Author: roovari

ಮಂಗಳೂರು : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ದಿನಾಂಕ 14 ಫೆಬ್ರವರಿ 2026ರಂದು ಪೆರ್ಮನ್ನೂರು ತೊಕ್ಕೊಟ್ಟು ಒಳಪೇಟೆಯ ಡಾ. ಅಂಬೇಡ್ಕರ್ ರಂಗ ಮಂದಿರದಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಕ್ಷೇತ್ರ ಧರ್ಮಸ್ಥಳದ ರಾಣಿ ಅಬ್ಬಕ್ಕ ವಂಶಸ್ಥರಾದ ಅನಿತಾ ಸುರೇಂದ್ರ ಕುಮಾ‌ರ್ “ರಾಣಿ ಅಬ್ಬಕ್ಕ 1525ರಿಂದ 1570ರವರೆಗೆ ಪೋರ್ಚುಗೀಸರ ವಿರುದ್ಧ ಹೋರಾಟ ಮಾಡಿದ ಹೆಗ್ಗಳಿಕೆ ಪಡೆದಿದ್ದಳು. ಯುದ್ಧದ ಮೂಲಕ ಅವರನ್ನು ಸೆದೆ ಬಡಿದು ರಾಜ್ಯ ರಕ್ಷಣೆಗೆ ಪಣ ತೊಟ್ಟಿದ್ದ ರಾಣಿ ಆಗಿದ್ದಾಳೆ. ಅಬ್ಬಕ್ಕಳ ಹೆಸರಿನಲ್ಲಿ ನಾನಾ ಕಡೆ ಅಬ್ಬಕ್ಕ ಉತ್ಸವ ಆಗುತ್ತಿರುವುದು ಶ್ಲಾಘನೀಯ. ಅವಳ ಹೆಸರಿನಲ್ಲಿ ನಡೆಯುವ ಉತ್ಸವ ಶಾಶ್ವತವಾಗಿ ಉಳಿಸಬೇಕು” ಎಂದು ಹೇಳಿದರು. ಹಾವೇರಿ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅಭಿನಂದನಾ ನುಡಿ ಸಲ್ಲಿಸಿ, “ಇತಿಹಾಸದಲ್ಲಿ 13 ಮಂದಿ ಶೂರ ಯೋಧರ ಪೈಕಿ 5 ಮಂದಿ ಮಹಿಳೆಯರು ಇದ್ದಾರೆ. ಅವರಲ್ಲಿ ರಾಣಿ ಅಬ್ಬಕ್ಕಳ…

Read More

ಉಡುಪಿ : ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಶಿವಪಾಡಿ ವೈಭವದ ಪ್ರಯುಕ್ತ ದಿನಾಂಕ 14 ಫೆಬ್ರವರಿ 2026ರಂದು ‘ನರ್ತನ 2026’ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಸಿ.ಐ.ಐ. ನಿಕಟಪೂರ್ವ ಅಧ್ಯಕ್ಷ ದೇವಿಚರಣ್ ಕಾವಾ “ಇಡೀ ಗ್ರಾಮವೇ ಸಂಭ್ರಮಪಡುವ ಶಿವಪಾಡಿ ವೈಭವ ಕಾರ್ಯಕ್ರಮದ ಜತೆಗೆ ವಿವಿಧ ಸ್ಪರ್ಧೆಗಳು, ವಸ್ತುಪ್ರದರ್ಶನ ಆಯೋಜಿಸಿರುವುದು ಹಬ್ಬದ ವಾತಾವರಣವನ್ನು ಉಂಟು ಮಾಡಿದೆ” ಎಂದು ಹೇಳಿದರು. ಮಾಹೆ ಎಸ್ಟೇಟ್ ಆಫೀಸರ್ ಬಾಲಕೃಷ್ಣ ಪ್ರಭು ಅಧ್ಯಕ್ಷತೆ ವಹಿಸಿ, “ನಟರಾಜನ ನಾಟ್ಯವನ್ನು ಪ್ರದರ್ಶಿಸುವ ಕಲೆ ಇಲ್ಲಿ ಅನಾವರಣವಾಗಲಿದ್ದು, ಇದು ಶಿವನಿಗೆ ಸಮರ್ಪಿಸುವ ನಟರಾಜನ ಸೇವೆಯಾಗಿದೆ. ನಟರಾಜನ ಸಾನಿಧ್ಯದಲ್ಲಿ ನೃತ್ಯ ಮಾಡಿದರೆ ಮತ್ತಷ್ಟು ಅವಕಾಶ ಒದಗಿಬರಲು ಸಾಧ್ಯವಿದೆ. ಶಿವಪಾಡಿ ವೈಭವ ವರ್ಷಂಪ್ರತಿ ಹೊಸತನದೊಂದಿಗೆ ಬರುತ್ತಿದೆ. ಹೊಸತನದ ಮೂಲಕ ಧಾರ್ಮಿಕ ಆಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿರುವುದು ನಿಜಕ್ಕೂ ಶ್ಲಾಘನಾರ್ಹ” ಎಂದರು. ಅಭಿನಂದನ್ ಉಡುಪಿಯ ರಂಜಿತ್ ಶೆಟ್ಟಿ, ಶಿವಪಾಡಿ ವೈಭವ ಆಚರಣ…

Read More

ಕೊಂಚಾಡಿ : ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನ ಇದರ ಆಶ್ರಯದಲ್ಲಿ ಹಾಗೂ ಯಕ್ಷ ಸ್ನೇಹ ಕಲಾ ಪ್ರತಿಷ್ಠಾನ (ರಿ) ಇವರ ಆಯೋಜನೆಯಲ್ಲಿ ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮವು ದಿನಾಂಕ 1ರಿಂದ 8 ಮಾರ್ಚ್ 2026ರವರೆಗೆ ದೇವಸ್ಥಾನ ಆವರಣದಲ್ಲಿರುವ ಶ್ರೀಮತಿ ಲೀಲಾವತಿ ಬೈಪಡಿತ್ತಾಯ ವೇದಿಕೆಯಲ್ಲಿ ನಡೆಯಲಿದೆ. ವಿಶ್ವ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಆಯೋಜಿಲಾದ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದಿನಾಂಕ 18 ಫೆಬ್ರವರಿ 2026ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುಗಳಾದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಬಿಡುಗಡೆ ಮಾಡಿದರು. ಕರಾವಳಿಯ ಗಂಡುಕಲೆ ಎಂದೇ ಖ್ಯಾತಿಯನ್ನ ಪಡೆದ ಯಕ್ಷಗಾನದಲ್ಲಿ ಮಹಿಳೆಯರ ಸಾಧನೆ, ಸಮರ್ಪಣೆ ಹಾಗೂ ಕಲಾ ಸಾಮರ್ಥ್ಯವನ್ನು ಸಮಾಜದ ಮುಂದಿಡುವ ಉದ್ದೇಶದಿಂದ ಈ ಅಷ್ಟಾಹ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸ್ನೇಹಿತರ ಬಳಗವಾಗಿ ಆರಂಭಗೊಂಡ ಈ ಕಲಾ ಚಟುವಟಿಕೆ, ಮದ್ದಳೆ ಕಲಾವಿದ ಹಾಗೂ ಛಾಯಾಗ್ರಾಹಕರಾದ ಮಧುಸೂದನ್ ಅಲೆವೂರಾಯರ ಮಾರ್ಗದರ್ಶನದಲ್ಲಿ ಬೆಳೆದು, ಇಂದು ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು…

Read More

ಸೋಮೇಶ್ವರ : ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ದಿನಾಂಕ 15 ಫೆಬ್ರವರಿ 2026ರಂದು ಆಯ್ದ ಹಿರಿಯ ಕವಿಗಳ ಕವಿಗೋಷ್ಠಿ ಜರಗಿತು. ಅರ್ಚಕ ಶ್ರೀಶ ದೀಪ ಬೆಳಗಿಸಿದರು. ಸೋಮೇಶ್ವರ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ನಾಯ್ಕರು ಸಮಾಜದ ಮುಖಂಡ ಹರಿಶ್ಚಂದ್ರ ಗಟ್ಟಿ ಉಪಸ್ಥಿತರಿದ್ದರು. ಕವಿಗೋಷ್ಠಿ ಸಂಯೋಜಕ ಎಂ.ಎಸ್. ವೆಂಕಟೇಶ ಗಟ್ಟಿ ಸ್ವಾಗತಿಸಿದರು. ಈ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಕವಿ ರೇಮಂಡ್ ಡಿ.ಕುನ್ಹಾ ತಾಕೊಡೆ ಮಾತನಾಡಿ “ಕವಿಯ ಅನುಭವದ ಅಂಶಗಳನ್ನು ಹೊತ್ತುಕೊಂಡು ಕವಿತೆಗಳು ರೂಪುಗೊಳ್ಳುತ್ತವೆ. ಜಾನಪದ, ಸ್ವಾತಂತ್ರ್ಯ ಹೋರಾಟ ಹಾಗೂ ಸಾಮಾಜಿಕ ಬದ್ಧತೆಯ ವಿಷಯಗಳು ಕವಿತೆಗಳಿಗೆ ಪ್ರೇರಣೆಯಾಗುತ್ತವೆ” ಎಂದು ಹೇಳಿದರು. ಡಾ. ಸುರೇಶ್ ನೆಗಳಗುಳಿ ಕವಿಗೋಷ್ಠಿಗೆ ಚಾಲನೆ ನೀಡುತ್ತಾ ‘ಹರನೊಲಿದರೆ ಕೊರಡು ಕೊನರುವುದು’ ಎಂಬಂತೆ ಶಿವರಾತ್ರಿ ಕಾಲದ ಜಾಗರಣೆ ಮನಸ್ಸನ್ನು ಜಾಗೃತ ಮಾಡುತ್ತದೆ ಎನ್ನುತ್ತಾ ಶಿವರಾತ್ರಿಯ ಮಹತ್ವ ಸಾರುವ ಭಕ್ತಿಗೀತೆ ಹಾಗೂ ಗಝಲ್ ಓದಿದರು. ಕವಿಗಳಾದ ವಿಜಯಲಕ್ಷ್ಮೀ ಕಟೀಲು, ಅನಾರ್ಕಲಿ ಸಲೀಂ, ಸುಮಂಗಲ ದಿನೇಶ್, ಗಣೇಶ್ ಪ್ರಸಾದ್‌ ಜೀ,…

Read More

ಕಾಸರಗೋಡು : ಡಾ. ವಾಮನ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ಇವರ ಮುಂದಾಳುತ್ವದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ‘ಕಾಸರಗೋಡು ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ -2026’ ದಿನಾಂಕ 22 ಫೆಬ್ರವರಿ 2026ರಂದು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಆಯೋಜಿತವಾಗಿದೆ. ಇಂತಹ ಸಮ್ಮೇಳನ ಕ್ಷೀಣಿಸುತ್ತಿರುವ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಮಾಡುವ ನಿರಂತರ ಪ್ರಯತ್ನಗಳಲ್ಲಿ ಒಂದು. ಇಲ್ಲಿನ ಕನ್ನಡಿಗರ ಮಾತೃಭಾಷೆಯ ಮೇಲಿನ ಪ್ರೀತಿ ಮತ್ತು ಅಭಿಮಾನಗಳ ದ್ಯೋತಕಗಳು. ಸಂಘ-ಸಂಸ್ಥೆಗಳು ಕನ್ನಡದ ಉಳಿವಿಗಾಗಿ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಲೇ ಬಂದಿವೆ. ಅವುಗಳಲ್ಲಿ ಕನ್ನಡ ಭವನ ಮತ್ತು ಅಂಗ ಸಂಸ್ಥೆಗಳು ಅನವರತ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿವೆ. ಈಗ ಉದ್ದೇಶಿಸಿರುವ ಈ ಕಾರ್ಯಕ್ರಮವು ಅವುಗಳಲ್ಲಿ ಒಂದು. ಕಾಸರಗೋಡು ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನವು ಬೆಳಿಗ್ಗೆ 7-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ದಿನಪೂರ್ತಿ ನಡೆಯುವುದಾಗಿ ರೂವಾರಿಗಳಾದ ಡಾ. ವಾಮನರಾವ್ ಬೇಕಲ್ ತಿಳಿಸಿದ್ದಾರೆ. ಕಾರ್ಯಕ್ರಮವು ನುಳ್ಳಿಪಾಡಿಯ ಕನ್ನಡ ಭವನದ…

Read More

ಸಾಣೇಹಳ್ಳಿ : ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2025-26ನೆಯ ಸಾಲಿನ ವಿದ್ಯಾರ್ಥಿಗಳ ಅಭ್ಯಾಸ ಮಾಲಿಕೆಯ ರಂಗ ಪ್ರಯೋಗವನ್ನು ದಿನಾಂಕ 20 ಫೆಬ್ರವರಿ 2026ರಂದು ಸಂಜೆ 7-00 ಗಂಟೆಗೆ ಸಾಣೇಹಳ್ಳಿಯ ಶ್ಯಾಮನೂರು ಶಿವಶಂಕರಪ್ಪ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪೂಜ್ಯಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ಪ್ರಸ್ತುತಗೊಳ್ಳುವ ‘ಕಾಯಕ ಯೋಗಿ ನುಲಿಯಚಂದಯ್ಯ’ ನಾಟಕ ಪರಿಕಲ್ಪನೆ ಮತ್ತು ನಿರ್ದೇಶನ ಮಹಾಂತೇಶ್ ರಾಮದುರ್ಗಾ ಇವರದ್ದು. ಚಂದ್ರಶೇಖರ್ ವಸ್ತ್ರದ ಮತ್ತು ಜೆ.ಹೆಚ್. ಹನ್ನೆರಡುಮಠ ಇವರು ರಚಿಸಿದ್ದು, ಶರಣ್ ಕುಮಾರ್ ಇವರು ಸಂಗೀತ ನೀಡಿರುತ್ತಾರೆ.

Read More

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗವು ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುವ ‘ಸೇವಾ ಭೂಷಣ ಪ್ರಶಸ್ತಿ’ಯನ್ನು 2026ರಿಂದ ಎಚ್.ಎನ್. ಶೃಂಗೇಶ್ವರರ ಹೆಸರನ್ನು ಸೇರಿಸಿ ಈರ್ವರ ನೆನಪಿನಲ್ಲಿ ನೀಡಲು ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. ಎಸ್. ಗೋಪಾಲ ಕೃಷ್ಣ ಅವರು 27 ವರ್ಷ ಸಂಸ್ಥೆಯ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಎಚ್‌.ಎನ್‌. ಶೃಂಗೇಶ್ವರರು ಕಾರ್ಯಕರ್ತರಾಗಿ, ಜೊತೆ ಕಾರ್ಯದರ್ಶಿಯಾಗಿ 35 ವರ್ಷಗಳ ಕಾಲ ಸಂಸ್ಥೆಯ ಬೆಳವಣಿಗೆಗೆ ಕಾರಣರಾಗಿದ್ದರು. ಈ ವರ್ಷದ ಸೇವಾ ಭೂಷಣ ಪ್ರಶಸ್ತಿಗೆ ನಿವೃತ್ತ ಬ್ಯಾಂಕ್ ಅಧಿಕಾರಿ, ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆಯಾಗಿದ್ದು, ಇವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವೋಪದೇಶವನ್ನು ಸ್ವತಃ ಮೈಗೂಡಿಸಿಕೊಂಡು ಗುರುಗಳ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅದನ್ನು ಉಚಿತವಾಗಿ ಹಂಚುತ್ತಾ ಅವರ ಜೀವನ ಮೌಲ್ಯಗಳನ್ನು ಪ್ರಸಾರ ಮಾಡುತ್ತಾ ನೊಂದವರು, ಸಂಸ್ಥೆಗಳಿಗೆ ನೆರವು ನೀಡುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 27 ಫೆಬ್ರವರಿ 2026ರಂದು ಸಂಸ್ಥೆಯ ಐ.ವೈ.ಸಿ. ಸಭಾಂಗಣದಲ್ಲಿ ಜರಗಲಿದೆ ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ…

Read More

ಕಾರ್ಕಳ : ನೃತ್ಯನಿಕೇತನ ಕೊಡವೂರು ಇದರ ಕಲಾವಿದರಿಂದ ಶ್ರೀ ಸುಧೀರ್ ರಾವ್ ಮತ್ತು ವಿದುಷಿ ಮಾನಸಿ ಸುಧೀರ್ ರಾವ್ ಉಡುಪಿ ಇವರ ನಿರ್ದೇಶನದಲ್ಲಿ ಪ್ರಸ್ತುತ ಪಡಿಸುವ ‘ನೃತ್ಯ ಸಿಂಚನ’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 21 ಫೆಬ್ರವರಿ 2026ರಂದು ಸಂಜೆ 7-00 ಗಂಟೆಗೆ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

Read More

ಮೈಸೂರು : ಅಂತರಂಗ ಅಭಿನಯಿಸುವ ಕೈಲಾಸಂರ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 22 ಫೆಬ್ರವರಿ 2026ರಂದು ಸಂಜೆ ಗಂಟೆ 7-15ಕ್ಕೆ ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. 64ನೇ ಪ್ರದರ್ಶನದ ಈ ನಾಟಕವನ್ನು ಮೂಲ ನಿರ್ದೇಶನ ಡಾ. ಬಿ.ವಿ. ರಾಜಾರಾಂ ಹಾಗೂ ಪರಿಷ್ಕೃತ ನಿರ್ದೇಶನ ಅರ್ಚನಾ ಶ್ಯಾಮ್ ಇವರು ಮಾಡಿರುತ್ತಾರೆ. ಅಂಕಲ್ ಶ್ಯಾಂ ಇವರು ನಿರ್ವಹಣೆ ಮಾಡಿರುವ ಈ ನಾಟಕ ನಿರಂತರ ಫೌಂಡೇಷನ್ ಮೈಸೂರು ಇವರ ಸಹಕಾರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಅಂತರಂಗ ತಂಡ 46 ವರ್ಷಗಳಿಂದ ರಂಗ ಕ್ರಿಯಯನ್ನು ನಡೆಸಿಕೊಂಡು ಬರುತ್ತಿದ್ದು, ಕೈಲಾಸಂರ ‘ಹುತ್ತದಲ್ಲಿ ಹುತ್ತ’ ನಾಟಕವನ್ನು ಈಗಾಗಲೇ ಯಶಸ್ವಿಯಾಗಿ ಪ್ರದರ್ಶಿಸಿದೆ. ಕೈಲಾಸಂ ಒಬ್ಬ ಅಪ್ರತಿಮ ನಾಟಕಕಾರ. ಇಂದಿಗೂ ಅವರ ನಾಟಕಗಳು ಪ್ರಸ್ತುತವಾಗಿದ್ದು, ರಂಗಭೂಮಿಯಲ್ಲಿ ಚಿರಸ್ಥಾಯಿಯಾಗಿದೆ.

Read More

ಬೆಂಗಳೂರು : ನಾಟಕ ತಂಡಗಳು 50 ವರ್ಷ ಪೂರೈಸಿದ ಹಿನ್ನೆಲೆ ರಂಗಭೂಮಿ ದಿಗ್ಗಜರಿಗೆ ನಮನ ಸಲ್ಲಿಸುವುದಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ದಿನಾಂಕ 21ರಿಂದ 26 ಫೆಬ್ರವರಿ 2026ರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಹೊನ್ನಾರು ನಾಟಕೋತ್ಸವ’ದಲ್ಲಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ದಿನಾಂಕ 21 ಫೆಬ್ರವರಿ 2026ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಇವರು ಉದ್ಘನಟನೆ ಮಾಡಲಿದ್ದು, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ನಟ ಪ್ರಕಾಶ್ ರಾಜ್, ದತ್ತಣ್ಣ, ಶ್ರೀನಿವಾಸ್ ಕಪ್ಪಣ್ಣ, ಮೇರು ನಟಿಯರಾದ ಜಯಶ್ರೀ, ಡಾ. ಉಮಾಶ್ರೀ, ಗಿರೀಜಾ ಲೋಕೇಶ್, ನಿರ್ದೇಶಕ ಟಿ.ಎಸ್. ನಾಗಾಭರಣ, ವಿ.ಎಂ. ನಾಗೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ರಂಗೋತ್ಸವದಲ್ಲಿ ರಂಗಸಂಪದ, ಸಮುದಾಯ, ನಟರಂಗ, ಕಲಾ ಗಂಗೋತಿ, ಸ್ಪಂದನ ಹಾಗೂ ಬೆನಕ ತಂಡಗಳು ಪಾಲ್ಗೊಳ್ಳಲಿವೆ. ದಿನಾಂಕ 21 ಫೆಬ್ರವರಿ 2026ರಂದು ರಂಗಸಂಪದ ತಂಡದಿಂದ ಸಂಜೆ ಗಂಟೆ 7-00ಕ್ಕೆ ‘ಶರ್ಮಿಷ್ಠೆ’, ದಿನಾಂಕ 22 ಫೆಬ್ರವರಿ 2026ರಂದು ಸಮುದಾಯ ತಂಡದಿಂದ ಸಂಜೆ ಗಂಟೆ 6-30ಕ್ಕೆ ‘ಭಗವಂತನ…

Read More