Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಸಂಸ್ಕಾರ ಭಾರತೀ ಮಂಗಳೂರು ನಗರ ಇವರು ಭರತಂಜಲಿ (ರಿ.) ಕೊಟ್ಟಾರ ಇವರ ಸಹಯೋಗದೊಂದಿಗೆ ಭರತಾಂಜಲಿ ಸಭಾ ಗ್ರಹದಲ್ಲಿ ದಿನಾಂಕ 24 ಫೆಬ್ರವರಿ 2026ರಂದು ಭರತಮುನಿ ಸ್ಮೃತಿ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಪುಷ್ಪಾರ್ಚನೆ ಮಾಡಿ ಉಪನ್ಯಾಸ ನೀಡಿದ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಮೊಕ್ತೇಸರ ವಿದ್ವಾನ್ ಕಮಲಾದೇವಿ ಪ್ರಸಾದ್ ಅಸ್ರಣ್ಣ “ಭರತಮುನಿ ಪ್ರಾಚೀನ ಭಾರತದ ಮಹಾನ್ ಋಷಿ. ಭಾರತೀಯ ರಂಗಭೂಮಿ ಮತ್ತು ಆಧ್ಯಾತ್ಮಿಕ ಕಲೆಗಳ ಪಿತಾಮಹ. ಭರತ ಮುನಿಯು ರಸ ಸಿದ್ದಾಂತದ ಪ್ರತಿಪಾದಕ ನೃತ್ಯ ಮತ್ತು ನಾಟಕ ಕಲೆಗೆ ಶಾಸ್ತ್ರೀಯ ರೂಪವನ್ನು ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ನಾಟ್ಯ ಶಾಸ್ತ್ರ ಗ್ರಂಥವು ಜಗತ್ತಿನ ಐದನೇ ವೇದ ಎಂದು ಕರೆಯಲ್ಪಡುತ್ತದೆ. ಭರತನ ನಾಟ್ಯ ಶಾಸ್ತ್ರದಲ್ಲಿ ನಾಟ್ಯ ಶಾಸ್ತ್ರದ ಚೌಕಟ್ಟುಗಳು, ಲಕ್ಷಣಗಳು ಶಾಸ್ತ್ರೀಯ ಕಲೆಗಳನ್ನು ವಿಶಿಷ್ಟ ಕಲೆಗಳನ್ನಾಗಿ ಮಾಡುತ್ತದೆ. ಚತುರ್ವಿಧ ಅಭಿನಯಗಳಿಂದ ಬ್ರಹ್ಮಾನಂದವನ್ನು ಕೊಡುವ ಶಕ್ತಿ ಈ ಕಲೆಗಳಿಗೆ ಇವೆ. ಮಾನವರನ್ನು ಸಂಸ್ಕಾರದಡೆಗೆ ಕೊಂಡೊಯ್ಯುವ ಶಕ್ತಿ ನಾಟ್ಯ ಶಾಸ್ತ್ರಕ್ಕೆ…
ಬೆಂಗಳೂರು : ಖ್ಯಾತ ‘ಕಲಾನಿಧಿ ಆರ್ಟ್ಸ್ ಅಕಾಡೆಮಿ’ಯ ಹಿರಿಯ ನೃತ್ಯಗುರು ವಿದುಷಿ ಪವಿತ್ರ ಶ್ರೀಧರ್ ನೃತ್ಯ ಕಲಾವಿದೆ, ಗಾಯಕಿ, ನೃತ್ಯ ಸಂಯೋಜಕಿ ಮತ್ತು ನಟುವನ್ನಾರ್ ಆಗಿ ಅಪಾರ ಜ್ಞಾನ- ನೃತ್ಯ ನೈಪುಣ್ಯವನ್ನು ಹೊಂದಿರುವ ಅವರು, ನೃತ್ಯಕ್ಷೇತ್ರದಲ್ಲಿ ಬದ್ಧತೆಯ ಶಿಕ್ಷಣ ಮತ್ತು ಅಪೂರ್ವ ನೃತ್ಯಸಂಯೋಜನೆಗೆ ಹೆಸರಾದವರು. ಇವರ ನುರಿತ ಗರಡಿಯಲ್ಲಿ ರೂಹುಗೊಂಡ ನೃತ್ಯ ಕಲಾಶಿಲ್ಪ ಕುಮಾರಿ ವಿಶ್ವನೇತ ಡಿ. ಬಹು ಶಿಸ್ತಿನ ಹಾಗೂ ಪರಿಶ್ರಮ- ಬದ್ಧತೆಗಳಿಂದ ನೃತ್ಯಾಭ್ಯಾಸ ಮಾಡುತ್ತಿರುವ ಪ್ರಾಮಾಣಿಕ ವಿದ್ಯಾರ್ಥಿನಿ. ಶ್ರೀ ಧನಶೇಖರ್ ಸಿ. ಮತ್ತು ಹೇಮಾ ದಂಪತಿಗಳ ಮಗಳಾದ ವಿಶ್ವನೇತ ಹದಿನಾಲ್ಕು ವರ್ಷದ ಕನ್ನಿಕೆಯಾಗಿದ್ದು, ಕಳೆದ ಆರು ವರ್ಷಗಳಿಂದ ನೃತ್ಯ ಕಲಿಯುತ್ತಿದ್ದು, ಈಗಾಗಲೇ ತನ್ನ ’ಗೆಜ್ಜೆಪೂಜೆ’ಯನ್ನು ನೆರವೇರಿಸಿಕೊಂಡಿದ್ದಾಳೆ. ಒಂಭತ್ತನೆಯ ತರಗತಿಯಲ್ಲಿ ಓದುತ್ತ ಇರುವ ಇವಳು, ಓದಿನಲ್ಲಿ ಮುಂದಿದ್ದು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಿರತಳಾಗಿದ್ದು, ಇಸ್ಕಾನ್ ನಲ್ಲಿ ಭಗವದ್ಗೀತಾ ಸ್ಪರ್ಧೆಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಲ್ಲದೆ, ಅಬಾಕಸ್ ಫೆಸ್ಟ್ ನಲ್ಲಿ ಡಿಸ್ಟಿಂಕ್ಷನ್, ವೇದಿಕ್ ಪಠಣದಲ್ಲಿ ವಿದ್ವತ್, ಕರ್ನಾಟಕ ಶಾಸ್ತ್ರೀಯ ಗಾಯನದಲ್ಲಿ ಶಿಕ್ಷಣ ಮತ್ತು ಎನ್.ಎಸ್.ಓ.…
ಕಾಸರಗೋಡು : ಕನ್ನಡ ಭವನ ಮತ್ತು ಗ್ರಂಥಾಲಯದ ನೇತೃತ್ವದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ನ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಆಯೋಜಿಸಿದ ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನವು ದಿನಾಂಕ 22 ಫೆಬ್ರವರಿ 2026ರಂದು ನಡೆಯಿತು. ಈ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಎಡನೀರು ಮಠಾಧೀಶ ಶ್ರೀ ಸಚ್ಚದಾನಂದ ಭಾರತೀ ಶ್ರೀಪಾದರು “ಪುರಾತನ ಭಾಷೆಗಳಲ್ಲೊಂದಾದ ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ. ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿಗೆ ಗದಾಪ್ರಹಾರ ಬೀಳುತ್ತಿದ್ದರೂ ಅವುಗಳನ್ನೆಲ್ಲ ಮೆಟ್ಟಿನಿಂತು ಕನ್ನಡ ಭಾಷೆ, ಸಂಸ್ಕೃತಿ ಉಳಿಸಲು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಕನ್ನಡ ಭವನದ ಕನ್ನಡ ಕಾಯಕ ಅಭಿನಂದನಾರ್ಹ ಎಂದು ಹೇಳಿದರು. ಲಕ್ಷೇಶ್ವರ ಗೋನಾಳದ ಶ್ರೀ ರಮೇಶ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕನ್ನಡ ಭವನ ನಿರ್ದೇಶಕ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ದೀಪ ಪ್ರಜ್ವಲನೆಗೈದರು. ಕನ್ನಡ ಚು.ಸಾ.ಪ.ದ.ಕ. ಜಿಲ್ಲಾ ಘಟಕ ಅಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಉದ್ಘಾಟಿಸಿದರು. ನಾಡೋಜ ಡಾ.…
ಪುತ್ತೂರು : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಹಾಗೂ ಆಪ್ತ ವರ್ಗದ ಉಪಸ್ಥಿತಿಯಲ್ಲಿ ಪುತ್ತೂರಿನ ‘ಅನುರಾಗ ವಠಾರ’ದಲ್ಲಿ ದಿನಾಂಕ 21 ಫೆಬ್ರವರಿ 2026ರಂದು ಉಪನ್ಯಾಸಕಿ ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭವು ಅರ್ಥಪೂರ್ಣವಾಗಿ ನೆರವೇರಿತು. ಶಿಕ್ಷಣ ಕ್ಷೇತ್ರದಲ್ಲಿ ಕಳೆದ 35 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಉಷಾ ಕೆ.ವಿ. ಅವರು ಸುಳ್ಯದ ಸರಕಾರಿ ಜೂನಿಯರ್ ಕಾಲೇಜ್ ಹಾಗೂ ಕಬಕದ ಸರಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಕೋಡಿಂಬಾಡಿಯಲ್ಲಿ ವಾಸವಾಗಿರುವ ಅವರು, ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಂಸ್ಕೃತ, ಹಿಂದಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಡಾ. ವಿಷ್ಣು ಭಟ್ ಅವರ ಪತ್ನಿ. ತಮ್ಮ ಅಧ್ಯಯನ-ಅನುಭವಗಳಸಾರವನ್ನು ಸಾಹಿತ್ಯ ರೂಪದಲ್ಲಿ ಓದುಗರಿಗೆ ಅರ್ಪಿಸಿರುವುದು ಕಾರ್ಯಕ್ರಮದಲ್ಲಿ ಸರ್ವ ಅತಿಥಿಗಳಿಂದ ವಿಶೇಷವಾಗಿ ಪ್ರಶಂಸಿಸಲಾಯಿತು. ಲೇಖಕರ ಮೊಮ್ಮಕ್ಕಳಾದ ಸಾಧ್ವಿ ಮತ್ತು ತನಿಶಿ, ಮಾ. ಅಕ್ಷಜ್ ಹಾಗೂ 3 ವರ್ಷದ ಪುಟಾಣಿ ಅಗಸ್ತ್ಯ ಇವರ ಮಧುರ ಪ್ರಾರ್ಥನೆಯೊಂದಿಗೆ…
ಉಡುಪಿ : ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ‘ರಂಗಹಬ್ಬ-14’ರ ಎರಡನೇ ದಿನದ ಕಾರ್ಯಕ್ರಮವು ದಿನಾಂಕ 23 ಫೆಬ್ರವರಿ 2026ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಟ ಲಕ್ಷ್ಮೀ ಸೋಮಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಡಾ. ಸುನೀತಾ ವಿ. “ನಾಟಕ ಸೇರಿದಂತೆ ರಂಗಭೂಮಿಯು ಸಮಾಜದ ಪ್ರತಿಬಿಂಬ. ಎಲ್ಲ ಆಗುಹೋಗುಗಳಿಗೆ ಹಿಡಿವ ಕನ್ನಡಿ. ಸಿನಿಮಾಗಳು ಯಾವ ಸಂದೇಶವನ್ನು ಸಾರುತ್ತಿವೆ ಎಂದು ನೋಡಿದರೆ ಸಂದೇಶಗಳೇ ಕಾಣುತ್ತಿಲ್ಲ. ರೌಡಿಸಂ, ಹೊಡೆದಾಟಗಳೇ ಕಾಣುತ್ತವೆ. ಆದರೆ, ನಾಟಕಗಳು ಆ ರೀತಿಯಲ್ಲಿಲ್ಲ. ಇಂದಿಗೂ ಸಮಾಜದ ಸಮಸ್ಯೆಗಳನ್ನು, ಪಿಡುಗುಗಳನ್ನು ಪ್ರತಿಬಿಂಬಿಸುತ್ತಾ ಚಿಂತನೆಗೆ ಹಚ್ಚುತ್ತವೆ. ಅಲ್ಲದೆ, ಸಿನಿಮಾ ನಟರು ಅನೇಕ ರೀಟೇಕ್ಗ ಳನ್ನು ತೆಗೆದುಕೊಳ್ಳಲು ಅವಕಾಶ ಇರುತ್ತದೆ. ಆದರೆ, ರಂಗಭೂಮಿಯ ಕಲಾವಿದ ರಂಗದ ಮೇಲೆ ನಟಿಸಬೇಕು. ತಪ್ಪಾದರೆ ಅಲ್ಲಿ ರೀಟೇಕ್ ಇರುವುದಿಲ್ಲ. ಎಲ್ಲ ತಯಾರಿಗಳನ್ನು ಮಾಡಿಕೊಂಡು ಪ್ರದರ್ಶನ ನೀಡಬೇಕಾಗುತ್ತದೆ. ಹಾಗಾಗಿ ಶ್ರೇಷ್ಠ ನಟರು ರಂಗಭೂಮಿಯಿಂದ ಹೊರಹೊಮ್ಮುತ್ತಾರೆ” ಎಂದು ವಿಶ್ಲೇಷಿಸಿ “ಈ ಸಾಮಾಜಿಕ ಜಾಲತಾಣದ ಮತ್ತು ಸಿನಿಮೀಯ ಜಗತ್ತಿನಲ್ಲಿ…
ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಇವರ ವತಿಯಿಂದ ಸುಳ್ಯದ ನೆಹರೂ ಸ್ಮಾರಕ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ದಿನಾಂಕ 24 ಫೆಬ್ರವರಿ 2026ರಂದು ನೆಹರೂ ಸ್ಮಾರಕ ಕಾಲೇಜಿನ ಕೆವಿಜಿ ಷಷ್ಪ್ಯಬ್ಧ ರಂಗ ಮಂದಿರದಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಭಾಷಾ ಪರಂಪರೆ ವಿಚಾರಗೋಷ್ಠಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ “ನಮ್ಮ ಭಾಷೆಗಳು ನಶಿಸಿ ಹೋಗದಂತೆ ಉಳಿಸಿ ಬೆಳೆಸಿ ಅಭಿವೃದ್ಧಿಪಡಿಸಬೇಕು. ಜೊತೆಗೆ ಭಾಷೆಯ ಬೆಳವಣಿಗೆಗೆ ಸಾಹಿತ್ಯವನ್ನು ಪ್ರೋತ್ಸಾಹಿಸಬೇಕು. ಅರೆಭಾಷೆ ಅಕಾಡೆಮಿ ಸ್ಥಾಪನೆಯಾದ ಬಳಿಕ ಭಾಷೆಯ ವೈಭವ ಹೆಚ್ಚಿದೆ. ಅರೆಭಾಷೆಯ ಸೊಗಡು ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಉಳಿಸಿ ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ಇಂತಹ ವಿಚಾರ ಸಂಕಿರಣ ಅವಶ್ಯಕ. ಅಲ್ಲದೇ ಮುಂದಿನ ಪೀಳಿಗೆಗೆ ಭಾಷೆಯನ್ನು ಪರಿಚಯಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ತರ ಪಾತ್ರ ವಹಿಸುತ್ತವೆ” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ…
ಲೇಖಕಿ ಇಂದಿರಾಜಾನಕಿ ಎಸ್. ಶರ್ಮರ ಇತ್ತೀಚೆಗೆ ಬಿಡುಗಡೆಯಾದ ಕೃತಿ ‘ಕಿರಿಯರ ಸಚಿತ್ರ ರಾಮಾಯಣ’. ಕೆಂಚನಹಳ್ಳಿಯ ಅವ್ವ ಪುಸ್ತಕಾಲಯದವರು ಇದನ್ನು ಪ್ರಕಟಿಸಿದ್ದಾರೆ. ಹೆಸರೇ ಹೇಳುವಂತೆ ಇದು ಎಳೆಯ ಮಕ್ಕಳಿಗೆ ರಾಮಾಯಣದ ಕಥೆಯನ್ನು ಪರಿಚಯಿಸುವುದಕ್ಕೋಸ್ಕರ ಬರೆಯಲಾದ ಗದ್ಯ ಕೃತಿ. ಎರಡು ವರ್ಷಗಳ ಹಿಂದೆ ಇಂದಿರಾಜಾನಕಿಯವರು ಸಾಂಗತ್ಯ ಎಂಬ ದೇಸಿ ಛಂದಸ್ಸಿನಲ್ಲಿ ರಾಮಾಯಣವನ್ನು ಕಾವ್ಯರೂಪದಲ್ಲಿ ‘ಸಾಂಗತ್ಯ ರಾಮಾಯಣ’ ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ್ದರು. ಅಲ್ಲಿಯೂ ಅವರು ಮೂಲ ರಾಮಾಯಣದ ಕಥೆಯಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ‘ಕಿರಿಯರ ರಾಮಾಯಣ’ದಲ್ಲೂ ಮಾಡಿಲ್ಲ. ಪೀಠಿಕಾ ಪ್ರಕರಣದಿಂದ ಆರಂಭವಾಗಿ ಬಾಲಕಾಂಡ, ಅಯೋಧ್ಯಾಕಾಂಡ, ಅರಣ್ಯ ಕಾಂಡ, ಕಿಷ್ಕಿಂಧಾ ಕಾಂಡ, ಸುಂದರ ಕಾಂಡ, ಯುದ್ಧ ಕಾಂಡಗಳ ಜತೆಗೆ ಉತ್ತರ ಕಾಂಡವೂ ಇಲ್ಲಿದೆ. ಯಾವ ಪ್ರಮುಖ ಘಟನೆಯನ್ನೂ ಬಿಡದೆ ರಾಮಾಯಣದ ಇಡೀ ಕಥೆಯನ್ನು ಸುಲಲಿತವಾದ ಶೈಲಿಯಲ್ಲಿ ಅತ್ಯಂತ ಸರಳವಾಗಿ ಕಥೆಯನ್ನು ನಿರೂಪಿಸಿದ್ದಾರೆ. ತಾಟಕಾವಧೆ, ಸುಬಾಹು ವಧೆ, ಅಹಲ್ಯಾ ಮೋಕ್ಷ, ಜನಕರಾಜನ ಹಿನ್ನೆಲೆ, ಸೀತೆಯ ಹುಟ್ಟು, ಸೀತಾ ಸ್ವಯಂವರ, ಶ್ರೀರಾಮ ಪಟ್ಟಾಭಿಷೇಕದ ಸಿದ್ಧತೆ, ಮಂಥರೆಯ ಕುತಂತ್ರ, ಸೀತಾ-ಲಕ್ಷ್ಮಣ ಸಮೇತ…
ಕೋಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಮತ್ತು ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ‘ಯಕ್ಷಮಂಗಳ ಪ್ರಶಸ್ತಿ’ಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಇವರು ಆಯ್ಕೆಯಾಗಿದ್ದಾರೆ. ‘ಯಕ್ಷಮಂಗಳ ಕೃತಿ ಪ್ರಶಸ್ತಿ’ಗೆ ಕೃಷ್ಣಪ್ರಕಾಶ್ ಉಳಿತ್ತಾಯ ಇವರ ‘ಬಲಿಪ ಮಾರ್ಗ ಹಾಗೂ ಅಗರಿಮಾರ್ಗ’ ಕೃತಿಯು ಆಯ್ಕೆಯಾಗಿದೆ. ಯಕ್ಷಮಂಗಳ ಪ್ರಶಸ್ತಿಯು ರೂ.25,000/- ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು ರೂ.10,000/- ನಗದು, ಪ್ರಶಸ್ತಿ, ಸ್ಮರಣಿಕೆಗಳನ್ನೊಳಗೊಂಡಿದೆ. ಕಲಾವಿದರ ಪರಿಚಯ : ಕಪ್ಪೆಕೆರೆ ಸುಬ್ರಾಯ ಭಾಗವತ : ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ತಲೆಮಾರಿನ ಅಗ್ರಮಾನ್ಯ ಕಲಾವಿದರಾಗಿರುವ ಕಪ್ಪೆಕೆರೆ ಸುಬ್ರಾಯ ಭಾಗವತರು ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ 1947ರಲ್ಲಿ ಈಶ್ವರ ಹೆಗಡೆ ಗೋಪಿ ಹೆಗಡೆ ದಂಪತಿಯ ಸುಪುತ್ರರಾಗಿ ಜನಿಸಿದರು. ಹದಿನಾರರ ಹರೆಯದಲ್ಲೇ…
ಉಡುಪಿ : ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿರುವ 14ನೇ ವರ್ಷದ ರಂಗಹಬ್ಬ ನಾಟಕೋತ್ಸವವು ದಿನಾಂಕ 22 ಫೆಬ್ರವರಿ 2026ರಂದು ಉದ್ಘಾಟನೆಗೊಂಡಿತು. ಈ ನಾಟಕೋತ್ಸವವನ್ನು ಉದ್ಘಾಟಿಸಿದ ರಂಗಕರ್ಮಿ ಸಂಜೀವ ದಂಡೆಕೇರಿಯವರು ಮಾತನಾಡಿ “ಕಲಾವಿದ ಕಲಾ ಪ್ರದರ್ಶನ ನೀಡಿದರೆ ಪೂರ್ಣನಾಗುವುದಿಲ್ಲ. ಸಹೃದಯನಾಗಬೇಕು, ವಿಶಾಲ ಹೃದಯಿ ಆಗಿರಬೇಕು. ಆಗ ಮಾತ್ರ ಪೂರ್ಣಕಲಾವಿದನಾಗಿ ರೂಪುಗೊಳ್ಳಲು ಸಾಧ್ಯ. ನಾಟಕಗಳನ್ನು ನೋಡುವವರ ಸಂಖ್ಯೆ ದಿನೇ ದಿನೆ ಕಡಿಮೆಯಾಗುತ್ತಿದೆ. ವೇದಿಕೆಯಲ್ಲಿ ಇರುವಷ್ಟು ವೀಕ್ಷಕರು ಇಲ್ಲದ ಪರಿಸ್ಥಿತಿ ಕೆಲವು ಕಡೆಗಳಲ್ಲಿ ಉಂಟಾಗಿದೆ. ಧಾರಾವಾಹಿಗಳು, ಮೊಬೈಲ್ ಇದಕ್ಕೆ ಕಾರಣ ಇರಬಹುದು. ರಂಗಚಟುವಟಿಕೆ ಜಾಸ್ತಿಯಾಗುತ್ತಾ ಹೋಗಬೇಕು. ನಾವು ಮಾಡುವ ಒಳ್ಳೆಯ ಕಾರ್ಯ ಮತ್ತು ಜನರ ಪ್ರೀತಿ ಮಾತ್ರ ಶಾಶ್ವತ. ನಾವು ಬದುಕಿ ಸಾಯುವುದಕ್ಕಿಂತ ಸತ್ತ ಮೇಲೂ ಬದುಕುವಂತೆ ಸಾಧನೆ ಮಾಡಬೇಕು. ನಾನು ಬರೆದ ಬಯ್ಯಮಲ್ಲಿಗೆ ನಾಟಕವು ತುಳು, ಕನ್ನಡ, ಹಿಂದಿ, ಕೊಂಕಣಿ, ಮರಾಠಿ, ಇಂಗ್ಲೀಷ್ ಭಾಷೆಗಳಲ್ಲಿ ಪ್ರದರ್ಶನಗೊಂಡಿದೆ. 28 ಸಾವಿರ ಪ್ರದರ್ಶನಗಳವರೆಗೆ ನಾನು ಲೆಕ್ಕ ಇಟ್ಟಿದ್ದೆ.…
ಮಂಗಳೂರು : ಯಕ್ಷ ಸ್ನೇಹ ಕಲಾ ಪ್ರತಿಷ್ಠಾನ (ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನ ಇದರ ಆಶ್ರಯದಲ್ಲಿ ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮವನ್ನು ದಿನಾಂಕ 01ರಿಂದ 08 ಮಾರ್ಚ್ 2026ರವರೆಗೆ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ ಆವರಣದಲ್ಲಿರುವ ಶ್ರೀಮತಿ ಲೀಲಾವತಿ ಬೈಪಡಿತ್ತಾಯ ವೇದಿಕೆಯಲ್ಲಿ ಹಮ್ಮಿಕೊಂಡಿದ್ದಾರೆ. ದಿನಾಂಕ 01 ಮಾರ್ಚ್ 2026ರಂದು ಅಪರಾಹ್ನ 2-00 ಗಂಟೆಗೆ ಯಕ್ಷ ಸ್ನೇಹ ಕಲಾ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಗೀತಾ ಲಕ್ಷ್ಮೀಶ್ ಇವರ ಅಧ್ಯಕ್ಷತೆಯಲ್ಲಿ ಭಾರತ ಮಾತ ಪೂಜನಾ ಕಾರ್ಯಕ್ರಮದೊಂದಿಗೆ ಚಾಲನೆ ದೊರೆಯಲಿದೆ. ಗಾನಗಂಗೋತ್ರಿ ಸಂಗೀತ ಶಾಲೆಯ ಶ್ರೀಮತಿ ರಶ್ಮಿ ರವಿ ಕುಮಾರ್ ಇವರ ಶಿಷ್ಯ ವೃಂದದವರಿಂದ ವಂದೇ ಮಾತರಂ ಗೀತಾ ಗಾಯನ ಮತ್ತು ಯಕ್ಷ ಸ್ನೇಹ ಕಲಾ ಪ್ರತಿಷ್ಠಾನದ ಕಲಾವಿದರಿಂದ ಮಧುಸೂದನ್ ಅಲೆವೂರಾಯ ವರ್ಕಾಡಿ ಇವರ ನಿರ್ದೇಶನದಲ್ಲಿ ‘ಸುದರ್ಶನ ಗರ್ವಭಂಗ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಸಂಜೆ 5-00 ಗಂಟೆಗೆ ಬಾಲಕೃಷ್ಣ ಕೊಟ್ಟಾರಿ…