Subscribe to Updates
Get the latest creative news from FooBar about art, design and business.
Author: roovari
ಮೈಸೂರು : ಕಲಾಮಂದಿರದಲ್ಲಿ ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ವತಿಯಿಂದ ಆಯೋಜಿಸಲಾದ ‘ಆಯಾಮೋತ್ಸವ – ಸಂಗೀತ, ನೃತ್ಯ, ನಾಟಕಗಳ ಉತ್ಸವ’ ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 08 ಫೆಬ್ರವರಿ 2026ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಕಾಳಚನ್ನೇಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. “ಆಯಾಮ ಸಂಸ್ಥೆಯ ಸ್ಥಾಪಕಿ ಹಾಗೂ ನಿರ್ದೇಶಕಿ ಡಾ. ಶಾಂಭವಿ ಸ್ವಾಮಿ ಇವರು ಹಲವು ವರ್ಷಗಳಿಂದ ಆಯಾಮ ಸಂಸ್ಥೆಯ ಮೂಲಕ ಗ್ರಾಮೀಣ ಹಾಗೂ ನಗರ ಮಕ್ಕಳಿಗೆ ಕಲೆ, ಸಾಹಿತ್ಯ, ಸಂಗೀತವನ್ನು ಕಲಿಸುವ ಮೂಲಕ ಸಂಗೀತ, ನಾಟಕ, ನೃತ್ಯಗಳ ಬಗ್ಗೆ ಮಕ್ಕಳಲ್ಲಿ ಅಭಿರುಚಿ ಬೆಳೆಸುವಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಯಾಮ ಸಂಸ್ಥೆ ಶ್ಲಾಘನೀಯ ಕಾರ್ಯ ಮಾಡುತ್ತಿದೆ” ಎಂದು ಪ್ರೊ. ಕಾಳಚನ್ನೇಗೌಡ ಅವರು ಪ್ರಶಂಸಿಸಿದರು. ಮಾನವ ಜೀವನದ ಬೆಳವಣಿಗೆಯನ್ನು ವಿವರಿಸಿದ ಅವರು, ಮನುಷ್ಯ ಅಲೆಮಾರಿಯಾಗಿ ಬದುಕುತ್ತಿದ್ದ ಕಾಲದಿಂದ ನೆಲೆ ನಿಂತು ಕೃಷಿ ಕಲಿತ ನಂತರ ಕಲೆ,…
ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯ ಬೆಸೂರು ಸರಕಾರಿ ಪ್ರೌಢಶಾಲೆಯಲ್ಲಿ ದಿನಾಂಕ 07 ಫೆಬ್ರವರಿ 2026ರಂದು ಸಂಪಾಜೆ ಸಣ್ಣಯ್ಯ ಪಟೇಲ್ ಮತ್ತು ದಿವಂಗತ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಮಾತನಾಡಿ “ಜಗತ್ತಿನಲ್ಲಿ ಮನುಷ್ಯ ಒಂಟಿಯಾಗಿ ಬದುಕಲು ಸಾಧ್ಯವಿಲ್ಲ, ಮನುಷ್ಯರು ಜಂಟಿಯಾಗಿ ಅಥವಾ ಗುಂಪಾಗಿ ಬದುಕುವುದರಲ್ಲಿ ಸುಖ ಸಂತೋಷ ಇದೆ. ಅದನ್ನು ಜನಪದರು ಸಾಬೀತು ಮಾಡಿದ್ದರು. ಜನಪದ ಜಗತ್ತು ಎನ್ನುವುದು ಒಂದು ಅದ್ಭುತ, ವೈಶಿಷ್ಟ್ಯಮಯ, ಸುಂದರ ಜಗತ್ತು. ನಮ್ಮ ನಿಮ್ಮ ಹಿರಿಯರೇ ಜನಪದರು, ಆದರೆ ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗದೆ ಆ ಸುಖವನ್ನು ಕಳೆದುಕೊಳ್ಳುತ್ತಿದ್ದೇವೆ. ನಮ್ಮ ಹಿರಿಯರು ಪಾಠಶಾಲೆಯಲ್ಲಿ ಓದಿದವರಲ್ಲ ಆದರೆ ಬದುಕಿನ ಜೀವನೋತ್ಸಾಹದಲ್ಲಿ ಎಲ್ಲಾ ಅನುಭವದ ಪಾಠವನ್ನು ಪಡೆದವರು. ಜನಪದರ ಅನುಭವ ಮತ್ತು ಸಹಜ ಸ್ಪೂರ್ತಿಯಿಂದ ಹೊರಹೊಮ್ಮಿದ ಅನೇಕ ನುಡಿಮುತ್ತುಗಳು, ಗಾದೆ, ಹಾಡು, ಒಗಟು, ಕಥೆ, ಆಚರಣೆ ಇವೆಲ್ಲವೂ…
ವಿಜಯಪುರ : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರುಗಳ ಆಶ್ರಯದಲ್ಲಿ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 05 ಫೆಬ್ರುವರಿ 2026ರಂದು ಕವಿ ಕುಮಾರವ್ಯಾಸ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿಜಯಪುರ ಜಿಲ್ಲಾ ಗಮಕ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಬಿ.ಎಂ. ಪಾಟೀಲರು ಕಾರ್ಯಕ್ರಮವನ್ನು ಸಂಘಟಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ವೇದಿಕೆಯ ಮೇಲೆ ಶ್ರೀ ಬಿ.ಎಂ. ಪಾಟೀಲ್, ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಭಾರತೀಬಾಯಿ ಖಾಸನೀಸ್, ಗಮಕಿ ಶ್ರೀಮತಿ ಶಾಂತಾ ಕೌತಾಳ್, ವ್ಯಾಖ್ಯಾನಕಾರರಾದ ಕಲ್ಯಾಣರಾವ್ ದೇಶಪಾಂಡೆ, ಸಾಹಿತಿ ವಿ.ಡಿ. ಐಹೊಳ್ಳಿ ಉಪಸ್ಥಿತರಿದ್ದರು. ಶ್ರೀ ವಿ.ಡಿ. ಐಹೊಳ್ಳಿಯವರು ಕುಮಾರವ್ಯಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟನಾ ಪರ ಭಾಷಣ ಮಾಡಿದರು. ಆಮೇಲೆ ಬಿ.ಎಂ. ಪಾಟೀಲರು ಕರ್ನಾಟಕ ಗಮಕ ಕಲಾ ಪರಿಷತ್ತು ನಡೆದು ಬಂದ ಬಗೆಯನ್ನು ವಿವರಿಸಿದರು. ಶ್ರೀ ಭೀಮಾಶಂಕರ್ ಇವರು ‘ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ’ ಎಂಬ ಪ್ರಾರ್ಥನಾ ಗೀತೆ ಹಾಡಿದರು. ನಂತರ ನಡೆದ ಗಮಕ ಕಾರ್ಯಕ್ರಮದಲ್ಲಿ…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಮಣಿಪಾಲ ಮತ್ತು ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸ್ತುತ ವರ್ಷದಿಂದ ಕೊಡಲ್ಪಡುವ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 13 ಫೆಬ್ರವರಿ 2026ರ ಶುಕ್ರವಾರದಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪದ ಸಭಾಂಗಣದಲ್ಲಿ ನಡೆಯಲಿದೆ. ಪ್ರಶಸ್ತಿಯನ್ನು ಪ್ರಸಿದ್ಧ ಕನ್ನಡ ಕವಿ, ಕಥೆಗಾರ, ವಿಮರ್ಶಕರಾದ ಶ್ರೀ ಸುಬ್ರಾಯ ಚೊಕ್ಕಾಡಿಯವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಬಿ.ಎ. ವಿವೇಕ ರೈ ಇವರು ವಹಿಸಲಿದ್ದು, ಪ್ರಶಸ್ತಿಯನ್ನು ಮಾಹೆ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಪ್ರದಾನ ಮಾಡಲಿರುವರು. ಪ್ರಶಸ್ತಿ ಪುರಸ್ಕೃತರ ಕುರಿತು ವಿಶ್ರಾಂತ ಪ್ರಾಧ್ಯಾಪಕರು, ಹಿರಿಯ ಸಾಹಿತಿಗಳೂ ಆದ ಡಾ. ನಾ. ದಾಮೋದರ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿದ್ದು, ಪ್ರೊ. ಎಸ್.ವಿ. ಪರಮೇಶ್ವರ ಭಟ್ಟರ ಸುಪುತ್ರರಾದ ಎಸ್.ಪಿ. ರಾಮಚಂದ್ರ, ಎಂ.ಜಿ.ಎಂ. ಕಾಲೇಜಿನ…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ದಿನಾಂಕ 07 ಫೆಬ್ರವರಿ 2026ರಂದು ‘ಕಾವ್ಯಾಂ ವ್ಹಾಳೊ-11’ ಶೀರ್ಷಿಕೆಯಡಿ ಕವಿಗೋಷ್ಠಿ ನಡೆಯಿತು. ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ‘ಕಾವ್ಯಾಂ ವ್ಹಾಳೊ’ ಎಂಬ ಕಾರ್ಯಕ್ರಮವು ಕಳೆದ ವರ್ಷ ಮಾರ್ಚ್ 8ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ ಮಹಿಳೆಯರಿಗಾಗಿ ಪ್ರಾರಂಭಿಸಿ, ಇಂದು ಕಾವ್ಯಾಂ ವ್ಹಾಳೊ ಇದರ 11ನೇ ಆವೃತ್ತಿಗೆ ತಲುಪಿದೆ ಎಂದು ಹರುಷ ವ್ಯಕ್ತಪಡಿಸಿ, ಕರ್ನಾಟಕ ಸರ್ಕಾರವು ಕೊಂಕಣಿ ಸಮುದಾಯಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿ ಕೊಂಕಣಿ ಭಾಷೆಯ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕಳೆದ ಎಪ್ರಿಲ್ ತಿಂಗಳಿನಿಂದ ಆರಂಭವಾದ ಕಾವ್ಯಾಂ- ವ್ಹಾಳೊ ಕವಿಗೋಷ್ಟಿಗಳಲ್ಲಿ ಕೊಂಕಣಿ ಕವಿಗಳು ಪ್ರಸ್ತುತ ಪಡಿಸಿದ ಕವಿತೆಗಳ ಸಂಗ್ರಹ ‘ಕಾವ್ಯಾಂ- ವ್ಹಾಳೊ’ ಭಾಗ-1 ಈ ಪುಸ್ತಕವನ್ನು ಮುದ್ರಿಸಿ, ಬಿಡುಗಡೆಗೊಳಿಸಲು ಸಂತೋಷಪಡುತ್ತಿದೆ” ಎಂದು ಹೇಳಿ ಎಲ್ಲರನ್ನೂ ಸ್ವಾಗತಿಸಿದರು. 2025 ಎಪ್ರಿಲ್ ತಿಂಗಳಿನಿಂದ…
ಕಳೆದ ಸುಮಾರು ಏಳೆಂಟು ವರ್ಷಗಳಿಂದ ಪತ್ರಿಕೆಗಳಲ್ಲೂ ನಿಯತಕಾಲಿಕಗಳಲ್ಲೂ ಜಾಲತಾಣಗಳಲ್ಲೂ ನಿರಂತರವಾಗಿ ಸಾಮಾಜಿಕ ಜಾಗೃತಿ ಮೂಡಿಸುವ ಲೇಖನಗಳನ್ನು ಬರೆಯುತ್ತಿದ್ದ ನರೇಂದ್ರ ಎಸ್. ಗಂಗೊಳ್ಳಿಯವರ ಆರನೇ ಕೃತಿ ‘ಅವಳ ನಿಟ್ಟುಸಿರು’ ಎಂಬ ಈ ಲೇಖನ ಸಂಕಲನ. ಸಾಮಾಜಿಕ ಕಾಳಜಿ ಹೊಂದಿರುವ ವಸ್ತುಗಳ ಮೇಲೆ ಬರೆದ 50 ಲೇಖನಗಳು ಇದರಲ್ಲಿವೆ. ಆಯ್ದುಕೊಂಡ ವಸ್ತುಗಳ ಬಗ್ಗೆ ಎಲ್ಲ ವಿವರಗಳನ್ನೂ ಪರಾಮರ್ಶನ ಗ್ರಂಥಗಳಿಂದಲೂ ಪತ್ರಿಕೆಗಳಿಂದಲೂ ಜಾಲತಾಣಗಳಿಂದಲೂ ಕೂಲಂಕುಶವಾಗಿ ಅಧ್ಯಯನ ಮಾಡಿ ಚಿಂತನೆ ನಡೆಸಿ ಅಚ್ಚುಕಟ್ಟಾಗಿ ಪೋಣಿಸಿ ಬರೆದ ಈ ಲೇಖನಗಳ ಓದು ಖುಷಿಯನ್ನೂ ಮಾಹಿತಿಗಳನ್ನೂ ನೀಡುವುದರೊಂದಿಗೆ ಕುತೂಹಲವನ್ನೂ ತಣಿಸುತ್ತವೆ, ಚಿಂತನೆಗೂ ಹಚ್ಚುತ್ತವೆ. ಮುಖ್ಯವಾಗಿ ಇಲ್ಲಿನ ಕೆಲವು ಲೇಖನಗಳು ನರೇಂದ್ರ ಅವರ ಅದ್ಭುತ ಸ್ತ್ರೀ ಸಂವೇದನೆಗೆ ಸಾಕ್ಷಿಯಾಗಿ ನಿಲ್ಲುತ್ತವೆ. ‘ನಮ್ಮನೆ ಮಗಳು ವೇಶ್ಯಾವೃತ್ತಿ ಅಯ್ದುಕೊಂಡರೆ’ ಅನ್ನುವ ಲೇಖನದಲ್ಲಿ ಪುರುಷರು ಇತಿಹಾಸ ಕಾಲದಿಂದಲೂ ತಮ್ಮ ಲೈಂಗಿಕ ಹಸಿವನ್ನು ತೀರಿಸಿಕೊಳ್ಳಲು ಹೆಣ್ಣನ್ನು ಹೇಗೆ ಸಾಧನವಾಗಿ ಬಳಸಿಕೊಳ್ಳುತ್ತ ಬಂದರು ಮತ್ತು ಬಳಸಿದ ವಸ್ತುವನ್ನು ಎಸೆಯುವಂತೆ ಸಮಾಜದಲ್ಲಿ ಅವಳಿಗೆ ಯಾವುದೇ ಗೌರವ ಕೊಡದೆ ವೇಶ್ಯೆಯೆಂದು ಕರೆದು…
ಮೈಸೂರು : ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ವತಿಯಿಂದ ದಿನಾಂಕ 07 ಫೆಬ್ರವರಿ 2026ರಂದು ಮೈಸೂರಿನ ಕಲಾಮಂದಿರದಲ್ಲಿ ‘ಆಯಾಮೋತ್ಸವ – ಸಂಗೀತ, ನೃತ್ಯ, ನಾಟಕಗಳ ಉತ್ಸವ’ ಕಾರ್ಯಕ್ರಮವು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎಸ್. ಮಲ್ಲಿಕಾರ್ಜುನ ಸ್ವಾಮಿ “ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಸಂಗೀತ, ನೃತ್ಯ, ನಾಟಕ ಸಾಹಿತ್ಯದ ಮೂಲಕ ಬೆಳವಣಿಗೆಗೆ ಸಹಕಾರಿಯಾಗಿರುವ ವಿದುಷಿ ಡಾ. ಶಾಂಭವಿ ಸ್ವಾಮಿ ಮತ್ತು ಆಯಾಮ ಸಂಸ್ಥೆಗೆ ಅಭಿನಂದನೆಗಳು. ಮಕ್ಕಳನ್ನೇ ಕೇಂದ್ರೀಕರಿಸಿ ನಡೆಯುತ್ತಿರುವ ಈ ಚಟುವಟಿಕೆಗಳು ಅವರಿಗಾಗಿ ಮಾತ್ರವಲ್ಲ ನಮಗಾಗಿಯೂ ಕೂಡ. ನಾವು ಯಾವ ಸಮಾಜವನ್ನು ನಮ್ಮಿಂದ ಪೂರ್ಣವಾಗಿ ಸುಸಂಸ್ಕೃತವಾಗಿ ಇರಲು ಆಗೋದಿಲ್ಲವೋ ಆ ಸಮಾಜದ ಭವಿಷ್ಯವನ್ನ ಇಂಥ ಕಲೆಗಳ ಮೂಲಕ ಪರಿಪೂರ್ಣವಾದ ಸಮಾಜವಾಗಿ ಎಲ್ಲರಿಗೂ ಶಾಂತಿ ಮತ್ತು ಸಹನೆ ಸಹಬಾಳ್ವೆಯನ್ನ ಒದಗಿಸುವಂತಹ ಸಮಾಜವನ್ನು ಕಟ್ಟುವ ದಿಕ್ಕಿನಲ್ಲಿ ಈ ಮಕ್ಕಳ ಮನಸ್ಸುಗಳು ತುಂಬ ನಿರ್ಮಲವಾಗಿ ಸಮಾಜದೊಂದಿಗೆ ಬೆರೆತುಕೊಳ್ಳಿ ಅಂತ ಆಶಿಸುತ್ತೇನೆ” ಎಂದರು. ಕನ್ನಡ ಮತ್ತು…
ಕಾಸರಗೋಡು : ಮಠಗಾರ್ ಕುಟುಂಬದ ತರವಾಡು ಮನೆ ಅಡ್ಕಸ್ಥಳ ಇದರ ಶ್ರೀ ಮಹಮ್ಮಾಯಿ ದೇವಸ್ಥಾನ ಮತ್ತು ಪರಿವಾರ ದೈವಗಳ ಆರಾಧನಾ ಕ್ಷೇತ್ರದ 10ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ ದಿನಾಂಕ 08 ಫೆಬ್ರವರಿ 2026ರಂದು ಅಗರಿ ಭಾಗವತ ವಿರಚಿತ ‘ಶಾಂಭವಿ ವಿಲಾಸ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಗಣೇಶ್ ಭಟ್ ಹೊಸ ಮೂಲೆ, ಚೆಂಡೆ ಮದ್ದಳೆಗಳಲ್ಲಿ ನಾರಾಯಣ ಶರ್ಮ ಕಾಟುಕುಕ್ಕೆ, ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಭಾರತಿ ರೈ (ಕೌಶಿಕೆ), ಹರಿಣಾಕ್ಷಿ ಜೆ. ಶೆಟ್ಟಿ (ಶುಂಭ), ಶುಭಾ ಗಣೇಶ್ (ರಕ್ತಬೀಜ), ಶುಭಾ ಅಡಿಗ (ಚಂಡ), ಕಿಶೋರಿ ದುಗ್ಗಪ್ಪ ನಡುಗಲ್ಲು (ಮುಂಡ) ಸಹಕರಿಸಿದರು. ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ವಂದಿಸಿದರು. ಶ್ರೀಮತಿ ಕುಸುಮ ಹಾಗೂ ಶ್ರೀ ವಸಂತ ನಾಯ್ಕ ದಂಪತಿಗಳು ಕಲಾವಿದರಿಗೆ ಶ್ರೀ ದೇವರ ಪ್ರಸಾದವನ್ನಿತ್ತು ಗೌರವಿಸಿದರು.
ಮಂಗಳೂರು : ಆಕೃತಿ ಆಶಯ ಪಬ್ಲಿಕೇಶನ್ಸ್ ಇದರ ವತಿಯಿಂದ ಪ್ರೊ. ಬಿ.ಎ. ವಿವೇಕ ರೈ ಇವರ ಕೃತಿ ಬಿಡುಗಡೆ ಸರಣಿ -1 ಕಾರ್ಯಕ್ರಮವನ್ನು ದಿನಾಂಕ 11 ಫೆಬ್ರವರಿ 2026ರಂದು ಪೂರ್ವಾಹ್ನ 11-30 ಗಂಟೆಗೆ ಮಂಗಳೂರು ಸುಲ್ತಾನ್ ಬತ್ತೇರಿ ರಸ್ತೆಯಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ ಗೊಳ್ಳಲಿದ್ದು, ಚಂದ್ರಕಲಾ ನಂದಾವರ, ಡಾ. ಕೆ. ಚಿನ್ನಪ್ಪ ಗೌಡ, ಡಾ. ನಾ. ದಾಮೋದರ ಶೆಟ್ಟಿ, ಪ್ರೊ. ಬಿ.ಎ. ವಿವೇಕ ರೈ, ಮಂಗಳೂರಿನ ಮಾಧ್ಯಮ ಮಿತ್ರರು ಭಾಗವಹಿಸಲಿದ್ದಾರೆ.
ಉಪ್ಪಿನಂಗಡಿ : ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅಧ್ಯಕ್ಷ ಡಾ. ಶ್ರೀಪತಿ ಕಲ್ಲುರಾಯ ಇವರ ಪ್ರಾಯೋಜಕತ್ವದಲ್ಲಿ ದಿನಾಂಕ 07 ಫೆಬ್ರವರಿ 2026ರಂದು ನಡೆದ ತಾಳಮದ್ದಳೆ ಕೂಟದಲ್ಲಿ ‘ಜಾಂಬವತಿ ಕಲ್ಯಾಣ’ ತಾಳಮದ್ದಳೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ ಉಡುಪಿ, ಚೆಂಡೆ ಮದ್ದಳೆಯಲ್ಲಿ ಪದ್ಯಾಣ ಜಯರಾಮ್ ಭಟ್ ಮತ್ತು ಮುರಳೀಧರ ಕಲ್ಲೂರಾಯ, ಹಾಗೂ ಮುಮ್ಮೇಳದಲ್ಲಿ ಬಲರಾಮನಾಗಿ ಡಾ. ಶ್ರೀಪತಿ ಕಲ್ಲೂರಾಯ, ಶ್ರೀ ಕೃಷ್ಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಜಾಂಬವಂತನಾಗಿ ಗಣರಾಜ ಕುಂಬಳೆ, ಜಾಂಬವತಿಯಾಗಿ ರಾಜಶ್ರೀ ಶಬರಾಯ ಉಡುಪಿ ಭಾಗವಹಿಸಿದ್ದರು. ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ, ಕಾರ್ಯದರ್ಶಿ ಪ್ರಶಾಂತ ಪೈ, ಸ್ವರ್ಣಲತಾ, ಮನೋಹರ ಶೆಟ್ಟಿ ಮತ್ತು ಸೇವಾ ಟ್ರಸ್ಟಿನ ಪದಾಧಿಕಾರಿಗಳು ಕಲಾವಿದರನ್ನು ಗೌರವಿಸಿದರು. ಭಾಸ್ಕರ ಬಾರ್ಯ ಸ್ವಾಗತಿಸಿ, ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.