Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯ ಸರಣಿ-ಮಾಲಿಕೆ 23ರ ‘ನಾಟ್ಯಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 21 ನವೆಂಬರ್ 2025ರಂದು ಸಂಜೆ 5-30 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ನಿವೃತ್ತ ಪ್ರೊಫೆಸರ್ ಡಾ. ಕೆ.ಎಂ. ಉಷಾ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉತ್ತರ ಕನ್ನಡದ ವಿದುಷಿ ಚಿತ್ರಲೇಖಾ ಬೋಳಾರ ಮತ್ತು ವಿದುಷಿ ಅನಯ ವಸುಧಾ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.
ಪುತ್ತೂರು : ಬಹುವಚನಂ ವಿದ್ಯಾನಗರ ದರ್ಬೆ ಪುತ್ತೂರು ಇವರ ವತಿಯಿಂದ ನವೆಂಬರ್ ಮಾಸದ ವಿಶೇಷ ಉಪನ್ಯಾಸವನ್ನು ದಿನಾಂಕ 23 ನವೆಂಬರ್ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ದರ್ಬೆ ವಿದ್ಯಾನಗರದ ಪದ್ಮಿನೀ ಸಭಾಭವನದಲ್ಲಿ ಆಯೋಜಿಸಿಲಾಗಿದೆ. ಬಂಟ್ವಾಳ ತಾಲೂಕು ಬೆಂಜನಪದವಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ರಾಧೇಶ ತೋಳ್ಪಾಡಿಯವರು ‘ಅರ್ಧ ಶತಮಾನದ ಮಕ್ಕಳ ಕವಿತೆಗಳು’ ಈ ಬಗ್ಗೆ ಅವಲೋಕನ ಮಾಡಲಿದ್ದಾರೆ.
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ರಥಬೀದಿ ಗೆಳೆಯರು (ರಿ.) ಉಡುಪಿ ಇವರ ಸಹಯೋಗದೊಂದಿಗೆ ‘ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9-30 ಗಂಟೆಗೆ ಈ ಕಾರ್ಯಕ್ರಮವನ್ನು ಮೈಸೂರಿನ ಡಾ. ಜನಾರ್ದನ ಇವರು ಉದ್ಘಾಟನೆ ಮಾಡಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 11-00 ಗಂಟೆಗೆ ನಡೆಯುವ ವಿಚಾರ ಗೋಷ್ಠಿ 1ರಲ್ಲಿ ‘ರಂಗಪ್ರಯೋಗಗಳಲ್ಲಿ ವಸ್ತು, ಆಶಯ ಮತ್ತು ವಿನ್ಯಾಸಗಳಲ್ಲಿ ಸಮಕಾಲೀನತೆ’ ಎಂಬ ವಿಷಯದ ಬಗ್ಗೆ ಶರಣ್ಯಾ ರಾಮ್ ಪ್ರಕಾಶ್ ಬೆಂಗಳೂರು, ಮಹಾದೇವ ಹಡಪದ ಧಾರವಾಡ ಮತ್ತು ಪ್ರಸನ್ನ ಡಿ. ಶಿವಮೊಗ್ಗ ಇವರು ವಿಚಾರ ಮಂಡನೆ ಮಾಡಲಿದ್ದು, ಅಭಿನವ್ ಗ್ರೋವರ್, ಕ್ರಿಸ್ಟೋಫರ್ ಡಿಸೋಜ, ರೋಹಿತ್ ಎಸ್. ಬೈಕಾಡಿ, ಬಿಂದು…
Mumbai: The National Centre for the Performing Arts (NCPA) invited Dr Guru Meenakshi Shriyan of Arunodaya Kala Niketan to conduct an in-depth lecture-demonstration at Shree Saraswati Vidhyamandir, Bhandup, as part of its ongoing Nritya Parichaya series aimed at strengthening classical arts education among schoolchildren. The session introduced students to the foundational principles of Bharatanatyam, offering a rare opportunity to explore the art form through both theory and practice. Children were guided through the significance of the five elements, sensory awareness, chakras, and spatial geometry—concepts that form the structural and philosophical base of classical dance. Demonstrations of mudras and basic adavus…
ಮೈಸೂರು : ಅದಮ್ಯ ರಂಗಶಾಲೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರತಿಭಾವಂತ ಮಕ್ಕಳಿಗೆ ‘ಅದಮ್ಯ ಚಿಗುರು ಪ್ರತಿಭಾ ಚೇತನ’ ಪುರಸ್ಕಾರ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಪ್ರತಿಭಾವಂತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ತಿಳಿಸಿದ್ದಾರೆ. ಜಿಲ್ಲೆಯ ವ್ಯಾಪ್ತಿಯೊಳಗಿನ ಸರಕಾರಿ, ಅನುದಾನಿತ, ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ ಎಲ್.ಕೆ.ಜಿ.ಯಿಂದ ಪ್ರಥಮ ಪಿಯುಸಿ ವರೆಗೆ ವ್ಯಾಸಂಗ ಮಾಡುತ್ತಿರುವ ಕಲೆ, ಸಾಹಿತ್ಯ, ಶಿಕ್ಷಣ, ಸಂಗೀತ, ರಂಗಭೂಮಿ, ಕ್ರೀಡೆ, ನೃತ್ಯ, ಜನಪದ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಪರಿಚಯ, ಭಾವಚಿತ್ರ, ದೂರವಾಣಿ ಸಂಖ್ಯೆ ಹಾಗೂ ಸಾಧನೆಯ ವಿವರಗಳನ್ನು ಒಳಗೊಂಡ ಅಗತ್ಯ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಬಹುದಾಗಿದೆ. ಮಕ್ಕಳ ಅಥವಾ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಈ ಎಲ್ಲ ಅಗತ್ಯ ಮಾಹಿತಿಗಳನ್ನು ಹೊಂದಿರುವ ಅರ್ಜಿಯನ್ನು ಸಿದ್ದಪಡಿಸಿ ದಿನಾಂಕ 24 ನವೆಂಬರ್ 2025ರೊಳಗೆ ತಲುಪುವಂತೆ ಟಿ. ಸತೀಶ್ ಜವರೇಗೌಡ, ಗೌರವ ಕಾರ್ಯದರ್ಶಿ, ಅದಮ್ಯ ರಂಗಶಾಲೆ, ವಿಸ್ಮಯ ಪ್ರಕಾಶನ, ನಂ.442/10,…
ಶಿವಮೊಗ್ಗ : ಶ್ರೀ ಗುತ್ಯಮ್ಮ ಕೃಪಾಪೋಷಿತ ಯಕ್ಷಗಾನ ಮಂಡಲಿ ಶ್ರೀ ಕ್ಷೇತ್ರ ಸೋಮವಾರಸಂತೆ ಇದರ 25ನೇ ವರ್ಷದ ಪ್ರದರ್ಶನವನ್ನು ದಿನಾಂಕ 21 ನವೆಂಬರ್ 2025ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆದ್ದೂರು ಹೊಸಳ್ಳಿಯಲ್ಲಿ ನಡೆಯಲಿದೆ. ಯಕ್ಷಗಾನ ಕಲಾ ಪೋಷಕರಾದ ಸತ್ಯ ನಾರಾಯಣ ರಾವ್ ಕೂಳೂರು ಇವರು ಈ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡಿ ಉದ್ಘಾಟನೆ ಮಾಡಲಿದ್ದು, ಹೊಸಳ್ಳಿಯ ಶ್ರೀ ಗುತ್ಯಮ್ಮ ದೇವಸ್ಥಾನದ ಅಧ್ಯಕ್ಷರಾದ ಬಿ. ವಿ. ನಾಗರಾಜ ಗೌಡ್ರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಪಾದಕರಾದ ಬಿ. ಗಣಪತಿ, ಕಲಾವಿದರಾದ ಎಂ. ಕೆ. ರಮೇಶ್ ಆಚಾರ್ಯ, ಯಕ್ಷಗಾನ ಭಾಗವತರಾದ ಮಂಜುನಾಥ ಗೌಡ ಮತ್ತು ಮದ್ದಳೆ ವಾದಕರಾದ ಗಣೇಶ್ ಮೂರ್ತಿ ಇವರಿಗೆ ‘ರಜತವರ್ಷ ಯಕ್ಷಾಭಿವಂದನಂ’ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ಶ್ರೀ ಸೋಮವಾರಸಂತೆ ಕ್ಷೇತ್ರ ಮಹಾತ್ಮೆ’ ಪ್ರಸಂಗ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ ಮತ್ತು ಆರ್ಟ್ ಕೆನರಾ ಟ್ರಸ್ಟ್ ಇದರ ವತಿಯಿಂದ ‘ವಿಶ್ವ ಪರಂಪರೆ ಸಪ್ತಾಹ’ ಕಾರ್ಯಕ್ರಮವನ್ನು ದಿನಾಂಕ 19 ನವೆಂಬರ್ 2025ರಿಂದ 25 ನವೆಂಬರ್ 2025ರವರೆಗೆ ಪ್ರತಿ ದಿನ ಸಂವಾದ, ಕಾರ್ಯಾಗಾರ ಮತ್ತು ಪ್ರದರ್ಶನದೊಂದಿಗೆ ಮಂಗಳೂರಿನ ಬಲ್ಲಾಳ್ ಭಾಗ್, ಜಿ.ಜಿ. ರೋಡ್, ಕೊಡಿಯಾಲ್ ಗುತ್ತು (ಪಶ್ಚಿಮ), ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 19 ನವೆಂಬರ್ 2025ರಂದು ಸಂಜೆ 5-30 ಗಂಟೆಗೆ ‘ತುಳು ಭಾಷೆ ಬೊಕ್ಕ ಬದ್ಕ್’ ಎಂಬ ವಿಷಯದ ಬಗ್ಗೆ ಡಾ. ಗಣೇಶ್ ಅಮೀನ್ ಸಂಕಮಾರ್ ಮಾತನಾಡಲಿದ್ದಾರೆ. ದಿನಾಂಕ 20 ನವೆಂಬರ್ 2025ರಂದು ಸಂಜೆ 5-30 ಗಂಟೆಗೆ “ಇತಿಹಾಸದಿಂದ ಗುರುತಿಸಲ್ಪಟ್ಟ ಪಶ್ಚಿಮ ಗಂಗಾ ರಾಜವಂಶದ ನಾಣ್ಯಗಳು” ಎಂಬ ವಿಷಯದಲ್ಲಿ ಎಂ. ಪ್ರಶಾಂತ್ ಶೇಟ್ ಉಪನ್ಯಾಸ ನೀಡಲಿದ್ದಾರೆ. ದಿನಾಂಕ 21 ನವೆಂಬರ್ 2025ರಂದು ಸಂಜೆ 5-30 ಗಂಟೆಗೆ ಶ್ರುತಿ ಬಂಗೇರ ಇವರು ‘ಯಕ್ಷಗಾನದಲ್ಲಿ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗ ಮತ್ತು ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜಾನಪದ ಸಂಶೋಧಕ, ಲೇಖಕ ಡಾ. ಸುಂದರ ಕೇನಾಜೆ ಸಹಯೋಗದಲ್ಲಿ ರಚಿಸಿದ ಕೃತಿಗಳ ಬಿಡುಗಡೆ ಕಾರ್ಯಕ್ರಮವು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ದಿನಾಂಕ 18 ನವೆಂಬರ್ 2025ರಂದು ನಡೆಯಿತು. ಡಾ. ಕೇನಾಜೆ ಹಾಗೂ ಇತರ ಏಳು ಲೇಖಕರನ್ನೊಳಗೊಂಡ ಬೃಹತ್ ಗ್ರಂಥ ‘ನಾವು ಕೂಗುವ ಕೂಗು’ ಅಲ್ಲದೇ ಇತರ ಲೇಖಕರ ‘ಧರೆಗೆ ದೊಡ್ಡವರ ಕಾವ್ಯಗಳ ಏಳು ಪಠ್ಯಗಳು’ ಎಂಬ ಕೃತಿ ಹಾಗೂ ಮೈಸೂರ್ ಗುರುರಾಜ್ ಮತ್ತು ತಂಡದವರು ಇಪ್ಪತ್ತು ಗಂಟೆಗಳ ಕಾಲ ಹಾಡಿದ ಮಂಟೇಸ್ವಾಮಿಯ ದೃಶ್ಯ ಶ್ರಾವ್ಯ ಸರಣಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಇವುಗಳ ಸಂಪಾದನೆಯನ್ನು ಹಿರಿಯ ಜಾನಪದ ವಿದ್ವಾಂಸ ಡಾ. ಕೃಷ್ಣಮೂರ್ತಿ ಹನೂರು ಮಾಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಪ್ಪಡಿ ಕ್ಷೇತ್ರದ ಪೀಠಾಧಿಪತಿ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ಧಲಿಂಗರಾಜೇ ಅರಸುರವರು ನಡೆಸಿ ಮಾತನಾಡಿದರು. ಕೃತಿಗಳ ಬಿಡುಗಡೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ…
ಬೆಂಗಳೂರು : ಪ್ರಯೋಗರಂಗ ಬೆಂಗಳೂರು ಇವರು ಪ್ರಸ್ತುತ ಪಡಿಸುವ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನವನ್ನು ದಿನಾಂಕ 21 ನವೆಂಬರ್ 2025ರಂದು ಬೆಂಗಳೂರಿನ ಕೆ.ಜಿ.ಎಫ್. ಬಿ.ಇ.ಎಂ.ಎಲ್. ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕದ ರಚನೆ ಕಿ.ರಂ. ನಾಗರಾಜ ಇವರು ಮಾಡಿದ್ದು, ಸಂಗೀತ ಹೆಚ್.ಕೆ. ಯೋಗಾನರಸಿಂಹ ಮತ್ತು ಸುರೇಶ್ ಆನಗಳ್ಳಿ ಇವರು ನೀಡಿದ್ದು, ಸಿಜಿಕೆ ನಿರ್ದೇಶನ ಮಾಡಿರುತ್ತಾರೆ. ಪ್ರಸ್ತುತ ಟಿ. ರಘು ಇವರು ಮರು ನಿರ್ದೇಶನ ಮಾಡಿದ್ದು, ಡಾ. ಕೆ.ವಿ. ನಾಗರಾಜಮೂರ್ತಿ ಇವರು ನಿರ್ಮಾಣ ಮತ್ತು ನಿರ್ವಹಣೆ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 98451 72822 ಸಂಖ್ಯೆಯನ್ನು ಸಂಪರ್ಕಿಸಿರಿ. ಪ್ರಯೋಗರಂಗದ ಬಗ್ಗೆ : ಪ್ರಯೋಗರಂಗ ನಾಟಕ ತಂಡ ಕಳೆದ 25 ವರ್ಷಗಳಿಂದ ದೇಶದ ವಿವಿಧ ರಾಜ್ಯಗಳಲ್ಲಿ ವಿಭಿನ್ನ ನಾಟಕ ಪ್ರರ್ದಶಿಸುತ್ತಾ ಬಂದಿದೆ. ‘ಮಂಟೆಸ್ವಾಮಿ ಕಥಾಪ್ರಸಂಗ’, ‘ಮೌನಿ’, ‘ಪ್ರೇತದ್ವೀಪ’, ‘ಮಲ್ಲಮ್ಮನ ಮನೆ ಹೋಟು’, ‘ಬ್ರಹ್ಮಚಾರಿ ಶರಣಾದ’, ‘ಮಹಿಪತ ಕ್ವಾಣನ ತಂಬಿಗಿ ಎಂ.ಎ’, ‘ಜುಮ್ನಾಳ ದೂಳ್ಯನ ಪ್ರಸಂಗ’, ‘ರಾಜಬೇಟೆ’, ‘ಸಂತೆಯಲ್ಲಿ ನಿಂತ ಕಬೀರ’, ‘ಪರಿಹಾರ’, ‘ಜುಗಾರಿ ಕೂಟ’, ‘ಸಿರಿ ಪುರಂದರ’,…
ಪರ್ಕಳ : ಗುರುವಸಂತಿ ಸಾಂಸ್ಕೃತಿಕ ವೇದಿಕೆ – ಮಣಿಪಾಲ ಇದರ ದಶಮಾನೋತ್ಸವದ ಪ್ರಯುಕ್ತ ನಾಟಕ ರಂಗ ತರಬೇತಿ ಶಿಬಿರವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ಪರ್ಕಳದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9-00 ಗಂಟೆಗೆ ಉದ್ಘಾಟನಾ ಸಮಾರಂಭ ಹಾಗೂ ಸಂಜೆ 5-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಶಿಬಿರವು ಉಚಿತವಾಗಿದ್ದು, 12ರಿಂದ 45ರವರೆಗಿನ ವಯೋಮಿತಿಯವರು ಭಾಗವಹಿಸಬಹುದು.