Subscribe to Updates
Get the latest creative news from FooBar about art, design and business.
Author: roovari
ಬೆಳಗಾವಿ : ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿ ವರ್ಷ ಕೊಡಮಾಡುವ ‘ಕನ್ನಡ ಗಡಿತಿಲಕ’ ಪ್ರಶಸ್ತಿಗೆ ಹಿರಿಯ ಸಾಹಿತಿ ಮತ್ತು ರಂಗಕರ್ಮಿ ಶಿರೀಷ ಜೋಶಿ ಆಯ್ಕೆಯಾಗಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿರೀಷ ಜೋಶಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ. ಅವರ ‘ಹಾರಿಹೋದ ಹಂಸ ಏಕಾಂಗಿ’, ‘ಗುಜರಿ ತೋಡಿ’ ಮತ್ತು ‘ತಾನಸೇನ’ ಕೃತಿಗಳು ಜನಪ್ರಿಯವಾಗಿವೆ. ‘ಮಿಂಚು’ ನಾಟಕವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಠ್ಯವಾಗಿಯೂ ಸೇರ್ಪಡೆಯಾಗಿದೆ. ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ರಾಷ್ಟ್ರೀಯ ಸಿರಿಗನ್ನಡ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ. ಉದಯೋನ್ಮುಖ ಬರಹಗಾರರಿಗೆ ನೀಡುವ ರಾಜ್ಯಮಟ್ಟದ ‘ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ’ಗೆ ಶಶಿ ತರೀಕೆರೆ ಇವರ ‘ಪ್ಯೂಪಾ’ ಕವನ ಸಂಕಲನ ಆಯ್ಕೆಯಾಗಿದೆ. ಚಿಕ್ಕಮಗಳೂರಿನ ತರೀಕೆರೆಯವರಾದ ಶಶಿ ಇವರು ಬೆಂಗಳೂರಿನ ಇಸ್ರೋದಲ್ಲಿ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿದ್ದು, ಇವರ ಛಂದ ಪುಸ್ತಕ ಬಸವರಾಜ ಕಟ್ಟೀಮನಿ ಯುವ ಪುರಸ್ಕಾರ, ಟೋಟೋ ಪ್ರಶಸ್ತಿ ಮುಂತಾದ…
ಮಂಗಳೂರು : ತುಳುಕೂಟ ಕುಡ್ಲ ಮತ್ತು ಸರಯೂ ಬಾಲ ಯಕ್ಷವೃಂದ ತಂಡ ಜಂಟಿಯಾಗಿ ಆಯೋಜಿಸಿರುವ ಮರೋಳಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ-ತುಳು ತಾಳಮದ್ದಳೆ ಸಪ್ತಾಹವು ದಿನಾಂಕ 07 ಡಿಸೆಂಬರ್ 2025ರಂದು ಮಂಗಳೂರಿನ ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಉದ್ಘಾಟನೆಗೊಂಡಿತು. ಈ ಸಪ್ತಾಹವನ್ನು ಉದ್ಘಾಟಿಸಿದ ಕಂಕನಾಡಿಯ ಶ್ರೀ ಬ್ರಹ್ಮ ಬೈದ್ಯರ್ಕಳ ಗರೋಡಿಯ ಅಧ್ಯಕ್ಷ ಚಿತ್ತರಂಜನ್ ಕೆ. “ಐವತ್ತೈದು ವರ್ಷಗಳಿಂದ ಈ ತುಳು ಕೂಟವು ತುಳು ಭಾಷೆ, ಸಾಹಿತ್ಯ, ನಾಟಕ ಕೃತಿಗಳಿಗೆ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ಸರಿ ಸುಮಾರು ಮೂವತ್ತು ವರ್ಷಗಳ ಕಾಲ ತುಳುಕೂಟವನ್ನು ಮುನ್ನಡೆಸಿ ಕೂಟಕ್ಕೆ ಮೆರುಗನ್ನು ತಂದುಕೊಟ್ಟವರು ಮರೋಳಿ ಬಿ. ದಾಮೋದರ ನಿಸರ್ಗ. ಗರೋಡಿಯಲ್ಲೂ ಉಪಾಧ್ಯಕ್ಷರಾಗಿ ಧಾರ್ಮಿಕ ಕಾರ್ಯಕ್ರಮಗಳಲೆಲ್ಲಾ ಸಕ್ರಿಯವಾಗಿ ಭಾಗವಹಿಸಿ ಮುನ್ನಡೆದವರು. ಅವರ ನೆನಪಲ್ಲಿ ಇಲ್ಲಿ ತುಳು ತಾಳಮದ್ದಳೆ ನಡೆಸುತ್ತಿರುವುದು ಸಂತಸದ ವಿಷಯ” ಎಂದು ಶುಭ ಹಾರೈಸಿದರು. ಖಚಾಂಚಿ ನಾರಾಯಣ ಬಿ.ಡಿ.ಯವರು ಅಗಲಿದ ದಿವ್ಯ ಚೇತನವಾದ ಮರೋಳಿ ಬಿ. ದಾಮೋದರ ನಿಸರ್ಗರ ಸಂಸ್ಮರಣೆ ಮಾಡಿದರು. ತುಳು ಕೂಟದ ಅಧ್ಯಕ್ಷೆ ಶ್ರೀಮತಿ…
ಮೂಡುಬಿದಿರೆ : ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ ಪ್ರದಾನ ಸಮಿತಿ, ಬೈಪಾಡಿತ್ತಾಯರು ಸ್ಥಾಪಿಸಿರುವ ಡಿಜಿ ಯಕ್ಷ ಫೌಂಡೇಶನ್ (ರಿ.) ಬೆಂಗಳೂರು ಸಹಯೋಗದಲ್ಲಿ ಹಾಗೂ ಅವರ ಸಮಸ್ತ ಶಿಷ್ಯ ವೃಂದದವರ ಸಹಕಾರದಲ್ಲಿ ದಿನಾಂಕ 09 ಡಿಸೆಂಬರ್ 2025ರಂದು ಮೂಡುಬಿದಿರೆ ಆಲಂಗಾರು ಶ್ರೀ ಬಡಗು ಮಹಾಗಣಪತಿ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಪ್ರಶಸ್ತಿ ಪ್ರದಾನ, ಯಕ್ಷ ನಾದೋತ್ಸವ ಮತ್ತು ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ. ದಿ. ಲೀಲಾವತಿ ಬೈಪಾಡಿತ್ತಾಯ ಹಾಗೂ ಹರಿನಾರಾಯಣ ಬೈಪಾಡಿತ್ತಾಯರ ಹೆಸರಿನಲ್ಲಿ ನೀಡಲಾಗುವ 2025ನೇ ಸಾಲಿನ ‘ಶ್ರೀ ಹರಿಲೀಲಾ ಯಕ್ಷನಾದ ಪುರಸ್ಕಾರ’ವನ್ನು ಹಿರಿಯ ಮದ್ದಳೆಗಾರರಾದ ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ಪ್ರದಾನ ಮಾಡಲಾಗುತ್ತದೆ. ಲೀಲಾವತಿ ಬೈಪಾಡಿತ್ತಾಯದ ಮೊದಲ ವರ್ಷದ ಸ್ಮರಣೆಯೂ ನಡೆಯಲಿದ್ದು, ಪ್ರಶಸ್ತಿಯು ರೂ.10,079/- ನಗದು, ಸ್ಮರಣಿಕೆ ಒಳಗೊಂಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಹಿಮ್ಮೇಳ ವಾದಕರಾದ ಲಕ್ಷ್ಮೀಶ ಅಮ್ಮಣ್ಣಾಯ, ಪೆರುವಾಯಿ ನಾರಾಯಣ ಭಟ್, ಮಿಜಾರು ಮೋಹನ ಶೆಟ್ಟಿಗಾರ್ಹಾಗೂ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ’ ಸಂದಿದೆ. ಬೆಳಗ್ಗೆ 10-00 ಗಂಟೆಗೆ…
ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಇದರ ವತಿಯಿಂದ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ರಾಗ ಸುಧಾರಸ -2025’ ಸಂಗೀತ ನೃತ್ಯೋತ್ಸವದ ಉದ್ಘಾಟನೆಯು ದಿನಾಂಕ 07 ಡಿಸೆಂಬರ್ 2025ರಂದು ಬೆಳಗ್ಗೆ 5-00 ಗಂಟೆಗೆ ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಡೆಯಲಿದೆ. ಶರವು ಶ್ರೀ ಮಹಾ ಗಣಪತಿ ದೇವಸ್ಥಾನದ ಶಿಲೆ ಶಿಲೆ ಆಡಳಿತ ಮೊಕ್ತೇಸರರಾದ ಪೂಜ್ಯ ಶ್ರೀ ಶರವು ರಾಘವೇಂದ್ರ ಶಾಸ್ತ್ರಿ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯರ ಕವಿಗೋಷ್ಠಿಯನ್ನು ದಿನಾಂಕ 09 ಡಿಸೆಂಬರ್ 2025ರ ಮಂಗಳವಾರ ಮಧ್ಯಾಹ್ನ 2-30 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕೆ ಭವನದಲ್ಲಿ ಏರ್ಪಡಿಸಲಾಗಿದೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಬಿ.ಎ. ಶಂಶುದ್ದೀನ್ ಇವರು ವಹಿಸಲಿದ್ದು, ಕವಿಗೋಷ್ಠಿಯನ್ನು ಕವಿ ಸಾಹಿತಿ, ಕಾಜೂರು ಸತೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಸಾಹಿತಿ ಶ್ರೀಮತಿ ಕೃಪಾ ದೇವರಾಜ್ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ. ಹಿರಿಯ ಕವಿಗಳಾದ ಕಿಗ್ಗಾಲು ಎಸ್. ಗಿರೀಶ್, ಶ್ರೀಮತಿ ಜಲ ಕಾಳಪ್ಪ, ಮೂಟೆರ ಕೆ. ಗೋಪಾಲಕೃಷ್ಣ, ಶ್ರೀಮತಿ ಕೆ. ಶೋಭಾ ರಕ್ಷಿತ್, ಶ್ರೀಮತಿ ಕಟ್ರತನ ಲಲಿತಾ ಅಯ್ಯಣ್ಣ, ಶ್ರಿಮತಿ ಶ.ಗ. ನಯನತಾರ, ಶ್ರೀಮತಿ ಅಂಬೆಕಲ್ಲು ಸುಶೀಲ ಕುಶಾಲಪ್ಪ, ಬಿ.ಜಿ. ಅನಂತಶಯನ, ವಿದ್ವಾನ್ ಶಂಕರಯ್ಯ ಮಾಸ್ಟರ್, ಶ್ರೀಮತಿ ಭಾಗೀರಥಿ…
ಮಂಗಳೂರು : ತುಳುಕೂಟದ ಕುಡ್ಲ ಸಂಘಟನೆ ನೀಡುವ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಅಪ್ರಕಟಿತ ಸ್ವತಂತ್ರ ನಾಟಕ ಕೃತಿಗಳನ್ನು ಆಹ್ವಾನಿಸಲಾಗಿದೆ. ಕೃತಿ ಈವರೆಗೆ ಎಲ್ಲಿಯೂ ಪ್ರದರ್ಶನ ಕಂಡಿರಬಾರದು. ಸ್ವತಂತ್ರ ಕೃತಿ ಎಂದು ದೃಢೀಕರಿಸಬೇಕು. ಮೂರು ಬಾರಿ ಪ್ರಶಸ್ತಿ ಗೆದ್ದವರ ಕೃತಿ ಅಮಾನ್ಯವಾಗುತ್ತದೆ. ಕೃತಿ ತುಳುಭಾಷೆಯಲ್ಲಿ ಇರಬೇಕು. ಪ್ರಶಸ್ತಿಯ ಬಹುಮಾನಗಳ ಮೊತ್ತ ಕ್ರಮವಾಗಿ ರೂ.10,000/-, ರೂ.8,000/, ರೂ.6,000/- ಆಗಿದೆ. ಡಿ. ವೀರೇಂದ್ರ ಹೆಗ್ಗಡೆಯವರು ಈ ಪ್ರಶಸ್ತಿಯನ್ನು ಪ್ರಾಯೋಜಿಸುತ್ತಿದ್ದಾರೆ. ನಾಟಕದ ಪ್ರತಿಯನ್ನು ತುಳುಕೂಟದ ಅಧ್ಯಕ್ಷೆ ಹೇಮಾ ದಾಮೋದರ, ನಿಸರ್ಗ ಮನೆ, ನಿಸರ್ಗ ಕ್ರಾಸ್, ಮರೋಳಿ, ಮಂಗಳೂರು ಈ ವಿಳಾಸಕ್ಕೆ ದಿನಾಂಕ 30 ಜನವರಿ 2025ರ ಒಳಗೆ ಕಳುಹಿಸಬೇಕು ಎಂದು ತುಳುಕೂಟದ ಪ್ರದಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ (9481163531) ತಿಳಿಸಿದ್ದಾರೆ.
ಎಂಬತ್ತರ ದಶಕದಿಂದ ಮುಖ್ಯವಾಹಿನಿಗೆ ಬಂದ ಮಹಿಳಾ ಕಾವ್ಯದಲ್ಲಿ ಅಸಂಖ್ಯಾತ ಕವಯತ್ರಿಯರು ಬರವಣಿಗೆಯನ್ನು ಮಾಡುತ್ತಿದ್ದಾರೆ. ಸ. ಉಷಾ, ಚ. ಸರ್ವಮಂಗಳಾ, ವೈದೇಹಿ, ಶಶಿಕಲಾ ವಸ್ತ್ರದ, ಶೈಲಜ ಉಡಚಣ ಮುಂತಾದವರು ನವ್ಯ ಕಾವ್ಯದಿಂದ ಪ್ರೇರಿತರಾಗಿದುದರಿಂದ ಅವರ ರಚನೆಗಳಲ್ಲಿ ಸಂಯಮ, ಕಲಾತ್ಮಕತೆ, ಕವಿತೆಯನ್ನು ವಿವಿಧ ಅರ್ಥಗಳಿಂದ ಬೆಳೆಸುವ ಪ್ರಯತ್ನವನ್ನು ಕಾಣುತ್ತೇವೆ. ಈ ಮಾತು ಕನ್ನಡದ ಪ್ರಮುಖ ಲೇಖಕಿ ಮಾಲತಿ ಪಟ್ಟಣಶೆಟ್ಟಿಯವರ ಕವನಗಳಿಗೂ ಅನ್ವಯವಾಗುತ್ತದೆ. ನವೋದಯದ ಸಾತ್ವಿಕ ಮನಸ್ಸು, ನವ್ಯ ಆಕೃತಿ ಮತ್ತು ಸ್ತ್ರೀವಾದಿ ಸಂವೇದನೆಯನ್ನೊಳಗೊಂಡ ಮಾಲತಿ ಪಟ್ಟಣಶೆಟ್ಟಿಯವರ ಕಾವ್ಯ ಅದರ ಆಚೆಗೂ ಕೈಚಾಚುತ್ತದೆ. ಅವರ ಕಾವ್ಯದಲ್ಲಿ ಪುರುಷ ವಂಚಿತ ದನಿಯು ಮಿಡಿಯುತ್ತದೆ. ಪ್ರೀತಿ ಪ್ರೇಮದ ವಿಷಯದಲ್ಲಿ ಮಹಿಳೆಯರು ತೋರುವ ಸ್ಪಂದನಗಳು, ಗಂಡು ಹೆಣ್ಣಿನ ಸಂಬಂಧ, ವಿವಾಹಪೂರ್ವ, ವಿವಾಹದ ನಂತರ ಮತ್ತು ಬೇರೆ ಗಂಡಸರಿಂದ ಮೋಸ ಹೋದ ಹೆಣ್ಣಿನ ಮನಸ್ಥಿತಿಯನ್ನು ಗುರುತಿಸಬಹುದು. ಸ್ತ್ರೀಪರ ದನಿಯನ್ನು ರೊಚ್ಚಿನಿಂದ ಹೊಮ್ಮಿಸುವ ಸುಕನ್ಯಾ ಮಾರುತಿ, ಬಿ.ಟಿ. ಲಲಿತಾ ನಾಯಕ್, ವಿಜಯಶ್ರೀ ಸಬರದ, ಮಲ್ಲಿಕಾ ಘಂಟಿ, ಸ್ತ್ರೀ ಕೇಂದ್ರಿತ ಕಾಮದ ಮೂಲಕ ಬದುಕಿನ…
ಬೆಳಗಾವಿ : ರಂಗಸಂಪದ ಬೆಳಗಾವಿ ತಂಡದ ‘ಅಭಿಷೇಕ ಅಲಾಯ್ಸ್ ನಾಟಕೋತ್ಸವ’ದ ಉದ್ಘಾಟನೆ ಮತ್ತು ಆಧುನಿಕ ಕನ್ನಡ ರಂಗಭೂಮಿ ದಿನಾಚರಣೆ – 2025 ದಿನಾಂಕ 05 ಡಿಸೆಂಬರ್ 2025ರಂದು ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಯಶಸ್ವೀಯಾಗಿ ನೆರೆದ ಮುನ್ನೂರಕ್ಕಿಂತ ಹೆಚ್ಚು ಆಸಕ್ತ ಪ್ರೇಕ್ಷಕರ ಸಮ್ಮುಖದಲ್ಲಿ ಜರುಗಿತು. ಧಾರವಾಡದಿಂದ ಆಗಮಿಸಿದ ನಿವೃತ್ತ ಆಕಾಶವಾಣಿ ಅಧಿಕಾರಿಗಳಾದ ಡಾ. ಶರಭೇಂದ್ರಸ್ವಾಮಿಯವರು ಶ್ರೀ ಎಸ್.ಎಮ್. ಕುಲಕರ್ಣಿ ಸರ ಇವರ ಅನುಪಸ್ಥಿತಿಯಲ್ಲಿ (ಅನಾರೋಗ್ಯದ ಕಾರಣ) ಅಧ್ಯಕ್ಷತೆ ವಹಿಸಿ ಕನ್ನಡ ರಂಗಭೂಮಿಯನ್ನು ಬೆಳಗಾವಿಯಲ್ಲಿ ಸತತವಾಗಿ 47 ವರ್ಷಗಳಿಂದ ಜೀವಂತವಾಗಿಟ್ಟ ರಂಗಸಂಪದ ತಂಡಕ್ಕೆ ಅಭಿನಂದನೆ ಸಲ್ಲಿಸದರು. ನಾಟಕೋತ್ಸವದ ಉದ್ಘಾಟನೆ ಮಾಡಿದ ಅಭಿಷೇಕ ಅಲಾಯ್ಸ್ ಮಾಲಿಕರು ಮತ್ತು ರಂಗಸಂಪದದ ಪೋಷಕರೂ ಆದ ಶ್ರೀ ಮಧ್ವಾಚಾರ್ಯ ಆಯಿ ಇವರು ಸಾಮಾಜಿಕ ಕಾರ್ಯಗಳಿಗೆ ತಮ್ಮ ಸಂಸ್ಥೆ ಯಾವತ್ತೂ ಸಹಾಯ ಮಾಡುತ್ತಿದೆ. ಅದರಲ್ಲೂ ರಂಗಸಂಪದದಂತಹ ಕಾರ್ಯನಿರತ ರಂಗತಂಡಕ್ಕೆ ಪ್ರಾಯೋಜಕತ್ವ ಮಾಡಲು ಅಭಿಮಾನವೆನಿಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಆಕಾಶವಾಣಿ ಉದ್ಘೋಷಕರು, ನಟ, ನಿರ್ದೇಶಕ, ಲೇಖಕ ಡಾ. ಶಶಿಧರ ನರೇಂದ್ರ…
ಶಿರ್ವ : ಪ್ರದರ್ಶನಾ ಸಂಘಟನಾ ಸಮಿತಿ ಶಿರ್ವ, ಯಕ್ಷಗಾನ ಕಲಾರಂಗ ಉಡುಪಿ ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶಿರ್ವಾದ ಮಹಿಳಾ ಸೌಧದ ಆವರಣದಲ್ಲಿ ದಿನಕ್ಕೆ ಎರಡರಂತೆ ಕಾಪು ಕ್ಷೇತ್ರದ ಆರು ಶಾಲೆಗಳ ಪ್ರದರ್ಶನ ಜರಗಲಿದ್ದು, ದಿನಾಂಕ 05 ಡಿಸೆಂಬರ್ 2025ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನದ ಮಹತ್ವ ತಿಳಿಸಿ, “ಈ ಮಹಾಭಿಯಾನ ಯಶಸ್ವಿಯಾಗುವಲ್ಲಿ ಯಕ್ಷಗಾನ ಕಲಾರಂಗದ ನಾಯಕತ್ವ, ಕಾರ್ಯಕರ್ತರ ನಿಸ್ಪೃಹ ದುಡಿಮೆಯ ಕೊಡುಗೆ ಕಾರಣ” ಎಂದರು. ಅಬ್ಬೆಟ್ಟುಗುತ್ತು ಸಾಯಿನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಂ. ಗಂಗಾಧರ ರಾವ್, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ವಿಠಲ ಅಂಚನ್, ಡಾ. ಸ್ಫೂರ್ತಿ ಬಿ. ಶೆಟ್ಟಿ, ಗೋಪಾಲ ಗುರುಸ್ವಾಮಿ ಅಭ್ಯಾಗತರಾಗಿ ಭಾಗವಹಿಸಿದ್ದರು. ಟ್ರಸ್ಟಿಗಳಾದ ವಿ.ಜಿ. ಶೆಟ್ಟಿ ನಾರಾಯಣ ಎಂ. ಹೆಗಡೆ, ಕೆ. ಶ್ರೀಪತಿ ಕಾಮತ್, ನಟರಾಜ ಉಪಾಧ್ಯ ಉಪಸ್ಥಿತರಿದ್ದರು. ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಅನಂತ…
ಉರ್ವಸ್ಟೋರ್ : ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಆಯೋಜಿಸುವ 2025-26ರ ಸಾಲಿನ ದತ್ತಿ ಪ್ರಶಸ್ತಿ ಮತ್ತು ಸಾಹಿತ್ಯ ಬಹುಮಾನಕ್ಕೆ ಲೇಖತಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ. ಸಂಘದ ಸದಸ್ಯೆಯಾಗಿದ್ದ ವೈಚಾರಿಕ ಮನೋಧರ್ಮದ ಸಂವೇದನಾಶೀಲ ಲೇಖಕಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಇವರ ಹೆಸರಿನಲ್ಲಿ ಪ್ರತಿ ವರ್ಷ ಕೊಡುವ ಸಾಹಿತ್ಯ ಪ್ರಶಸ್ತಿಗೆ ಈ ಬಾರಿ ಲೇಖಕಿಯರಿಂದ ‘ಸಂಶೋಧನಾತ್ಮಕ ಕೃತಿ’ಗಳನ್ನು (ಪಿಎಚ್.ಡಿ. ಪ್ರಬಂಧಗಳನ್ನು ಸ್ವೀಕರಿಸಲಾಗುವುದಿಲ್ಲ) ಆಹ್ವಾನಿಸಲಾಗಿದೆ. 2023, 2024, 2025ರ ಸಾಲಿನಲ್ಲಿ ಪ್ರಕಟವಾದ ಕೃತಿಯ ಮೂರು ಪ್ರತಿಗಳನ್ನು ದಿನಾಂಕ 15 ಡಿಸೆಂಬರ್ 2025ರ ಒಳಗೆ ತಲುಪುವಂತೆ ಸಂಘದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪುಸ್ತಕದ ಜತೆಗೆ ವೈಯಕ್ತಿಕ ಮಾಹಿತಿ ಮತ್ತು ಸಂಪರ್ಕ ಸಂಖ್ಯೆಯಿರುವ ಪರಿಚಯ ಪತ್ರವನ್ನು ಪ್ರತ್ಯೇಕ ಲಗತ್ತಿಸಿರಬೇಕು. ವಿಳಾಸ : ಅಧ್ಯಕ್ಷರು, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ, ‘ಸಾಹಿತ್ಯ ಸದನ’, ಅಂಚೆ ಕಚೇರಿ ಬಳಿ, ಉರ್ವಸ್ಟೋರ್ ಮಂಗಳೂರು-575006 ಇಲ್ಲಿಗೆ ಕಳುಹಿಸಬಹುದು.