Subscribe to Updates
Get the latest creative news from FooBar about art, design and business.
Author: roovari
ಬೆಳಗಾವಿ : ಸಂಸ್ಕೃತಿ ಸಚಿವಾಲಯ ನವ ದೆಹಲಿ ಭಾರತ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ಸವದತ್ತಿ ಇವರ ಆಶ್ರಯದಲ್ಲಿ ‘ರಂಗ ತರಬೇತಿ ಶಿಬಿರ’ವನ್ನು ದಿನಾಂಕ 01 ಡಿಸೆಂಬರ್ 2025ರಿಂದ 24 ಜನವರಿ 2026ರವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಸವದತ್ತಿ ಭಗೀರಥ ಸರ್ಕಲ್ ನಾಟಕ ಮನೆಯಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಾನಂದ ತಾರಿಹಾಳ 9449795232 ಮತ್ತು ಶ್ರೀನಿವಾಸ ಗದಗ 9945808391 ಸಂಖ್ಯೆಯನ್ನು ಸಂಪರ್ಕಿಸಿರಿ.
ಬೆಂಗಳೂರು : ಕಲಾವಿಲಾಸಿ ಪ್ರಸ್ತುತ ಪಡಿಸುವ ‘ಎಷ್ಟು ಕಾಡತಾವ ಕಬ್ಬಕ್ಕೀ’ ನಾಟಕ ಪ್ರದರ್ಶನವನ್ನು ದಿನಾಂಕ 03 ಡಿಸೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ಜೆ.ಸಿ. ನಗರದ ರಂಗಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಸವರಾಜ ಎಮ್ಟಿಯವರ ರಂಗ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಪ್ರಸ್ತುತಗೊಳ್ಳುವ ಈ ನಾಟಕದಲ್ಲಿ ಬೆಳಗಾವಿ ಭಾಗದ ಗ್ರಾಮೀಣ ಪರಿಸರದ ಗಾಢ ಅನುಭವಗಳನ್ನು ಕೊಡುವಂತಹ, ರಾಘವೇಂದ್ರ ಪಾಟೀಲರ ಕೆಲವು ಕತೆಗಳನ್ನು ರಂಗದ ಮೇಲೆ ತರಲಾಗಿದೆ.
ಸಿದ್ಧಾಪುರ : ಶ್ರೀ ಸಿದ್ಧಿವಿನಾಯಕ ಯಕ್ಷಗಾನ ಸಂಘ ಕೊಳಗಿ-ಶಿರಳಗಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಎಂ.ಎಂ. ಹೆಗಡೆ ವಿರಚಿತ ‘ಲವ ಕುಶ’ ಯಕ್ಷಗಾನ ಪ್ರದರ್ಶನವನ್ನು 30ನೇ ವರ್ಷದ ಮೂಲೆಗದ್ದೆ ಭೂತಪ್ಪನ ಕಟ್ಟೆ ಕಾರ್ತಿಕೋತ್ಸವದ ನಿಮಿತ್ತ ದಿನಾಂಕ 02 ಡಿಸೆಂಬರ್ 2025ರಂದು ರಾತ್ರಿ 9-00 ಗಂಟೆಗೆ ಮೂಲೆಗದ್ದೆ ಭೂತಪ್ಪನ ಕಟ್ಟೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ ಭಾಗವತರು, ಮದ್ದಲೆಯಲ್ಲಿ ಶಂಕರ ಭಾಗವತ ಯಲ್ಲಾಪುರ ಮತ್ತು ಚಂಡೆ ವಿಘ್ನೇಶ್ವರ ಗೌಡ ಕೆಸರಕೊಪ್ಪ ಮತ್ತು ಮುಮ್ಮೇಳದಲ್ಲಿ ತಿಮ್ಮಪ್ಪ ಹೆಗಡೆ ಶಿರಳಗಿ, ಅಶೋಕ ಭಟ್ ಸಿದ್ಧಾಪುರ, ವಸಂತ ಹೆಗಡೆ ಕೊಳಗಿ, ಕು. ತುಳಸಿ ಹೆಗಡೆ ಬೆಟ್ಟಕೊಪ್ಪ, ಕು. ಮೈತ್ರಿ ಸಂಪೇಸರ ಮತ್ತು ಅವಿನಾಶ ಹೆಗಡೆ ಕೊಪ್ಪ ಇವರುಗಳು ಸಹಕರಿಸಲಿದ್ದಾರೆ.
ಕಾರ್ಕಳ : ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಕುಕ್ಕುಂದೂರು ಗಣಿತ ನಗರದ ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ನೀಡಲಾಗುವ ದಿ. ಪ್ರೊ. ಎನ್. ರಾಮಚಂದ್ರ ಸ್ಮರಣೆಯ ಉಡುಪಿ ಜಿಲ್ಲೆಯ ‘ಉತ್ತಮ ಯುವ ಸಾಹಿತಿ ಪ್ರಶಸ್ತಿ’ ಹಾಗೂ ದಿ. ಗೋಪಾಲ ಭಂಡಾರಿ ಇವರ ಸ್ಮರಣಾರ್ಥ ಕನ್ನಡ ಕಾಯಕದಲ್ಲಿ ತೊಡಿಸಿಕೊಂಡ ಉತ್ತಮ ಸಂಘ ಸಂಸ್ಥೆಗೆ ನೀಡುವ ಪ್ರಶಸ್ತಿಗೆ ಅರ್ಹದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ. ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ದೇವದಾಸ್ ಕೆರೆಮನೆ, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ, ಕೇರಾಫ್ ‘ವಂದ್ಯುಕ್ತ’ ನಿಸರ್ಗನಗರ, ಶ್ಯಾಮಲಾ ಕಾಂಪೌಂಡ್, ಮಿಯ್ಯಾರು, ಮುಡಾರು, ಬಜಗೋಳಿ ಅಂಚೆ, ಕಾರ್ಕಳ -574122 ದೂರವಾಣಿ : 91 6360686393 ಈ ವಿಳಾಸಕ್ಕೆ ದಿನಾಂಕ 10 ಡಿಸೆಂಬರ್ 2025ರ ಒಳಗೆ ತಲುಪುವಂತೆ ಕಳುಹಿಸಿಕೊಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ…
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ” ಎಂದರು. ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಸಾಹಿತ್ಯ ಮತ್ತು ಪತ್ರಿಕೋದ್ಯಮ ಸೇವೆಗಾಗಿ ಸುದ್ಧಿ ಸಮೂಹ ಸಂಸ್ಥೆಯ ಮಾಲಕ ಯು.ಪಿ. ಶಿವಾನಂದ, ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಗಾಗಿ ಕೆ.ಆರ್. ಗಂಗಾಧರ ಹಾಗೂ ಸಂಘಟನೆ…
ಮೈಸೂರು : ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ನಲ್ಲಿ ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ 04 ಡಿಸೆಂಬರ್ 2025ರಂದು ಬೆಳಗ್ಗೆ 10-30ಕ್ಕೆ ನಡೆಯಲಿದೆ. 2023ರ ಡಿಸೆಂಬರ್ 4ರಂದು ಅರ್ಜುನ ಹಾಸನ ಜಿಲ್ಲೆಯ ಸಕ್ಷೇಶಪುರ ತಾಲೂಕಿನ ಯಸಳೂರಿನಲ್ಲಿ ಮದಗಜದೊಂದಿಗೆ ಹೋರಾಡುತ್ತಾ ದುರಂತ ಅಂತ್ಯ ಕಂಡ ದಿನ. ಕಳೆದ ವರ್ಷ ಕೂಡ ಕಲ್ಬರಲ್ ಅಸೋಸಿಯಷನ್ ಮೊದಲ ವರ್ಷದ ಕಾರ್ಯಕ್ರಮ ನಡೆಸಿತ್ತು. ಐತಿಚಂಡ ರಮೇಶ್ ಉತ್ತಪ್ಪ ಇವರ 40ನೇ ಕೃತಿ ಅರ್ಜುನ ಬಲಿಯಾದ ಘಟನೆಯ ತನಿಖಾ ವರದಿಯನ್ನು ಒಳಗೊಂಡ ‘ಸಾವಿನ ಸತ್ಯ’ ಹಾಗೂ ‘ದಸರಾ ಆನೆಗಳು- ಭೀಮ ಹಾಗೂ ಇತರರು’ ಕೃತಿಗಳನ್ನು ಬಿಡುಗಡೆ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಮಾಜಿ ಸಂಸದ ಶ್ರೀ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದು, ಮಾಜಿ ಸಿಂಡಿಕೇಟ್ ಸದಸ್ಯ ಡಾ. ಈ.ಸಿ. ನಿಂಗರಾಜು ಗೌಡ, ಕಾಂಗ್ರೆಸ್ ಮುಖಂಡ…
ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ. ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಇವರ ಸಹಯೋಗದೊಂದಿಗೆ ದಿನಾಂಕ 29 ನವೆಂಬರ್ 2025ರಂದು ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿ ಹಬ್ಬ, ತ್ರಯೋದಶ ಸರಣಿಯ ಸಮಾರೋಪ ಸಮಾರಂಭ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಹಾಲುತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ “ಯಕ್ಷಗಾನ ಕರಾವಳಿಯ ಶ್ರೀಮಂತ ಕಲೆ. ಹಿಂದಿನಿಂದಲೂ ಕಲಾವಿದರು, ಸಂಘಟಕರು ಹಾಗೂ ಕಲಾ ಸಂಸ್ಥೆಗಳ ಪರಿಶ್ರಮದಿಂದ ಅದು ಬೆಳೆದು ಬಂದಿದೆ. ಇಂದಿನ ಬಹು ಮಾಧ್ಯಮಗಳ ನಡುವೆ ತಾಂತ್ರಿಕ ಜಗತ್ತಿನ ಸವಾಲುಗಳನ್ನು ಎದುರಿಸಿಯೂ ಯಕ್ಷಗಾನ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಈ ದಿಸೆಯಲ್ಲಿ ಯಕ್ಷಾಂಗಣ ಸಂಸ್ಥೆ…
ಮಂಗಳೂರು : ಬೆಸೆಂಟ್ ನ್ಯಾಷನಲ್ ಪದವಿ ಪೂರ್ವ ಕಾಲೇಜು ಮಂಗಳೂರು ಇಲ್ಲಿ ‘ಬೆಸೆಂಟ್ ಸ್ಪ್ಲಾಶ್’ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಂತರ್ ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ಉತ್ಸವ ಉದ್ಘಾಟನಾ ಸಮಾರಂಭ ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿತ್ರ ಸಾಹಿತಿ ಶ್ರೀ ಕೀರ್ತನ್ ಭಂಡಾರಿಯವರು ಉಪಸ್ಥಿತರಿದ್ದು, ದೀಪ ಪ್ರಜ್ವಲನಗೊಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ “ಶಾಲೆಗಳಲ್ಲಿ ಸಿಗುವ ವೇದಿಕೆ ಸಣ್ಣದಾಗಿದ್ದರು ಬದುಕಿನ ಸಂದರ್ಭದಲ್ಲಿ ಅದು ಬಹುದೊಡ್ಡ ವೇದಿಕೆ ಆಗುತ್ತದೆ. ಕಲಾವಿದರ ಕನಸುಗಳು ಶಾಲಾ ವೇದಿಕೆಗಳಿಂದಲೇ ಮೂಡುತ್ತದೆ. ಸಿಕ್ಕಿದ ವೇದಿಕೆಗಳನ್ನು ಚೆನ್ನಾಗಿ ಬಳಸಿಕೊಂಡು ವಿದ್ಯಾರ್ಥಿಗಳಾಗಿರುವಾಗಲೇ ನಮ್ಮ ಕನಸುಗಳನ್ನು ರೂಪಿಸಿಕೊಳ್ಳಬೇಕಾದದು ವಿದ್ಯಾರ್ಥಿಗಳ ಜವಾಬ್ದಾರಿ” ಎಂದು ನುಡಿದರು. ಬೆಸೆಂಟ್ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ಶ್ರೀ ಸತೀಶ್ ಭಟ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು “ಪ್ರತಿಯೊಬ್ಬರಲ್ಲೂ ಪ್ರತಿಭೆಗಳಿವೆ. ಅದನ್ನು ಪ್ರದರ್ಶಿಸುವ ಮೂಲಕ ಬೆಳಕಿಗೆ ತರಬೇಕಾದುದು ವಿದ್ಯಾರ್ಥಿಗಳ ಕರ್ತವ್ಯ. ಅದಕ್ಕೆ ಬೇಕಾದ ವೇದಿಕೆಗಳು ಇಂತಹ ಸ್ಪರ್ಧಾ ಉತ್ಸವಗಳಿಂದ ವಿದ್ಯಾರ್ಥಿಗಳಿಗೆ ಸಿಗುತ್ತದೆ” ಎಂದರು. ಕಾರ್ಯಕ್ರಮದಲ್ಲಿ ಫಿಲಂ ಎಡಿಟರ್ ಶ್ರೀ ನಿತಿನ್ ಶೆಟ್ಟಿ,…
ಬೆಂಗಳೂರು : ಕಣ್ಮನ ಸೂರೆಗೊಳ್ಳುವ ‘ತಾಳ್ ತರಂಗ್’ – ಒಂದೇ ವೇದಿಕೆಯ ಮೇಲೆ ವಿವಿಧ ಕಲಾ ಪ್ರಕಾರಗಳ ರಸದೌತಣ ನೀಡುವ ಒಂದು ವಿಶಿಷ್ಟ ಪ್ರಯೋಗ. ಈ ಹೊಸ ಪರಿಕಲ್ಪನೆಯ ಕಾರ್ಯಕ್ರಮವನ್ನು ಬೆಂಗಳೂರಿನ ಕಲಾರಸಿಕರ ಸಮ್ಮುಖ ಅರ್ಪಣೆ ಮಾಡುತ್ತಿರುವವರು ‘ನೃತ್ಯ ದರ್ಪಣ್’ ಅಕಾಡೆಮಿ. ವರ್ಷ ಪೂರ್ತಿ ನಿರಂತರ ಸಕ್ರಿಯರಾಗಿರುವ ಪ್ರಯೋಗಶೀಲ ಕಥಕ್ ನೃತ್ಯಗಾರ್ತಿ ವೀಣಾ ಆರ್. ಭಟ್ ಕಳೆದ ಒಂದೂವರೆ ದಶಕಕ್ಕೂ ಹೆಚ್ಚಿನ ಕಾಲದಿಂದ ‘ನೃತ್ಯ ದರ್ಪಣ್’ – ಕಥಕ್ ನೃತ್ಯಶಾಲೆಯ ಅರ್ಟಿಸ್ಟಿಕ್ ಡೈರೆಕ್ಟರ್ ಮತ್ತು ಉತ್ತಮ ಗುರುವಾಗಿ ಜನಪ್ರಿಯತೆ ಪಡೆದಿದ್ದು, ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಯಶಸ್ವಿಯಾಗಿ ಸಮ್ಮೋಹಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಉತ್ತಮ ಕಥಕ್ ನೃತ್ಯ ಕಲಾವಿದೆಯಾಗಿ ಹೆಸರು ಮಾಡಿರುವ ವೀಣಾ ಭಟ್, ಹೊಸ ಪರಿಕಲ್ಪನೆಗಳ ಸಾಕಾರದಲ್ಲಿ ‘ಕಥಕ್ ‘ ನೃತ್ಯಪ್ರಸ್ತುತಿಯನ್ನು ಅರಳಿಸುವ, ಬೆಳೆಸುವ ನಿಟ್ಟಿನಲ್ಲಿ ನಿರಂತರ ಹೊಸಪ್ರಯೋಗಗಳಲ್ಲಿ ತೊಡಗಿಕೊಂಡವರು ಎಂದರೆ ಅತಿಶಯೋಕ್ತಿಯಲ್ಲ. ಇವರ ವಿಶಿಷ್ಟ ಪರಿಕಲ್ಪನೆಯ ‘ತಾಳ್ ತರಂಗ್’ – ಹತ್ತನೆಯ ಅಧ್ಯಾಯವು ದಿನಾಂಕ 07 ಡಿಸೆಂಬರ್ 2025ರ ಭಾನುವಾರ ಸಂಜೆ…
ಬೆಂಗಳೂರು : ಗಂಧದ ಗುಡಿ ಕನ್ನಡ ಸಂಘ ಬೆಂಗಳೂರು, ಚೇತನ ಪ್ರತಿಷ್ಠಾನ ಧಾರವಾಡ ಇದರ ವತಿಯಿಂದ ಮತ್ತು ಶೇಷಾದ್ರಿಪುರಂ ಶಿಕ್ಷಣ ಸಮೂಹ ಸಂಸ್ಥೆಗಳು ಇವರ ಸಹಕಾರದೊಂದಿಗೆ ‘ಅಖಿಲ ಭಾರತ ಕನ್ನಡ ನುಡಿ ಸಮ್ಮೇಳನ’ವನ್ನು ದಿನಾಂಕ 30 ನವೆಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರಂ ಮೇನ್ ಕಾಲೇಜಿನ ಕಾನ್ಪರೆನ್ಸ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಸಾಹಿತಿ ಡಾ. ಎಸ್. ರಾಮಲಿಂಗೇಶ್ವರ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ನಾಡು ನುಡಿ ಚಿಂತನೆ, ಚರ್ಚೆ, ಗೀತಗಾಯನ, ನೃತ್ಯ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು. ಆಯ್ಕೆಯಾದ ಚಲನಚಿತ್ರಗಳಿಗೆ ರಾಜರತ್ನ ಫಿಲ್ಮ್ ಫೇರ್ ಪ್ರಶಸ್ತಿ, ವಿವಿಧ ಕ್ಷೇತ್ರದ ಗಣ್ಯರಿಗೆ ಗಂಧದ ಗುಡಿ ರಾಜ್ಯೋತ್ಸವ ಪ್ರಶಸ್ತಿ, ಯುವ ಸಾಧಕರಿಗೆ ಯುವ ರಾಜ್ಯೋತ್ಸವ ಪ್ರಶಸ್ತಿ ಮತ್ತು ರಾಜರತ್ನ ಪುನೀತ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಾಹಿತಿ ಸುರೇಶ ಕೋರಕೊಪ್ಪ ಇವರು ಅಧ್ಯಕ್ಷತೆ ವಹಿಸಲಿದ್ದು, ಖ್ಯಾತ ಚಲನಚಿತ್ರ ನಟ ಡಾ. ಚಿಕ್ಕ ಹೆಜ್ಜಾಜಿ ಮಹಾದೇವ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ…