Author: roovari

ಬೆಂಗಳೂರು : ಪ್ರಯೋಗರಂಗ ಬೆಂಗಳೂರು ಇವರು ಪ್ರಸ್ತುತ ಪಡಿಸುವ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನವನ್ನು ದಿನಾಂಕ 04 ಡಿಸೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕದ ರಚನೆ ಕಿ.ರಂ. ನಾಗರಾಜ ಇವರು ಮಾಡಿದ್ದು, ಸಂಗೀತ ಹೆಚ್.ಕೆ. ಯೋಗಾನರಸಿಂಹ ಮತ್ತು ಸುರೇಶ್ ಆನಗಳ್ಳಿ ಇವರು ನೀಡಿದ್ದು, ಸಿಜಿಕೆ ನಿರ್ದೇಶನ ಮಾಡಿರುತ್ತಾರೆ. ಪ್ರಸ್ತುತ ಟಿ. ರಘು ಇವರು ಮರು ನಿರ್ದೇಶನ ಮಾಡಿದ್ದು, ಡಾ. ಕೆ.ವಿ. ನಾಗರಾಜಮೂರ್ತಿ ಇವರು ನಿರ್ಮಾಣ ಮತ್ತು ನಿರ್ವಹಣೆ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 98451 72822 ಸಂಖ್ಯೆಯನ್ನು ಸಂಪರ್ಕಿಸಿರಿ. ಪ್ರಯೋಗರಂಗದ ಬಗ್ಗೆ : ಪ್ರಯೋಗರಂಗ ನಾಟಕ ತಂಡ ಕಳೆದ 25 ವರ್ಷಗಳಿಂದ ದೇಶದ ವಿವಿಧ ರಾಜ್ಯಗಳಲ್ಲಿ ವಿಭಿನ್ನ ನಾಟಕ ಪ್ರರ್ದಶಿಸುತ್ತಾ ಬಂದಿದೆ. ‘ಮಂಟೆಸ್ವಾಮಿ ಕಥಾಪ್ರಸಂಗ’, ‘ಮೌನಿ’, ‘ಪ್ರೇತದ್ವೀಪ’, ‘ಮಲ್ಲಮ್ಮನ ಮನೆ ಹೋಟು’, ‘ಬ್ರಹ್ಮಚಾರಿ ಶರಣಾದ’, ‘ಮಹಿಪತ ಕ್ವಾಣನ ತಂಬಿಗಿ ಎಂ.ಎ’, ‘ಜುಮ್ನಾಳ ದೂಳ್ಯನ ಪ್ರಸಂಗ’, ‘ರಾಜಬೇಟೆ’, ‘ಸಂತೆಯಲ್ಲಿ ನಿಂತ ಕಬೀರ’, ‘ಪರಿಹಾರ’, ‘ಜುಗಾರಿ ಕೂಟ’,…

Read More

ಕಾಸರಗೋಡು : ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಮತ್ತು ಲಕ್ಷ್ಮೀ ಟೀಚರ್ ಕಣ್ಣಪ್ಪ ಮಾಸ್ಟರ್ ಮೆಮೋರಿಯಲ್ ಟ್ರಸ್ಟಿನ ಸಹಯೋಗದಲ್ಲಿ ಲಕ್ಷ್ಮೀ ರಾವ್ ಆರೂರು, ಶಾರದಾ ಭಟ್, ರಾಧಾಬಾಯಿ ನಾರಾಯಣ ಬಾಬು ಮತ್ತು ಶ್ರೀಕಲಾ ಉಡುಪ ದತ್ತಿನಿಧಿಯ ‘ಅಮ್ಮನೆಂಬ ವಿಸ್ಮಯ’ ಪರಿಕಲ್ಪನೆಯ ಕಾರ್ಯಕ್ರಮವು ದಿನಾಂಕ 29 ನವೆಂಬರ್ 2025ರಂದು ಕುಂಜತ್ತೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ಶಕುಂತಳಾ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಮುಖ್ಯ ಅತಿಥಿ, ಲೇಖಕಿ ಕುಶಲಾಕ್ಷಿ ಕಣ್ವತೀರ್ಥ ಮಾತನಾಡಿ “ಬದಲಾದ ಕಾಲಘಟ್ಟದಲ್ಲಿ ಹೆತ್ತವರ ಅತಿಯಾದ ಕಾಳಜಿಯಿಂದ ಮತ್ತು ಆಧುನಿಕ ಸೌಕರ್ಯಗಳಿಂದ ಮಕ್ಕಳಲ್ಲಿ ಕಷ್ಟ ಸಹಿಸುವ ಶಕ್ತಿ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಅದೇ ಅಮ್ಮಂದಿರು ತಮ್ಮ ವೃದ್ಧಾಪ್ಯದಲ್ಲಿ ಆಶ್ರಮವಾಸಿಗಳಾಗುತ್ತಿದ್ದಾರೆ” ಎಂದರು. ದತ್ತಿನಿಧಿಯ ಅಂಗವಾಗಿ ಸಂಘದ ಸದಸ್ಯೆಯರಿಗೆ ‘ಅಮ್ಮ’ ಎನ್ನುವ ಶೀರ್ಷಿಕೆಯಡಿ ಏರ್ಪಡಿಸಿದ್ದ ಕವನ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು. ದೇವಿಕಾ ನಾಗೇಶ್ ಪ್ರಥಮ, ಶರ್ಮಿಳಾ ಉಡುಪ ದ್ವಿತೀಯ, ವಿಜಯಲಕ್ಷ್ಮೀ ಶಾನುಭಾಗ್ ಮತ್ತು ಡಾ. ಜ್ಯೋತಿ ಚೇಳ್ಯಾರು ತೃತೀಯ ಬಹುಮಾನವನ್ನು ಪಡೆದರು.…

Read More

ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಏರ್ಯ ಆಳ್ವ ಫೌಂಡೇಷನ್ ಮೊಡಂಕಾವು ಇದರ ಸಹಯೋಗದೊಂದಿಗೆ ಏರ್ಯ ಲಕ್ಷ್ಮೀ ನಾರಾಯಣ ಆಳ್ವರ ಶತಮಾನೋತ್ಸವದ ಪ್ರಯುಕ್ತ 3ನೇ ವರ್ಷದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ’ ದಿನಾಂಕ 07 ಡಿಸೆಂಬರ್ 2025ರಂದು ಬೆಳಿಗ್ಗೆ 9-30ರಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ಉದ್ಘಾಟಿಸುವರು. ನಿವೃತ್ತ ಚಿತ್ರಕಲಾ ಶಿಕ್ಷಕ ಎಚ್.ಎನ್. ಹೆಬ್ಬಾರ್ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 2-30ಕ್ಕೆ ಬಹುಮಾನ ವಿತರಣೆ ನಡೆಯಲಿದ್ದು, ಚಿತ್ರ ಕಲಾವಿದ ದಿನೇಶ್ ಹೊಳ್ಳ ಉಪಸ್ಥಿತರಿರುವರು. 4ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸಲು ಐಚ್ಚಿಕ ವಿಷಯ ನೀಡಲಾಗಿದ್ದು, 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಹಳ್ಳಿ ವ್ಯಾಪಾರ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ವಿಷಯ ನೀಡಲಾಗಿದೆ. ಭಾಗವಹಿಸುವ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9-00 ಗಂಟೆಗೆ ಸರಿಯಾಗಿ ಶಾಲಾ ಗುರುತಿನ ಚೀಟಿಯೊಂದಿಗೆ ಹಾಜರಿರಬೇಕು. ಡ್ರಾಯಿಂಗ್ ಪೇಪರ್ ಹೊರತುಪಡಿಸಿ ಇತರ…

Read More

ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇವರ ಸಹಯೋಗದಲ್ಲಿ ಶ್ರೀಮತಿ ವನಜಾ ಜೋಶಿ ಇವರ ‘ನಕ್ಕು ಬಿಡು ಬಾನಕ್ಕಿ’ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರವನ್ನು ದಿನಾಂಕ 06 ಡಿಸೆಂಬರ್ 2025ರಂದು ಮುಂಜಾನೆ 9-30 ಗಂಟೆಗೆ ಉಜಿರೆ ಎಸ್.ಡಿ.ಎಮ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ವಹಿಸಲಿದ್ದು, ಉಜಿರೆ ಎಸ್.ಡಿ.ಎಮ್. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನಾ ಇವರು ಉದ್ಘಾಟನೆ ಮಾಡಲಿದ್ದಾರೆ. ಸಾಹಿತಿ ಶ್ರೀಮತಿ ಸುಮನಾ ಆರ್. ಹೇರ್ಳೆ ಇವರು ಪುಸ್ತಕ ಪರಿಚಯ ಮಾಡಲಿದ್ದು, ಲೇಖಕಿ ವನಜಾ ಜೋಶಿ ಇವರು ಕೃತಿ ಬಗ್ಗೆ ಅನಿಸಿಕೆಗಳನ್ನಾಡಲಿದ್ದಾರೆ. ಗಜಲ್ ಕವಿ ಡಾ. ಮಲ್ಲಿನಾಥ ಎಸ್. ತಳವಾರ ಇವರು ಗಜಲ್ ರಚನಾ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ದಿನಾಂಕ 06 ಡಿಸೆಂಬರ್ 2025ರಂದು ಸಂಜೆ 4-00 ಗಂಟೆಗೆ ‘ಕಾವ್ಯಾಂ ವ್ಹಾಳೊ-9’ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಅಕಾಡೆಮಿ ಸಭಾಂಗಣದಲ್ಲಿ ಹಮ್ಮಿಕೊಂಡಿದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ವಹಿಸಿಕೊಳ್ಳಲಿದ್ದು, ಇನ್ಫೆಂಟ್ ಜೀಸಸ್ ಶ್ರೈನ್ನ ನಿರ್ದೇಶಕರಾದ ಫಾ. ಸ್ಟೀವನ್ ಆಲ್ವಿನ್ ಪಿರೇರಾರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಖ್ಯಾತ ಕವಿಗಳಾದ ಶ್ರೀ ಆ್ಯಂಡ್ರು ಎಲ್. ಡಿಕುನ್ಹಾರವರು ಕವಿಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಲಿದ್ದು, ವಿನ್ಸೆಂಟ್ ಪಿಂಟೊ ಆಂಜೆಲೊರ್, ಕೃತಿಕಾ ಕಾಮತ್, ರೇಮಂಡ್ ಡಿಕುನ್ಹಾ, ಎಲ್ಸನ್ ಡಿಕೋಸ್ತ ಹಿರ್ಗಾನ್, ಸೋನಿಯಾ ಡಿಕೋಸ್ತ, ಲವೀನ ದಾಂತಿ ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸುವರು. ಏಂಜಲ್ ಕುಟಿನ್ಹಾ, ರಿಷೊನ್ ನಜ್ರೆತ್, ಆನ್ಯ ದಾಂತಿ, ಸ್ಟ್ಯಾನಿ ಆಲ್ವಾರಿಸ್- ಇವರು ದಿ. ಚಾ. ಪ್ರಾ. ಡಿಕೋಸ್ತರವರ ಕವಿತೆಗಳನ್ನು ವಾಚಿಸಲಿದ್ದಾರೆ.

Read More

ಬೆಂಗಳೂರು : ಕಲಾ ದರ್ಶಿನಿ ಟ್ರಸ್ಟ್ (ರಿ.) ಮತ್ತು ಸೃಷ್ಟಿ ಕಲಾಮಂದಿರ ಇವರ ಸಹಯೋಗದಲ್ಲಿ ಚಿತ್ರ ಕಲಾವಿದ ಚಂದನ್ ಮತ್ತು ಸೃಷ್ಟಿ ಚಿತ್ರಕಲಾ ವಿದ್ಯಾರ್ಥಿಗಳಿಂದ ‘ಸೃಷ್ಟಿ ಚಿತ್ರ ಸಂಭ್ರಮ’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 05 ಡಿಸೆಂಬರ್ 2025ರಂದು ಸಂಜೆ 5-30 ಗಂಟೆಗೆ ಬೆಂಗಳೂರಿನ ಸೃಷ್ಟಿ ಕಲಾಮಂದಿರದಲ್ಲಿ ನಡೆಯಲಿದೆ. ನರಹರಿ ರಾವ್ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ಸುಚಿತ್ರ ಫಿಲಂ ಸೊಸೈಟಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಲೇಖಕಿ ಜಯಶ್ರೀ ಕಾಸರವಳ್ಳಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ದಿನಾಂಕ 6 ಮತ್ತು 7 ಡಿಸೆಂಬರ್ 2025ರಂದು ಬೆಳಗ್ಗೆ 10-00ರಿಂದ ಸಂಜೆ 8-00 ಗಂಟೆಗೆ ತನಕ ಚಿತ್ರ ಪ್ರದರ್ಶನಗೊಳ್ಳಲಿದೆ.

Read More

ಉಡುಪಿ : ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ.) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2026ಕ್ಕೆ ಈ ಬಾರಿ ಬೆಂಗಳೂರಿನ ಕನ್ನಡ ಕಿರುತೆರೆ ನಟ, ರಂಗನಿರ್ದೇಶಕ, ನಟ, ವಾಗ್ಮಿ ಎಸ್.ಎನ್. ಸೇತುರಾಮ್ ಇವರು ಆಯ್ಕೆಯಾಗಿದ್ದಾರೆ. ಇದೇ ಬರುವ ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪತ್ರ, ಫಲಕ ಹಾಗೂ ರೂಪಾಯಿ 50,000 ನಗದಿನೊಂದಿಗೆ ಗೌರವಿಸಲಾಗುವುದು. ಎಸ್.ಎನ್. ಸೇತುರಾಮ್ ಇವರು ದಿನಾಂಕ 23 ಜನವರಿ 1953ರಂದು ಹುಟ್ಟಿದ್ದು, 1973ರಿಂದ ಅಂಚೆ ಇಲಾಖೆ, 1976ರಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಸೇರಿದರು ಮತ್ತು 2007ರಲ್ಲಿ ಆದಾಯ ತೆರಿಗೆ ಉಪ ಆಯುಕ್ತರಾಗಿ ಸ್ವಯಂಪ್ರೇರಿತವಾಗಿ ನಿವೃತ್ತರಾದರು. ಅಂದಿನಿಂದ ತೆರಿಗೆ ಸಲಹಾ ವೃತ್ತಿಯನ್ನು ಮುಂದುವರೆಸಿದ್ದಾರೆ. ಇಲಾಖೆಯಲ್ಲಿದ್ದಾಗ ಏಳು ವರ್ಷಗಳ ಕಾಲ ತನಿಖಾ ವಿಭಾಗದಲ್ಲಿ ಮತ್ತು 6 ವರ್ಷಗಳಿಗೂ ಹೆಚ್ಚು ಕಾಲ ತರಬೇತಿ ಸಂಸ್ಥೆಯಲ್ಲಿ ಅಧ್ಯಾಪಕ ಸದಸ್ಯರಾಗಿ ಕೆಲಸ ಮಾಡಿದರು. ರಂಗ…

Read More

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳ ಯಕ್ಷ ರಂಗಾಯಣ ರೆಪರ್ಟರಿ ಕಲಾವಿದರು ಪ್ರಸ್ತುತ ಪಡಿಸುವ ‘ಸೋಮಿಯ ಸೌಭಾಗ್ಯ’ ಗೀತ ನಾಟಕ ಪ್ರದರ್ಶನ ದಿನಾಂಕ 03 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಎಸ್. ಆರ್. ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಕೆ. ಶಿವರಾಮ ಕಾರಂತ ಇವರ ರಚನೆಯ ಈ ನಾಟಕವನ್ನು ಗಣೇಶ್ ಮಂದಾರ್ತಿ ಇವರು ನಿರ್ದೇಶನ ಮಾಡಿದ್ದಾರೆ.

Read More

ಯುವ ಲೇಖಕ ವಿಕಾಸ ಹೊಸಮನಿಯವರ ಮೂರನೇ ವಿಮರ್ಶಾ ಕೃತಿ ‘ಜೀವ ಸಂವಾದ’. ಗಾಳಿ ಹೆಜ್ಜೆ ಹಿಡಿದ ಸುಗಂಧ, ವೀತರಾಗ ಎಂಬ ವಿಮರ್ಶಾ ಕೃತಿಗಳ ಮೂಲಕ ಸಾಹಿತ್ಯಲೋಕದಲ್ಲಿ ಗುರುತಿಸಿಕೊಂಡಿರುವ ಲೇಖಕರು ಈ ದೀರ್ಘ ಸಮೀಕ್ಷಾ ಪ್ರಬಂಧದಲ್ಲಿ ಕಳೆದ ಐವತ್ತು ವರ್ಷಗಳ (1973 – 2023) ಕನ್ನಡ ಕಾದಂಬರಿ ಪ್ರಕಾರದ ಬೆಳವಣಿಗೆಯ ಕುರಿತು ಪರಿಚಯಾತ್ಮಕ ವಿಮರ್ಶೆಯನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಓದುಗರನ್ನು ದೃಷ್ಟಿಯಲ್ಲಿಟ್ಟುಕೊಂಡು ಸಿದ್ಧಪಡಿಸಿದ ಈ ಪುಟ್ಟ ಪುಸ್ತಕದ ಮೂಲಕ ಸೃಜನಶೀಲತೆ ಮತ್ತು ವಿಮರ್ಶೆಯ ನಡುವೆ ಜೀವಂತ ಸಂವಾದ ಸಾಧ್ಯವಾಗಬೇಕೆಂಬ ಉದ್ದೇಶವು ವ್ಯಕ್ತವಾಗುತ್ತದೆ. ಕನ್ನಡದಲ್ಲಿ ಕಾದಂಬರಿಯು ಅತ್ಯಂತ ಹುಲುಸಾಗಿ ಬೆಳೆದ ಸಾಹಿತ್ಯ ಪ್ರಕಾರವಾಗಿದೆ. ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಅದು ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿದೆ. ಅದರ ಬೆಳವಣಿಗೆಯನ್ನು ಸ್ಥೂಲವಾಗಿ ನವೋದಯ, ಪ್ರಗತಿಶೀಲ, ನವ್ಯ, ದಲಿತ ಬಂಡಾಯ ಯುಗಗಳೆಂದು ಗುರುತಿಸಲಾಗುತ್ತದೆ. ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯ ಈ ಹಂತಗಳನ್ನು ಕಾಲಕ್ರಮದಲ್ಲಿ ಒಂದು ಮುಗಿದ ನಂತರ ಇನ್ನೊಂದು ಆರಂಭವಾಯಿತು ಎನ್ನಲಾಗುತ್ತಿದ್ದರೂ ಅವುಗಳೆಲ್ಲ ಏಕಕಾಲದಲ್ಲಿ ಅಸ್ತಿತ್ವದಲ್ಲಿರುವುದನ್ನು ಅಲ್ಲಗೆಳೆಯುವಂತಿಲ್ಲ. ಈಗ…

Read More

ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ನೃತ್ಯಗುರು ವಿದುಷಿ ಶಾರದಾಮಣಿ ಶೇಖರ್‌ ಇವರಿಗೆ ಗುರುನಮನ ಮಾಡುವ ‘ವಂದೇ ಗುರುಪರಂಪರಾಮ್‌’ ಎಂಬ ಕಾರ್ಯಕ್ರಮವು ದಿನಾಂಕ 29 ನವೆಂಬರ್ 2025ರಂದು ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ “ಭರತನಾಟ್ಯ ಕಲಿಕೆಯು ಮಕ್ಕಳ ವ್ಯಕ್ತಿತ್ವವನ್ನು ತಿದ್ದುವುದಕ್ಕೆ ಸಹಾಯ ಮಾಡುತ್ತದೆ. ಡಿಜಿಟಲ್‌ ಯುಗದಲ್ಲಿ ಇಂತಹ ಕಲಾಪ್ರಕಾರಗಳ ಕಲಿಕೆ ಮಕ್ಕಳಿಗೆ ಅತ್ಯಗತ್ಯವಾಗಿದೆ. ಇದು ಕಲೆಯನ್ನು ಕಲಿಯುವ ಜೊತೆಗೆ ಗುರುಹಿರಿಯರನ್ನು ಗೌರವಿಸುವ ಸಂಪ್ರದಾಯವನ್ನೂ ಬೋಧಿಸುತ್ತದೆ” ಎಂದು ಹೇಳಿದರು. ಶಾರದಾಮಣಿ ಶೇಖರ್‌ ಇವರ ಬಳಿ ಶಿಷ್ಯಂದಿರಾಗಿ ನೃತ್ಯ ಕಲಿತು ರಾಜ್ಯದ ಮತ್ತು ದೇಶದ ವಿವಿಧೆಡೆಗಳಲ್ಲಿ ನೃತ್ಯ ತರಗತಿಗಳನ್ನು ನಡೆಸುತ್ತಿರುವ ನೃತ್ಯಗುರುಗಳು ಈ ಸಂದರ್ಭದಲ್ಲಿ ಭರತನಾಟ್ಯ ನೃತ್ಯ ಪ್ರದರ್ಶನ ನೀಡಿದಲ್ಲದೆ, ಗುರುಪರಂಪರೆಯಲ್ಲಿ ಕಲಿತ ಪರಿಣಾಮವಾಗಿ ತಮ್ಮ ವ್ಯಕ್ತಿತ್ವವು ಅರಳಿದ ಬಗೆಯನ್ನು ವಿವರಿಸಿದರು. ಕಾರ್ಯಕ್ರಮವನ್ನು ವಿದುಷಿ ಶಾರದಾಮಣಿ ಶೇಖರ್‌ ದೀಪ ಬೆಳಗಿಸಿ ಉದ್ಘಾಟಿಸಿದರು. ನೃತ್ಯ ಗುರುಗಳಾದ ಸುಮಂಗಲಾ ರತ್ನಾಕರ್‌, ಭಾರತೀ ಸುರೇಶ್‌, ಶ್ರೀಲತಾ…

Read More