Author: roovari

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಇವರ ಜಂಟಿ ಆಶ್ರಯದಲ್ಲಿ 116ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 30 ಡಿಸೆಂಬರ್ 2025ರಂದು ಅಪರಾಹ್ನ 02-30 ಗಂಟೆಗೆ ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವನಿತಾ ದೇವಾಡಿಗ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಮತ್ತು ಲೇಖಕರಾದ ಪ್ರೊ. ಕೃಷ್ಣಮೂರ್ತಿ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು. ಲೇಖಕಿ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳ ಶೆಟ್ಟಿ ಇವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಇದರ ವಾರ್ಷಿಕ ಸಂಭ್ರಮ ‘ಶ್ರೀ ಆಂಜನೇಯ-57’ ಹಾಗೂ ಪ್ರಶಸ್ತಿ ಪ್ರದಾನವು ದಿನಾಂಕ 25 ಡಿಸೆಂಬರ್ 2025ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು. ಆಶೀವರ್ಚನ ನೀಡಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮಾತನಾಡಿ “ಯಕ್ಷಗಾನ ಉಳಿದಿರುವುದು, ಅದು ಧಾರ್ಮಿಕ ನೆಲಕಟ್ಟನ್ನು ಉಳಿಸಿಕೊಂಡು ಬಂದಿರುವುದಕ್ಕೆ ಆಂಜನೇಯ ಯಕ್ಷಗಾನ ಕಲಾ ಸಂಘದಂತಹ ಸಂಘಟನೆಗಳೇ ಮುಖ್ಯ ಕಾರಣವಾಗಿದೆ. ಈ ಸಂಘಟನೆಗಳು ಯಕ್ಷಗಾನವನ್ನು ಜೀವನಕ್ಕಾಗಿ ಆರಿಸಿಕೊಂಡಿಲ್ಲ, ಜೀವನೋತ್ಸಾಹಕ್ಕೆ ಆರಿಸಿಕೊಂಡಿರುವುದು. ಮಾನಸಿಕ ನೆಮ್ಮದಿ ಹಾಗೂ ಕಲೆಯನ್ನು ಮುಂದಿನ ತಲೆಮಾರಿಗೆ ವರ್ಗಾಯಿಸಲು ಹಾಗೂ ಪ್ರೇಕ್ಷಕರಿಗೆ ಅಭಿರುಚಿ ಉಣಿಸುತ್ತಾ ಮುಂದುವರಿಯುತ್ತಿದೆ. ಯುವ ಜನಾಂಗಕ್ಕೆ ಯಕ್ಷಗಾನದ ಅಭಿರುಚಿಯನ್ನು ಮುಂದುವರಿಸುವಲ್ಲಿ ಮಹಿಳಾ ಸಂಘಗಳ ಪ್ರಯತ್ನ ಬಹುಮಖ್ಯವಾಗಿದೆ. ಮಹಿಳೆಯರು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳಲು ಕಾರಣವಾಗಿದೆ. ಯಕ್ಷಗಾನದಲ್ಲಿ ಸೇವೆ ಸಲ್ಲಿಸುತ್ತಿರುವ ಆಂಜನೇಯ ಯಕ್ಷಗಾನ ಕಲಾ ಸಂಘವು 57 ವರ್ಷಗಳನ್ನು ಪೂರೈಸುವ ಜೊತೆಗೆ ಮಹಿಳಾ ಸಂಘವು…

Read More

ಉಡುಪಿ : ಉಡುಪಿ – ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನಾ ಮಂದಿರದ 2ನೇ ವಾರ್ಷಿಕೋತ್ಸವವು ದಿನಾಂಕ 07 ಡಿಸೆಂಬರ್ 2025ರಂದು ಅಭಿರಾಮ ಭರತವಂಶಿ ಸುಜ್ಞಾನ ಮಂದಿರದಲ್ಲಿ ನಡೆಯಿತು. ಆ ಪ್ರಯುಕ್ತ ಸ್ವರ ಸಾಮ್ರಾಟ್‌ ವಿದ್ವಾನ್ ಅಭಿರಾಮ್‌ ಭರತವಂಶಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ತಮ್ಮ ಅಭಿಪ್ರಾಯ ಹಂಚಿಕೊಂಡ ಅಂತಾರಾಷ್ಟ್ರೀಯ ವೀಣಾವಾದಕ ಮೈಸೂರಿನ ವಿದ್ವಾನ್ ಆರ್.ಕೆ. ಪದ್ಮನಾಭರವರು “ಸಂಗೀತ ಕಲಿಯಲು ಅದೆಷ್ಟೋ ಮಕ್ಕಳು ನಮ್ಮಂಥಾ ಸಾವಿರಾರು ಗುರುಗಳ ಬಳಿಸಾರಿದರೂ ನಾದಸರಸ್ವತಿಯು ಕೇವಲ ಬೆರಳೆಣಿಕೆಯಷ್ಟೇ ಮಂದಿಗೆ ಒಲಿಯುತ್ತಾಳೆ. ಅಂಥಾ ಅಪರೂಪದ ಹುಡುಗರಲ್ಲಿ ನಮ್ಮ ಶಿಷ್ಯ ಅಭಿರಾಮನೊಬ್ಬನಾಗಿದ್ದ. ಮಹಾಮಾರಿ ಕೋವಿಡ್‌ ಬಡಿದು ಆ ಬಹುಮುಖ ಪ್ರತಿಭೆಯನ್ನು ಹಠಾತ್ತನೆ ಕಣ್ಮರೆ ಮಾಡಿ ನಾಲ್ಕು ವರ್ಷಗಳಾದರೂ ಇಂದಿಗೂ ಆ ನೋವು ಕಾಡಿದೆ” ಎಂದು ಮನದಾಳದ ಮಾತಿಗೆ ದನಿಯಾದರು. ಸಮಾರಂಭದ ಉದ್ಘಾಟನೆ ಮಾಡಿದ ಉಡುಪಿಯ ಶ್ರೀಮನ್ಮಧ್ವ ಸಿದ್ದಾಂತ ಪ್ರಭೋದಿನಿ ಸಂಸ್ಕೃತ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ವೆಂಕಟರಾವ್‌ ಆಚಾರ್ಯರು, “ಯಾವುದೇ ಸಂಗೀತ ಕಲಿಯಲು ತೀವ್ರ ಆಸಕ್ತಿ…

Read More

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಸುಲೋಚನಾ ಪಿ.ಕೆ. ಇವರ ‘ಮೂಗಿಯ ಮನದೊಳು’ ಕನ್ನಡ ಕಾದಂಬರಿ ಲೋಕಾರ್ಪಣಾ ಸಮಾರಂಭವನ್ನು ದಿನಾಂಕ 28 ಡಿಸೆಂಬರ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಪುತ್ತೂರು ದರ್ಬೆಯ ಮಕ್ಕಳ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ರಾಂತ ಮುಖ್ಯಸ್ಥರಾದ ಡಾ. ತಾಳ್ತಜೆ ವಸಂತಕುಮಾರ ಇವರು ವಹಿಸಲಿದ್ದು, ಕಾದಂಬರಿ ಲೋಕಾರ್ಪಣೆ ಮಾಡಲಿದ್ದಾರೆ.

Read More

ಚಿಕ್ಕಬಳ್ಳಾಪುರ : ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆ ‘ರಂಗಕಹಳೆ’ ಬೆಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ‘24ನೇ ಕುವೆಂಪು ನಾಟಕೋತ್ಸವ 2025’ವನ್ನು ದಿನಾಂಕ 27, 28 ಮತ್ತು 29 ಡಿಸೆಂಬರ್ 2025ರಂದು ಪ್ರತಿದಿನ ಸಂಜೆ 6-00 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 27 ಡಿಸೆಂಬರ್ 2025ರಂದು ‘ಬೊಮ್ಮನಹಳ್ಳಿಯ ಕಿಂದರಿಜೋಗಿ’ ಮತ್ತು ‘ಮೋಡಣ್ಣನ ತಮ್ಮ’ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 28 ಡಿಸೆಂಬರ್ 2025ರಂದು ಬಾಲಕ ಕುವೆಂಪು ಕಿರುಚಿತ್ರ ಪ್ರದರ್ಶನ ಹಾಗೂ ‘ಸ್ಮಶಾನ ಕುರುಕ್ಷೇತ್ರ’ ಮತ್ತು ‘ಯಮನ ಸೋಲು’ ನಾಟಕ ಪ್ರಸ್ತುತಗೊಳ್ಳಲಿದೆ. ದಿನಾಂಕ 29 ಡಿಸೆಂಬರ್ 2025ರಂದು ಶ್ರೀ ಕುವೆಂಪು ನೃತ್ಯ ನಮನ, ಶ್ರೀ ಕುವೆಂಪು ಗೀತೆ ಗಾಯನ ಮತ್ತು ಶೂದ್ರ ತಪಸ್ವಿ ನಾಟಕ ಪ್ರದರ್ಶನ ನಡೆಯಲಿದೆ.

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ, ಕೊಯ್ಯೂರು ಸರಕಾರಿ ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 28 ಡಿಸೆಂಬರ್ 2025ರಂದು ಕೊಯ್ಯೂರಿನ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿರುವುದು. ಬೆಳಗ್ಗೆ 8-30 ಗಂಟೆಗೆ ಕನ್ನಡ ಭುವನೇಶ್ವರಿಯ ಮೆರವಣಿಗೆ, 9-30ಕ್ಕೆ ಧ್ವಜಾರೋಹಣ, 9-45 ಗಂಟೆಗೆ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಬಿ. ಭುಜಬಲಿ ಧರ್ಮಸ್ಥಳ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರು ಉದ್ಘಾಟನೆ ಮಾಡಲಿದ್ದಾರೆ. ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ದಿಕ್ಸೂಚಿ ಭಾಷಣ ಮಾಡಲಿದ್ದು, ಕೆ. ಹರೀಶ್ ಕುಮಾರ್ ಇವರು ಕೃತಿ ಬಿಡುಗಡೆ ಮತ್ತು ಶಾಸಕರಾದ ಹರೀಶ್ ಪೂಂಜ ಇವರು ‘ಚಾರುಮುಡಿ’ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಹಚ್ಚೇವು ಕನ್ನಡದ…

Read More

ಮಂಚಿ : ನೃತ್ಯ ಪರಂಪರೆಯನ್ನು ಶುದ್ಧ ಶಾಸ್ತ್ರಿಯ ಚೌಕಟ್ಟಿನಲ್ಲಿ ಭವಿಷ್ಯದ ಯುವ ಕಲಾವಿದರಿಗೆ ಪರಿಚಯಿಸುವ ನೆಲೆಗಟ್ಟಿನಲ್ಲಿ ಪುತ್ತೂರಿನ ಶ್ರೀಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಪ್ರೇರಿತಗೊಂಡು, ಅದರ ಅಂಗ ಸಂಸ್ಥೆಯಾದ ವಸುಧಾರಾ ಕಲಾಕೇಂದ್ರ ಬೋಳಂತೂರು ಮಂಚಿ, ಇವರು ಆಯೋಜಿಸಿದ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’ ಇದರ 4ನೇ ಪ್ರಸ್ತುತಿ ದಿನಾಂಕ 21 ಡಿಸೆಂಬರ್ 2025ರ ಭಾನುವಾರ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಹಾಗೂ ಲಯನ್ಸ್ ಸೇವಾ ಟ್ರಸ್ಟ್ (ರಿ.) ಮಂಚಿ ಇವರ ಸಹಯೋಗದಲ್ಲಿ ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಕುಮಾರಿ ದಿವ್ಯ ಇವರು ಓಂಕಾರ ಮತ್ತು ಕುಮಾರಿ ಲಿಖಿತ ಶಂಖನಾದಗಳ ಮೂಲಕ ವಾತಾವರಣ ಶುದ್ಧವಾಗಿಸಿ, ಬಳಿಕ ಕುಮಾರಿ ಲಹರಿ ಬಿ. ಶೆಟ್ಟಿ ಪ್ರಾರ್ಥಿಸಿದರು. ಕುಮಾರಿ ದೀತ್ಯ ನಿತ್ಯ ಪಂಚಾಂಗ ವಾಚಿಸಿದರು, ಕುಮಾರಿ ಪ್ರಿಯಾಂಶಿ ಸುಭಾಷಿತ ನುಡಿದರು. ಕಾರ್ಯಕ್ರಮದ ಅಭ್ಯಾಗತರಾಗಿ ಬಾ. ನಾಗವೇಣಿ ಮಂಚಿ ಇವರು ಆಗಮಿಸಿದ್ದು, ಇವರನ್ನು ಕುಮಾರಿ ಶ್ರೀತಲ್ ಪರಿಚಯಿಸಿದರು. ಬಳಿಕ ದೀಪ ಪ್ರಜ್ವಲನೆಗೈದ ಅಭ್ಯಾಗತರು ನೃತ್ಯ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ನೀಡಿದರು.…

Read More

ಬೆಂಗಳೂರು : ವಿಮಾನ ಕಾರ್ಖಾನೆ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಟ್ರಸ್ಟ್ (ರಿ.) ತನ್ನ 38ನೇ ವಾರ್ಷಿಕ ಮಹಾ ಸಭೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ದಿನಾಂಕ 25 ಡಿಸೆಂಬರ್ 20255ರ ಗುರುವಾರರಂದು ಬೆಂಗಳೂರಿನ ಮಲ್ಲೇಶ್ವರಂ 8ನೇ ಕ್ರಾಸ್, ಗಣಪತಿ ದೇವಸ್ಥಾನದ ಬಳಿ ಇವರು ರಾಮ ಮಂದಿರದಲ್ಲಿ ಭಕ್ತಿಭಾವದಿಂದ ಆಯೋಜಿಸಿತ್ತು. ಸಾಧಕರ ಸನ್ಮಾನದ ಭಾಗವಾಗಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಬಲಾ ವಾದನ ಹಾಗೂ ಸಂಘಟನೆಯ ವಿಚಾರದಲ್ಲಿ ಅಪರಿಮಿತ ಸಾಧನೆ ಮಾಡಿರುವ ಪಂಡಿತ್ ಡಾ. ಸತೀಶ್ ಹಂಪಿಹೊಳಿರವರನ್ನು ‘ವಿಪ್ರನಾದ ಸಾಧಕ’ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಯುತ ಎಸ್. ರಮೇಶ್, ಮಹಾಪೋಷಕರಾದ ಶ್ರೀಯುತ ಮನೋಹರ್, ಅಧ್ಯಕ್ಷರಾದ ಶ್ರೀಯುತ ಜೆ. ರವಿಶಂಕರ್, ಕಾರ್ಯದರ್ಶಿಯಾದ ಶ್ರೀಯುತ ಬಿ. ಎಸ್. ಯೋಗಾನರಸಿಂಹ ಮತ್ತು ಖಜಾಂಚಿ ಶ್ರೀಯುತ ಎಚ್.ಸಿ. ಸುಂದರೇಶ್ ಇವರುಗಳು ಉಪಸ್ಥಿತರಿದ್ದರು.

Read More

ಬಂಟ್ವಾಳ : ಕಲಾನಿಕೇತನ ಡಾನ್ಸ್ ಫೌಂಡೇಷನ್ ಕಲ್ಲಡ್ಕ ಇವರು ಪ್ರಸ್ತುತ ಪಡಿಸುವ ‘ರಜತ ಕಲಾ ಯಾನ’ದ ಸರಣಿ ‘ಕಲಾ ಪರ್ವ 2025’ವನ್ನು ದಿನಾಂಕ 27 ಡಿಸೆಂಬರ್ 2025ರಂದು ಸಂಜೆ 3-30 ಗಂಟೆಗೆ ಬಂಟ್ವಾಳ ಬಿ.ಸಿ. ರೋಡಿನಲ್ಲಿರುವ ಸ್ಪರ್ಶ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ. ರೈ ಇವರು ದೀಪ ಪ್ರಜ್ವಲನೆ ಮಾಡಿ ಈ ಸರಣಿಯನ್ನು ಉದ್ಘಾಟನೆ ಮಾಡಲಿದ್ದು, ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರಸ್ತುತಿ ನಡೆಯಲಿದೆ. ನಟುವಾಂಗದಲ್ಲಿ ವಿದುಷಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ವಿದುಷಿ ಶ್ರೀದೇವಿ ಕಲ್ಲಡ್ಕ, ಮೃದಂಗದಲ್ಲಿ ವಿದ್ವಾನ್ ಗಿತೇಶ್ ಎ.ಜಿ. ನೀಲೇಶ್ವರ ಹಾಗೂ ಕೊಳಲಿನಲ್ಲಿ ಎ.ಎಸ್. ಹರಿಪ್ರಸಾದ್ ನೀಲೇಶ್ವರಂ ಸಹಕರಿಸಲಿದ್ದಾರೆ.

Read More

ಬೆಂಗಳೂರು : ಭಾರತ ಯಾತ್ರ ಕೇಂದ್ರ ಬೆಂಗಳೂರು ಇದರ ವತಿಯಿಂದ ಡಾ. ಅಜಯ ಕುಮಾರ ಸಿಂಹ ಇವರ ‘ಹರಿಯಲು ಬಿಡು’ ಕವನ ಸಂಕಲನ ಅನಾವರಣ ಕಾರ್ಯಕ್ರಮವನ್ನು ದಿನಾಂಕ 27 ಡಿಸೆಂಬರ್ 2025ರಂದು ಸಂಜೆ 5-30 ಗಂಟೆಗೆ ಬೆಂಗಳೂರು ಕನ್ನಡ ಭವನ ಕರ್ನಾಟಕ ನಾಟಕ ಅಕಾಡೆಮಿಯ ರಂಗ ಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಐ.ಎ.ಎಸ್. ಅಧಿಕಾರಿ ಡಾ. ಬಿರಂಜೀವ ಸಿಂಗ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಚಿತ್ರಕಲಾ ಪರಿಷತ್ತು ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್ ಇವರು ಕೃತಿ ಅನಾವರಣ ಮಾಡಲಿದ್ದಾರೆ. ಪ್ರಸಿದ್ಧ ಅನುವಾದಕರಾದ ಡಾ. ವನಮಾಲಾ ವಿಶ್ವನಾಥ ಇವರು ಪುಸ್ತಕ ಪರಿಚಯ ಮಾಡಲಿದ್ದು, ಅನುವಾದಕರಾದ ಡಾ. ಹೆಚ್.ಎಸ್. ಶಿವಪ್ರಕಾಶ್ ಇವರು ಮಾತನಾಡಲಿದ್ದಾರೆ.

Read More