕು. ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ನಲ್ಲಿ ಹುಬ್ಬಳ್ಳಿಯಲ್ಲಿ ನಡೆಯಲಿದೆ.