Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ವಿದುಷಿ ಕುಸುಮ ಎ. ನೃತ್ಯಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಬದ್ಧತೆಯ ನೃತ್ಯ ಕಲಾವಿದೆ ಮತ್ತು ನೃತ್ಯಗುರು. ಅವರ ನೇತೃತ್ವದ ‘ಶರ್ವಾಣಿ ನಾಟ್ಯ ಕಲಾಕೂಟ’ (ಅಕಾಡೆಮಿ ಆಫ್ ಆರ್ಟ್ಸ್) ನೃತ್ಯಶಾಲೆಯಲ್ಲಿ ಅನೇಕ ಉದಯೋನ್ಮುಖ ಪ್ರತಿಭೆಗಳು ನಾಟ್ಯಶಿಕ್ಷಣ ಪಡೆದು ಕಲಾರಂಗದಲ್ಲಿ ಮುನ್ನಡೆಯುತ್ತಿದ್ದಾರೆ. ಭರತನಾಟ್ಯದಲ್ಲಿ ಎಂ.ಎ. ಪದವೀಧರೆಯಾದ ಕುಸುಮಾ ವಿದ್ವತ್ ಪದವಿಯನ್ನು ಪಡೆದಿರುವುದಲ್ಲದೆ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲೂ ಕರ್ನಾಟಕ ಸರ್ಕಾರದ ಸೀನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಕಲರಿಪಯಟು – ಯುದ್ಧಕಲೆಯ ನೃತ್ಯ ಆಯಮದಲ್ಲೂ ಪಳಗಿದ್ದು, ನಾಡಿನಾದ್ಯಂತ ಅನೇಕ ಪ್ರತಿಷ್ಠಿತ ವೇದಿಕೆಗಳ ಮೇಲೆ ನೃತ್ಯ ಪ್ರದರ್ಶನ ಮಾಡಿ ಕಲಾರಸಿಕರ ಮೆಚ್ಚುಗೆ ಗಳಿಸಿದ್ದಾರೆ. ಬಿ.ಎ., ಎಲ್.ಎಲ್.ಬಿ. ತೇರ್ಗಡೆಯಾಗಿ ವಕೀಲೆಯಾಗಿರುವ ಕುಸುಮಾ, ಅಷ್ಟೇ ಉತ್ತಮ ನೃತ್ಯಗುರುವಾಗಿಯೂ ಮಕ್ಕಳಿಗೆ ನಿರ್ವಂಚನೆಯಿಂದ ವಿದ್ಯಾಧಾರೆ ಎರೆಯುತ್ತಿದ್ದಾರೆ. ಇದೀಗ ಅವರ ಸಂಸ್ಥಾಪನೆಯ ‘ಶರ್ವಾಣಿ ನಾಟ್ಯ ಕಲಾಕೂಟ’ ಸಂಸ್ಥೆ ತನ್ನ ದಶಮಾನೋತ್ಸವವನ್ನು ‘ನರ್ತನ ಶ್ರುತಿ’ ಶೀರ್ಷಿಕೆಯಲ್ಲಿ ಆಚರಿಸಿಕೊಳ್ಳುತ್ತಿದೆ. ಅವರ ಶಿಷ್ಯಗಣ ಮನಮೋಹಕ ನೃತ್ಯ ವೈಭವವನ್ನು ಪ್ರದರ್ಶಿಸುವುದರ ಜೊತೆಗೆ, ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರನ ಕುರಿತ ವಿಶಿಷ್ಟ…
ಮಂಗಳೂರು : ಅಲೆವೂರಾಯ ಪ್ರತಿಷ್ಠಾನದ ವತಿಯಿಂದ ದಿನಾಂಕ 26 ಡಿಸೆಂಬರ್ 2025ರಂದು ಮಂಗಳಾದೇವಿ ದೇವಸ್ಥಾನದಲ್ಲಿ ‘ಯಕ್ಷ ತ್ರಿವೇಣಿ’ಯ ಎರಡನೇ ದಿನದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ತನ್ನ ಮನದಾಳದ ಮಾತುಗಳನ್ನಾಡಿದ ಹಿರಿಯ ಯಕ್ಷಗಾನ ಕಲಾವಿದ ವಸಂತ ಗೌಡ ಕಾಯರ್ತಡ್ಕ “ಕಲೆಗಳೆಲ್ಲಾ ನಮ್ಮ ಸಂಸ್ಕೃತಿಯ ವಿವಿಧ ಮುಖಗಳು. ಅದರ ಆರಾಧನೆಯಿಂದ ಕಲಾವಿದರಾದ ನಾವು ಬೆಳಗುತ್ತೇವೆ. ಸರ್ವಸಮರ್ಪಣಾ ಭಾವದಿಂದ ನಾನು ನನ್ನನ್ನು ಶ್ರೀಕ್ಷೇತ್ರ ಧರ್ಮಸ್ಥಳ ಮೇಳದಲ್ಲೇ ತೊಡಗಿಸಿಕೊಂಡೆ. ಸಂತಸವನ್ನು ಪಡೆದೆ. ಇದೀಗ ಐವತ್ತೊಂದು ವರ್ಷದ ತಿರುಗಾಟದಲ್ಲಿದ್ದೇನೆ. ಯಕ್ಷಗಾನ ನನಗೆ ಎಲ್ಲವನ್ನೂ ನೀಡಿದೆ.” ಎಂದು ಸಂತೃಪ್ತ ಭಾವದಿಂದ ಹೇಳಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ ಚಂದ್ರಶೇಖರ್ ರವರು ವಸಂತಗೌಡರ ತಿರುಗಾಟ, ಅವರು ನಿರ್ವಹಿಸುವ ಭಿನ್ನ ಭಿನ್ನ ಪಾತ್ರಗಳ ಬಗ್ಗೆ ಮೆಚ್ಚುಗೆ ಸೂಸಿ ಅವರನ್ನು ಅಭಿನಂದಿಸಿದರು. ತುಳು ಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ, ಉಳ್ಳಾಲ ಪುರಸಭೆಯ ಅಧಿಕಾರಿ ರವಿಕೃಷ್ಣ ದಂಬೆ ಉಪಸ್ಥಿತರಿದ್ದರು. ಸಂಘಟಕ ಪೇಜಾವರ ಸುಧಾಕರ ರಾವ್ ನಿರ್ವಹಿಸಿದರೆ, ಯಕ್ಷಮಂಜುಳಾದ ಸದಸ್ಯೆ ಪೂರ್ಣಿಮಾ ಪ್ರಶಾಂತ ಶಾಸ್ತ್ರಿ…
ಮಂಗಳೂರು : ಮಂಗಳೂರಿನ ಸಪ್ನ ಬುಕ್ ಹೌಸ್ 70ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಕಟಿಸಿದ 70 ಕನ್ನಡ ಪುಸ್ತಕಗಳು ದಿನಾಂಕ 27 ಡಿಸೆಂಬರ್ 2025ರಂದು ಲೋಕಾರ್ಪಣೆಗೊಂಡವು. ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ ವಿದ್ವಾಂಸರಾದ ಪ್ರೊ. ಬಿ.ಎ. ವಿವೇಕ ರೈ “2022ರಿಂದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಮೂಲಕ ಸರಕಾರ ಮಾಡುತ್ತಿರುವ ಸಗಟು ಖರೀದಿ ನಡೆಯುತ್ತಿಲ್ಲ. ಇದನ್ನು ನಿಲ್ಲಿಸಿದರೆ ಲೇಖಕ ಪ್ರಕಾಶಕರು ಪ್ರಕಟಣೆಯನ್ನು ನಿಲ್ಲಿಸುತ್ತಾರೆ. ಮಾತ್ರವಲ್ಲ ಸಾರ್ವಜನಿಕ ಗ್ರಂಥಾಲಯಗಳು ಹೊಸಪುಸ್ತಕಗಳಿಲ್ಲದೇ ಪಳೆಯುಳಿಕೆಯಂತಾಗುತ್ತವೆ. ಇಂತಹ ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮಹಿಳೆಯರು, ಬಡವರು, ಮಕ್ಕಳಲ್ಲಿ ಓದುವ ಆಸಕ್ತಿ ಕುಂಠಿತಗೊಳ್ಳುತ್ತದೆ. ಸಗಟು ಖರೀದಿ ಆಯಾ ವರ್ಷವೇ ನಡೆಯುವಂತೆ ನೋಡಿಕೊಳ್ಳುವುದು ಸರಕಾರದ ಸಾಂಸ್ಕೃತಿಕ ಜವಾಬ್ದಾರಿ. ಪುಸ್ತಕ ಮಾರಾಟ ಮಳಿಗೆಗಳು ಸಂಪರ್ಕ ಸೇತುಗಳಾಗಿ ಕಾರ್ಯನಿರ್ವಹಿಸಬೇಕು. ಗುಜರಾತಿನಿಂದ ಬಂದು ನಿತಿನ್ ಷಾ ಅವರು ಸಪ್ನವನ್ನು ಆರಂಭಿಸಿ ತೋರುತ್ತಿರುವ ಕನ್ನಡ ಪ್ರೀತಿ ವಿಶೇಷವಾದುದು. ಕನ್ನಡಕ್ಕೆ ಮನ್ನಣೆ ಬರುವುದು ಕೇವಲ ಘೋಷಣೆ ಭಾಷಣಗಳಿಂದಲ್ಲ, ಇಂತಹ ಕೆಲಸಗಳಿಂದ. ಜಗತ್ತಿನ ಜ್ಞಾನ ಕನ್ನಡದ ಮೂಲಕ ಬರಬೇಕು. ಡಿಜಿಟಲ್ ವೇದಿಕೆಗಳಿಂದ ಮಾಹಿತಿ…
ಬದುಕು ಮತ್ತು ಬರವಣಿಗೆಯಲ್ಲಿ ಅಪೂರ್ವ ಸಂಯಮವನ್ನು ಮೆರೆದ ಹಿರಿಯ ಮಹಿಳೆ ಪ್ರೊ. ಮಾಲತಿ ಪಟ್ಟಣಶೆಟ್ಟಿ. ಬದುಕಿನಲ್ಲಿ ಜಂಝಾವಾತವೇ ಎದುರಾದರೂ ಅದಕ್ಕೆ ಶರಣಾಗದೆ, ಮಾನವೀಯವಾಗಿಯೂ, ಧೀರೋದಾತ್ತ ನಡೆಯಿಂದಲೂ ಎಲ್ಲರ ಗೌರವಾದರಗಳನ್ನು ಗೆದ್ದ ವ್ಯಕ್ತಿತ್ವ ಅವರದು. ಕತೆ ಮತ್ತು ವಿಮರ್ಶೆಯ ಪ್ರಕಾರಗಳಲ್ಲಿ ದೃಢವಾದ ಹೆಜ್ಜೆಗಳನ್ನು ಊರುತ್ತಿರುವ ಡಾ. ಸುಭಾಷ್ ಪಟ್ಟಾಜೆಯವರು ಇತ್ತೀಚೆಗೆ ಕನ್ನಡದ ಅಪರೂಪದ ಬರಹಗಾರ್ತಿ ಮಾಲತಿ ಪಟ್ಟಣಶೆಟ್ಟಿಯವರ ಕುರಿತಾದ ಮೊನೋಗ್ರಾಫನ್ನು ಬಹಳ ಸುಂದರವಾಗಿ ಕಟ್ಟಿ ಕೊಟ್ಟಿದ್ದಾರೆ. ಲೇಖಕಿಯ ಬದುಕು ಮತ್ತು ಬರಹದ ಬಗ್ಗೆ ಮಾಹಿತಿಗಳನ್ನು ಕಲೆಹಾಕಿ, ವಿಶ್ಲೇಷಿಸಿ, ಪುಸ್ತಕವನ್ನು ಕೋದ ಬಗೆ ಹಿರಿಯ ಕಿರಿಯರ ಮೆಚ್ಚುಗೆಯನ್ನು ಗಳಿಸಿದೆ. ಕಾಸರಗೋಡಿನಲ್ಲಿದ್ದುಕೊಂಡು ಧಾರವಾಡದ ಅಕ್ಷರ ಲೋಕದ ಹಿರಿಯರ ಪ್ರೀತಿ ಅಭಿಮಾನಗಳನ್ನು ತನ್ನ ಅಪ್ಪಟವಾದ ದುಡಿಮೆಯಿಂದಲೇ ಗಳಿಸಿಕೊಂಡ ಸುಭಾಷ್ ನನ್ನ ವಿದ್ಯಾರ್ಥಿಯಾಗಿದ್ದವರು. ಪ್ರಸ್ತುತ ಗಡಿನಾಡಿನಲ್ಲಿ ಅಧ್ಯಾಪಕರಾಗಿದ್ದುಕೊಂಡು, ಬೋಧನೆಯೊಂದಿಗೆ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಪ್ರೀತಿಯನ್ನು ಹುಟ್ಟು ಹಾಕುತ್ತಿರುವವರು. ಈ ಕಿರು ಹೊತ್ತಗೆಯಲ್ಲಿ ಸುಭಾಷ್ ಅವರು ಮಾಲತಿ ಪಟ್ಟಣಶೆಟ್ಟಿಯವರ ವೈಯಕ್ತಿಕ ಹಾಗೂ ಸಾಮಾಜಿಕ ಬದುಕಿನ ವಿವರಗಳನ್ನು ಸಂಕ್ಷಿಪ್ತವಾಗಿ ನೀಡಿದ್ದಾರೆ. ಮುಂದೆ ಕಾವ್ಯ,…
ಮಂಜೇಶ್ವರ : ಸವಿಹೃದಯದ ಕವಿಮಿತ್ರರು ವೇದಿಕೆ ಪೆರ್ಲ ಇದರ ವತಿಯಿಂದ ಮಂಜೇಶ್ವರ ಗೋವಿಂದ ಪೈ ನಿವಾಸ ಗಿಳಿವಿಂಡುವಿನಲ್ಲಿ ದಿನಾಂಕ 25 ಡಿಸೆಂಬರ್ 2025ರಂದು ಕೃತಿ ಬಿಡುಗಡೆ ಹಾಗೂ ಕವಿಗೋಷ್ಠಿಯು ಜರಗಿತು. ಈ ಕಾರ್ಯಕ್ರಮದಲ್ಲಿ ‘ಕಥಾ ದೀಪ್ತಿ’ ಸಂಪಾದಿತ ಕತೆಗಳು ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಶಂಪಾ ಪ್ರತಿಷ್ಠಾನ ಬೆಂಗಳೂರು ಸಂಸ್ಥಾಪಕ, ವಿಶ್ರಾಂತ ಪ್ರಾಧ್ಯಾಪಕಿ ಡಾ.ಪ್ರಮೀಳಾ ಮಾಧವ್ “ಕತೆ ಕೇಳುವ, ಹೇಳುವ ಅಭ್ಯಾಸ ಸೃಜನಶೀಲ ಮನಸ್ಸುಗಳನ್ನು ಸೃಷ್ಟಿಸುತ್ತವೆ. ಹಿಂದೆ ಹೆಚ್ಚಿನ ಮಕ್ಕಳು ಕತೆ ಹೇಳಲು ಹಿರಿಯರಿಗೆ ದುಂಬಾಳು ಬೀಳುತ್ತಿದ್ದರು. ಕತೆ ಮುಗಿದ ಬಳಿಕ ಕೂಡಾ ಹೇಳುತ್ತಿದ್ದ ಕತೆಯನ್ನು ಬೆಳೆಸಿ (ಸೃಷ್ಟಿಸಿ) ಮಕ್ಕಳಿಗೆ ಹೇಳುವ ಸಾಮರ್ಥ್ಯವನ್ನು ಹಿರಿಯರು ಹೊಂದಿದ್ದರು. ಕತೆಗಾಗಿ ಹಟ ಹಿಡಿಯುತ್ತಿದ್ದ ಸಣ್ಣ ಮಕ್ಕಳ ಕೈಗೆ ಇಂದು ಹಿರಿಯರು ಮೊಬೈಲ್ ಕೊಟ್ಟು ಸುಮ್ಮನಾಗಿಸುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಬದುಕು ಸುಂದರಗೊಳಿಸುವುದು, ಸ್ವಾಸ್ಥ್ಯ, ಸಮಾಜ ರೂಪಿಸುವುದು ಎಲ್ಲಾ ಸಾಹಿತ್ಯ ಪ್ರಕಾರಗಳ ಆಶಯವಾಗಿದೆ” ಎಂದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡು ಘಟಕದ ಅಧ್ಯಕ್ಷ ಡಾ.…
ಮಂಗಳೂರು : ಕಲಾವಿದ ಪ್ರವೀಣ್ ಕುಮಾರ್ ಅವರ ಕುಂಚದಿಂದ ಮೈಸೂರು ಮತ್ತು ತಾಂಜಾವೂರು ಶೈಲಿಯಲ್ಲಿ ಹೊರಹೊಮ್ಮಿರುವ ಕಲಾಕೃತಿಗಳ ‘ವರ್ಣ ಬೆಳದಿಂಗಳು’ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನಗರದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ 02ರಿಂದ 05 ಜನವರಿ 2025ರವರೆಗೆ ಆಯೋಜಿಸಲಾಗಿದೆ. ದಿನಾಂಕ 02 ಜನವರಿ 2025ರಂದು ಸಂಜೆ ಗಂಟೆ 5-30ಕ್ಕೆ ದೃಢವ್ರತ ಗೊರಿಕ್ರವರು ಪ್ರದರ್ಶನ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಸಮೀರ್ ಪುರಾಣಿಕ್ ಭಾಗವಹಿಸಲಿದ್ದು, ಅಸ್ಟ್ರೋ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ ಕಲಾ ತರಬೇತಿ ಪಡೆದಿರುವ ಪಿ. ಪ್ರವೀಣ್ ಕುಮಾರ್ ಇವರು ಕಳೆದ 24 ವರ್ಷಗಳಿಂದ ಸುಮಾರು 4,000ಕ್ಕೂ ಅಧಿಕ ಚಿತ್ರಕಲೆಗಳನ್ನು ರಚಿಸಿದ್ದಾರೆ. ಸುಮಾರು 15ರಷ್ಟು ಕಲಾಕೃತಿಗಳು ಪ್ರದರ್ಶನಗೊಳ್ಳಲಿದೆ. ದೇವರುಗಳ ಕಲಾತ್ಮಕ ಚಿತ್ರಣಗಳನ್ನು ಚಿನ್ನದ ತಗಡಿನ ಎಂಬೋಸ್ನ ಮೂಲಕ ರಚಿಸಲ್ಪಟ್ಟ ರೂ.20 ಸಾವಿರದಿಂದ ರೂ.80 ಸಾವಿರ ವರೆಗಿನ ಚಿತ್ರಕಲೆಗಳು ಪ್ರದರ್ಶನದಲ್ಲಿ ಲಭ್ಯವಿರಲಿವೆ ಎಂದು ಕಲಾವಿದ ದಿನೇಶ್ ಹೊಳ್ಳ ತಿಳಿಸಿದ್ದಾರೆ. ದಿನಾಂಕ 03ರಿಂದ 05 ಜನವರಿ 2025ರವರೆಗೆ ಬೆಳಗ್ಗೆ 10-00ರಿಂದ 7-00 ಗಂಟೆಗೆ…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ.ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ. ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವದನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಟಿ.ಎನ್. ಸೀತಾರಾಂ : ಕಿರುತೆರೆ ದಾರಾವಾಹಿ ಮೂಲಕ ಮನೆಮಾತಾಗಿರುವ ಟಿ.ಎನ್. ಸೀತಾರಾಂ 1948ರ ಡಿಸೆಂಬರ್ 6ರಂದು ಜನಿಸಿದರು. ಪತ್ರಕರ್ತ, ಕತೆಗಾರ, ನಾಟಕಕಾರ, ಚಿತ್ರನಟ, ಚಿತ್ರ ನಿರ್ದೇಶಕರಾಗಿಯೂ ಛಾಪು ಮೂಡಿಸಿದವರು. ಮೂಲತಃ ಗೌರಿಬಿದನೂರಿನವರಾದ ಸೀತಾರಾಂ, ತಂದೆಯವರು ನಾರಾಯಣರಾಯರು ಮತ್ತು ತಾಯಿ ಸುಂದರಮ್ಮನವರು. ಕೃಷಿಯನ್ನಾಶ್ರಯಿಸಿದ ಕುಟುಂಬ ಅವರದ್ದು. ಪ್ರಾರಂಭಿಕ ವಿದ್ಯಾಭ್ಯಾಸವನ್ನು ದೊಡ್ಡಬಳ್ಳಾಪುರದ ಸರ್ಕಾರಿ ಶಾಲೆಯಲ್ಲಿ ಪೂರೈಸಿದ ಸೀತಾರಾಂ ಮುಂದೆ ಬೆಂಗಳೂರು ನ್ಯಾಷನಲ್ ಕಾಲೇಜಿನ ವಿದಾರ್ಥಿಯಾದರು. ಬಿ.ಎಸ್ಸಿ, ಬಿ.ಎಲ್. ಓದಿದ ಇವರು ನ್ಯಾಯವಾದದ ಕಾಯಕವನ್ನು ಒಂದಷ್ಟು ನಡೆಸಿದರಾದರೂ, ಆಂತರ್ಯದ…
ಮಂಗಳೂರು : ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಉರ್ವಸ್ಟೋರ್ ಶ್ರೀಮಹಾಗಣಪತಿ ದೇವಸ್ಥಾನದ ಸಹಯೋಗದಲ್ಲಿ ದಿನಾಂಕ 25 ಡಿಸೆಂಬರ್ 2025ರಂದು ಉರ್ವಸ್ಟೋರ್ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಆಯೋಜಸಿದ್ದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ-2025 ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಿರಿಯ ಅರ್ಥದಾರಿ, ಪ್ರವಚನಕಾರ ಮೂಡಂಬೈಲು ಗೋಪಾಲಕೃಷ್ಣ ಶಾಸ್ತಿ “ತಾಳಮದ್ದಳೆಯಲ್ಲಿ ಸ್ತ್ರೀ ಪಾತ್ರಗಳನ್ನು ಗೆಲ್ಲಿಸಬೇಕೆಂದು ಸದಾ ಬಯಸಿದೆ. ಅಂಥಹ ಪಾತ್ರಗಳ ಬಗ್ಗೆ ಅಧ್ಯಯನ ಮಾಡಿ, ಅವುಗಳಿಗೆ ಗೌರವ ಸಿಗುವಂತೆ ಮಾಡಲು ಪ್ರಯತ್ನಿಸಿದೆ. ಶೇಣಿ, ಪೆರ್ಲ, ಸಾಮಗದ್ವಯರು ಸೇರಿದಂತೆ ಹಿರಿಯರು ನನ್ನ ಪ್ರಯತ್ನವನ್ನು ಮೆಚ್ಚಿದರು. ಶೇಣಿ ನನ್ನ ಪರೋಕ್ಷ ಗುರುಗಳು. ಅವರ ಜತೆ ವೇದಿಕೆಯಲ್ಲಿ ಒಡನಾಟ ನನ್ನ ಅಧ್ಯಯನಶೀಲತೆ ಹೆಚ್ಚಿಸಿತು. ನನ್ನ ಜನ್ಮದಿನದಂದೇ ಶೇಣಿ ಪ್ರಶಸ್ತಿ ಲಭಿಸಿದೆ. ಹಿಂದೆ ಜನ್ಮದಿನದಂದೇ ಪೆರ್ಲ ಪ್ರಶಸ್ತಿಯೂ ಲಭಿಸಿತ್ತು. ಇದು ನನ್ನ ಪುಣ್ಯ” ಎಂದು ಹೇಳಿದರು. ಟ್ರಸ್ಟ್ ಅಧ್ಯಕ್ಷರಾದ ಹರಿದಾಸ ಕೆ. ಮಹಾಬಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ…
ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಸಮ್ಮೇಳನ ಸ್ವಾಗತ ಸಮಿತಿ ವತಿಯಿಂದ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಕುಕ್ಕುಜಡ್ಕದ ಚೊಕ್ಕಾಡಿ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 30 ಡಿಸೆಂಬರ್ 2025ರಂದು ನಡೆಯಲಿದೆ. ಮುಂಜಾನೆ ಗಂಟೆ 8-45ಕ್ಕೆ ಕುಕ್ಕುಜಡ್ಕ ಪೇಟೆಯಿಂದ ಕನ್ನಡ ಭುವನೇಶ್ವರಿಯ ಮೆರವಣಿಗೆ ಹೊರಡಲಿದೆ. ಸಾಹಿತಿ ಕೆ.ಆರ್. ತೇಜಕುಮಾರ್ ಬಡ್ಡಡ್ಕ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದು, ಮೆರವಣಿಗೆಗೆ ಮಾಜಿ ಸಚಿವ ಎಸ್. ಅಂಗಾರ ಚಾಲನೆ ನೀಡಲಿದ್ದಾರೆ. ಅಮರಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಜಾನಕಿ ಕಂದಡ್ಕ ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ಹಾಗೂ ಸುಳ್ಯ ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ. ಸಾಹಿತ್ಯ ಸಮ್ಮೇಳನವನ್ನು ಹಿರಿಯ ಸಾಹಿತಿ ಕೆ.ಪಿ. ಸುರೇಶ್ ಕಂಜರ್ಪಣೆ ಉದ್ಘಾಟಿಸಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ನೂತನ ಕೃತಿಗಳನ್ನು…
ಧಾರವಾಡ : ಅನುಷ್ಕಾ ಪ್ರಕಾಶನ, ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 26 ಡಿಸೆಂಬರ್ 2025ರಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರೊ. ಮಾಲತಿ ಪಟ್ಟಣಶೆಟ್ಟಿಯವರ ‘ಕಣ್ಣಂಚಿನ ತಾರೆ’, ವಿಕಾಸ ಹೊಸಮನಿಯವರ ‘ಜೀವ ಸಂವಾದ’, ಡಾ. ಸುಭಾಷ್ ಪಟ್ಟಾಜೆಯವರ ‘ಕಾಡುಸಂಪಿಗೆ’ ಮತ್ತು ‘ಮಾಲತಿ ಪಟ್ಟಣಶೆಟ್ಟಿ ವ್ಯಕ್ತಿತ್ವ – ಸಾಹಿತ್ಯ’ ಎಂಬ ನಾಲ್ಕು ಕೃತಿಗಳು ಲೋಕಾರ್ಪಣೆಗೊಂಡವು. ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಖ್ಯಾತ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು “ಸಾಹಿತ್ಯ ಮನುಷ್ಯತ್ವದ ಘನತೆಯನ್ನು ಎತ್ತಿ ಹಿಡಿಯಬೇಕು. ಕರುಣೆ ಮತ್ತು ಕ್ರೌರ್ಯಗಳ ಸಂಘರ್ಷದಲ್ಲಿ ಕಾರುಣ್ಯ ಗೆಲ್ಲಬೇಕು. ಸಾಹಿತ್ಯವು ಒಂದು ಕಲೆ. ಅದು ಮಾನವನ ಅನುಭವದ ಸಾರವನ್ನು ಹಿಡಿದಿಟ್ಟು, ಓದುಗನ ಜೀವನದೊಂದಿಗೆ ಬೆರೆತು, ಅವನಿಗೆ ಅರ್ಥಪೂರ್ಣ ಅನುಭವವನ್ನು ನೀಡಬೇಕು. ಪ್ರಸ್ತುತ ಸಾಹಿತ್ಯದ ಕುರಿತು ಮಾತನಾಡುತ್ತಾ ಲೇಖಕರಿಗೆ ಶುಭವನ್ನು ಕೋರಿದರು. ‘ಜೀವ ಸಂವಾದ’ ಕೃತಿಯ ಕುರಿತು ಮಾತನಾಡಿದ ಪ್ರೊ. ಅರುಂಧತಿ ಸವದತ್ತಿಯವರು “ಐದು ದಶಕಗಳ ಕಾದಂಬರಿ ಸಾಹಿತ್ಯದ ಸಿಂಹಾವಲೋಕನ ಮಾಡುವುದು…